India Pakistan Tensions Live: ದೇಶವನ್ನು ಉದ್ದೇಶಿಸಿ ಪ್ರಧಾನಮಂತ್ರಿ ನರೇಂದ್ರ ಮೋದಿ ಭಾಷಣ
ಭಾರತ ಹಾಗೂ ಪಾಕಿಸ್ತಾನ(Pakistan)ದ ಡಿಜಿಎಂಒ ಇಂದು ಮಾತುಕತೆ ನಡೆಸಲಿದ್ದು, ಉದ್ವಿಗ್ನತೆ ಶಮನವಾಗುವುದೇ ಎಂದು ಕಾದು ನೋಡಬೇಕಿದೆ. ಭಾರತ ಮತ್ತು ಪಾಕಿಸ್ತಾನದ ನಡುವೆ ಮೇ 7 ರಂದು ಉದ್ವಿಗ್ನತೆ ಪ್ರಾರಂಭವಾಗಿತ್ತು, ಪಹಲ್ಗಾಮ್ ದಾಳಿಗೆ ಸೇಡು ತೀರಿಸಿಕೊಳ್ಳಲು, ಭಾರತವು ಪಿಒಕೆ ಮತ್ತು ಪಾಕಿಸ್ತಾನದಲ್ಲಿನ ಭಯೋತ್ಪಾದಕ ನೆಲೆಗಳ ಮೇಲೆ ದಾಳಿ ಮಾಡಿ ನಾಶಪಡಿಸಿತು.

LIVE NEWS & UPDATES
-
Live: ‘ಆಪರೇಷನ್ ಸಿಂಧೂರ’ ದೇಶದ ಹೆಣ್ಣುಮಕ್ಕಳಿಗೆ ಸಮರ್ಪಣೆ
ಆಪರೇಷನ್ ಸಿಂಧೂರ ಯಶಸ್ವಿ ಸಂಬಂಧ ಮಾತನಾಡಿದ ಮೋದಿ, ಭಾರತ ಶೌರ್ಯ & ಸಂಯಮ ಎರಡನ್ನೂ ನೋಡಿದೆ. ಗುಪ್ತಚರ, ವೀರ ಸೈನಿಕರು, ವಿಜ್ಞಾನಿಗಳಿಗೆ ಸೆಲ್ಯೂಟ್. ಪರಾಕ್ರಮಿ ಸೇನೆಗೆ ನನ್ನ ಸಲಾಂ. ‘ಆಪರೇಷನ್ ಸಿಂಧೂರ’ ದೇಶದ ಹೆಣ್ಣುಮಕ್ಕಳಿಗೆ ಸಮರ್ಪಣೆ. ಪಹಲ್ಗಾಮ್ ದಾಳಿ ಕ್ರೂರತೆ ಮತ್ತು ಬರ್ಬರವಾಗಿ ನಡೆದಿತ್ತು. ಕುಟುಂಬಸ್ಥರ ಮುಂದೆಯೇ ಪ್ರವಾಸಿಗರನ್ನು ಹತ್ಯೆ ಮಾಡಿದ್ದರು. ಹೆಣ್ಣುಮಕ್ಕಳ ಸಿಂಧೂರ್ ಅಳಿಸಿದ ಉಗ್ರರಿಗೆ ಈಗ ಗೊತ್ತಾಗಿದೆ ಎಂದು ಹೇಳಿದರು.
