AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

India Pakistan War Live: ಭಾರತ-ಪಾಕಿಸ್ತಾನ ನಡುವೆ ಕದನ ವಿರಾಮ

Ganapathi Sharma
| Updated By: ವಿವೇಕ ಬಿರಾದಾರ

Updated on:May 10, 2025 | 6:43 PM

ಭಾರತ-ಪಾಕಿಸ್ತಾನ ಯುದ್ಧ ಪರಿಸ್ಥಿತಿಯ ಲೈವ್ ಅಪ್​ಡೇಟ್ ಕನ್ನಡದಲ್ಲಿ: ಪಾಕಿಸ್ತಾನದ ನಿರಂತರ ದಾಳಿಗಳಿಗೆ ಭಾರತ ಅಷ್ಟೇ ತೀವ್ರವಾಗಿ ತಿರುಗೇಟು ನೀಡುತ್ತಿದೆ. ಪಾಕಿಸ್ತಾನದ ಬಹುತೇಕ ಪ್ರತಿಯೊಂದು ಪ್ರಮುಖ ದಾಳಿಗಳನ್ನೂ ಭಾರತ ವಿಫಲಗೊಳಿಸಿದೆ. ಏತನ್ಮಧ್ಯೆ, ಲಾಹೋರ್‌ನಲ್ಲಿ ಡ್ರೋನ್ ದಾಳಿ ನಡೆದಿದೆ. ಅದೇ ಸಮಯದಲ್ಲಿ, ನಿಯಂತ್ರಣ ರೇಖೆಯಲ್ಲಿ ಎರಡೂ ಕಡೆಯಿಂದ ಭಾರೀ ಗುಂಡಿನ ಚಕಮಕಿ ನಡೆಯುತ್ತಿದೆ. ಲೈವ್​ ಅಪ್​ಡೇಟ್ ಇಲ್ಲಿದೆ.

India Pakistan War Live: ಭಾರತ-ಪಾಕಿಸ್ತಾನ ನಡುವೆ ಕದನ ವಿರಾಮ
ಭಾರತ-ಪಾಕಿಸ್ತಾನ ಯುದ್ಧ ಪರಿಸ್ಥಿತಿಯ ಲೈವ್ ಅಪ್​ಡೇಟ್

ಭಾರತ-ಪಾಕಿಸ್ತಾನ ಯುದ್ಧ ಪರಿಸ್ಥಿತಿಯ ಲೈವ್ ಅಪ್​ಡೇಟ್ ಕನ್ನಡದಲ್ಲಿ:

ಪಾಕಿಸ್ತಾನದ ಪ್ರತಿಯೊಂದು ದಾಳಿಗೂ ಭಾರತ ತೀಕ್ಷ್ಣ ತಿರುಗೇಟು ನೀಡುತ್ತಿದೆ. ಭಾರತವು ಇಲ್ಲಿಯವರೆಗೆ ನಡೆಸಿದ ದಾಳಿಗಳಲ್ಲಿ ಪಾಕಿಸ್ತಾನಕ್ಕೆ ಗಣನೀಯ ಹಾನಿಯಾಗಿದೆ. ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ, ಭಾರತ ಬುಧವಾರ ‘ಆಪರೇಷನ್ ಸಿಂಧೂರ್’ ಮೂಲಕ ಪಾಕಿಸ್ತಾನಕ್ಕೆ ಪಾಠ ಕಲಿಸಿತು. ಈ ಕಾರ್ಯಾಚರಣೆಯಿಂದ ಪಾಕಿಸ್ತಾನದ ಪ್ರಮುಖ ಉಗ್ರ ನೆಲೆಗಳಿಗೆ ಹಾನಿಯಾಗಿತ್ತು. ಈ ದಾಳಿಗೆ ಪ್ರತಿಯಾಗಿ, ಪಾಕಿಸ್ತಾನವು 7 ಮತ್ತು 8 ನೇ ತಾರೀಖಿನ ರಾತ್ರಿ ಭಾರತದ 15 ನಗರಗಳ ಮೇಲೆ ದಾಳಿ ಮಾಡಲು ಯತ್ನಿಸಿತು. ಆದರೆ ಅದನ್ನು ವಿಫಲಗೊಳಿಸಲಾಯಿತು. ಇದಕ್ಕೆ ಪ್ರತಿಕ್ರಿಯೆಯಾಗಿ, ಭಾರತವು ಡ್ರೋನ್‌ಗಳ ಮೂಲಕ ಪಾಕಿಸ್ತಾನದ ಹಲವಾರು ನಗರಗಳ ಮೇಲೆ ದಾಳಿ ಮಾಡಿ ಲಾಹೋರ್‌ನಲ್ಲಿ ಅದರ ವಾಯು ರಕ್ಷಣಾ ವ್ಯವಸ್ಥೆಯನ್ನು ನಾಶಪಡಿಸಿತು. ಇದರ ನಂತರ, ಮೇ 8 ರ ರಾತ್ರಿ, ಪಾಕಿಸ್ತಾನ ಮತ್ತೆ ಭಾರತದ ಹಲವು ನಗರಗಳನ್ನು ಗುರಿಯಾಗಿಸಲು ಪ್ರಯತ್ನಿಸಿತು. ಆದರೆ ಈ ಬಾರಿಯೂ ಅದು ನಿರಾಶೆಗೊಂಡಿತು. ಅದೇ ಸಮಯದಲ್ಲಿ, ಭಾರತವು ಲಾಹೋರ್, ಇಸ್ಲಾಮಾಬಾದ್, ಕರಾಚಿ, ಸಿಯಾಲ್‌ಕೋಟ್, ಬಹವಾಲ್ಪುರ್ ಮತ್ತು ಪೇಶಾವರ್ ಸೇರಿದಂತೆ ಪಾಕಿಸ್ತಾನದ ಹಲವು ನಗರಗಳ ಮೇಲೆ ಪ್ರತೀಕಾರ ತೀರಿಸಿಕೊಂಡಿತು. ಭಾರತದ ಆಪರೇಷನ್ ಸಿಂಧೂರ್ 2.0 ಮತ್ತು ಎರಡೂ ದೇಶಗಳ ನಡುವೆ ನಡೆಯುತ್ತಿರುವ ಉದ್ವಿಗ್ನತೆಗೆ ಸಂಬಂಧಿಸಿದ ಪ್ರತಿಯೊಂದು ಅಪ್​ಡೇಟ್​​​ಗಾಗಿ ಈ ಪುಟವನ್ನು ರಿಫ್ರೆಶ್ ಮಾಡುತ್ತಿರಿ.

LIVE NEWS & UPDATES

The liveblog has ended.
  • 10 May 2025 05:53 PM (IST)

    ಭಾರತ-ಪಾಕ್​ 2 ದೇಶಗಳು ದಾಳಿಯನ್ನು ನಿಲ್ಲಿಸಲು ಒಪ್ಪಿವೆ: ಟ್ರಂಪ್

    ಭಾರತದ ಜೊತೆ ಉತ್ತಮ ಸಂಬಂಧ ಹೊಂದಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಧ್ಯಸ್ಥಿಕೆ ವಹಿಸಿ ಭಾರತ ತಮ್ಮ ಮೇಲೆ ದಾಳಿ ನಡೆಸುವುದನ್ನು ತಡೆಯಬೇಕೆಂದು ಪಾಕಿಸ್ತಾನದ ಪ್ರಧಾನಿ ಮನವಿ ಮಾಡಿದ್ದರು ಎಂಬ ಸುದ್ದಿಗಳು ಹರಿದಾಡಿದ್ದವು. ಇಂದು ಈ ಬಗ್ಗೆ ಘೋಷಿಸಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ‘ಭಾರತ, ಪಾಕಿಸ್ತಾನ ಪೂರ್ಣ ಮತ್ತು ತಕ್ಷಣದ ಕದನ ವಿರಾಮಕ್ಕೆ ಒಪ್ಪಿಕೊಂಡಿವೆ’ ಎಂದು ಹೇಳಿದ್ದಾರೆ.

