AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೊಂದು ಸರ್ಜಿಕಲ್​ ಸ್ಟ್ರೈಕ್​ಗೆ ಭಾರತದ ಪ್ಲಾನ್: ಪಾಕ್ ವಿದೇಶಾಂಗ ಸಚಿವ ಆರೋಪ

ಮತ್ತೊಂದು ಸರ್ಜಿಕಲ್​ ಸ್ಟ್ರೈಕ್​ ನಡೆಸಲು ಭಾರತ ಸಂಚು ರೂಪಿಸಿರುವ ಬಗ್ಗೆ ನಮ್ಮ ಗುಪ್ತಚರ ಇಲಾಖೆ ಮಾಹಿತಿ ನೀಡಿದೆ. ಈ ಮೂಲಕ ಪಾಕಿಸ್ತಾನದಲ್ಲಿ ಭಯೋತ್ಪಾದನೆಯ ಅಲೆ ಸೃಷ್ಟಿಸೋಕೆ ಭಾರತ ಸಿದ್ಧತೆ ನಡೆಸುತ್ತಿದೆ ಎಂದು ಅವರು ಹೇಳಿದ್ದಾರೆ.

ಮತ್ತೊಂದು ಸರ್ಜಿಕಲ್​ ಸ್ಟ್ರೈಕ್​ಗೆ ಭಾರತದ ಪ್ಲಾನ್: ಪಾಕ್ ವಿದೇಶಾಂಗ ಸಚಿವ ಆರೋಪ
ಸಾಂದರ್ಭಿಕ ಚಿತ್ರ
ರಾಜೇಶ್ ದುಗ್ಗುಮನೆ
| Edited By: |

Updated on: Dec 18, 2020 | 7:27 PM

Share

ಅಬುಧಾಬಿ: ಪಾಕಿಸ್ತಾನದ ವಿರುದ್ಧ ಭಾರತ ಸರ್ಜಿಕಲ್​ ಸ್ಟ್ರೈಕ್​ ನಡೆಸೋಕೆ ಸಿದ್ಧತೆ ಮಾಡಿಕೊಂಡಿದೆ ಎಂದು ಪಾಕ್ ವಿದೇಶಾಂಗ ಸಚಿವ ಶಾ ಮಹಮೂದ್​ ಖುರೇಷಿ ಆರೋಪಿಸಿದ್ದಾರೆ.

ಯುಎಇನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಖುರೇಷಿ, ಮತ್ತೊಂದು ಸರ್ಜಿಕಲ್​ ಸ್ಟ್ರೈಕ್​ ನಡೆಸಲು ಭಾರತ ಸಂಚು ರೂಪಿಸಿರುವ ಬಗ್ಗೆ ನಮ್ಮ ಗುಪ್ತಚರ ಇಲಾಖೆ ಮಾಹಿತಿ ನೀಡಿದೆ. ಈ ಮೂಲಕ ಪಾಕಿಸ್ತಾನದಲ್ಲಿ ಭಯೋತ್ಪಾದನೆಯ ಅಲೆ ಸೃಷ್ಟಿಸೋಕೆ ಭಾರತ ಸಿದ್ಧತೆ ನಡೆಸುತ್ತಿದೆ ಎಂದು ಅವರು ಹೇಳಿದ್ದಾರೆ.

ಭಾರತ ದಾಳಿ ಮಾಡಿದರೆ ಪಾಕಿಸ್ತಾನವು ತಕ್ಕ ಉತ್ತರ ನೀಡಲಿದೆ ಎಂದಿರುವ ಖುರೇಷಿ, ಭಾರತ ನಡೆಸುತ್ತಿರುವ ಸಂಚಿನ ಬಗ್ಗೆ ನಮಗೆ ಅರಿವಿದೆ. ಒಂದೊಮ್ಮೆ ಭಾರತ ಸರ್ಜಿಕಲ್​ ಸ್ಟ್ರೈಕ್​ ಮಾಡಿದರೆ ನಾವು ತಕ್ಕ ಉತ್ತರ ನೀಡೋಕೆ ಸಿದ್ಧತೆ ಮಾಡಿಕೊಂಡಿದ್ದೇವೆ ಎಂದು ತಿಳಿಸಿದ್ದಾರೆ.

ಭಾರತವು ಆಂತರಿಕವಾಗಿ ಸಾಕಷ್ಟು ಸಮಸ್ಯೆಗಳನ್ನು ಎದುರಿಸುತ್ತಿದೆ. ಜನರ ಕಣ್ಣು ಅದರ ಮೇಲೆ ಇದೆ. ಜನರ ಗಮನ ಬೇರೆಡೆ ಸೆಳೆಯಲು ಭಾರತ ಇಂಥ ದಾಳಿಗೆ ಮುಂದಾಗಬಹುದು ಎಂದು ಖುರೇಷಿ ಆರೋಪಿಸಿದ್ದಾರೆ. ಈ ಮೂಲಕ ಈಗ ನಡೆಯುತ್ತಿರುವ ರೈತರ ಪ್ರತಿಭಟನೆಯ ಗಮನ ಬೇರೆಡೆ ಸೆಳೆಯಲು ಭಾರತದ ನರೇಂದ್ರ ಮೋದಿ ಸರ್ಕಾರ ಈ ಪ್ಲಾನ್ ಮಾಡಿದೆ ಎಂದು ಪರೋಕ್ಷವಾಗಿ ಹೇಳಿದ್ದಾರೆ.

ಉರಿ ಸೇನಾ ಶಿಬಿರದ ಮೇಲೆ ದಾಳಿ ನಡೆಸಿದ್ದ ಪಾಕ್ ಭಯೋತ್ಪಾದಕರು ಸೈನಿಕರನ್ನು ಹತ್ಯೆ ಮಾಡಿದ್ದರು. ಇದಕ್ಕೆ ತಕ್ಕ ಉತ್ತರ ನೀಡಿದ್ದ ಭಾರತೀಯ ಸೇನೆ ಸೆಪ್ಟೆಂಬರ್​ 29, 2016ರಂದು ಪಾಕ್​ ನೆಲದಲ್ಲಿದ್ದ ಭಯೋತ್ಪಾದಕ ಶಿಬಿರಗಳ ಮೇಲೆ ಸರ್ಜಿಕಲ್​ ಸ್ಟ್ರೈಕ್​ ನಡೆಸಿತ್ತು. 2019ರ ಫೆಬ್ರವರಿಯಲ್ಲಿ ಪಾಕಿಸ್ತಾನದ ಬಾಲಾಕೋಟ್​ನಲ್ಲಿದ್ದ ಭಯೋತ್ಪಾದಕರ ಶಿಬಿರದ ಮೇಲೆ  ಎರಡನೇ ಏರ್​ಸ್ಟ್ರೈಕ್​ ನಡೆದಿತ್ತು.

ಭಾರತದ ಡಿಜಿಟಲ್ ಸರ್ಜಿಕಲ್ ಸ್ಟ್ರೈಕ್.. ಚೀನಾಗೇ ತಿರುಗುಬಾಣವಾದ ಚೀನಾ ತಂತ್ರ!

ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