AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತ 3ನೇ ಅತಿದೊಡ್ಡ ಆರ್ಥಿಕತೆಯತ್ತ ಸಾಗುತ್ತಿದೆ; ಟ್ರಂಪ್ ‘ಸತ್ತ ಆರ್ಥಿಕತೆ’ ಹೇಳಿಕೆ ಬೆನ್ನಲ್ಲೇ ಪ್ರಧಾನಿ ಮೋದಿ ಘೋಷಣೆ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ ಸುಂಕ ಹೆಚ್ಚಳದಿಂದ ಉಂಟಾದ ಜಾಗತಿಕ ಆರ್ಥಿಕ ಪ್ರಕ್ಷುಬ್ಧತೆಯ ನಡುವೆಯೂ ಪ್ರಧಾನಿ ನರೇಂದ್ರ ಮೋದಿ ಭಾರತ ದೇಶವು ವಿಶ್ವದ ಮೂರನೇ ಅತಿದೊಡ್ಡ ಆರ್ಥಿಕತೆಯಾಗುವ ಹಾದಿಯಲ್ಲಿದೆ ಎಂದು ಹೇಳಿದ್ದಾರೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ರಷ್ಯಾ ಜೊತೆಗಿನ ಅಮೆರಿಕದ ಸಂಬಂಧಗಳ ಬಗ್ಗೆ ಪ್ರತಿಕ್ರಿಯಿಸುವಾಗ ಭಾರತವನ್ನು "ಡೆಡ್ ಎಕಾನಮಿ" ಎಂದು ಟೀಕಿಸಿದ ಕೆಲವೇ ದಿನಗಳಲ್ಲಿ ಪ್ರಧಾನಿ ಮೋದಿ ಈ ಹೇಳಿಕೆ ನೀಡಿದ್ದಾರೆ.

ಭಾರತ 3ನೇ ಅತಿದೊಡ್ಡ ಆರ್ಥಿಕತೆಯತ್ತ ಸಾಗುತ್ತಿದೆ; ಟ್ರಂಪ್ 'ಸತ್ತ ಆರ್ಥಿಕತೆ' ಹೇಳಿಕೆ ಬೆನ್ನಲ್ಲೇ ಪ್ರಧಾನಿ ಮೋದಿ ಘೋಷಣೆ
Modi In Varanasi
ಸುಷ್ಮಾ ಚಕ್ರೆ
|

Updated on: Aug 02, 2025 | 4:07 PM

Share

ವಾರಾಣಸಿ, ಆಗಸ್ಟ್ 2: ಪ್ರಧಾನಿ ನರೇಂದ್ರ ಮೋದಿ (PM Narendra Modi) ವಾರಾಣಸಿಗೆ ಭೇಟಿ ನೀಡಿದ್ದಾರೆ. ಪಾಕಿಸ್ತಾನದಲ್ಲಿ ಭಯೋತ್ಪಾದಕ ಸಂಘಟನೆಗಳ ವಿರುದ್ಧ ಭಾರತದ ಮಿಲಿಟರಿ ಕಾರ್ಯಾಚರಣೆಯಾದ ಆಪರೇಷನ್ ಸಿಂಧೂರ್ (Operation Sindoor) ನಂತರ ವಾರಾಣಸಿಗೆ ಮೋದಿ (PM Modi in Varanasi) ನೀಡಿದ ಮೊದಲ ಭೇಟಿ ಇದಾಗಿದೆ. ಆಪರೇಷನ್ ಸಿಂಧೂರದ ಯಶಸ್ಸನ್ನು ಶಿವನ ಪಾದಗಳಿಗೆ ಅರ್ಪಿಸಲು ಬಯಸುತ್ತೇನೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಭಾರತವನ್ನು ಸತ್ತ ಆರ್ಥಿಕತೆ ಎಂದು ಟ್ರಂಪ್ ಟೀಕಿಸಿದ ಬೆನ್ನಲ್ಲೇ ವಾರಾಣಸಿಯಲ್ಲಿ ಮಾಡಿದ ತಮ್ಮ ಭಾಷಣದಲ್ಲಿ ಪ್ರಧಾನಿ ಮೋದಿ “ಭಾರತವು ವಿಶ್ವದ 3ನೇ ಅತಿದೊಡ್ಡ ಆರ್ಥಿಕತೆಯಾಗಲಿದೆ. ಅದಕ್ಕಾಗಿಯೇ ಅದು ತನ್ನ ಆರ್ಥಿಕ ಹಿತಾಸಕ್ತಿಗಳಿಗೆ ಸಂಬಂಧಿಸಿದಂತೆ ಜಾಗರೂಕರಾಗಿರಬೇಕು” ಎಂದು ಹೇಳಿದ್ದಾರೆ.

