ಟ್ರ್ಯಾಕ್ಟರ್ ಮೆರವಣಿಗೆ: ಪ್ರತಿಭಟನಾನಿರತ ರೈತರು ಪೂರ್ವ ನಿರ್ಧರಿತ ಮಾರ್ಗಗಳನ್ನು ಬಿಟ್ಟು ಬೇರೆ ರಸ್ತೆ ಹಿಡಿದಿದ್ದೇಕೆ?

ಮಂಗಳವಾರ ಬೆಳಗ್ಗೆ 11 ಗಂಟೆಗೆ ಮೆರವಣಿಗೆ ಆರಂಭಿಸಲು ಅನುಮತಿ ನೀಡಲಾಗಿತ್ತು. ಆದಾಗ್ಯೂ, ಇದಕ್ಕಿಂತ ಒಂದು ಗಂಟೆ ಮುಂಚೆಯೇ ರೈತರು ತಮ್ಮ ಪ್ರತಿಭಟನೆ ಆರಂಭಿಸಿದ್ದರು.

ಟ್ರ್ಯಾಕ್ಟರ್ ಮೆರವಣಿಗೆ: ಪ್ರತಿಭಟನಾನಿರತ ರೈತರು ಪೂರ್ವ ನಿರ್ಧರಿತ ಮಾರ್ಗಗಳನ್ನು ಬಿಟ್ಟು ಬೇರೆ ರಸ್ತೆ ಹಿಡಿದಿದ್ದೇಕೆ?
ರೈತರ ವಿರುದ್ಧ ಪೊಲೀಸರ ಅಶ್ರುವಾಯ ಪ್ರಯೋಗ
ರಶ್ಮಿ ಕಲ್ಲಕಟ್ಟ Edited By:

Updated on: Jan 26, 2021 | 6:50 PM

ದೆಹಲಿ: ದೆಹಲಿಯಲ್ಲಿ ಪ್ರತಿಭಟನಾನಿರತ ರೈತರು ಗಣರಾಜ್ಯೋತ್ಸವ ದಿನದಂದು ನಿಗದಿತ ರಸ್ತೆಗಳಲ್ಲಿಯೇ ಟ್ರ್ಯಾಕ್ಟರ್ ಮೆರವಣಿಗೆ ನಡೆಸಬೇಕು ಎಂಬ ಷರತ್ತು ವಿಧಿಸಲಾಗಿತ್ತು. ಇದನ್ನು ರೈತ ನಾಯಕರೂ ಒಪ್ಪಿಕೊಂಡಿದ್ದರು. ಆದರೆ ಇಂದು ಟ್ರ್ಯಾಕ್ಟರ್ ಮೆರವಣಿಗೆ ನಡೆದದ್ದು ಬೇರೆ ಮಾರ್ಗದಲ್ಲಿ. ರೈತರು ಬೇರೆ ರಸ್ತೆಗಳಲ್ಲಿ ಯಾಕೆ ಪ್ರತಿಭಟನೆ ನಡೆಸಿದರು ಎಂದು ಹಿರಿಯ ವಕೀಲ ಪ್ರಶಾಂತ್ ಭೂಷಣ್ ಕೂಡಾ ಪ್ರಶ್ನಿಸಿದ್ದಾರೆ.

ಇವರೆಲ್ಲ ಯುವಕರು. ಎಲ್ಲರೂ ಅಹಿಂಸೆ ಮತ್ತು ಶಾಂತಿಯುತವಾಗಿ ಪ್ರತಿಭಟನೆ ನಡೆಸಬೇಕು ಎಂದು ರೈತ ನಾಯಕ ನರೇಶ್ ಟಿಕಾಯತ್ ಹೇಳಿದ್ದಾರೆ.

ದೆಹಲಿಯ ಮೂರು ಗಡಿಪ್ರದೇಶಗಳಿಂದ ರೈತರ ಮೆರವಣಿಗೆ ಹೊರಡಲು ರೈತರಿಗೆ ದೆಹಲಿ ಪೊಲೀಸರು ಭಾನುವಾರ ಅನುಮತಿ ನೀಡಿದ್ದರು. ಇದಕ್ಕೆ ಒಪ್ಪಿದ್ದ ರೈತರು ಪೂರ್ವ ನಿರ್ಧಾರಿತ ಮಾರ್ಗದಲ್ಲಿಯೇ ನಾವು ಟ್ರ್ಯಾಕ್ಟರ್ ಮೆರವಣಿಗೆ ಮಾಡುತ್ತೇವೆ. ಬೇರೆ ಯಾವುದೇ ದಾರಿಯಿಂದ ದೆಹಲಿ ನಗರದೊಳಗೆ ಪ್ರವೇಶಿಸುವುದಿಲ್ಲ ಎಂದು ಹೇಳಿದ್ದರು. 11 ಗಂಟೆಗೆ ಮೆರವಣಿಗೆ ಆರಂಭಿಸಲು ಅನುಮತಿ ನೀಡಲಾಗಿತ್ತು. ಆದಾಗ್ಯೂ, ಇದಕ್ಕಿಂತ ಒಂದು ಗಂಟೆ ಮುಂಚೆಯೇ ರೈತರು ತಮ್ಮ ಪ್ರತಿಭಟನೆ ಆರಂಭಿಸಿದ್ದರು.

