AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತ ಪ್ರಜಾಪ್ರಭುತ್ವ ರಾಷ್ಟ್ರವಾಗಿ ಉಳಿದಿಲ್ಲ; ರಾಹುಲ್​ ಗಾಂಧಿ ಕಳವಳ

ಭಾರತವನ್ನು ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ ಎಂಬ ಪಟ್ಟದಿಂದ ಚುನಾವಣೆಯುಳ್ಳ ನಿರಂಕುಶ ಪ್ರಭುತ್ವ ರಾಷ್ಟ್ರ ಎಂಬಲ್ಲಿಗೆ ಇಳಿಸಿರುವ ವರದಿಯನ್ನು ತಮ್ಮ ಟ್ವಿಟರ್​ ಖಾತೆಯಲ್ಲಿ ಹಂಚಿಕೊಂಡಿರುವ ರಾಹುಲ್​ ಗಾಂಧಿ, ಸದ್ಯದ ಪರಿಸ್ಥಿತಿ ಬಗ್ಗೆ ಕಳವಳ ವ್ಯಕ್ತಪಡಿಸುವ ವಾಕ್ಯಗಳನ್ನು ಬರೆದುಕೊಂಡಿದ್ದಾರೆ.

ಭಾರತ ಪ್ರಜಾಪ್ರಭುತ್ವ ರಾಷ್ಟ್ರವಾಗಿ ಉಳಿದಿಲ್ಲ; ರಾಹುಲ್​ ಗಾಂಧಿ ಕಳವಳ
ರಾಹುಲ್​ ಗಾಂಧಿ
Skanda
| Edited By: |

Updated on: Mar 11, 2021 | 10:37 PM

Share

ದೆಹಲಿ: ವಿಶ್ವದ ಅತಿದೊಡ್ಡ ಲಿಖಿತ ರೂಪದ ಸಂವಿಧಾನ ಹೊಂದಿರುವ ರಾಷ್ಟ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಭಾರತ ಈಗ ಪ್ರಜಾಪ್ರಭುತ್ವ ರಾಷ್ಟ್ರವಾಗಿ ಉಳಿದಿಲ್ಲ ಎಂದು ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿ ಟ್ವೀಟ್​ ಮಾಡಿದ್ದಾರೆ. ಭಾರತದ ಪ್ರಸ್ತುತ ರಾಜಕೀಯ ವ್ಯವಸ್ಥೆ ಪ್ರಜಾಪ್ರಭುತ್ವ ಆಶಯಕ್ಕೆ ಸಂಪೂರ್ಣ ಬದ್ಧವಾಗಿಲ್ಲ ಎಂಬ ವರದಿ ಪ್ರಕಟಿಸಿರುವ ಸ್ವೀಡನ್​ ಇನ್​ಸ್ಟಿಟ್ಯೂಟ್ಸ್ ಡೆಮಾಕ್ರಸಿ ರಿಪೋರ್ಟ್ಸ್​ ಉಲ್ಲೇಖಿಸಿರುವ ರಾಹುಲ್​ ಗಾಂಧಿ ಟ್ವೀಟ್​ ಮೂಲಕ ವ್ಯವಸ್ಥೆಯನ್ನು ಕಟುವಾಗಿ ಟೀಕಿಸಿದ್ದಾರೆ.

ಭಾರತವನ್ನು ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ ಎಂಬ ಪಟ್ಟದಿಂದ ಚುನಾವಣೆಯುಳ್ಳ ನಿರಂಕುಶ ಪ್ರಭುತ್ವ ರಾಷ್ಟ್ರ ಎಂಬಲ್ಲಿಗೆ ಇಳಿಸಿರುವ ವರದಿಯನ್ನು ತಮ್ಮ ಟ್ವಿಟರ್​ ಖಾತೆಯಲ್ಲಿ ಹಂಚಿಕೊಂಡಿರುವ ರಾಹುಲ್​ ಗಾಂಧಿ, ಸದ್ಯದ ಪರಿಸ್ಥಿತಿ ಬಗ್ಗೆ ಕಳವಳ ವ್ಯಕ್ತಪಡಿಸುವ ವಾಕ್ಯಗಳನ್ನು ಬರೆದುಕೊಂಡಿದ್ದಾರೆ. ಸದರಿ ವರದಿಗೆ ಸಂಬಂಧಿಸಿದ ತಲೆಬರಹದಲ್ಲಿ ಭಾರತ ಪಾಕಿಸ್ತಾನದಂತೆಯೇ ಚುನಾವಣೆಯುಳ್ಳ ನಿರಂಕುಶ ಪ್ರಭುತ್ವ ರಾಷ್ಟ್ರವಾಗಿದ್ದು, ಅದರ ಪರಿಸ್ಥಿತಿ ಬಾಂಗ್ಲಾದೇಶಕ್ಕಿಂತಲೂ ಕಳಪೆ ಎಂದು ಟೀಕಿಸಲಾಗಿದೆ.