  • 10 May 2025 04:45 PM (IST)

    ಪಾಕಿಸ್ತಾನಕ್ಕೆ ಕೊನೆಯ ಎಚ್ಚರಿಕೆ ನೀಡಿದ ಭಾರತ

    ಪಾಕಿಸ್ತಾನಕ್ಕೆ ಮೋದಿ ಸರ್ಕಾರ ದೊಡ್ಡ ಎಚ್ಚರಿಕೆಯೊಂದನ್ನು ನೀಡಿದೆ. ‘ಭಾರತದ ವಿರುದ್ಧ ಭವಿಷ್ಯದಲ್ಲಿ ನಡೆಯುವ ಯಾವುದೇ ರೀತಿಯ ಭಯೋತ್ಪಾದಕ ಕೃತ್ಯವನ್ನು ಭಾರತದ ವಿರುದ್ಧದ ಯುದ್ಧ ಕೃತ್ಯವೆಂದು ಪರಿಗಣಿಸಲಾಗುತ್ತದೆ’ ಎಂದು ಭಾರತ ಸರ್ಕಾರ ಪಾಕಿಸ್ತಾನಕ್ಕೆ ಇಂದು ಖಡಕ್ ವಾರ್ನಿಂಗ್ ನೀಡಿದೆ. ಪದೇಪದೇ ಭಾರತದ ಮೇಲೆ ದಾಳಿ ನಡೆಸುತ್ತಿರುವ ಪಾಕಿಸ್ತಾನಕ್ಕೆ ಈ ಮೂಲಕ ಭಾರತ ಕೊನೆಯ ಎಚ್ಚರಿಕೆ ನೀಡಿದೆ.

  • 10 May 2025 04:09 PM (IST)

    ಭಾರತ ವಿದೇಶಾಂಗ ಕಾರ್ಯದರ್ಶಿಯಿಂದ ಪಾಕಿಸ್ತಾನಕ್ಕೆ ಚಾಟಿ

    ಭಾರತೀಯ ಸೇನೆಯು ಪಾಕಿಸ್ತಾನದ ಉಗ್ರ ನೆಲೆಗಳ ಮೇಲೆ ದಾಳಿ ಮಾಡಿದ್ದಕ್ಕೆ ಮತ್ತು ಪಾಕಿಸ್ತಾನದ ವಿರುದ್ಧ ಕ್ರಮ ಕೈಗೊಂಡದ್ದಕ್ಕೆ ಭಾರತ ಸರ್ಕಾರವನ್ನು ಸ್ವದೇಶದವರೇ ಕೆಲವರು ಟೀಕಿಸಿದ್ದು ಪಾಕಿಸ್ತಾನಕ್ಕೆ ಆಹಾರವಾಗಿದೆ. ಆದರೆ, ಪರಿಸ್ಥಿತಿಯನ್ನು ಬಹಳ ಚಾಣಾಕ್ಷತನದಿಂದ ನಿಭಾಯಿಸಿದ ಭಾರತದ ವಿದೇಶಾಂಗ ಕಾರ್ಯದರ್ಶಿ, ಪಾಕಿಸ್ತಾನದ ಟೀಕಾಸ್ತ್ರವನ್ನು ಆ ದೇಶಕ್ಕೇ ತಿರಗುಬಾಣವಾಗಿಸಿದ್ದಾರೆ.

  • 10 May 2025 02:56 PM (IST)

    ಆಪರೇಷನ್​ ಸಿಂದೂರ್​ ದಾಳಿಯಲ್ಲಿ ಹತರಾದ ಉಗ್ರರ ಹೆಸರು ಬಹಿರಂಗ

    ಪಹಲ್ಗಾಮ್ ಉಗ್ರ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆಯು “ಆಪರೇಷನ್ ಸಿಂದೂರ್” ಹೆಸರಿನಲ್ಲಿ ಪಾಕಿಸ್ತಾನದಲ್ಲಿರುವ ಉಗ್ರರ ನೆಲೆಗಳ ಮೇಲೆ ದಾಳಿ ನಡೆಸಿದೆ. ಈ ದಾಳಿಯಲ್ಲಿ ಲಷ್ಕರ್-ಎ-ತೈಬಾ ಮತ್ತು ಜೈಶ್-ಎ-ಮೊಹಮ್ಮದ್ ಸಂಘಟನೆಗಳ ಐವರು ಉಗ್ರಗಾಮಿಗಳು ಹತ್ಯೆಯಾಗಿದ್ದಾರೆ. ಹತ್ಯೆಯಾದ ಉಗ್ರಗಾಮಿಗಳ ಗುರುತು ಮತ್ತು ಅವರ ಸಂಘಟನೆಗಳೊಂದಿಗಿನ ಸಂಬಂಧ ಬಹಿರಂಗಗೊಂಡಿದೆ.