-
Live: ಆಪರೇಶನ್ ಸಿಂಧೂರ ಬಳಿಕ ಮೋದಿ ಮೊದಲ ಭಾಷಣ
ಏಪ್ರಿಲ್ 22ರಂದು ಪಹಲ್ಗಾಮ್ನಲ್ಲಿ ಉಗ್ರರು ದಾಳಿ ಮಾಡಿದ್ದು, ಇದರಲ್ಲಿ 26 ಪ್ರವಾಸಿಗರು ಸಾವನ್ನಪ್ಪಿದ್ದರು. ಇದಾದ ಬಳಿಕ ಭಾರತೀಯ ಸೇನೆ ಮೇ 7ರಂದು ಆಪರೇಷನ್ ಸಿಂಧೂರ ಕಾರ್ಯಾಚರಣೆ ನಡೆಸಿ ಪಾಕಿಸ್ತಾನದಲ್ಲಿದ್ದ ಉಗ್ರರ ನೆಲೆಗಳನ್ನು ಧ್ವಂಸಗೊಳಿಸುವಲ್ಲಿ ಯಶಸ್ವಿಯಾಗಿತ್ತು. ಬಳಿಕ ಪಾಕ್ ಹಾಗೂ ಭಾರತ ನಡುವಿನ ಪರಿಸ್ಥಿತಿ ಉದ್ವಿಗ್ನಗೊಂಡಿದ್ದು, ಇದರ ಮಧ್ಯೆ ಇದೀಗ ಪ್ರಧಾನಿ ನರೇಂದ್ರ ಮೋದಿ ಇದೇ ಮೊದಲ ಬಾರಿಗೆ ದೇಶವನ್ನುದ್ದೇಶಿಸಿ ಮಾತನಾಡುತ್ತಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ.
-
-
Live: ರಾತ್ರಿ 8 ಗಂಟೆಗೆ ದೇಶವನ್ನು ಉದ್ದೇಶಿಸಿ ಮೋದಿ ಭಾಷಣ
ಆಪರೇಷನ್ ಸಿಂಧೂರ ಕಾರ್ಯಾಚರಣೆ ಬಳಿಕ ಇದೇ ಮೊದಲ ಬಾರಿಗೆ ಪ್ರಧಾನಿ ಮೋದಿ ಅವರು ಇಂದು ರಾತ್ರಿ 8 ಗಂಟೆಗೆ ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
-
ಭಾರತ-ಪಾಕ್ ಡಿಜಿಎಂಒ ಸಭೆ ಸಂಜೆ 5 ಗಂಟೆಗೆ ಮುಂದೂಡಿಕೆ
ಭಾರತ-ಪಾಕ್ ಡಿಜಿಎಂಒ ಸಭೆ ಸಂಜೆ 5 ಗಂಟೆಗೆ ಮುಂದೂಡಲಾಗಿದೆ
-
Live: ಭಾರತ-ಪಾಕಿಸ್ತಾನ ಡಿಜಿಎಂಒ ನಡುವೆ ಮಾತುಕತೆ ಆರಂಭ
ಭಾರತ ಮತ್ತು ಪಾಕಿಸ್ತಾನ ನಡುವೆ ಕದನ ವಿರಾಮ ಘೋಷಣೆಯ ನಂತರವೂ ವಾತಾವರಣ ಉದ್ವಿಗ್ನವಾಗಿದೆ. ಭಾರತ ಹಾಗೂ ಪಾಕಿಸ್ತಾನದ ಡಿಜಿಎಂಒಗಳ ನಡುವೆ ಮಾತುಕತೆ ಶುರುವಾಗಿದೆ.
-
-
Live: Live: ಪ್ರಧಾನಿ ಮೋದಿ ನಿವಾಸದಲ್ಲಿ ಸಭೆ
ಪ್ರಧಾನಿ ನರೇಂದ್ರ ಮೋದಿ ನಿವಾಸದಲ್ಲಿ ಸಭೆ ಆರಂಭವಾಗಿದೆ. ಸಿಡಿಎಸ್ ಹಾಗೂ ಮೂರು ಸೇನಾ ಮುಖ್ಯಸ್ಥರು ಭಾಗಿಯಾಗಿದ್ದಾರೆ.
-
Live: ಜಮ್ಮು-ಕಾಶ್ಮೀರ ಇತರೆ ಗಡಿ ಪ್ರದೇಶಗಳಲ್ಲಿ ಶಾಂತಿ
ಭಾರತ ಹಾಗೂ ಪಾಕ್ ನಡುವೆ ಅಘೋಷಿತ ಯುದ್ಧ ಪ್ರಾರಂಭವಾದಾಗಿನಿಂದ ಮೊದಲ ಬಾರಿಗೆ ಜಮ್ಮು ಮತ್ತು ಕಾಶ್ಮೀರ( Jammu and Kashmir) ಹಾಗೂ ಇತರೆ ಗಡಿ ಪ್ರದೇಶಗಳಲ್ಲಿ ಶಾಂತಿ ನೆಲೆಸಿದೆ ಎಂದು ಭಾರತೀಯ ಸೇನೆ ಸ್ಪಷ್ಟಪಡಿಸಿದೆ. ಯಾವುದೇ ಹೊಸ ಘಟನೆಗಳು ಅಥವಾ ಕದನ ವಿರಾಮ ಉಲ್ಲಂಘನೆಗಳು ವರದಿಯಾಗಿಲ್ಲ.
