AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಮ್ಮು, ಪಂಜಾಬ್, ರಾಜಸ್ಥಾನದಲ್ಲಿ ಮತ್ತೆ ಪಾಕಿಸ್ತಾನದಿಂದ ಡ್ರೋನ್ ದಾಳಿ; ಭಾರತೀಯ ಸೇನೆಯಿಂದ ಪ್ರತ್ಯುತ್ತರ

ವ್ಯಾಪಕ ವಿದ್ಯುತ್ ಕಡಿತದ ನಡುವೆಯೂ ಭಾರತದ ವಾಯು ರಕ್ಷಣಾ ವ್ಯವಸ್ಥೆಗಳು ಪಾಕಿಸ್ತಾನಿ ಡ್ರೋನ್‌ಗಳನ್ನು ತಡೆಹಿಡಿಯುತ್ತಿದ್ದಂತೆ ಸಾಂಬಾದಲ್ಲಿ ಸ್ಫೋಟಗಳು ಕೇಳಿಬಂದವು. ಜಮ್ಮು ಈಗ ಸಂಪೂರ್ಣ ವಿದ್ಯುತ್ ಕಡಿತವನ್ನು ಅನುಭವಿಸುತ್ತಿದೆ, ನಗರದಾದ್ಯಂತ ವಾಯುದಾಳಿಯ ಸೈರನ್‌ಗಳು ಮೊಳಗುತ್ತಿವೆ. ಸಾಂಬಾ, ಉಧಮ್‌ಪುರ ಮತ್ತು ಇತರ ಪ್ರದೇಶಗಳಲ್ಲಿ ಪಾಕಿಸ್ತಾನಿ ಡ್ರೋನ್‌ಗಳು ಕಾಣಿಸಿಕೊಂಡ ನಂತರ ಜಮ್ಮುವಿನಲ್ಲಿ ಸಂಪೂರ್ಣ ಕತ್ತಲು ಆವರಿಸಿದೆ.

ಜಮ್ಮು, ಪಂಜಾಬ್, ರಾಜಸ್ಥಾನದಲ್ಲಿ ಮತ್ತೆ ಪಾಕಿಸ್ತಾನದಿಂದ ಡ್ರೋನ್ ದಾಳಿ; ಭಾರತೀಯ ಸೇನೆಯಿಂದ ಪ್ರತ್ಯುತ್ತರ
Drone Attack In Samba
Follow us
ಸುಷ್ಮಾ ಚಕ್ರೆ
|

Updated on:May 09, 2025 | 9:31 PM

ನವದೆಹಲಿ, ಮೇ 9: ಭಾರತದ ಮೇಲೆ ಪಾಕಿಸ್ತಾನ ಸೇನೆಯಿಂದ ಮತ್ತೆ ಡ್ರೋನ್ ದಾಳಿ (Pakistan Drone Attack) ನಡೆದಿದೆ. ಜಮ್ಮು-ಕಾಶ್ಮೀರದ ಸಾಂಬಾ ಸೆಕ್ಟರ್ ಮೇಲೆ ಡ್ರೋನ್​ಗಳ ದಾಳಿ ನಡೆದಿದ್ದು, ಆ ಡ್ರೋನ್​ಗಳನ್ನು ಭಾರತೀಯ ಸೇನೆ ಹೊಡೆದುರುಳಿಸಿದೆ. ವಾಯು ರಕ್ಷಣಾ ವ್ಯವಸ್ಥೆ ಮೂಲಕ ಡ್ರೋನ್​ಗಳನ್ನು ಭಾರತ ಸೇನೆ ಹೊಡೆದುರುಳಿಸಿದೆ. ಜಮ್ಮುವಿನಲ್ಲಿ ಮಾತ್ರವಲ್ಲದೆ ಪಂಜಾಬ್​ನ ಪಠಾಣ್​ಕೋಟ್, ಫಿರೋಜ್​ಪುರದ ಮೇಲೂ ಡ್ರೋನ್ ದಾಳಿ ನಡೆಸಲಾಗಿದೆ. ಹಾಗೇ, ರಾಜಸ್ಥಾನದ ಪೋರ್ಕಾನ್​ನಲ್ಲೂ ಪಾಕಿಸ್ತಾನದ ಡ್ರೋನ್​ಗಳನ್ನು ಭಾರತ ಸೇನೆ ಹೊಡೆದುರುಳಿಸಿದೆ. ಜಮ್ಮು-ಕಾಶ್ಮೀರದ ಗಡಿ ಭಾಗದಲ್ಲಿ ಶೆಲ್ ದಾಳಿ ತೀವ್ರಗೊಳಿಸಿರುವ ಪಾಕಿಸ್ತಾನ ಸೇನೆ ಕುಪ್ವಾರಾ, ನೌಗಾಮ್, ಪೂಂಚ್ ಸೆಕ್ಟರ್​ನಲ್ಲಿ ಶೆಲ್ ದಾಳಿ ನಡೆಸಿದೆ.