“ಜಗತ್ತಿನಲ್ಲಿ ಅಸ್ಥಿರತೆಯ ವಾತಾವರಣವಿದೆ. ಎಲ್ಲಾ ದೇಶಗಳು ತಮ್ಮ ವೈಯಕ್ತಿಕ ಹಿತಾಸಕ್ತಿಗಳ ಮೇಲೆ ಕೇಂದ್ರೀಕರಿಸುತ್ತಿವೆ. ಭಾರತ ವಿಶ್ವದ ಮೂರನೇ ಅತಿದೊಡ್ಡ ಆರ್ಥಿಕತೆಯಾಗಲಿದೆ. ನಮ್ಮ ಸರ್ಕಾರವು ದೇಶದ ಹಿತದೃಷ್ಟಿಯಿಂದ ಸಾಧ್ಯವಿರುವ ಎಲ್ಲವನ್ನೂ ಮಾಡುತ್ತಿದೆ. ದೇಶಕ್ಕೆ ಒಳಿತನ್ನು ಬಯಸುವವರು ಮತ್ತು ಭಾರತವನ್ನು ವಿಶ್ವದ ಮೂರನೇ ಅತಿದೊಡ್ಡ ಆರ್ಥಿಕತೆಯಾಗಿ ನೋಡಲು ಬಯಸುವವರು ಅದು ಯಾವುದೇ ರಾಜಕೀಯ ಪಕ್ಷವಾಗಿರಲಿ ತಮ್ಮ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ‘ಸ್ವದೇಶಿ’ ಉತ್ಪನ್ನಗಳ ಬಳಕೆಯನ್ನು ಹೆಚ್ಚಿಸಬೇಕು ಮತ್ತು ಪ್ರಚಾರಪಡಿಸಬೇಕು” ಎಂದು ಮೋದಿ ಮನವಿ ಮಾಡಿದ್ದಾರೆ.

ಇದನ್ನೂ ಓದಿ: ವಾರಾಣಸಿಯಲ್ಲಿ ಪ್ರವಾಹ ಪರಿಸ್ಥಿತಿ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದ ಪ್ರಧಾನಿ ಮೋದಿ

“ನಾವು ಭಾರತೀಯರು ತಯಾರಿಸಿದ ವಸ್ತುಗಳನ್ನು ಮಾತ್ರ ಖರೀದಿಸುತ್ತೇವೆ ಎಂದು ಜನರು ಸ್ಥಳೀಯರಿಗೆ ಧ್ವನಿಯಾಗಬೇಕು” ಎಂದು ಪ್ರಧಾನಿ ಒತ್ತಿ ಹೇಳಿದ್ದಾರೆ.

ವಾರಾಣಸಿ ರ್ಯಾಲಿಯಲ್ಲಿ ಪ್ರಧಾನಿ ಮೋದಿ ಪಾಕಿಸ್ತಾನದ ಮೇಲೆ ಕಟುವಾದ ಟೀಕಾಪ್ರಹಾರ ನಡೆಸಿದ್ದಾರೆ. ಭಯೋತ್ಪಾದಕರು ಪಾತಾಳ ಲೋಕದಲ್ಲಿ ಆಶ್ರಯ ಪಡೆದರೂ ಸಹ ಅವರನ್ನು ಬಿಡುವುದಿಲ್ಲ ಎಂದು ಮೋದಿ ಎಚ್ಚರಿಸಿದ್ದಾರೆ. “ಅನ್ಯಾಯ ಮತ್ತು ಭಯೋತ್ಪಾದನೆ ಮುಂದೆ ಇದ್ದಾಗ ಮಹಾದೇವ ತನ್ನ ‘ರುದ್ರ ರೂಪ’ ತೋರುತ್ತಾನೆ. ಆಪರೇಷನ್ ಸಿಂಧೂರ್ ಸಮಯದಲ್ಲಿ ಭಾರತದ ಈ ಮುಖವನ್ನು ಜಗತ್ತು ನೋಡಿತು. ಭಾರತದಲ್ಲಿ ಭಯೋತ್ಪಾದನೆ ಬಿತ್ತುವ ಯಾರನ್ನೂ ‘ಪಾತಾಳ ಲೋಕ’ದಲ್ಲಿಯೂ ಬಿಡುವುದಿಲ್ಲ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಪ್ರಧಾನಿ ನರೇಂದ್ರ ಮೋದಿ ವಿಶ್ವದೆಲ್ಲೆಡೆ ಸುತ್ತಾಡಿ ಭಾರತದ ಶ್ರೇಷ್ಠತೆಯನ್ನು ಸಾರುತ್ತಿದ್ದಾರೆ: ಬಿಎಸ್ ಯಡಿಯೂರಪ್ಪ