-
-
Live: ಭಾರತ ಕೇವಲ 3 ಗಂಟೆಗಳಲ್ಲಿ 11 ವಾಯುನೆಲೆಗಳನ್ನು ನಾಶಪಡಿಸಿತು
ಆಪರೇಷನ್ ಸಿಂಧೂರ್ನಲ್ಲಿ ಭಾರತವು ಪಾಕಿಸ್ತಾನಕ್ಕೆ ಭಾರೀ ಹಾನಿಯನ್ನುಂಟುಮಾಡಿದೆ, ಇದರ ಬಗ್ಗೆ ಡಿಜಿಎಂಒ ಮಾಹಿತಿಯನ್ನು ನೀಡಿದ್ದಾರೆ. 23 ನಿಮಿಷಗಳಲ್ಲಿ 9 ಭಯೋತ್ಪಾದಕ ಶಿಬಿರಗಳನ್ನು ನಾಶಪಡಿಸಲಾಗಿದೆ ಮತ್ತು ಕೇವಲ 3 ಗಂಟೆಗಳಲ್ಲಿ 11 ವಾಯುನೆಲೆಗಳನ್ನು ನಾಶಪಡಿಸಲಾಗಿದೆ ಎಂದು ಅವರು ಹೇಳಿದ್ದಾರೆ. 100 ಕ್ಕೂ ಹೆಚ್ಚು ಭಯೋತ್ಪಾದಕರು ಮತ್ತು 40 ಸೈನಿಕರು ಸಾವನ್ನಪ್ಪಿದ್ದಾರೆ.
-
Live: ಭಾರತ ಮತ್ತು ಪಾಕಿಸ್ತಾನ ಕದನ ವಿರಾಮಕ್ಕೆ ಹೇಗೆ ಒಪ್ಪಿಕೊಂಡವು?
ಭಾರತ ಮತ್ತು ಪಾಕಿಸ್ತಾನದ ನಡುವೆ ನಡೆಯುತ್ತಿರುವ ಉದ್ವಿಗ್ನತೆ ಸದ್ಯಕ್ಕೆ ಅಂತ್ಯಗೊಂಡಿದೆ. ಮೇ 10 ರಂದು ಎರಡೂ ದೇಶಗಳ ನಡುವೆ ಕದನ ವಿರಾಮ ಘೋಷಿಸಲಾಯಿತು. ಆದಾಗ್ಯೂ, ಇದರ ನಂತರವೂ ಪಾಕಿಸ್ತಾನ ದುಷ್ಟ ಕೃತ್ಯ ಎಸಗಿತು. ಅವನು ಕದನ ವಿರಾಮವನ್ನು ಉಲ್ಲಂಘಿಸಿ ಭಾರತದ ಮೇಲೆ ದಾಳಿ ಮಾಡಲು ಪ್ರಯತ್ನಿಸಿತ್ತು ಆದರೆ ಭಾರತ ದುಷ್ಟ ಪ್ರಯತ್ನವನ್ನು ವಿಫಲಗೊಳಿಸಿತು.