ಇದಕ್ಕೂ ಮುನ್ನ ಅಮೆರಿಕಾ ಸರ್ಕಾರ ಪೋಷಿತ ಫ್ರೀಡಮ್​ ಹೌಸ್​ ಎಂಬ ಎನ್​ಜಿಓ ಒಂದು, ಭಾರತವನ್ನು ಸ್ವಾತಂತ್ರ್ಯ ಎಂಬಲ್ಲಿಂದ ತುಸು ಸ್ವಾತಂತ್ರ್ಯವುಳ್ಳ ರಾಷ್ಟ್ರ ಎಂಬಲ್ಲಿಗೆ ಇಳಿಸಿ ವರದಿ ಪ್ರಕಟಿಸಿತ್ತು. ಅಂತೆಯೇ, ನರೇಂದ್ರ ಮೋದಿ ನೇತೃತ್ವದ ಸರ್ಕಾರ 2014ರಲ್ಲಿ ಆಡಳಿತಕ್ಕೆ ಏರಿದ ನಂತರ ಭಾರತದಲ್ಲಿ ರಾಜಕೀಯ ಹಕ್ಕು ಹಾಗೂ ನಾಗರೀಕ ಸ್ವಾತಂತ್ರ್ಯದ ಹನನವಾಗಿದೆ ಎಂದೂ ಫ್ರೀಡಮ್​ ಹೌಸ್​ ಅಭಿಪ್ರಾಯ ವ್ಯಕ್ತಪಡಿಸಿತ್ತು.

Swedish Report

ರಾಹುಲ್​ ಗಾಂಧಿ ಟ್ವೀಟ್​ ಮಾಡಿದ ವರದಿ

ಆದರೆ, ಇದನ್ನು ಬಲವಾಗಿ ವಿರೋಧಿಸಿದ್ದ ಸರ್ಕಾರ, ಫ್ರೀಡಮ್​ ಹೌಸ್​ ವರದಿ ಸಂಪೂರ್ಣ ತಪ್ಪಾಗಿದ್ದು, ವಾಸ್ತವಕ್ಕೆ ದೂರವಾಗಿದೆ ಎಂದು ಹೇಳಿತ್ತು. ಅಲ್ಲದೇ, ಭಾರತ ಅತ್ಯುತ್ತಮ ರೀತಿಯಲ್ಲಿ ಪ್ರಜಾಪ್ರಭುತ್ವವನ್ನು ಪಾಲಿಸಿಕೊಂಡು ಸಾಗುತ್ತಿದೆ. ಆ ಬಗ್ಗೆ ಯಾವುದೇ ಸಂದೇಹ ಬೇಡ ಎಂದೂ ಹೇಳಿಕೊಂಡಿತ್ತು. ಅದಾದ ನಂತರ ಈಗ ಮತ್ತೆ ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆ ಸಡಿಲಗೊಳ್ಳುತ್ತಿರುವ ಬಗ್ಗೆ ಪ್ರಸ್ತಾಪವಾಗಿದ್ದು, ರಾಹುಲ್​ ಗಾಂಧಿ ಟ್ವೀಟ್​ ಮಾಡಿರುವುದು ಮತ್ತಷ್ಟು ಚರ್ಚೆಗೆ ಕಾರಣವಾಗಿದೆ.

ಇದನ್ನೂ ಓದಿ: Emergency: ತುರ್ತು ಪರಿಸ್ಥಿತಿ ಒಂದು ತಪ್ಪು ನಿರ್ಣಯ, ಅದನ್ನು ಒಪ್ಪಿಕೊಳ್ಳಲಾಗುವುದಿಲ್ಲ: ರಾಹುಲ್​ ಗಾಂಧಿ

ಪ್ರಜಾಪ್ರಭುತ್ವಕ್ಕೆ ಧಕ್ಕೆಯಾದಾಗ ಹೋರಾಟಕ್ಕೆ ಧುಮುಕುವೆ; ಹೆಚ್.ಸಿ.ಮಹದೇವಪ್ಪ

Follow Us
Skanda
Skanda
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!