  • 10 May 2025 12:15 PM (IST)

    India Pakistan War Live: ಅಮೆರಿಕದ ವಿದೇಶಾಂಗ ಸಚಿವ, ಎಸ್ ಜೈಶಂಕರ್ ಮಾತುಕತೆ

    ಅಮೆರಿಕದ ವಿದೇಶಾಂಗ ಸಚಿವ ಮಾರ್ಕೊ ರೂಬಿಯೊ ಭಾರತದ ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರೊಂದಿಗೆ ಶನಿವಾರ ಮಾತುಕತೆ ನಡೆಸಿದರು. ಉದ್ವಿಗ್ನತೆಯನ್ನು ಕಡಿಮೆ ಮಾಡಲು ಮತ್ತು ತಪ್ಪುಗ್ರಹಿಕೆಯನ್ನು ತಪ್ಪಿಸಲು ನೇರ ಸಂವಾದವನ್ನು ಪುನಃ ಸ್ಥಾಪಿಸುವ ಮಾರ್ಗಗಳನ್ನು ಎರಡೂ ಕಡೆಯವರು ಕಂಡುಕೊಳ್ಳಬೇಕಾಗಿದೆ ಎಂದು ರೂಬಿಯೊ ಒತ್ತಿ ಹೇಳಿದರು. ಭವಿಷ್ಯದಲ್ಲಿ ವಿವಾದಗಳನ್ನು ತಪ್ಪಿಸಲು ಚರ್ಚೆಗೆ ಅವರು ಒತ್ತು ನೀಡಿದ್ದಾರೆ. ಈ ಮಾಹಿತಿಯನ್ನು ಅಮೆರಿಕ ವಿದೇಶಾಂಗ ಇಲಾಖೆಯ ವಕ್ತಾರ ಟ್ಯಾಮಿ ಬ್ರೂಸ್ ನೀಡಿದ್ದಾರೆ.

  • 10 May 2025 12:13 PM (IST)

    India Pakistan War Live: ಪಾಕಿಸ್ತಾನದ ಸುಳ್ಳಿನ ಸರಮಾಲೆಯನ್ನು ಎಳೆಎಳೆಯಾಗಿ ಬಿಚ್ಚಿಟ್ಟ ಭಾರತ

    ಭಾರತ ಮತ್ತು ಪಾಕಿಸ್ತಾನದ ನಡುವಿನ ಸಂಘರ್ಷದ ಸಂದರ್ಭದಲ್ಲಿ, ಪಾಕ್ ಕಡೆಯಿಂದ ಹರಡಲಾಗುತ್ತಿರುವ ಸುಳ್ಳು ಪ್ರಚಾರಗಳನ್ನು ಭಾರತೀಯ ರಕ್ಷಣಾ ಮತ್ತು ವಿದೇಶಾಂಗ ಇಲಾಖೆಗಳು ಖಂಡಿಸಿವೆ. ಅಲ್ಲದೆ ವಾಸ್ತವಾಂಶವನ್ನು ಜನರ ಮುಂದಿಡಲಾಗಿದೆ.

  • 10 May 2025 12:12 PM (IST)

    India Pakistan War Live: ಭಾರತ- ಪಾಕಿಸ್ತಾನ ಕುರಿತು ಹರಿದಾಡುತ್ತಿದೆ ನೂರಾರು ಸುಳ್ಳು ಸುದ್ದಿಗಳು

    ಭಾರತ-ಪಾಕಿಸ್ತಾನ ಯುದ್ಧ ತೀವ್ರಗೊಳ್ಳುತ್ತಿದ್ದಂತೆ ಸಾಮಾಜಿಕ ಜಾಲತಾಣಗಳಲ್ಲಿ ಅನೇಕ ಫೇಕ್ ನ್ಯೂಸ್​ಗಳು ಹರಿದಾಡುತ್ತಿವೆ. ಅವುಗಳ ಬಗ್ಗೆ ಮಾಡಲಾಗಿರುವ ಫ್ಯಾಕ್ಟ್ ಚೆಕ್ ಇಲ್ಲಿದೆ.

