AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Operation Sindoor 2.0: ಭಾರತ ಆಪರೇಷನ್ ಸಿಂಧೂರ್ 2.0ಗೆ ತಯಾರಿ ನಡೆಸುತ್ತಿದೆ:ಸೇನಾ ಮುಖ್ಯಸ್ಥ ಉಪೇಂದ್ರ ದ್ವಿವೇದಿ

ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ ಅವರು ಭಾರತವು 'ಆಪರೇಷನ್ ಸಿಂಧೂರ್ 2.0' ಕಾರ್ಯಾಚರಣೆಗೆ ಸಂಪೂರ್ಣ ಸಜ್ಜಾಗಿದೆ ಎಂದು ಹೇಳಿದ್ದಾರೆ. ಪಾಕಿಸ್ತಾನದ ಕುತಂತ್ರಗಳಿಗೆ ತಕ್ಕ ಪ್ರತ್ಯುತ್ತರ ನೀಡಲು ಭಾರತೀಯ ಸೇನೆ ಸನ್ನದ್ಧವಾಗಿದೆ. ಈ ಕಾರ್ಯಾಚರಣೆಯಲ್ಲಿ ಭೂಸೇನೆ, ವಾಯುಪಡೆ ಮತ್ತು ನೌಕಾಪಡೆಗಳು ಜಂಟಿಯಾಗಿ ಕಾರ್ಯನಿರ್ವಹಿಸಲಿವೆ. ಪಹಲ್ಗಾಮ್ ದಾಳಿಯ ನಂತರ ಭಾರತದ ಕಠಿಣ ನಿಲುವಿನಲ್ಲಿ ಯಾವುದೇ ಬದಲಾವಣೆಯಿಲ್ಲ ಎಂದು ದ್ವಿವೇದಿ ಸ್ಪಷ್ಟಪಡಿಸಿದ್ದಾರೆ.

Operation Sindoor 2.0: ಭಾರತ ಆಪರೇಷನ್ ಸಿಂಧೂರ್ 2.0ಗೆ ತಯಾರಿ ನಡೆಸುತ್ತಿದೆ:ಸೇನಾ ಮುಖ್ಯಸ್ಥ ಉಪೇಂದ್ರ ದ್ವಿವೇದಿ
ಉಪೇಂದ್ರ ದ್ವಿವೇದಿ Image Credit source: India Today
ನಯನಾ ರಾಜೀವ್
|

Updated on: May 30, 2026 | 12:57 PM

Share

ನವದೆಹಲಿ, ಮೇ 30: ಭಾರತೀಯ ಸೇನೆ(Indian Army)ಯು ಯಾವುದೇ ಕ್ಷಣದಲ್ಲೂ ಎದುರಾಳಿಗೆ ತಕ್ಕ ಪ್ರತ್ಯುತ್ತರ ನೀಡಲು ‘ಆಪರೇಷನ್ ಸಿಂಧೂರ್ 2.0’ ಕಾರ್ಯಾಚರಣೆಗೆ ಸಂಪೂರ್ಣ ಸಜ್ಜಾಗಿದೆ ಎಂದು ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ ಶನಿವಾರ ಹೇಳಿದ್ದಾರೆ. ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಪಾಕಿಸ್ತಾನದ ಕುತಂತ್ರಗಳ ವಿರುದ್ಧ ಭಾರತೀಯ ಸೇನೆ ತಳೆದಿದ್ದ ಕಠಿಣ ನಿಲುವಿನಲ್ಲಿ ಯಾವುದೇ ಬದಲಾವಣೆಯಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಸುದ್ದಿ ಸಂಸ್ಥೆ ಎಎನ್​ಐ ಜೊತೆ ಮಾತನಾಡಿದ ಸೇನಾ ಮುಖ್ಯಸ್ಥರು, ಆಪರೇಷನ್ ಸಿಂಧೂರ್ ಇನ್ನೂ ಕೊನೆಗೊಂಡಿಲ್ಲ, ಅದು ಮುಂದುವರೆಯುತ್ತಲೇ ಇದೆ. ಪ್ರಸ್ತುತ ಗಡಿಯಲ್ಲಿರುವ ಸ್ಥಿತಿಯು ಯುದ್ಧದ ನಡುವಿನ ಒಂದು ತಾತ್ಕಾಲಿಕ ವಿರಾಮವಷ್ಟೇ ಎಂದು ಬಣ್ಣಿಸಿದ್ದಾರೆ.