ಭಾರತದ ಮೇಲೆ ಪಾಕಿಸ್ತಾನ ಸೇನೆಯಿಂದ ಮತ್ತೆ ಡ್ರೋನ್ ದಾಳಿ ನಡೆದಿದೆ. ಪಂಜಾಬ್​ನ ಹಲವು ನಗರಗಳ ಮೇಲೆ ಪಾಕ್​ನಿಂದ ಡ್ರೋನ್ ದಾಳಿ ನಡೆಸಲಾಗಿದೆ. ಪಠಾಣ್​ಕೋಟ್, ಫಿರೋಜ್​ಪುರದ ಮೇಲೂ ಪಾಕ್ ಡ್ರೋನ್ ದಾಳಿ ನಡೆದಿದೆ. ವಾಯು ರಕ್ಷಣಾ ವ್ಯವಸ್ಥೆ ಮೂಲಕ ಡ್ರೋನ್ ಅನ್ನು ಸೇನೆ ಹೊಡೆದುರುಳಿಸಿದೆ. ಭಾರತ – ಪಾಕಿಸ್ತಾನ ನಡುವೆ ದಾಳಿ ಪ್ರತಿದಾಳಿ ನಡೆಯುತ್ತಲೇ ಇದೆ. ಭಾರತ ಗಡಿಯ ಪೋರ್ಕಾನ್​ ನಲ್ಲಿ ಪಾಕ್​ ಡ್ರೋನ್​ ದಾಳಿ ಮುಂದುವರೆದಿದೆ. ಜಮ್ಮು – ಕಾಶ್ಮೀರದಲ್ಲಿ ಸೈರನ್ ಮೊಳಗಿದ್ದು, ಸಂಬಾದಲ್ಲಿ ಡ್ರೋನ್ ದಾಳಿಯಾಗಿದೆ. ಗುಡಿನ ಚಕಮಕಿ ಕೂಡ ನಡೆದಿದೆ.

ಇದನ್ನೂ ಓದಿ
Image
ಸೇನಾ ಕಾರ್ಯಾಚರಣೆಯ ಲೈವ್ ಬೇಡ: ಟಿವಿ ಚಾನೆಲ್​ಗಳಿಗೆ ರಕ್ಷಣಾ ಇಲಾಖೆ ಸೂಚನೆ
Image
ಪಾಕ್​ ಜನ ಪ್ರಧಾನಿ ಶೆಹಬಾಜ್ ವಿರುದ್ಧ ಗರಂ ಆಗಿದ್ದೇಕೆ?
Image
ಭಾರತೀಯ ಸೇನೆ ದಾಳಿ ಮಾಡಿದ ಪಾಕಿಸ್ತಾನದ ನಗರಗಳ ಇತಿಹಾಸವೇನು ಗೊತ್ತೇ?
Image
ಭಾರತದಿಂದ ಎರಡನೇ ಬಾರಿ ದಾಳಿ, ಅಕ್ಷರಶಃ ನಲುಗಿದ ಪಾಕ್, ಏನೇನಾಯ್ತು?

ಇದನ್ನೂ ಓದಿ: ಟರ್ಕಿ ಡ್ರೋನ್‌ ಬಳಸಿ ಭಾರತದ 36 ಸ್ಥಳಗಳ ಮೇಲೆ ಪಾಕಿಸ್ತಾನ ದಾಳಿಗೆ ಯತ್ನ; ಸೋಫಿಯಾ ಖುರೇಷಿ

ಭಾರತ ಮತ್ತು ಪಾಕಿಸ್ತಾನದ ನಡುವೆ ಹೆಚ್ಚುತ್ತಿರುವ ಉದ್ವಿಗ್ನತೆಯ ನಡುವೆ ಇಂದು ಜಮ್ಮು, ಸಾಂಬಾ ಮತ್ತು ಪಠಾಣ್‌ಕೋಟ್ ವಲಯದಲ್ಲಿ ನಂತರದ ಡ್ರೋನ್‌ಗಳು ಕಾಣಿಸಿಕೊಂಡವು. ಇದಲ್ಲದೆ, ಇಂದು ಸಂಜೆ ಜಮ್ಮುವಿನಲ್ಲಿ ಭಾರತದ ವಾಯು ರಕ್ಷಣಾ ಪಡೆಗಳು ಸಂಪೂರ್ಣ ಕತ್ತಲಿನ ನಡುವೆ ಪಾಕಿಸ್ತಾನಿ ಡ್ರೋನ್‌ಗಳನ್ನು ತಡೆಹಿಡಿಯುತ್ತಿದ್ದಂತೆ ಭಾರಿ ಸ್ಫೋಟಗಳು ಕೇಳಿಬಂದವು. ಭಾರತದಲ್ಲಿ ಕನಿಷ್ಠ 36 ಮಿಲಿಟರಿ ಸ್ಥಾಪನೆಗಳ ಮೇಲೆ ದಾಳಿ ಮಾಡಲು ಪಾಕಿಸ್ತಾನ 300-400 ಡ್ರೋನ್‌ಗಳನ್ನು ಬಳಸಿದ ಒಂದು ದಿನದ ನಂತರ ಈ ಬೆಳವಣಿಗೆ ಸಂಭವಿಸಿದೆ.

