ದೆಹಲಿಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಇಂಟರ್​ನೆಟ್ ಸೇವೆ ಸ್ಥಗಿತ

ದೆಹಲಿಯಲ್ಲಿ ರೈತರ ಪ್ರತಿಭಟನೆ ಕಾವು ಜೋರಾಗಿದೆ. ಪರಿಸ್ಥಿತಿ ಕೈ ಮೀರುತ್ತಿರುವುದನ್ನು ಅರಿತ ಪೊಲೀಸರು ಲಾಠಿ ಚಾರ್ಜ್​ ನಡೆಸಿದ್ದಾರೆ. ಈ ಮಧ್ಯೆ ಕಾನೂನು ಸುವ್ಯವಸ್ಥೆ ಕಾಯ್ದುಕೊಳ್ಳುವ ದೃಷ್ಟಿಯಿಂದ ಇಂಟರ್​ನೆಟ್​ ಸೇವೆಯನ್ನು ರದ್ದು ಮಾಡಲಾಗಿದೆ.

ದೆಹಲಿಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಇಂಟರ್​ನೆಟ್ ಸೇವೆ ಸ್ಥಗಿತ
ಸಾಂಕೇತಿಕ ಚಿತ್ರ
Edited By: ರಶ್ಮಿ ಕಲ್ಲಕಟ್ಟ

Updated on: Jan 26, 2021 | 4:21 PM

ಬೆಂಗಳೂರು: ದೆಹಲಿಯಲ್ಲಿ ರೈತರ ಪ್ರತಿಭಟನೆ ಕಾವು ಜೋರಾಗಿದೆ. ಪರಿಸ್ಥಿತಿ ಕೈ ಮೀರುತ್ತಿರುವುದನ್ನು ಅರಿತ ಪೊಲೀಸರು ಲಾಠಿ ಚಾರ್ಜ್​ ನಡೆಸಿದ್ದಾರೆ. ಈ ಮಧ್ಯೆ ಕಾನೂನು ಸುವ್ಯವಸ್ಥೆ ಕಾಯ್ದುಕೊಳ್ಳುವ ದೃಷ್ಟಿಯಿಂದ ಇಂಟರ್​ನೆಟ್​ ಸೇವೆಯನ್ನು ರದ್ದು ಮಾಡಲಾಗಿದೆ.

ರೈತರು ಕೆಂಪುಕೋಟೆಯಲ್ಲಿ ಧ್ವಜ ಹಾರಿಸಿದ್ದಾರೆ. ಈ ವಿಚಾರ ತಿಳಿಯುತ್ತಿದ್ದಂತೆ ಸಾಕಷ್ಟು ರೈತರು ಕೆಂಪುಕೋಟೆಯತ್ತ ಹೆಜ್ಜೆ ಹಾಕಿದ್ದಾರೆ. ಅಲ್ಲಿರುವ ಸಾಕಷ್ಟು ರೈತರು ಫೇಸ್​ಬುಕ್​ ಲೈವ್​ ಮಾಡಿ ಉಳಿದ ರೈತರು ಕೆಂಪುಕೋಟೆಯತ್ತ ಬರುವಂತೆ ಸ್ಫೂರ್ತಿ ನೀಡಿದ್ದರು. ಜತೆಗೆ ವಾಟ್ಸ್​​ಆ್ಯಪ್​ ಸಂದೇಶಗಳು ಕಾಡ್ಗಿಚ್ಚಿನಂತೆ ಹರಡಿದ್ದವು. ಇವುಗಳನ್ನು ತಡೆಯುವ ಉದ್ದೇಶದಿಂದ ಕೆಂಪುಕೋಟೆ ಸುತ್ತಮುತ್ತಲ ಭಾಗ ಸೇರಿ ಅನೇಕ ಕಡೆಗಳಲ್ಲಿ ಇಂಟರ್​ನೆಟ್​ ಸೇವ್​ ರದ್ದು ಮಾಡಲಾಗಿದೆ.

ಇಂಟರ್ನೆಟ್ ಸೇವೆ ಸ್ಥಗಿತಗೊಳಿಸಲು ಆದೇಶ ನೀಡಿರುವ ಪತ್ರ

ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಸರ್ಕಾರ ಈ ಕ್ರಮಕ್ಕೆ ಮುಂದಾಗಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಎಎನ್​ಐ ಸುದ್ದಿಸಂಸ್ಥೆ ವರದಿ ಮಾಡಿದೆ. ಪರಿಸ್ಥಿತಿ ಸಮಸ್ಥಿತಿಗೆ ಮರಳಿದ ನಂತರ ಇಂಟರ್​ನೆಟ್​ ಸೇವೆ ಮರಳಿ ನೀಡುವ ಸಾಧ್ಯತೆ ಇದೆ.

Live Updates | ಕೆಂಪುಕೋಟೆ ಗುಮ್ಮಟದ ಮೇಲೆ ಕಿಸಾನ್ ಬಾವುಟ

ದೆಹಲಿ ಕೆಂಪುಕೋಟೆ ಮೇಲೆ ಧ್ವಜಾರೋಹಣ ಮಾಡಿದ ರೈತರನ್ನು ಕೆಳಗಿಳಿಸಿದ ಪೊಲೀಸರು

ದೆಹಲಿ ಕೆಂಪುಕೋಟೆ ಮೇಲೆ ರೈತಧ್ವಜ; ಇತಿಹಾಸದಲ್ಲಿ ಇದೇ ಮೊದಲು ಕೆಂಪುಕೋಟೆಗೆ ರೈತರ ಮುತ್ತಿಗೆ

Published On - 3:59 pm, Tue, 26 January 21

Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
Follow Us