AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಯೋತ್ಪಾದನೆ ಎದುರಿಸಲು ಪಾಕಿಸ್ತಾನಕ್ಕೆ ಸಾಧ್ಯವಾಗದಿದ್ದರೆ ಸಹಾಯ ಮಾಡಲು ಭಾರತ ಸಿದ್ಧ: ರಾಜನಾಥ್​​ ಸಿಂಗ್

ಪಾಕಿಸ್ತಾನವು ತನ್ನ ನೆಲದಲ್ಲಿ ನಡೆಯುತ್ತಿರುವ ಭಯೋತ್ಪಾದನೆ ಚಟುವಟಿಕೆಯನ್ನು ನಿಯಂತ್ರಿಸಬೇಕು. ಅಗತ್ಯವಿದ್ದರೆ ಭಾರತವು ಕೂಡ ಇದಕ್ಕೆ ಬೆಂಬಲ ನೀಡುತ್ತದೆ ಎಂದು ಹೇಳಿದ್ದಾರೆ. ಪಾಕಿಸ್ತಾನವು ಭಯೋತ್ಪಾದನೆಯನ್ನು ನಿಗ್ರಹಿಸಲು ಅಸಮರ್ಥ ಎಂದು ಭಾವಿಸಿದರೆ, ಭಯೋತ್ಪಾದನೆಯನ್ನು ತಡೆಯಲು ಸಹಕರಿಸಲು ಭಾರತ ಸಿದ್ಧವಾಗಿದೆ ಎಂದು ಸಂದರ್ಶನದಲ್ಲಿ ರಾಜನಾಥ್ ಸಿಂಗ್ ಹೇಳಿದ್ದಾರೆ.

ಭಯೋತ್ಪಾದನೆ ಎದುರಿಸಲು ಪಾಕಿಸ್ತಾನಕ್ಕೆ ಸಾಧ್ಯವಾಗದಿದ್ದರೆ ಸಹಾಯ ಮಾಡಲು ಭಾರತ ಸಿದ್ಧ: ರಾಜನಾಥ್​​ ಸಿಂಗ್
ಅಕ್ಷಯ್​ ಪಲ್ಲಮಜಲು​​
|

Updated on: Apr 11, 2024 | 1:01 PM

Share

ದೆಹಲಿ, ಏ.10: ಭಯೋತ್ಪಾದನೆಯನ್ನು ಎದುರಿಸಲು ಪಾಕಿಸ್ತಾನಕ್ಕೆ ಸಾಧ್ಯವಾಗದಿದ್ದರೆ ಪಾಕ್​​​ಗೆ ಸಹಾಯ ಮಾಡಲು ಭಾರತ ಸಿದ್ಧ ಎಂದು ರಕ್ಷಣಾ ಸಚಿವ ರಾಜನಾಥ್​​ ಸಿಂಗ್ ಹೇಳಿದ್ದಾರೆ. ಎಎನ್ಐ ನಡೆಸಿದ ಸಂದರ್ಶನದಲ್ಲಿ ಮಾತನಾಡಿದ ಅವರು, ಭಯೋತ್ಪಾದನೆಯನ್ನು ಒಂದು ಸಾಧನವಾಗಿ ಬಳಸಿಕೊಂಡು ಭಾರತವನ್ನು ಅಸ್ಥಿರಗೊಳಿಸಲು ಪಾಕಿಸ್ತಾನ ಪ್ರಯತ್ನಿಸಿದರೆ, ಅದರ ಪರಿಣಾಮ ಎದುರಿಸಲು ಪಾಕ್​​ ಸಿದ್ಧವಿರಲಿ ಎಂದು ಎಚ್ಚರಿಕೆ ನೀಡಿದ್ದಾರೆ.

ಪಾಕಿಸ್ತಾನವು ತನ್ನ ನೆಲದಲ್ಲಿ ನಡೆಯುತ್ತಿರುವ ಭಯೋತ್ಪಾದನೆ ಚಟುವಟಿಕೆಯನ್ನು ನಿಯಂತ್ರಿಸಬೇಕು. ಅಗತ್ಯವಿದ್ದರೆ ಭಾರತವು ಕೂಡ ಇದಕ್ಕೆ ಬೆಂಬಲ ನೀಡುತ್ತದೆ ಎಂದು ಹೇಳಿದ್ದಾರೆ. ಪಾಕಿಸ್ತಾನವು ಭಯೋತ್ಪಾದನೆಯನ್ನು ನಿಗ್ರಹಿಸಲು ಅಸಮರ್ಥ ಎಂದು ಭಾವಿಸಿದರೆ, ಭಯೋತ್ಪಾದನೆಯನ್ನು ತಡೆಯಲು ಸಹಕರಿಸಲು ಭಾರತ ಸಿದ್ಧವಾಗಿದೆ ಎಂದು ಸಂದರ್ಶನದಲ್ಲಿ ರಾಜನಾಥ್ ಸಿಂಗ್ ಹೇಳಿದ್ದಾರೆ.

ಇದನ್ನೂ ಓದಿ: ಬಿಜೆಪಿಯ ಧ್ವಜಕ್ಕೆ ದುಷ್ಟಶಕ್ತಿಗಳನ್ನು ಓಡಿಸುವ ಶಕ್ತಿ ಇದೆ: ಹರ್ಯಾಣ ಸಚಿವ

ಪಾಕ್ ಆಕ್ರಮಿತ-ಕಾಶ್ಮೀರವು ಭಾರತದ ಭಾಗವಾಗಿತ್ತು ಮುಂದೆಯೂ ಅದು ಭಾರತದ ಭಾಗವಾಗಿರುತ್ತದೆ ಎಂದರು. ಇದೇ ಸಮಯದಲ್ಲಿ ಇಂದಿರಾಗಾಂಧಿ ಕಾಲದಲ್ಲಿ ಏರಿದ ತುರ್ತುಪರಿಸ್ಥಿತಿಯ ಬಗ್ಗೆಯೂ ಮಾತನಾಡಿದ್ದಾರೆ. ತನ್ನ ತಾಯಿಯ ನಿಧನದ ಸಂದರ್ಭದಲ್ಲಿ ಅವರ ಕೊನೆಯ ಕಾರ್ಯದಲ್ಲಿ ಭಾಗಿಯಾಗಲು ಸಾಧ್ಯವಾಗಲಿರಲಿಲ್ಲ. ಅದಕ್ಕೆ ಅವಕಾಶ ಸರ್ಕಾರ ನೀಡಿರಲಿಲ್ಲ. ಆ ಸಮಯದಲ್ಲಿ ಕಾಂಗ್ರೆಸ್​​ ಸರ್ವಾಧಿಕಾರಿಯ ರೀತಿಯಲ್ಲಿ ವರ್ತಿಸುತ್ತಿತ್ತು ಎಂದು ಹೇಳಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