AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mamata Banerjee ಚುನಾವಣಾ ಟೆನ್ಷನ್​ ಮರೆತು ನೃತ್ಯ ಮಾಡಿದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ

ಅಲಿಪುರ್ದುರ್​ನಲ್ಲಿ ನಿನ್ನೆ ಸಾಮೂಹಿಕ ವಿವಾಹ ಆಯೋಜಿಸಲಾಗಿತ್ತು. ಅಲ್ಲಿ ವಾದ್ಯಗೋಷ್ಠಿಗಳೊಂದಿಗೆ ಬುಡಕಟ್ಟು ಜನಾಂಗದವರ ನೃತ್ಯವನ್ನೂ ಆಯೋಜಿಸಿದ್ದರು.

Mamata Banerjee ಚುನಾವಣಾ ಟೆನ್ಷನ್​ ಮರೆತು ನೃತ್ಯ ಮಾಡಿದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ
ನೃತ್ಯ ಮಾಡುತ್ತಿರುವ ಮಮತಾ ಬ್ಯಾನರ್ಜಿ
Lakshmi Hegde
| Edited By: |

Updated on: Feb 03, 2021 | 7:05 PM

Share

ಪಶ್ಚಿಮ ಬಂಗಾಳದಲ್ಲಿ ವಿಧಾನಸಭೆ ಚುನಾವಣೆ ಹತ್ತಿರ ಬರುತ್ತಿದೆ. ಆದರೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರಂತೂ ಸದ್ಯ ರಿಲ್ಯಾಕ್ಸ್ ಮೂಡ್​​ನಲ್ಲಿ ಇದ್ದಂತೆ ಕಾಣುತ್ತಿದೆ. ಮೊನ್ನೆ ಕೇಂದ್ರ ಸರ್ಕಾರ ಬಜೆಟ್ ಮಂಡನೆ ಮಾಡುತ್ತಿದ್ದಂತೆ ಕೇಂದ್ರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದ ಮಮತಾ ಬ್ಯಾನರ್ಜಿ ನಿನ್ನೆ ಸಾಮೂಹಿಕ ವಿವಾಹ ಸಮಾರಂಭದಲ್ಲಿ ನೃತ್ಯ ಮಾಡಿದ್ದಾರೆ.

ಪಶ್ಚಿಮ ಬಂಗಾಳದ ಅಲಿಪುರ್ದುರ್​ ಜಿಲ್ಲೆಯ ಫಲಕತಾ ಎಂಬಲ್ಲಿ ನಿನ್ನೆ ಸಾಮೂಹಿಕ ವಿವಾಹ ಆಯೋಜಿಸಲಾಗಿತ್ತು. ಅಲ್ಲಿ ವಾದ್ಯಗೋಷ್ಠಿಗಳೊಂದಿಗೆ ಬುಡಕಟ್ಟು ಜನಾಂಗದವರ ನೃತ್ಯವನ್ನೂ ಆಯೋಜಿಸಿದ್ದರು. ಈ ವೇಳೆ ಮಮತಾ ಬ್ಯಾನರ್ಜಿ ಬುಡಕಟ್ಟು ಮಹಿಳೆಯರ ಕೈಹಿಡಿದು ಹೆಜ್ಜೆಹಾಕಿದ್ದಾರೆ. ಒಂದು ಗುಂಪಿನೊಂದಿಗೆ ಡ್ಯಾನ್ಸ್ ಮಾಡಿ, ಅಲ್ಲಿಂದ ಇನ್ನೊಂದು ಗುಂಪಿನತ್ತ ಸಾಗಿ ಫುಲ್ ಖುಷಿಯಿಂದ ನೃತ್ಯ ಮಾಡಿದ್ದಾರೆ. ಕಳೆದ ವರ್ಷವೂ ಸಾಮೂಹಿಕ ವಿವಾಹದ ವೇಳೆ ಮಮತಾ ಬ್ಯಾನರ್ಜಿ ನೃತ್ಯ ಮಾಡಿದ್ದರು.

ಪಶ್ಚಿಮ ಬಂಗಾಳದಲ್ಲಿ ಏಪ್ರಿಲ್​-ಮೇ ತಿಂಗಳಲ್ಲಿ ಚುನಾವಣೆ ನಡೆಯಲಿದ್ದು, ಸದ್ಯ ಮಮತಾ ಬ್ಯಾನರ್ಜಿ ಕೂಡ ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ. ಈ ಮಧ್ಯೆ  ಟಿಎಂಸಿಯ ಹಲವು ಮುಖಂಡರು ಪಕ್ಷ ತೊರೆದು ಬಿಜೆಪಿ ಸೇರುತ್ತಿದ್ದಾರೆ. ಕಳೆದ ಲೋಕಸಭಾ ಚುನಾವಣೆಯಲ್ಲಿಯೇ ಅಚ್ಚರಿ ಎನ್ನಿಸುವಷ್ಟು ಕ್ಷೇತ್ರಗಳನ್ನು ಗೆದ್ದಿದ್ದ ಬಿಜೆಪಿ, ಈ ವಿಧಾನಸಭಾ ಚುನಾವಣೆಯಲ್ಲಿ ಗೆದ್ದು, ಪಶ್ಚಿಮ ಬಂಗಾಳವನ್ನೂ ತೆಕ್ಕೆಗೆ ತೆಗೆದುಕೊಂಡು ಇತಿಹಾಸ ಸೃಷ್ಟಿಸುವ ಹುಮ್ಮಸ್ಸಿನಲ್ಲಿದೆ. ಒಟ್ಟಿನಲ್ಲಿ ದೀದೀಗೆ ಹಲವು ಟೆನ್ಷನ್​ಗಳಿದ್ದರೂ, ಅದನ್ನೆಲ್ಲ ಮರೆತು ಖುಷಿಯಾಗಿ ಡ್ಯಾನ್ಸ್​ ಮಾಡಿದ್ದಾರೆ.