ಮೂರೂ ಪಡೆಗಳ ಮಹಾ ಜಂಟಿ ಸಿದ್ಧತೆ ಪಾಕಿಸ್ತಾನದ ಹೆಸರನ್ನು ನೇರವಾಗಿ ಉಲ್ಲೇಖಿಸದೆ ಗಡಾಫಿ ಶೈಲಿಯಲ್ಲಿ ಎಚ್ಚರಿಕೆ ನೀಡಿರುವ ಜನರಲ್ ದ್ವಿವೇದಿ, ಭಾರತೀಯ ಮಿಲಿಟರಿಯ ಸನ್ನದ್ಧತೆಯನ್ನು ಎತ್ತಿ ತೋರಿಸಿದ್ದಾರೆ. ಆಪರೇಷನ್ ಸಿಂಧೂರ್ 2.0 ಸಂಭವಿಸಿದಲ್ಲಿ, ಕೇವಲ ಸೇನೆ ಮಾತ್ರವಲ್ಲದೆ ಭಾರತೀಯ ವಾಯುಪಡೆ (IAF) ಮತ್ತು ನೌಕಾಪಡೆಯೂ (Navy) ಜಂಟಿಯಾಗಿ ಅತ್ಯಂತ ಪ್ರಬಲ ದಾಳಿ ನಡೆಸಲು ಸಜ್ಜಾಗುತ್ತಿವೆ. ಪ್ರಸ್ತುತ ನಾವು ಮೂರೂ ಪಡೆಗಳ ನಡುವೆ ಸಿನರ್ಜಿ (ಪರಸ್ಪರ ಸಮನ್ವಯತೆ) ಹೆಚ್ಚಿಸುವ ಹಾಗೂ ಮುಂದಿನ ಸವಾಲಿಗೆ ನಮ್ಮನ್ನು ಸಿದ್ಧಪಡಿಸಿಕೊಳ್ಳುವತ್ತ ದಿನದ 24 ಗಂಟೆಯೂ ಗಮನಹರಿಸುತ್ತಿದ್ದೇವೆ ಎಂದು ಅವರು ಹೇಳಿದ್ದಾರೆ.

ಇಂದಿನ ಆಧುನಿಕ ಯುದ್ಧಭೂಮಿ ಸಂಪೂರ್ಣ ಮುಕ್ತವಾಗಿದೆ, ನಮ್ಮ ಪ್ರತಿಯೊಂದು ನಡೆಯೂ ಶತ್ರುಗಳಿಗೆ ತಿಳಿಯುತ್ತದೆ. ಆದ್ದರಿಂದ, ನಮ್ಮ ಸೈನಿಕರ ನಿಯೋಜನೆ, ಸುರಕ್ಷತೆ ಮತ್ತು ಗಡಿ ನಿವಾಸಿಗಳ ರಕ್ಷಣೆಯ ಬಗ್ಗೆ ನಾವು ಅತ್ಯಂತ ಜಾಗರೂಕರಾಗಿದ್ದೇವೆ ಎಂದಿದ್ದಾರೆ.

ಮತ್ತಷ್ಟು ಓದಿ:ಪಾಕಿಸ್ತಾನಿ ಭಯೋತ್ಪಾದಕರ ವಿರುದ್ಧದ ಆಪರೇಷನ್ ಸಿಂಧೂರ್​ಗೆ ಒಂದು ವರ್ಷ: ವೀಡಿಯೊ ಹಂಚಿಕೊಂಡ ಭಾರತೀಯ ಸೇನೆ

ಕಳೆದ ವರ್ಷ (2025ರ ಏಪ್ರಿಲ್ 22 ರಂದು) ದಕ್ಷಿಣ ಕಾಶ್ಮೀರದ ಸುಂದರ ಪ್ರವಾಸಿ ತಾಣವಾದ ಪಹಲ್ಗಾಮ್‌ನ ಬೈಸರನ್ ಕಣಿವೆಯಲ್ಲಿ ಪಾಕಿಸ್ತಾನ ಪ್ರಾಯೋಜಿತ ಉಗ್ರರು ಅಟ್ಟಹಾಸ ಮೆರೆದು 26 ಜನರನ್ನು ಬಲಿ ಪಡೆದಿದ್ದರು.

ಭಾರತದ ದಿಟ್ಟ ಪ್ರತಿಕಾರ: ಈ ಹೇಡಿತನದ ದಾಳಿಗೆ ತಕ್ಕ ಪ್ರತ್ಯುತ್ತರ ನೀಡಲು ಭಾರತೀಯ ಸೇನೆಯು 2025 ರ ಮೇ 7 ಮತ್ತು 8 ರ ಮಧ್ಯರಾತ್ರಿ ಪಾಕಿಸ್ತಾನದ ವಿರುದ್ಧ ‘ಆಪರೇಷನ್ ಸಿಂಧೂರ್’ ಎಂಬ ಬೃಹತ್ ಮಿಲಿಟರಿ ಮರುದಾಳಿಯನ್ನು ನಡೆಸಿ ಶತ್ರುಗಳ ಬೆನ್ನೆಲುಬು ಮುರಿದಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More