ನವದೆಹಲಿ, ಮೇ 12: ಭಾರತ ಹಾಗೂ ಪಾಕಿಸ್ತಾನ(Pakistan)ದ ಡಿಜಿಎಂಒ ಇಂದು ಮಾತುಕತೆ ನಡೆಸಲಿದ್ದು, ಉದ್ವಿಗ್ನತೆ ಶಮನವಾಗುವುದೇ ಎಂದು ಕಾದು ನೋಡಬೇಕಿದೆ. ಭಾರತ ಮತ್ತು ಪಾಕಿಸ್ತಾನದ ನಡುವೆ ಮೇ 7 ರಂದು ಉದ್ವಿಗ್ನತೆ ಪ್ರಾರಂಭವಾಗಿತ್ತು, ಪಹಲ್ಗಾಮ್ ದಾಳಿಗೆ ಸೇಡು ತೀರಿಸಿಕೊಳ್ಳಲು, ಭಾರತವು ಪಿಒಕೆ ಮತ್ತು ಪಾಕಿಸ್ತಾನದಲ್ಲಿನ ಭಯೋತ್ಪಾದಕ ನೆಲೆಗಳ ಮೇಲೆ ದಾಳಿ ಮಾಡಿ ನಾಶಪಡಿಸಿತು.
ಸೇನೆಯು ಭಯೋತ್ಪಾದಕರ ಅಡಗುತಾಣಗಳನ್ನು ಮಾತ್ರ ಗುರಿಯಾಗಿಸಿಕೊಂಡಿತು ಮತ್ತು ಬೇರೆ ಯಾವುದೇ ಸ್ಥಳಗಳನ್ನು ಗುರಿಯಾಗಿಸಿಕೊಂಡಿಲ್ಲ. ಈ ದಾಳಿಯಲ್ಲಿ ಕನಿಷ್ಠ 100 ಭಯೋತ್ಪಾದಕರು ಸಾವನ್ನಪ್ಪಿದ್ದಾರೆ. ಹೀಗೆ ಮಾಡುವುದರ ಮೂಲಕ, ಭಾರತವು ಇನ್ನು ಮುಂದೆ ಭಯೋತ್ಪಾದಕ ದಾಳಿಯನ್ನು ಸಹಿಸುವುದಿಲ್ಲ ಎಂದು ಸ್ಪಷ್ಟಪಡಿಸಿತು.
ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತಿಯಾಗಿ, ಭಾರತವು ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ವಾಯುದಾಳಿಗಳನ್ನು ನಡೆಸಿ ಒಂಬತ್ತು ಭಯೋತ್ಪಾದಕ ಅಡಗುತಾಣಗಳನ್ನು ಸಂಪೂರ್ಣವಾಗಿ ನಾಶಪಡಿಸಿತ್ತು. ಅದಾದ ನಂತರ, ಪಾಕಿಸ್ತಾನದ ದುಸ್ಸಾಹಸ ಕಡಿಮೆಯಾಗಲಿಲ್ಲ ಮತ್ತು ಅದು ಭಾರತದ ಗಡಿ ಪ್ರದೇಶಗಳಲ್ಲಿ ಶೆಲ್ಗಳನ್ನು ಹಾರಿಸುವುದಲ್ಲದೆ, ಡ್ರೋನ್ ಮತ್ತು ಕ್ಷಿಪಣಿ ದಾಳಿಗಳನ್ನು ನಡೆಸಲು ಪ್ರಯತ್ನಿಸಿತು, ಆದರೆ ಭಾರತದ ವಾಯು ರಕ್ಷಣಾ ವ್ಯವಸ್ಥೆಯಿಂದ ಅವು ಸಂಪೂರ್ಣವಾಗಿ ವಿಫಲವಾದವು.
ಈಗ ಅಮೆರಿಕದ ಮಧ್ಯಸ್ಥಿಕೆಯಲ್ಲಿ ಎರಡೂ ದೇಶಗಳು ಕದನ ವಿರಾಮಕ್ಕೆ ಒಪ್ಪಿಕೊಂಡಿವೆ. ಅದಾದ ಬಳಿಕವೂ ಪಾಕಿಸ್ತಾನ ದಿನಗಟ್ಟಲೆ ಗುಂಡಿನ ಸುರಿಮಳೆಗೈದಿತ್ತು. ಇಂದು ನಡೆಯಲಿರುವ ಬೆಳವಣಿಗೆಗಳ ಕುರಿತು ಕ್ಷಣ ಕ್ಷಣದ ಮಾಹಿತಿ ಇಲ್ಲಿ ಲಭ್ಯವಾಗಲಿದೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - May 12,2025 7:26 AM




