AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜನರಿಗೆ ಬಿಸಿಲ ಬೇಗೆಯಿಂದ ಬೇಗ ದೊರೆಯಲಿದೆ ಮುಕ್ತಿ, ಅವಧಿಗೂ ಮುನ್ನವೇ ಮುಂಗಾರು ಆಗಮನ ಸಾಧ್ಯತೆ

ಈ ಬಾರಿಯ ಮುಂಗಾರು ಅವಧಿಗೂ ಮುನ್ನವೇ ಆಗಮಸುವ ಸಾಧ್ಯತೆ ಇದೆ ಸ್ಕೈ ಮೆಟ್ ವರದಿ ಮಾಡಿದೆ. ಹೀಗಾಗಿ ದೇಶದ ಜನತೆ ಶೀಘ್ರವೇ ಬಿಸಿ ಝಳದಿಂದ ಮುಕ್ತಿ ಪಡೆಯಲಿದ್ದಾರೆ. ಆದರೆ ಭಾರತೀಯ ಹವಾಮಾನ ಇಲಾಖೆ ಇಲ್ಲಿಯವರೆಗೂ ಮುಂಗಾರು ಕುರಿತು ಯಾವುದೇ ಮಾಹಿತಿ ನೀಡಿಲ್ಲ.

ಜನರಿಗೆ ಬಿಸಿಲ ಬೇಗೆಯಿಂದ ಬೇಗ ದೊರೆಯಲಿದೆ ಮುಕ್ತಿ, ಅವಧಿಗೂ ಮುನ್ನವೇ ಮುಂಗಾರು ಆಗಮನ ಸಾಧ್ಯತೆ
ಮುಂಗಾರುImage Credit source: Wikipedia
ನಯನಾ ರಾಜೀವ್
|

Updated on: Apr 11, 2024 | 7:58 AM

Share

ಈ ಬಾರಿಯ ಮುಂಗಾರು ಅವಧಿಗೂ ಮುನ್ನವೇ ಆಗಮಸುವ ಸಾಧ್ಯತೆ ಇದೆ ಸ್ಕೈ ಮೆಟ್ ವರದಿ ಮಾಡಿದೆ. ಹೀಗಾಗಿ ದೇಶದ ಜನತೆ ಶೀಘ್ರವೇ ಬಿಸಿ ಝಳದಿಂದ ಮುಕ್ತಿ ಪಡೆಯಲಿದ್ದಾರೆ. ಆದರೆ ಭಾರತೀಯ ಹವಾಮಾನ ಇಲಾಖೆ ಇಲ್ಲಿಯವರೆಗೂ ಮುಂಗಾರು ಕುರಿತು ಯಾವುದೇ ಮಾಹಿತಿ ನೀಡಿಲ್ಲ.

ಸ್ಕೈಮೆಟ್​ ವರದಿಯು ಈ ಬಾರಿ ಸಾಮಾನ್ಯ ಮುಂಗಾರು ಇರಲಿದೆ ಎಂದು ಹೇಳಿದೆ. ಹಿಂದೂ ಮಹಾಸಾಗರದಲ್ಲಿ ಇಂಡಿಯನ್ ಓಷನ್ ಡೈಪೋಲ್ ಅಥವಾ ಒಐಡಿ ಅಥವಾ ಲಾ ನಿನಾ ಪರಿಸ್ಥಿತಿಗಳು ಮಳೆಗೆ ಕಾರಣವಾಗಬಹುದು ಎಂದು ಹೇಳಲಾಗಿದೆ.

ಋತುವಿನ ಮೊದಲಾರ್ಧದಲ್ಲಿ ಈಶಾನ್ಯ ರಾಜ್ಯಗಳಲ್ಲಿ ಸಾಮಾನ್ಯಕ್ಕಿಂತ ಕಡಿಮೆ ಮಳೆಯಾಗುತ್ತದೆ ಎಂದು ಅದು ಹೇಳಿದೆ. ಎಲ್ ನಿನೋ ತ್ವರಿತವಾಗಿ ಲಾ ನಿನಾಗೆ ತಿರುಗುತ್ತಿದೆ. ಲಾ ನಿನಾ ವರ್ಷಗಳಲ್ಲಿ ಮಾನ್ಸೂನ್  ಬಲವಾಗಿರುತ್ತದೆ ಎಂದು ಸ್ಕೈಮೆಟ್‌ನ ಎಂಡಿ ಜತಿನ್ ಸಿಂಗ್ ಹೇಳಿದ್ದಾರೆ.