    ವಿವರಗಳಿಗೆ ಓದಿ: ಒಂದಲ್ಲ.. ಎರಡಲ್ಲ..: ಭಾರತ- ಪಾಕಿಸ್ತಾನ ಕುರಿತು ಹರಿದಾಡುತ್ತಿದೆ ನೂರಾರು ಸುಳ್ಳು ಸುದ್ದಿಗಳು

  • 10 May 2025 10:58 AM (IST)

    India Pakistan War Live: ರಕ್ಷಣಾ, ವಿದೇಶಾಂಗ ಸಚಿವಾಲಯ ತುರ್ತು ಸುದ್ದಿಗೋಷ್ಠಿ

    ರಕ್ಷಣಾ ಸಚಿವಾಲಯ ಮತ್ತು ವಿದೇಶಾಂಗ ಸಚಿವಾಲಯದ ಅಧಿಕಾರಿಗಳು ಜಂಟಿಯಾಗಿ ಪತ್ರಿಕಾಗೋಷ್ಠಿ ನಡೆಸುತ್ತಿದ್ದಾರೆ. ದಾಳಿ, ಪ್ರತಿ ದಾಳಿಗಳ ಮಾಹಿತಿ ನೀಡುತ್ತಿದ್ದಾರೆ.

    ಲೈವ್ ಇಲ್ಲಿ ನೋಡಿ

  • 10 May 2025 10:56 AM (IST)

    India Pakistan War Live: ಕರ್ನಾಟಕದ ಪೊಲೀಸರಿಗೂ ಹೆಚ್ಚುವರಿ ರಜೆ ರದ್ದು

    ಭಾರತ ಪಾಕಿಸ್ತಾನ ನಡುವೆ ಉದ್ವಿಗ್ನ ಪರಿಸ್ಥಿತಿ ಮುಂದುವರಿದಿರುವ ಕಾರಣ ಕರ್ನಾಟಕದ ಪೊಲೀಸರಿಗೂ ಹೆಚ್ಚುವರಿ ರಜೆ ರದ್ದು ಮಾಡಲಾಗುತ್ತಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಬೆಂಗಳೂರಿನಲ್ಲಿ ಹೇಳಿದ್ದಾರೆ.

  • 10 May 2025 10:49 AM (IST)

    India Pakistan War Live: ಇಂದು ಕರ್ನಾಟಕ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಭದ್ರತಾ ಸಭೆ

    ಕರ್ನಾಟಕ ರಾಜಧಾನಿ ಬೆಂಗಳೂರಲ್ಲಿ ಕಟ್ಟೆಚ್ಚರ ವಹಿಸಲಾಗಿದ್ದು, ರಾಜ್ಯದಲ್ಲಿ ಕೈಗೊಳ್ಳಬೇಕಾದ ಭದ್ರತಾ ಕ್ರಮಗಳ ಬಗ್ಗೆ ಇಂದು ಸಂಜೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಉನ್ನತ ಮಟ್ಟದ ಭದ್ರತಾ ಸಭೆ ನಡೆಯಲಿದೆ.

  • 10 May 2025 10:45 AM (IST)

    India Pakistan War Live: ಪ್ರಧಾನಿ ಮೋದಿ ಜೊತೆ ಅಜಿತ್ ದೋವಲ್ ಸಭೆ

    ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಇಂದು ಮತ್ತೆ ಪ್ರಧಾನಿ ನಿವಾಸಕ್ಕೆ ಆಗಮಿಸಿದ್ದಾರೆ. ಅವರು ಪ್ರಧಾನಿ ಮೋದಿ ಅವರೊಂದಿಗೆ ಸಭೆ ನಡೆಸಲಿದ್ದಾರೆ. ಸ್ವಲ್ಪ ಹೊತ್ತಿನಲ್ಲಿ, ವಿದೇಶಾಂಗ ಸಚಿವಾಲಯವು ಭಾರತೀಯ ಸೇನೆಯೊಂದಿಗೆ ಪತ್ರಿಕಾಗೋಷ್ಠಿ ನಡೆಸಲಿದೆ.

  • 10 May 2025 10:40 AM (IST)

    India Pakistan War Live: ಪಾಕ್ ಶೆಲ್ ದಾಳಿಯಲ್ಲಿ ಜಮ್ಮು ಮತ್ತು ಕಾಶ್ಮೀರದ ಹಿರಿಯ ಅಧಿಕಾರಿ ಸಾವು

    ಪಾಕ್ ಶೆಲ್ ದಾಳಿಯಲ್ಲಿ ಜಮ್ಮು ಮತ್ತು ಕಾಶ್ಮೀರದ ಹಿರಿಯ ಅಧಿಕಾರಿ ರಾಜ್ ಕುಮಾರ್ ಥಾಪಾ ಮೃತಪಟ್ಟಿದ್ದಾರೆ.ಹಿರಿಯ ಅಧಿಕಾರಿಯ ಸಾವಿಗೆ ಜಮ್ಮು-ಕಾಶ್ಮೀರದ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಸಂತಾಪ ಸೂಚಿಸಿದ್ದಾರೆ.