ಇದನ್ನೂ ಓದಿ: In Depth Report | ದೆಹಲಿ ಕೆಂಪುಕೋಟೆಯಲ್ಲಿ ರೈತಧ್ವಜ, ಟ್ರ್ಯಾಕ್ಟರ್ ಪರೇಡ್ ಈವರೆಗೆ ಏನೆಲ್ಲಾ ನಡೆಯಿತು?

ರೈತರ ಪ್ರತಿಭಟನೆ

ರೈತರ ಟ್ರ್ಯಾಕ್ಟರ್ ಮೆರವಣಿಗೆ ಆರಂಭವಾದ ಕೆಲವೇ ನಿಮಿಷಗಳಲ್ಲಿ ಪೊಲೀಸ್ ಮತ್ತು ರೈತರ ನಡುವೆ ಸಂಘರ್ಷ ನಡೆಯಿತು. ಸಿಂಗು ಮತ್ತು ಘಾಜೀಪುರ್ ಗಡಿ ಪ್ರದೇಶಗಳಲ್ಲಿ ಪ್ರತಿಭಟನಾನಿರತ ರೈತರ ಮೇಲೆ ಪೊಲೀಸರು ಅಶ್ರುವಾಯು ಮತ್ತು ಜಲಫಿರಂಗಿ ಪ್ರಯೋಗಿಸಿದರು.

11.30ರ ಹೊತ್ತಿಗೆ ಅಕ್ಷರಧಾಮ್ ದೇಗುಲದತ್ತ ಹೋಗುತ್ತಿದ್ದ ರೈತ ಪ್ರತಿಭಟನಾಕಾರರ ಗುಂಪು ಮಧ್ಯ ದೆಹಲಿಗೆ ನುಗ್ಗಿತು. ಘಾಜಿಪುರ್ ಮಾರುಕಟ್ಟೆಗೆ ಹೋಗಿ ಅಲ್ಲಿಂದ ಯುಟರ್ನ್ ತೆಗೆದುಕೊಳ್ಳುವಂತೆ ಪೊಲೀಸರು ಪ್ರತಿಭಟನಾಕಾರರರಿಗೆ ಹೇಳಿದ್ದರು. ಈ ವೇಳೆ ಮಧ್ಯ ದೆಹಲಿಗೆ ಮುನ್ನುಗ್ಗುತ್ತಿದ್ದ ರೈತರನ್ನು ತಡೆಯಲು ಪೊಲೀಸರು ಅಶ್ರುವಾಯು ಶೆಲ್​ಗಳನ್ನು ಸಿಡಿಸಿದರು.

ಅಲ್ಲಿಯವರೆಗೆೆ ಶಾಂತವಾಗಿದ್ದ ಟಿಕ್ರಿ ಸಮೀಪದ ನಂಗಲೋಯಿಯಲ್ಲಿ ಪೊಲೀಸ್ ಮತ್ತು ರೈತರ ಮೇಲೆ ಸಂಘರ್ಷವೇರ್ಪಟ್ಟಿತು. ನಂಗಲೋಯಿ ಚೌಕ್ ನಿಂದ ದೆಹಲಿ ನಗರದತ್ತ ಟ್ರ್ಯಾಕ್ಟರ್ ತಿರುಗಿಸಿದಾಗ ಪೊಲೀಸರು ಅಲ್ಲಿಂದ ಹಿಂದೆ ಸರಿಯುವಂತೆ ಹೇಳಿದರೂ ಪೊಲೀಸರು ಒಪ್ಪಲಿಲ್ಲ.

Live Updates | ಕೆಂಪುಕೋಟೆಯಲ್ಲಿ 3 ಕಡೆ ಬಾವುಟ ಹಾರಿಸಿದ ರೈತರು

ದೆಹಲಿಯಲ್ಲಿ ಧರಣಿ ಮಾಡುವ ರೈತರು ಭಯೋತ್ಪಾದಕರು, ಇವರಿಗೆ ಪಾಕ್​ ಬೆಂಬಲ ಇದೆ: ಕೃಷಿ ಸಚಿವ ಬಿ.ಸಿ.ಪಾಟೀಲ್ ವಿವಾದಿತ ಹೇಳಿಕೆ

ದೆಹಲಿ ಕೆಂಪುಕೋಟೆ ಮೇಲೆ ರೈತಧ್ವಜ; ಇತಿಹಾಸದಲ್ಲಿ ಇದೇ ಮೊದಲು ಕೆಂಪುಕೋಟೆಗೆ ರೈತರ ಮುತ್ತಿಗೆ

ಕೆಂಪುಕೋಟೆಯಲ್ಲಿ ಮೂರನೇ ಬಾರಿಗೆ ಬಾವುಟ ಹಾರಿಸಿದ ರೈತರು

Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

Follow Us