ವಿಪಕ್ಷಗಳ ವಿರುದ್ಧ ವಾಗ್ದಾಳಿ:

ವಿರೋಧ ಪಕ್ಷದ ವಿರುದ್ಧವೂ ಪ್ರಧಾನಿ ಮೋದಿ ವಾಗ್ದಾಳಿ ನಡೆಸಿದರು. “ಆಪರೇಷನ್ ಸಿಂಧೂರ್ ಸಮಯದಲ್ಲಿ ಭಾರತ ಪಾಕಿಸ್ತಾನದಲ್ಲಿ ಭಯೋತ್ಪಾದಕ ಅಡಗುತಾಣಗಳನ್ನು ನಾಶಪಡಿಸಿದೆ ಎಂಬುದನ್ನು ಕಾಂಗ್ರೆಸ್ ಮತ್ತು ಅದರ ಮಿತ್ರಪಕ್ಷಗಳು ಜೀರ್ಣಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಪಾಕಿಸ್ತಾನ ಅಸಮಾಧಾನಗೊಂಡಿದೆ ಎಂದು ಎಲ್ಲರಿಗೂ ತಿಳಿದಿದೆ. ಆದರೆ ಕಾಂಗ್ರೆಸ್ ಮತ್ತು ಸಮಾಜವಾದಿ ಪಕ್ಷವು ಪಾಕಿಸ್ತಾನ ಅನುಭವಿಸುತ್ತಿರುವ ನೋವನ್ನು ಸಹಿಸಲಾರವು. ಪಾಕಿಸ್ತಾನ ಅಳುತ್ತಿದೆ. ಅದನ್ನು ನೋಡಿ ಇಲ್ಲಿ ಕಾಂಗ್ರೆಸ್ ಮತ್ತು ಸಮಾಜವಾದಿ ಪಕ್ಷಗಳು ಅಳುತ್ತಿವೆ. ಕಾಂಗ್ರೆಸ್ ನಮ್ಮ ಸೇನಾ ಪಡೆಗಳ ಶೌರ್ಯವನ್ನು ನಿರಂತರವಾಗಿ ಅವಮಾನಿಸುತ್ತಿದೆ. ಆಪರೇಷನ್ ಸಿಂಧೂರ್ ಅನ್ನು ‘ತಮಾಷಾ’ ಎಂದು ಕರೆದಿದೆ” ಎಂದು ಪ್ರಧಾನಿ ಟೀಕಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Follow Us
ಯೋಗೇಶ್ ಗೌಡ ಕೊಲೆ ಪ್ರಕರಣ: ಏ. 15ಕ್ಕೆ ವಿನಯ್ ಕುಲಕರ್ಣಿ ಭವಿಷ್ಯ ನಿರ್ಧಾರ
ಯೋಗೇಶ್ ಗೌಡ ಕೊಲೆ ಪ್ರಕರಣ: ಏ. 15ಕ್ಕೆ ವಿನಯ್ ಕುಲಕರ್ಣಿ ಭವಿಷ್ಯ ನಿರ್ಧಾರ
ಕಾಂಗ್ರೆಸ್‌ನವರು ನಿನ್ನೆ ರಾತ್ರಿ ಕೋಟ್ಯಂತರ ರೂಪಾಯಿ ಹಣ ಹಂಚಿಕೆ ಮಾಡಿದ್ದಾರೆ
ಕಾಂಗ್ರೆಸ್‌ನವರು ನಿನ್ನೆ ರಾತ್ರಿ ಕೋಟ್ಯಂತರ ರೂಪಾಯಿ ಹಣ ಹಂಚಿಕೆ ಮಾಡಿದ್ದಾರೆ