  • 10 May 2025 10:36 AM (IST)

    India Pakistan War Live: ಪಾಕಿಸ್ತಾನದ 3 ವಾಯುನೆಲೆಗಳ ಮೇಲೆ ಭಾರತ ದಾಳಿ

    ಭಾರತವು ತನ್ನ ಮೂರು ವಾಯುನೆಲೆಗಳನ್ನು ಗುರಿಯಾಗಿಸಿಕೊಂಡು ಬ್ಯಾಲಿಸ್ಟಿಕ್ ಕ್ಷಿಪಣಿಗ ದಾಳಿ ಮಾಡಿದೆ ಎಂದು ಪಾಕಿಸ್ತಾನ ಸೇನಾ ವಕ್ತಾರರು ತಿಳಿಸಿದ್ದಾರೆ. ಶುಕ್ರವಾರ ತಡರಾತ್ರಿ ಭಾರತವು ಪಾಕಿಸ್ತಾನದ ಮೇಲೆ ಒಂದರ ನಂತರ ಒಂದರಂತೆ ಒಟ್ಟು 6 ಬ್ಯಾಲಿಸ್ಟಿಕ್ ಕ್ಷಿಪಣಿಗಳನ್ನು ಹಾರಿಸಿದೆ ಎಂದು ಅವರು ಆರೋಪಿಸಿದ್ದಾರೆ. ಈ ದಾಳಿಯಲ್ಲಿ, ರಾವಲ್ಪಿಂಡಿಯ ನೂರ್ ಖಾನ್ ವಾಯುಪಡೆ ನೆಲೆ, ಶೋರ್ಕೋಟ್‌ನ ರಫೀಕಿ ವಾಯುಪಡೆ ನೆಲೆ ಮತ್ತು ಮುರಿಯದ್ ವಾಯುಪಡೆ ನೆಲೆಗಳನ್ನು ಗುರಿಯಾಗಿಸಲಾಗಿತ್ತು. ಆದರೆ, ಭಾರತ ಈ ಬಗ್ಗೆ ಇನ್ನೂ ಅಧಿಕೃತ ಹೇಳಿಕೆ ನೀಡಿಲ್ಲ.

  • 10 May 2025 10:32 AM (IST)

    India Pakistan War Live: ಪಾಕಿಸ್ತಾನದ ನಾಲ್ಕು ವಾಯುನೆಲೆಗಳ ಮೇಲೆ ಭಾರತ ದಾಳಿ

    ಪಾಕ್​​​ನ ನಾಲ್ಕು ವಾಯುನೆಲೆಗಳನ್ನು ಗುರಿಯಾಗಿಸಿ ಭಾರತ ದಾಳಿ ನಡೆಸಿದೆ.

  • 10 May 2025 10:29 AM (IST)

    India Pakistan War Live: ಪಾಕಿಸ್ತಾನದ 2 ಫೈಟರ್ ಜೆಟ್ ಹೊಡೆದುರುಳಿಸಿದ ಭಾರತ

    ಶ್ರೀನಗರದ ಬುದ್ಗಾ-ಬಾರಾಮುಲ್ಲಾಪ್ರದೇಶದಲ್ಲಿ ಎರಡು ಪಾಕಿಸ್ತಾನಿ ಜೆಟ್​​ಗಳನ್ನು ಭಾರತೀಯ ಸೇನೆ ಹೊಡೆದುರುಳಿಸಿದ್ದು, ಅವುಗಳಲ್ಲಿದ್ದ ಪೈಲಟ್​ಗಳಿಗಾಗಿ ಶೋಧ ನಡೆಸಲಾಗುತ್ತಿದೆ.