ಭಾರತದ ವಾಯು ರಕ್ಷಣಾ ಪಡೆಗಳು ಕಪ್ಪುಚುಕ್ಕೆಯ ನಡುವೆ ಪಾಕಿಸ್ತಾನಿ ಡ್ರೋನ್‌ಗಳನ್ನು ತಡೆಹಿಡಿಯಲು ಪ್ರಾರಂಭಿಸಿದಾಗ ಜಮ್ಮುವಿನ ವಿವಿಧ ಸ್ಥಳಗಳಲ್ಲಿ ಸ್ಫೋಟಗಳು ಕೇಳಿಬಂದವು. ಪಾಕಿಸ್ತಾನದ ಕಡೆಯಿಂದ ಶೆಲ್ ದಾಳಿಯಿಂದಾಗಿ ಪೂಂಚ್‌ನಲ್ಲಿ ಸ್ಫೋಟಗಳು ಕೇಳಿಬಂದವು.

ಭಾರತದ ವಿವಿಧ ನಗರಗಳ ಮೇಲೆ ಪಾಕಿಸ್ತಾನದಿಂದ ಡ್ರೋನ್ ದಾಳಿ ನಡೆದಿದೆ. ರಾಜಸ್ಥಾನದ ಜೈಸಲ್ಮೇರ್, ಪೋಖ್ರಾನ್, ಜಮ್ಮು-ಕಾಶ್ಮೀರದ ರಜೌರಿ, ಪೂಂಚ್, ಸಾಂಬಾ, ನೌಗಾಮ್ ಮೇಲೆ ದಾಳಿ ನಡೆಸಲಾಗಿದೆ. ಕಣಿವೆ ರಾಜ್ಯ ಜಮ್ಮು-ಕಾಶ್ಮೀರದಾದ್ಯಂತ ಸೈರನ್ ಸದ್ದು ಮೊಳಗಿದೆ. ಪಂಜಾಬ್​ನ ಪಠಾಣ್​ಕೋಟ್, ಫಿರೋಜ್​ಪುರ ಮೇಲೆ ಡ್ರೋನ್ ದಾಳಿ ನಡೆದಿದೆ. ಅಮೃತಸರ ಏರ್​ಪೋರ್ಟ್ ಮೇಲೆ ಡ್ರೋನ್ ಮೂಲಕ ದಾಳಿಗೆ ಯತ್ನ ಮಾಡಲಾಗಿದೆ. ಪಾಕಿಸ್ತಾನದ ಡ್ರೋನ್​ಗಳನ್ನು ವಾಯು ರಕ್ಷಣಾ ವ್ಯವಸ್ಥೆ ಮೂಲಕ ಹೊಡೆದುರುಳಿಸಲಾಗಿದೆ.

ಜಮ್ಮುವಿನಲ್ಲಿ ಡ್ರೋನ್ ದಾಳಿಗೆ ಪಾಕಿಸ್ತಾನ ಸೇನೆ ಯತ್ನ ಹಿನ್ನೆಲೆಯಲ್ಲಿ ಜಮ್ಮುವಿನಲ್ಲಿ ಎಲ್ಲಾ ರೈಲುಗಳ ಸಂಚಾರ ತಾತ್ಕಾಲಿಕ ಸ್ಥಗಿತಗೊಳಿಸಲಾಗಿದೆ. ಮುಂದಿನ ಆದೇಶದವರೆಗೂ ಎಲ್ಲಾ ರೈಲುಗಳ ಸಂಚಾರ ಸ್ಥಗಿತಗೊಳಿಸಲಾಗಿದೆ. ಜಮ್ಮುವಿನಲ್ಲಿ ರೈಲು ಬೋಗಿಗಳ ಒಳಗೂ ಬ್ಲಾಕೌಟ್‌ ಮಾಡಲಾಗಿದೆ. ರೈಲುಗಳಲ್ಲಿ ಪ್ರಯಾಣಿಕರು ಮೊಬೈಲ್ ಲೈಟ್ ಬಳಸದಂತೆ ಸೂಚನೆ ನೀಡಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Published On - 9:28 pm, Fri, 9 May 25

