AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಫ್ಘಾನಿಸ್ತಾನದಲ್ಲಿ ಮುಂದಿನ ಸರ್ಕಾರದ ಸ್ವರೂಪ ಬಗ್ಗೆ ತಿಳಿದಿಲ್ಲ, ಸ್ಥಳಾಂತರಿಸುವ ಕಾರ್ಯಕ್ಕೆ ಆದ್ಯತೆ: ವಿದೇಶಾಂಗ ಸಚಿವಾಲಯ

Arindam Bagchi: ಪ್ರಸ್ತುತ ಕಾಬೂಲ್ ವಿಮಾನ ನಿಲ್ದಾಣ ಕಾರ್ಯನಿರ್ವಹಿಸುತ್ತಿಲ್ಲ. ವಿಮಾನ ನಿಲ್ದಾಣ ಸೇವೆ ಪುನರಾರಂಭಗೊಂಡಾಗ ಕಾಬೂಲ್‌ನಿಂದ ಜನರನ್ನು ಸ್ಥಳಾಂತರಿಸುವ ನಮ್ಮ ಕಾರ್ಯಾಚರಣೆಯನ್ನು ನಾವು ಪುನರಾರಂಭಿಸುತ್ತೇವೆ ಎಂದು ಅವರು ಹೇಳಿದರು. ಭಾರತದ ಪ್ರಸ್ತುತ ಆದ್ಯತೆಯು ಕಾಬೂಲ್‌ನಲ್ಲಿರುವ ಭಾರತೀಯರ ಸುರಕ್ಷತೆಯಾಗಿದೆ.

ಅಫ್ಘಾನಿಸ್ತಾನದಲ್ಲಿ ಮುಂದಿನ ಸರ್ಕಾರದ ಸ್ವರೂಪ ಬಗ್ಗೆ ತಿಳಿದಿಲ್ಲ, ಸ್ಥಳಾಂತರಿಸುವ ಕಾರ್ಯಕ್ಕೆ ಆದ್ಯತೆ: ವಿದೇಶಾಂಗ ಸಚಿವಾಲಯ
ಅರಿಂದಮ್ ಬಾಗ್ಚಿ
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on: Sep 02, 2021 | 6:48 PM

Share

ದೆಹಲಿ: ತಾಲಿಬಾನ್‌ (Taliban) ಅಫ್ಘಾನಿಸ್ತಾನದಲ್ಲಿ (Afghanistan) ರಚಿಸಲಿರುವ ಸರ್ಕಾರದ ಸ್ವರೂಪದ ಯಾವುದೇ ವಿವರಗಳು ಭಾರತಕ್ಕೆ ತಿಳಿದಿಲ್ಲ ಎಂದು ಸರ್ಕಾರ ಗುರುವಾರ ಹೇಳಿದೆ. ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ವಕ್ತಾರ ಅರಿಂದಮ್ ಬಾಗ್ಚಿ (Arindam Bagchi) ಕಳೆದ ಕೆಲವು ದಿನಗಳಿಂದ ಸ್ಥಗಿತಗೊಂಡಿರುವ ಸ್ಥಳಾಂತರ ಕಾರ್ಯಾಚರಣೆ ಕಾಬೂಲ್ ವಿಮಾನ ನಿಲ್ದಾಣದಿಂದ ಪುನರಾರಂಭಗೊಳ್ಳಲಿದೆ ಎಂದಿದ್ದಾರೆ. ಪ್ರಸ್ತುತ ಕಾಬೂಲ್ ವಿಮಾನ ನಿಲ್ದಾಣ ಕಾರ್ಯನಿರ್ವಹಿಸುತ್ತಿಲ್ಲ. ವಿಮಾನ ನಿಲ್ದಾಣ ಸೇವೆ ಪುನರಾರಂಭಗೊಂಡಾಗ ಕಾಬೂಲ್‌ನಿಂದ ಜನರನ್ನು ಸ್ಥಳಾಂತರಿಸುವ ನಮ್ಮ ಕಾರ್ಯಾಚರಣೆಯನ್ನು ನಾವು ಪುನರಾರಂಭಿಸುತ್ತೇವೆ ಎಂದು ಅವರು ಹೇಳಿದರು. ಭಾರತದ ಪ್ರಸ್ತುತ ಆದ್ಯತೆಯು ಕಾಬೂಲ್‌ನಲ್ಲಿರುವ ಭಾರತೀಯರ ಸುರಕ್ಷತೆಯಾಗಿದೆ.

