AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಡಿ ನಿಯಂತ್ರಣಾ ರೇಖೆ ಬಳಿ ಭಾರತ-ಪಾಕ್​ ಸೈನಿಕರಿಂದ ಈದ್​ ಆಚರಣೆ; ಸಿಹಿ ಹಂಚಿ-ಶುಭಾಶಯ ಹೇಳಿಕೊಂಡ ಸೇನಾ ಸಿಬ್ಬಂದಿ

ಈದ್​, ಹೋಳಿ, ದೀಪಾವಳಿ ಸೇರಿ ಹಿಂದು ಮತ್ತು ಮುಸ್ಲಿಮರ ಹಬ್ಬದ ದಿನ ಗಡಿಯಲ್ಲಿ ಎರಡೂ ದೇಶಗಳ ಯೋಧರು ಸಿಹಿ ಹಂಚಿಕೊಂಡು, ಶುಭಾಶಯ ಕೋರುವುದು ಸಾಮಾನ್ಯವಾಗಿದೆ.

ಗಡಿ ನಿಯಂತ್ರಣಾ ರೇಖೆ ಬಳಿ ಭಾರತ-ಪಾಕ್​ ಸೈನಿಕರಿಂದ ಈದ್​ ಆಚರಣೆ; ಸಿಹಿ ಹಂಚಿ-ಶುಭಾಶಯ ಹೇಳಿಕೊಂಡ ಸೇನಾ ಸಿಬ್ಬಂದಿ
ಸಿಹಿ ಹಂಚಿಕೊಂಡ ಭಾರತ-ಪಾಕ್ ಯೋಧರು
Follow us
Lakshmi Hegde
|

Updated on: May 13, 2021 | 8:14 PM

ಶ್ರೀನಗರ: ಈದ್ ಉಲ್ ಫಿತರ್​ ಹಬ್ಬದ ನಿಮಿತ್ತ ಇಂದು ಜಮ್ಮು-ಕಾಶ್ಮೀರದ ಗಡಿ ನಿಯಂತ್ರಣಾ ರೇಖೆ (ಎಲ್​ಒಸಿ) ಬಳಿ ಭಾರತ ಮತ್ತು ಪಾಕಿಸ್ತಾನ ಸೇನೆ ಯೋಧರು ಪರಸ್ಪರ ಸಿಹಿ ಹಂಚಿಕೊಂಡು, ಶುಭಾಶಯ ಕೋರಿದರು. ಈದ್​, ಹೋಳಿ, ದೀಪಾವಳಿ ಸೇರಿ ಹಿಂದು ಮತ್ತು ಮುಸ್ಲಿಮರ ಹಬ್ಬದ ದಿನ ಗಡಿಯಲ್ಲಿ ಎರಡೂ ದೇಶಗಳ ಯೋಧರು ಸಿಹಿ ಹಂಚಿಕೊಂಡು, ಶುಭಾಶಯ ಕೋರುವುದು ಸಾಮಾನ್ಯವಾಗಿದೆ.

ಸಾಮಾನ್ಯವಾಗಿ ವಿಶೇಷ ಹಬ್ಬಗಳ ದಿನದಂದು ಕುಪ್ವಾರಾದ ಟ್ಯಾಂಗ್​ಧರ್​ನಲ್ಲಿರುವ ಕಿಶನ್​ಗಂಗಾ ನದಿಯ ತಿತ್ವಾಲ್​ ಕ್ರಾಸಿಂಗ್ ಮತ್ತು ಉರಿಯಲ್ಲಿರುವ ಕಮಾನ್​ ಅಮನ್​ ಸೇತುವೆಯ ಬಳಿ ಎರಡೂ ದೇಶಗಳ ಯೋಧರು ಸೇರಿ ಹಬ್ಬ ಆಚರಿಸುತ್ತಾರೆ. ಹಾಗೇ ಇಂದು ಪಾಕಿಸ್ತಾನ ಸೇನೆ ಸೈನಿಕರು ಪೂಂಚ್​ನ ಗಡಿ ನಿಯಂತ್ರಣಾ ರೇಖೆ ಬಳಿಯೂ ಕೂಡ ಭಾರತೀಯ ಯೋಧರಿಗೆ ಸಹಿ ಹಂಚಿದೆ. ಅದಕ್ಕೆ ಪ್ರತಿಯಾಗಿ ನಮ್ಮ ಯೋಧರೂ ಕೂಡ ಅವರಿಗೆ ಶುಭಕೋರಿದ್ದಾರೆ.

ಗಡಿನಿಯಂತ್ರಣ ರೇಖೆಯ ಬಳಿ ಪಾಕಿಸ್ತಾನ ಸದಾ ಕದನ ವಿರಾಮ ಉಲ್ಲಂಘನೆ ಮಾಡುತ್ತಿರುತ್ತದೆ. ಇಲ್ಲಿ ಗುಂಡಿನ ಶಬ್ದ ಸಾಮಾನ್ಯ. ಇತ್ತೀಚೆಗೆ ಹಲವು ದಿನಗಳಿಂದ ಗಡಿಯ ಬಳಿ ಪರಸ್ಪರ ಗುಂಡಿನ ದಾಳಿ ತುಸು ಕಡಿಮೆಯಾಗಿದೆ. ಇನ್ನು ಹೀಗೆ ಸಿಹಿ ಹಂಚುವಾಗ ಕೊರೊನಾ ನಿಯಂತ್ರಣಕ್ಕೆ ಸಂಬಂಧಪಟ್ಟ ಎಲ್ಲ ಶಿಷ್ಟಾಚಾರಗಳನ್ನೂ ಪಾಲಿಸಲಾಗಿದೆ ಎಂದು ಸೇನಾ ವಕ್ತಾರರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಮಂಜು ಕೇವಲ ಕಾಮಿಡಿಯನ್​, ಹೀರೋ ಆಗಲ್ಲ; ಮನೆಯಿಂದ ಹೊರ ಬಂದ ಸಂಬರಗಿ ಮಾತು