2023 ರ ಮಾನ್ಸೂನ್ ಋತುವಿನಲ್ಲಿ ದೀರ್ಘಾವಧಿಯ ಸರಾಸರಿ 868.6 ಎಂಎಂಗೆ ಹೋಲಿಸಿದರೆ ಭಾರತವು 820 ಎಂಎಂ ನಷ್ಟು “ಸರಾಸರಿ-ಕಡಿಮೆ” ಸಂಚಿತ ಮಳೆಯನ್ನು ಪಡೆಯಿತು. ಈ ತಿಂಗಳ ಕೊನೆಯಲ್ಲಿ ನೈರುತ್ಯ ಮುಂಗಾರು ಮುನ್ಸೂಚನೆಯನ್ನು ನೀಡಲು ಐಎಂಡಿ ಸಜ್ಜಾಗಿದೆ.

ಮತ್ತಷ್ಟು ಓದಿ: Karnataka Weather: ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಇಂದಿನಿಂದ ಏಪ್ರಿಲ್​ 17ರವರೆಗೆ ಮಳೆ ಸಾಧ್ಯತೆ

ಸ್ಕೈಮೆಟ್ ಪ್ರಕಾರ, ದಕ್ಷಿಣ, ಪಶ್ಚಿಮ ಮತ್ತು ವಾಯುವ್ಯ ಪ್ರದೇಶಗಳಲ್ಲಿ ಸಾಕಷ್ಟು ಮಳೆಯಾಗಲಿದೆ. ಮಹಾರಾಷ್ಟ್ರ, ಮಧ್ಯಪ್ರದೇಶದಲ್ಲಿ ಮುಂಗಾರು ಹೆಚ್ಚಿರಲಿದೆ, ಬಿಹಾರ, ಜಾರ್ಖಂಡ್​, ಒಡಿಶಾ ಹಾಗೂ ಪಶ್ಚಿಮ ಬಂಗಾಳದಲ್ಲಿ ಜುಲೈ, ಆಗಸ್ಟ್​ ತಿಂಗಳಲ್ಲಿ ಕಡಿಮೆ ಮಳೆಯಾಗುವ ನಿರೀಕ್ಷೆ ಇದೆ.

ಎಲ್​ ನಿನೊ ಹಾಗೂ ಲಾ ನಿನಾ ಪೆಸಿಫಿಕ್ ಮಹಾಸಾಗರದಲ್ಲಿ ಹವಾಮಾನದ ಮಾದರಿಗಳಾಗಿವೆ. ಅದು ಪ್ರಪಂಚಾದ್ಯಂತ ಹವಾಮಾನದ ಮೇಲೆ ಪರಿಣಾಮ ಬೀರಬಹುದು.

ಈಶಾನ್ಯ ರಾಜ್ಯಗಳಲ್ಲಿ ಮಳೆಗಾಲದ ಆರಂಭದಲ್ಲಿ ಮಳೆಯ ಕೊರತೆ ಕಾಡಲಿದೆ. 2024ರ ಮಳೆ ಮುನ್ಸೂಚನೆ ವರದಿ ಪ್ರಕಾರ, ದೀರ್ಘ ಅವಧಿ ಸರಾಸರಿ ಪ್ರಕಾರ 868.6 ಎಂಎಂ ಮಳೆ ಬೀಳಲಿದೆ. ಅಂದರೆ ಶೇಕಡ 102 ಮಳೆಯಾಗಲಿದೆ.

ಕರ್ನಾಟಕದಲ್ಲಿ ಈ ಸಲದ ಮುಂಗಾರು ಮಳೆ ಜೂನ್, ಜುಲೈ ತಿಂಗಳಲ್ಲಿ ಶುರುವಾಗಲಿದೆ. ಸಾಮಾನ್ಯಕ್ಕಿಂತ ಹೆಚ್ಚಿನ ಮಳೆಯನ್ನು ನಿರೀಕ್ಷಿಸಬಹುದು. ಆಗಸ್ಟ್‌, ಸೆಪ್ಟೆಂಬರ್‌ನಲ್ಲಿ ಮಳೆಯ ತೀವ್ರತೆ ಕಡಿಮೆಯಾಗಲಿದೆ. ಜೂನ್‌ನಿಂದ ಸೆಪ್ಟೆಂಬರ್‌ ನಡುವಿನ ಅವಧಿಯಲ್ಲಿ ಮುಂಗಾರು ಮಳೆ ಸಹಜವಾಗಿರಲಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