    ಹೆಚ್ಚಿನ ಮಾಹಿತಿಗೆ ಓದಿ: ಶ್ರೀನಗರ ಬಳಿ ಪಾಕಿಸ್ತಾನದ 2 ಫೈಟರ್ ಜೆಟ್ ಹೊಡೆದುರುಳಿಸಿದ ಭಾರ

  • 10 May 2025 10:28 AM (IST)

    India Pakistan War Live: ಕಾಶ್ಮೀರದಲ್ಲಿ 15 ಡ್ರೋನ್‌ಗಳ ನಾಶ

    ಕಾಶ್ಮೀರದಲ್ಲಿ ವಾಯು ರಕ್ಷಣಾ ವ್ಯವಸ್ಥೆಯು ಸುಮಾರು 15 ಡ್ರೋನ್‌ಗಳನ್ನು ಹೊಡೆದುರುಳಿಸಿದೆ ಎಂದು ರಕ್ಷಣಾ ಮೂಲಗಳು ತಿಳಿಸಿವೆ.

  • 10 May 2025 10:26 AM (IST)

    India Pakistan War Live: ರಾಜಸ್ಥಾನದ ಗಡಿ ಜಿಲ್ಲೆಗಳಲ್ಲಿ ಹೈ ಅಲರ್ಟ್

    ಶುಕ್ರವಾರ ರಾತ್ರಿ ಪಾಕಿಸ್ತಾನ ದಾಳಿ ಯತ್ನದ ನಂತರ, ರಾಜಸ್ಥಾನದ ಗಡಿ ಜಿಲ್ಲೆಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಈ ಜಿಲ್ಲೆಗಳಲ್ಲಿ ವಿದ್ಯುತ್ ಕಡಿತಗೊಳಿಸಲಾಗಿದೆ. ಜೈಸಲ್ಮೇರ್‌ನಲ್ಲಿ, ಇಡೀ ನಗರದ ದೀಪಗಳು ಆರಿವೆ. ಗಡಿ ಜಿಲ್ಲೆಗಳಲ್ಲಿ ಕರ್ಫ್ಯೂನಂತಹ ಪರಿಸ್ಥಿತಿ ಇದೆ.

  • 10 May 2025 10:26 AM (IST)

    India Pakistan War Live: ಕುಪ್ವಾರಾದಲ್ಲಿ ಭಾರೀ ಶೆಲ್ ದಾಳಿ

    ಕಾಶ್ಮೀರ ವಿಭಾಗದ ಕುಪ್ವಾರದಲ್ಲಿ ಗಡಿಯುದ್ದಕ್ಕೂ ಶನಿವಾರ ಬೆಳಗ್ಗೆ ಪಾಕಿಸ್ತಾನ ಭಾರೀ ಶೆಲ್ ದಾಳಿ ಆರಂಭಿಸಿದೆ.

  • 10 May 2025 10:25 AM (IST)

    India Pakistan War Live: ದೇಶದ 28 ವಿಮಾನ ನಿಲ್ದಾಣಗಳು ಮೇ 15 ರವರೆಗೆ ಬಂದ್

    ನಾಗರಿಕ ವಿಮಾನಯಾನ ಸಚಿವಾಲಯವು ದೇಶದ 28 ವಿಮಾನ ನಿಲ್ದಾಣಗಳನ್ನು ಮೇ 15 ರವರೆಗೆ ಬಂದ್ ಮಾಡಲು ಸೂಚನೆ ನೀಡಿದೆ. ಈ ಹಿಂದೆ ಮೇ 10 ರವರೆಗೆ ಮುಚ್ಚುವುದಾಗಿ ಘೋಷಿಸಲಾಗಿತ್ತು.