ಭಾರತ ಮಂಗಳವಾರ ತಾಲಿಬಾನ್‌ನೊಂದಿಗೆ ತನ್ನ ಮೊದಲ ಔಪಚಾರಿಕ ಸಂಪರ್ಕವನ್ನು ಸ್ಥಾಪಿಸಿತು. ಕತಾರ್‌ನ ಭಾರತೀಯ ರಾಯಭಾರಿ ದೀಪಕ್ ಮಿತ್ತಲ್ ಅವರು ಭಾರತೀಯ ಮಿಷನ್‌ನಲ್ಲಿ ದೋಹಾದಲ್ಲಿರುವ ತಾಲಿಬಾನ್‌ನ ರಾಜಕೀಯ ಕಚೇರಿಯ ಮುಖ್ಯಸ್ಥ ಶೇರ್ ಮೊಹಮ್ಮದ್ ಅಬ್ಬಾಸ್ ಸ್ಟಾನೆಕ್‌ಜಾಯ್ ಅವರನ್ನು ಭೇಟಿಯಾದರು.

ಯುದ್ಧ ಪೀಡಿತ ದೇಶದಲ್ಲಿ ಭಾರತೀಯರ ಅದರಲ್ಲೂ ಅಲ್ಪಸಂಖ್ಯಾತರ ಸುರಕ್ಷತೆಯ ಕುರಿತು ಮಾತುಕತೆ ನಡೆಸಲಾಗಿದೆ ಎಂದು ವರದಿಯಾಗಿದೆ. ಭಾರತದ ವಿರುದ್ಧ ಭಯೋತ್ಪಾದಕ ಚಟುವಟಿಕೆಗಳಿಗೆ ಅಫ್ಘಾನ್ ನೆಲವನ್ನು ಬಳಸಬಾರದು ಎಂದು ಮಿತ್ತಲ್ ತಾಲಿಬಾನ್ ಗೆ ಒತ್ತಾಯಿಸಿದರು.

ಕಳೆದ ತಿಂಗಳು ಅಫ್ಘಾನಿಸ್ತಾನವನ್ನು ಸ್ವಾಧೀನಪಡಿಸಿಕೊಂಡ ಇಸ್ಲಾಮಿಕ್ ಉಗ್ರಗಾಮಿ ಗುಂಪಿನೊಂದಿಗಿನ ಮುಂದಿನ ಸಭೆಗಳ ಬಗ್ಗೆ ಕೇಳಿದಾಗ ಬಾಗ್ಚಿ ಅವರು ಈ ಬಗ್ಗೆ ಯಾವುದೇ ಅಪ್ ಡೇಟ್ ಇಲ್ಲ ಎಂದು ಹೇಳಿದರು. ಅದರ ಬಗ್ಗೆ ಊಹಿಸಲು ಬಯಸುವುದಿಲ್ಲ. ಇದು ಹೌದೋ ಅಲ್ಲವೋ ಎಂಬ ವಿಷಯ ಅಲ್ಲ. ಅಫ್ಘಾನಿಸ್ತಾನದ ಭೂಮಿಯನ್ನು ಯಾವುದೇ ರೀತಿಯ ಭಯೋತ್ಪಾದಕ ಚಟುವಟಿಕೆಗಳಿಗೆ ಬಳಸಬಾರದು ಎಂಬುದು ನಮ್ಮ ಉದ್ದೇಶ” ಎಂದು ಅವರು ಹೇಳಿದರು.

ಇದನ್ನೂ ಓದಿ: Afghanistan: ಅಫ್ಘಾನಿಸ್ತಾನದಲ್ಲಿ ವಶಪಡಿಸಿಕೊಂಡ ಮಿಲಿಟರಿ ಸಾಮಾಗ್ರಿಗಳನ್ನು ಕಂದಹಾರ್‌ನಲ್ಲಿ ಮೆರವಣಿಗೆ ನಡೆಸಿ ಪ್ರದರ್ಶಿಸಿದ ತಾಲಿಬಾನ್

ಇದನ್ನೂ ಓದಿ:  Afghanistan Crisis: ಅಫ್ಘಾನಿಸ್ತಾನದ ಗೌಪ್ಯ ಸ್ಥಳದಿಂದ ಅಮೆರಿಕನ್ನರು, ಅಫ್ಘಾನ್​ ಕಮಾಂಡೋಗಳನ್ನು ರಹಸ್ಯವಾಗಿ ಶಿಫ್ಟ್​ ಮಾಡಿದ್ದು ಹೇಗೆ?

(India not aware of any details or nature of the government that could be formed in Afghanistan by the Taliban says MEA)

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