ಕೊರೊನಾ ನೆಗೆಟಿವ್ ಬಂದ ಮೇಲೆ ನಟ ಅಲ್ಲು ಅರ್ಜುನ್ ತಮ್ಮ ಕುಟುಂಬವನ್ನು ಮತ್ತೆ ಭೇಟಿಯಾಗಿದ್ದಾರೆ

ನೆಲಮಂಗಲದಲ್ಲಿ ಭಾರೀ ಮಳೆ: ರಾಷ್ಟ್ರೀಯ ಹೆದ್ದಾರಿ ಜಲಾವೃತ, ಟ್ರಾಫಿಕ್ ಜಾಮ್
ನೆಲಮಂಗಲದಲ್ಲಿ ಭಾರೀ ಮಳೆ: ರಾಷ್ಟ್ರೀಯ ಹೆದ್ದಾರಿ ಜಲಾವೃತ, ಟ್ರಾಫಿಕ್ ಜಾಮ್
ನಾಗೇಶ್ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ನಾಗೇಶ್ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಸ್ನೇಹಿತರೊಂದಿಗೆ ಸೇರಿ ತಂದೆಯನ್ನೇ ಕೊಂದ ಮಗ: ಪ್ರಕರಣದ ಅಸಲಿಯತ್ತು ಇಲ್ಲಿದೆ
ಸ್ನೇಹಿತರೊಂದಿಗೆ ಸೇರಿ ತಂದೆಯನ್ನೇ ಕೊಂದ ಮಗ: ಪ್ರಕರಣದ ಅಸಲಿಯತ್ತು ಇಲ್ಲಿದೆ
ಒಪ್ಪಿಕೊಂಡಷ್ಟು ಅನುದಾನವನ್ನು ಕೇಂದ್ರ ಬಿಡುಗಡೆ ಮಾಡಬೇಕು: ಸಿದ್ದರಾಮಯ್ಯ
ಒಪ್ಪಿಕೊಂಡಷ್ಟು ಅನುದಾನವನ್ನು ಕೇಂದ್ರ ಬಿಡುಗಡೆ ಮಾಡಬೇಕು: ಸಿದ್ದರಾಮಯ್ಯ
ರಾಮನ ಹಾಡು ಹಾಡಿ ಮಗುವ ಮಲಗಿಸಿದ ನಟಿ ಹರಿಪ್ರಿಯಾ, ವಿಡಿಯೋ ನೋಡಿ
ರಾಮನ ಹಾಡು ಹಾಡಿ ಮಗುವ ಮಲಗಿಸಿದ ನಟಿ ಹರಿಪ್ರಿಯಾ, ವಿಡಿಯೋ ನೋಡಿ
ಸಿಂದಗಿ ಡಿಪೋದಲ್ಲಿ ಡೀಸೆಲ್​​ ಸಮಸ್ಯೆ, ನಿಂತಲ್ಲೇ ನಿಂತ ಬಸ್​ಗಳು..!
ಸಿಂದಗಿ ಡಿಪೋದಲ್ಲಿ ಡೀಸೆಲ್​​ ಸಮಸ್ಯೆ, ನಿಂತಲ್ಲೇ ನಿಂತ ಬಸ್​ಗಳು..!
ರೌಡಿಶೀಟರ್ ಎಂದ ಮಾತ್ರಕ್ಕೆ ಎಲ್ಲರೂ ರೌಡಿಶೀಟರ್​​ಗಲ್ಲ: ಸಿಟಿ ರವಿ
ರೌಡಿಶೀಟರ್ ಎಂದ ಮಾತ್ರಕ್ಕೆ ಎಲ್ಲರೂ ರೌಡಿಶೀಟರ್​​ಗಲ್ಲ: ಸಿಟಿ ರವಿ
ಅನೀಸುದ್ದೀನ್ ಹೆಸರಿನ ವ್ಯಕ್ತಿಯಿಂದ ಎಕ್ಸ್ ಹ್ಯಾಂಡಲ್​ನಲ್ಲಿ ಪೋಸ್ಟ್​
ಅನೀಸುದ್ದೀನ್ ಹೆಸರಿನ ವ್ಯಕ್ತಿಯಿಂದ ಎಕ್ಸ್ ಹ್ಯಾಂಡಲ್​ನಲ್ಲಿ ಪೋಸ್ಟ್​
ಭಾರತದ ಷರತ್ತುಗಳನ್ನು ಪ್ರಧಾನಿ ಮೋದಿ ಸ್ಪಷ್ಟಪಡಿಸಿದ್ದಾರೆ: ಯದುವೀರ್
ಭಾರತದ ಷರತ್ತುಗಳನ್ನು ಪ್ರಧಾನಿ ಮೋದಿ ಸ್ಪಷ್ಟಪಡಿಸಿದ್ದಾರೆ: ಯದುವೀರ್
ಮೈಸೂರು ಕ್ರಿಕೆಟ್ ಸ್ಟೇಡಿಯಂ ಬಗ್ಗೆ ಸಂಸದ ಯದುವೀರ್ ಮಹತ್ವದ ಮಾಹಿತಿ
ಮೈಸೂರು ಕ್ರಿಕೆಟ್ ಸ್ಟೇಡಿಯಂ ಬಗ್ಗೆ ಸಂಸದ ಯದುವೀರ್ ಮಹತ್ವದ ಮಾಹಿತಿ