ಮುಂಬರುವ ವಿಧಾನಸಭಾ ಚುನಾವಣೆ ಹೊತ್ತಿಗೆ ಮಮತಾ ಬ್ಯಾನರ್ಜಿ ಒಬ್ಬಂಟಿಯಾಗುತ್ತಾರೆ..: ಗೃಹ ಸಚಿವ ಅಮಿತ್​ ಶಾ

ಪಶ್ಚಿಮ ಬಂಗಾಳ ಅಸೆಂಬ್ಲಿ ಚುನಾವಣೆ ಕಾಲೇ.. ಕವಿ ರವೀಂದ್ರನಾಥ್​ ಟ್ಯಾಗೂರ್​​ರನ್ನು ಸ್ಮರಿಸಿದ ವಿತ್ತ ಸಚಿವೆ ನಿರ್ಮಲಾ!

Follow Us
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು
ರಾಯಚೂರಲ್ಲಿ ಪೊಲೀಸ್ ಶ್ವಾನಗಳಿಗೆ ಫ್ಯಾನ್, ಏರ್ ಕೂಲರ್​ ವ್ಯವಸ್ಥೆ
ರಾಯಚೂರಲ್ಲಿ ಪೊಲೀಸ್ ಶ್ವಾನಗಳಿಗೆ ಫ್ಯಾನ್, ಏರ್ ಕೂಲರ್​ ವ್ಯವಸ್ಥೆ
ಅನ್ನಭಾಗ್ಯ ಅಕ್ಕಿಯ ಅಕ್ರಮ ದಾಸ್ತಾನು: ದಂಧೆಕೋರರಿಗೆ ಬಿಗ್​​ ಶಾಕ್​​
ಅನ್ನಭಾಗ್ಯ ಅಕ್ಕಿಯ ಅಕ್ರಮ ದಾಸ್ತಾನು: ದಂಧೆಕೋರರಿಗೆ ಬಿಗ್​​ ಶಾಕ್​​
ಡಾ ರಾಜ್​ಕುಮಾರ್ ಗೀತ ನಮನ ಕಾರ್ಯಕ್ರಮದಲ್ಲಿ ಸಾಧು ಕೋಕಿಲ ಮಾತು
ಡಾ ರಾಜ್​ಕುಮಾರ್ ಗೀತ ನಮನ ಕಾರ್ಯಕ್ರಮದಲ್ಲಿ ಸಾಧು ಕೋಕಿಲ ಮಾತು
ಸಮಂತಾ ಸೆಟ್​​​ನಲ್ಲಿ ಹೇಗಿರ್ತಾರೆ? ವಿವರಿಸಿದ ದಿಗಂತ್
ಸಮಂತಾ ಸೆಟ್​​​ನಲ್ಲಿ ಹೇಗಿರ್ತಾರೆ? ವಿವರಿಸಿದ ದಿಗಂತ್
KSRTC ಬಸ್​ ಅಡ್ಡಗಟ್ಟಿ ಕುಡುಕರ ಕಿರಿಕ್​​: ಸೆಲ್ಫಿ ತೆಗೆದು ಹುಚ್ಚಾಟ
KSRTC ಬಸ್​ ಅಡ್ಡಗಟ್ಟಿ ಕುಡುಕರ ಕಿರಿಕ್​​: ಸೆಲ್ಫಿ ತೆಗೆದು ಹುಚ್ಚಾಟ
ಮಗುವನ್ನು ಸಾಕ್ಷಾತ್ ದೇವರಂತೆ ಬಂದು ರಕ್ಷಿಸಿದ ಪೊಲೀಸರು!
ಮಗುವನ್ನು ಸಾಕ್ಷಾತ್ ದೇವರಂತೆ ಬಂದು ರಕ್ಷಿಸಿದ ಪೊಲೀಸರು!
ಲಕ್ಷ್ಮೀಪುರ ಬಿಡಿಎ ಲೇಔಟಲ್ಲಿ ಚೀಲದಲ್ಲಿ ಅಪರಿಚಿತ ಶವ ಪತ್ತೆ, ಬೆಚ್ಚಿದ ಜನ
ಲಕ್ಷ್ಮೀಪುರ ಬಿಡಿಎ ಲೇಔಟಲ್ಲಿ ಚೀಲದಲ್ಲಿ ಅಪರಿಚಿತ ಶವ ಪತ್ತೆ, ಬೆಚ್ಚಿದ ಜನ
ಅಣ್ಣಾವ್ರ ಸಮಾಧಿಗೆ ಪೂಜೆ ಮಾಡಿದ ರಾಘಣ್ಣ ಮತ್ತು ಶಾಸಕ ಗೋಪಾಲಯ್ಯ
ಅಣ್ಣಾವ್ರ ಸಮಾಧಿಗೆ ಪೂಜೆ ಮಾಡಿದ ರಾಘಣ್ಣ ಮತ್ತು ಶಾಸಕ ಗೋಪಾಲಯ್ಯ
ಸಿಇಟಿ ಬರೆಯಲು ಬಂದ ವಿದ್ಯಾರ್ಥಿಯ ಜನಿವಾರ ತೆಗೆಸಿದ್ರಾ ಸಿಬ್ಬಂದಿ?
ಸಿಇಟಿ ಬರೆಯಲು ಬಂದ ವಿದ್ಯಾರ್ಥಿಯ ಜನಿವಾರ ತೆಗೆಸಿದ್ರಾ ಸಿಬ್ಬಂದಿ?