ನೆಲಮಂಗಲ: ಆಯಿಲ್ ಗೋಡೌನ್​ಗೆ ಬೆಂಕಿ, ಧಗಧಗಿಸಿದ ಗೋದಾಮು
ನೆಲಮಂಗಲ: ಆಯಿಲ್ ಗೋಡೌನ್​ಗೆ ಬೆಂಕಿ, ಧಗಧಗಿಸಿದ ಗೋದಾಮು
ಮನೆಯ ದ್ವಾರಕ್ಕೆ ತೆಂಗಿನ ಕಾಯಿ ಕಟ್ಟುವುದರ ಹಿಂದಿನ ಅಧ್ಯಾತ್ಮಿಕ ರಹಸ್ಯ
ಮನೆಯ ದ್ವಾರಕ್ಕೆ ತೆಂಗಿನ ಕಾಯಿ ಕಟ್ಟುವುದರ ಹಿಂದಿನ ಅಧ್ಯಾತ್ಮಿಕ ರಹಸ್ಯ
ಚಂದ್ರ ವೃಶ್ಚಿಕ ರಾಶಿಯಲ್ಲಿ ಸಂಚಾರ: ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ
ಚಂದ್ರ ವೃಶ್ಚಿಕ ರಾಶಿಯಲ್ಲಿ ಸಂಚಾರ: ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ
ವಿಜಯೇಂದ್ರ ಕೆಳಗಿಳಿಸಿ ನನ್ನನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಾರೆ: ಯತ್ನಾಳ್
ವಿಜಯೇಂದ್ರ ಕೆಳಗಿಳಿಸಿ ನನ್ನನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಾರೆ: ಯತ್ನಾಳ್
ಆಪರೇಷನ್ ಸಿಂಧೂರ ಬಳಿಕ ಮೋದಿ ಮೊದಲ ಮಾತು, ಪ್ರಧಾನಿ ಭಾಷಣದ ನೇರಪ್ರಸಾರ
ಆಪರೇಷನ್ ಸಿಂಧೂರ ಬಳಿಕ ಮೋದಿ ಮೊದಲ ಮಾತು, ಪ್ರಧಾನಿ ಭಾಷಣದ ನೇರಪ್ರಸಾರ
ರಾಕೇಶ್ ಒಬ್ಬ ಒಳ್ಳೆಯ ಮಗ, ಸಹೋದರ ಮತ್ತು ವ್ಯಕ್ತಿ ಕೂಡ ಆಗಿದ್ದರು
ರಾಕೇಶ್ ಒಬ್ಬ ಒಳ್ಳೆಯ ಮಗ, ಸಹೋದರ ಮತ್ತು ವ್ಯಕ್ತಿ ಕೂಡ ಆಗಿದ್ದರು
ರಕ್ಷಿತಾಗೆ ರಾಕೇಶ್ ಮೇಲಿದ್ದ ವಾತ್ಸಲ್ಯ, ಪ್ರೀತಿ ಪದಗಳಲ್ಲಿ ಹೇಳಲಾಗದು
ರಕ್ಷಿತಾಗೆ ರಾಕೇಶ್ ಮೇಲಿದ್ದ ವಾತ್ಸಲ್ಯ, ಪ್ರೀತಿ ಪದಗಳಲ್ಲಿ ಹೇಳಲಾಗದು
ರಾಕೇಶ್ ಪೂಜಾರಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ನಟಿ ರಕ್ಷಿತಾ ಪ್ರೇಮ್
ರಾಕೇಶ್ ಪೂಜಾರಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ನಟಿ ರಕ್ಷಿತಾ ಪ್ರೇಮ್
ದೇವೇಗೌಡರ ಮಾರ್ಗದರ್ಶನದಲ್ಲಿ ಪಕ್ಷ ಸಂಘಟನೆ ಕೆಲಸ ಶುರುವಾಗಲಿದೆ: ನಿಖಿಲ್
ದೇವೇಗೌಡರ ಮಾರ್ಗದರ್ಶನದಲ್ಲಿ ಪಕ್ಷ ಸಂಘಟನೆ ಕೆಲಸ ಶುರುವಾಗಲಿದೆ: ನಿಖಿಲ್
ರಾಕೇಶ್ ಪೂಜಾರಿ ಸಾವಿನ ಸುದ್ದಿ ಸುಳ್ಳಾಗಬಾರದೇ ಎನಿಸುತ್ತಿದೆ: ಗೋವಿಂದೇ ಗೌಡ
ರಾಕೇಶ್ ಪೂಜಾರಿ ಸಾವಿನ ಸುದ್ದಿ ಸುಳ್ಳಾಗಬಾರದೇ ಎನಿಸುತ್ತಿದೆ: ಗೋವಿಂದೇ ಗೌಡ