Published On - May 10,2025 10:23 AM

Follow us
ಹೊತ್ತಿ ಉರಿದ ಗೋದಾಮು, 60ಕ್ಕೂ ಹೆಚ್ಚು ಗಾಡಿ ನೀರು ಹಾಕಿದ್ರೂ ಆರದ ಬೆಂಕಿ
ಹೊತ್ತಿ ಉರಿದ ಗೋದಾಮು, 60ಕ್ಕೂ ಹೆಚ್ಚು ಗಾಡಿ ನೀರು ಹಾಕಿದ್ರೂ ಆರದ ಬೆಂಕಿ
ಸಾಮಾನ್ಯ ಸಂಗತಿಯೆಂಬಂತೆ ಘಟನೆ ವಿವರಿಸಿದ ಮೃತ ಬಾಲಕನ ತಂದೆ
ಸಾಮಾನ್ಯ ಸಂಗತಿಯೆಂಬಂತೆ ಘಟನೆ ವಿವರಿಸಿದ ಮೃತ ಬಾಲಕನ ತಂದೆ
ಮದುವೆಗೆಂದು ಮಂಗಳೂರಿಗೆ ಹೊರಟ್ಟಿದ್ದ ಬಸ್ ಶಿರಾಡಿ ಘಾಟಿನಲ್ಲಿ ಪಲ್ಟಿ
ಮದುವೆಗೆಂದು ಮಂಗಳೂರಿಗೆ ಹೊರಟ್ಟಿದ್ದ ಬಸ್ ಶಿರಾಡಿ ಘಾಟಿನಲ್ಲಿ ಪಲ್ಟಿ
ಆದಂಪುರ ಏರ್​ಬೇಸ್​​ ಭೇಟಿ ಬಳಿಕ ಮೋದಿ ಮಾತು: ಇಲ್ಲಿದೆ ನೇರಪ್ರಸಾರ
ಆದಂಪುರ ಏರ್​ಬೇಸ್​​ ಭೇಟಿ ಬಳಿಕ ಮೋದಿ ಮಾತು: ಇಲ್ಲಿದೆ ನೇರಪ್ರಸಾರ
ಇಡೀ ವಿಶ್ವವೇ ಭಾರತೀಯ ಸೈನಿಕರ ಕಾರ್ಯವನ್ನು ಕೊಂಡಾಡುತ್ತಿದೆ: ಶಾಸಕ
ಇಡೀ ವಿಶ್ವವೇ ಭಾರತೀಯ ಸೈನಿಕರ ಕಾರ್ಯವನ್ನು ಕೊಂಡಾಡುತ್ತಿದೆ: ಶಾಸಕ
ನಾಗರಿಕರ ಹೆಸರಿನಲ್ಲಿ ರಾಜ್ಯಾದ್ಯಂತ ತಿರಂಗಾ ಯಾತ್ರೆ: ಆರ್ ಅಶೋಕ್
ನಾಗರಿಕರ ಹೆಸರಿನಲ್ಲಿ ರಾಜ್ಯಾದ್ಯಂತ ತಿರಂಗಾ ಯಾತ್ರೆ: ಆರ್ ಅಶೋಕ್
ನಮ್ಮ ಸರ್ಕಾರದ ಸಾಧನೆಗಳ ಬಗ್ಗೆ ಬಿಜೆಪಿ ಮಾತಾಡಲ್ಲ: ಶಿವಲಿಂಗೇಗೌಡ
ನಮ್ಮ ಸರ್ಕಾರದ ಸಾಧನೆಗಳ ಬಗ್ಗೆ ಬಿಜೆಪಿ ಮಾತಾಡಲ್ಲ: ಶಿವಲಿಂಗೇಗೌಡ
ಶೋಪಿಯಾನ್​ನಲ್ಲಿ ಲಷ್ಕರ್​​ನ ಮೋಸ್ಟ್ ವಾಂಟೆಡ್ ಉಗ್ರ ಸೇರಿ ಮೂವರ ಎನ್​ಕೌಂಟರ್
ಶೋಪಿಯಾನ್​ನಲ್ಲಿ ಲಷ್ಕರ್​​ನ ಮೋಸ್ಟ್ ವಾಂಟೆಡ್ ಉಗ್ರ ಸೇರಿ ಮೂವರ ಎನ್​ಕೌಂಟರ್
ಎಲ್ಲ ಸಂದೇಹಗಳನ್ನು ಪ್ರಧಾನಿ ಮೋದಿ ದೂರ ಮಾಡಿದ್ದಾರೆ: ವಿಜಯೇಂದ್ರ
ಎಲ್ಲ ಸಂದೇಹಗಳನ್ನು ಪ್ರಧಾನಿ ಮೋದಿ ದೂರ ಮಾಡಿದ್ದಾರೆ: ವಿಜಯೇಂದ್ರ
ನಿಮಗೆ ಇಂಗ್ಲಿಷ್ ಬರದಿದ್ದರೆ ಸುಮ್ಮನಿರಿ, ಪಾಕ್​ ರಕ್ಷಣಾ ಸಚಿವಗೆ ತರಾಟೆ
ನಿಮಗೆ ಇಂಗ್ಲಿಷ್ ಬರದಿದ್ದರೆ ಸುಮ್ಮನಿರಿ, ಪಾಕ್​ ರಕ್ಷಣಾ ಸಚಿವಗೆ ತರಾಟೆ