ತಿರುಪತಿಗೆ ಭೇಟಿ ನೀಡಿ ದೇವರ ದರ್ಶನ ಪಡೆದ ವಿಘ್ನೇಶ್ ಶಿವನ್-ನಯನತಾರಾ
ತಿರುಪತಿಗೆ ಭೇಟಿ ನೀಡಿ ದೇವರ ದರ್ಶನ ಪಡೆದ ವಿಘ್ನೇಶ್ ಶಿವನ್-ನಯನತಾರಾ
ಬೈಕ್​ನಲ್ಲಿ ಬಂದು ಮತ ಚಲಾಯಿಸಿದ ಪುದುಚೇರಿ ಸಿಎಂ ರಂಗಸ್ವಾಮಿ! ವಿಡಿಯೋ ವೈರಲ್
ಬೈಕ್​ನಲ್ಲಿ ಬಂದು ಮತ ಚಲಾಯಿಸಿದ ಪುದುಚೇರಿ ಸಿಎಂ ರಂಗಸ್ವಾಮಿ! ವಿಡಿಯೋ ವೈರಲ್
ಹಂಪಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಬೆಂಕಿ ಅವಘಡ: ತಪ್ಪಿದ ಭಾರಿ ಅನಾಹುತ
ಹಂಪಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಬೆಂಕಿ ಅವಘಡ: ತಪ್ಪಿದ ಭಾರಿ ಅನಾಹುತ
ವಿಜಯಪುರದಲ್ಲಿ ಮತ್ತೆ ಭೂಕಂಪನ ಅನುಭವ: ಆತಂಕಕ್ಕೊಳಗಾದ ಜನ
ವಿಜಯಪುರದಲ್ಲಿ ಮತ್ತೆ ಭೂಕಂಪನ ಅನುಭವ: ಆತಂಕಕ್ಕೊಳಗಾದ ಜನ
VIDEO: ನನ್ನಿಂದಾನೇ ಸೋತ್ವಿ... ಕಣ್ಣೀರಿಟ್ಟ ಮಿಲ್ಲರ್
VIDEO: ನನ್ನಿಂದಾನೇ ಸೋತ್ವಿ... ಕಣ್ಣೀರಿಟ್ಟ ಮಿಲ್ಲರ್
2009ರಿಂದ ನನ್ನ ಪ್ರೋತ್ಸಾಹಿಸಿದ್ದಕ್ಕೆ ಧನ್ಯವಾದ ಎಂದ ಜಯರಾಂ ಕಾರ್ತಿಕ್
2009ರಿಂದ ನನ್ನ ಪ್ರೋತ್ಸಾಹಿಸಿದ್ದಕ್ಕೆ ಧನ್ಯವಾದ ಎಂದ ಜಯರಾಂ ಕಾರ್ತಿಕ್
ಬೆಳಗ್ಗೆಯೇ ಹೆಚ್ಚಿನ ಸಂಖ್ಯೆಯಲ್ಲಿ ಮತಗಟ್ಟೆಗಳಿಗೆ ಆಗಮಿಸಿದ ಮತದಾರರು
ಬೆಳಗ್ಗೆಯೇ ಹೆಚ್ಚಿನ ಸಂಖ್ಯೆಯಲ್ಲಿ ಮತಗಟ್ಟೆಗಳಿಗೆ ಆಗಮಿಸಿದ ಮತದಾರರು
ಯಾವ ಸ್ಥಳಗಳಲ್ಲಿ ಏರು ಧ್ವನಿಯಲ್ಲಿ ಮಾತನಾಡುವುದು ಆಪತ್ತು ತರುತ್ತದೆ?
ಯಾವ ಸ್ಥಳಗಳಲ್ಲಿ ಏರು ಧ್ವನಿಯಲ್ಲಿ ಮಾತನಾಡುವುದು ಆಪತ್ತು ತರುತ್ತದೆ?