AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದ ವಿದೇಶಾಂಗ ನೀತಿಯನ್ನು ಶ್ಲಾಘಿಸಿದ ಪಾಕ್; ನಮ್ಮ ದಾಖಲೆಗಳೇ ಹೇಳುತ್ತವೆ ಎಂದು ಪ್ರತಿಕ್ರಿಯಿಸಿದ ಭಾರತ

ನಮ್ಮ ಅನೇಕ ವಿದೇಶಾಂಗ ನೀತಿ ಉಪಕ್ರಮಗಳಿಗಾಗಿ ನಾವು ಮಂಡಳಿಯಾದ್ಯಂತ ಪ್ರಶಂಸೆ ಪಡೆದಿದ್ದೇವೆ ಎಂದು ನಾನು ಭಾವಿಸುತ್ತೇನೆ. ನಮ್ಮ ದಾಖಲೆಯು ತಾನೇ ಹೇಳುತ್ತದೆ ಎಂದು ವಿದೇಶಾಂಗ ಕಾರ್ಯದರ್ಶಿ...

ಭಾರತದ ವಿದೇಶಾಂಗ ನೀತಿಯನ್ನು ಶ್ಲಾಘಿಸಿದ ಪಾಕ್; ನಮ್ಮ ದಾಖಲೆಗಳೇ ಹೇಳುತ್ತವೆ ಎಂದು ಪ್ರತಿಕ್ರಿಯಿಸಿದ ಭಾರತ
ಹರ್ಷವರ್ಧನ್ ಶ್ರಿಂಗ್ಲಾ
TV9 Web
| Edited By: |

Updated on:Mar 21, 2022 | 8:39 PM

Share

ದೆಹಲಿ: ಭಾರತದ ವಿದೇಶಾಂಗ ನೀತಿಯನ್ನು(Foreign Policy) ಪಾಕ್ ಪ್ರಧಾನಿ ಇಮ್ರಾನ್ ಖಾನ್ (Imran Khan) ಶ್ಲಾಘಿಸಿದ್ದಕ್ಕೆ ಪ್ರತಿಕ್ರಿಯಿಸಿದ ಭಾರತ ವಿದೇಶಾಂಗ ಕಾರ್ಯದರ್ಶಿ ಹರ್ಷವರ್ಧನ್ ಶ್ರಿಂಗ್ಲಾ(Harsh Vardhan Shringla) ಭಾರತವು ತನ್ನ ಅನೇಕ ವಿದೇಶಾಂಗ ನೀತಿ ಉಪಕ್ರಮಗಳಿಗಾಗಿ ಪ್ರಶಂಸೆಯನ್ನು ಪಡೆದಿದೆ ಎಂದಿದ್ದಾರೆ. ಖಾನ್ ಅವರ ಕಾಮೆಂಟ್‌ಗಳ ಕುರಿತು ಮಾಧ್ಯಮಗೋಷ್ಠಿಯಲ್ಲಿ ಕೇಳಿದಾಗ, ಶ್ರಿಂಗ್ಲಾ ಅವರು ಭಾರತದ ದಾಖಲೆಗಳೇ ಇದನ್ನು ಹೇಳುತ್ತವೆ ಎಂದಿದ್ದಾರೆ. ಒಬ್ಬ ನಾಯಕ ಮಾತ್ರ ಭಾರತವನ್ನು ಅಭಿನಂದಿಸಿದ್ದಾರೆ ಎಂದು ಹೇಳುವುದು ತಪ್ಪು ಎಂದಿದ್ದಾರೆ. ಒಬ್ಬ ವ್ಯಕ್ತಿ ಮಾತ್ರ ಶ್ಲಾಘಿಸಿದ್ದಾರೆ ಎಂದು ಹೇಳುವುದು ತಪ್ಪು. ನಮ್ಮ ಅನೇಕ ವಿದೇಶಾಂಗ ನೀತಿ ಉಪಕ್ರಮಗಳಿಗಾಗಿ ನಾವು ಮಂಡಳಿಯಾದ್ಯಂತ ಪ್ರಶಂಸೆ ಪಡೆದಿದ್ದೇವೆ ಎಂದು ನಾನು ಭಾವಿಸುತ್ತೇನೆ. ನಮ್ಮ ದಾಖಲೆಯೇ ಇದನ್ನು  ಹೇಳುತ್ತದೆ ಎಂದು ವಿದೇಶಾಂಗ ಕಾರ್ಯದರ್ಶಿ ಮಾಧ್ಯಮಗೋಷ್ಠಿಯಲ್ಲಿ ಹೇಳಿದರು. ಖೈಬರ್-ಪಖ್ತುಂಖ್ವಾ ಪ್ರಾಂತ್ಯದಲ್ಲಿ ನಡೆದ ಸಾರ್ವಜನಿಕ ರ್ಯಾಲಿಯಲ್ಲಿ, ಉಕ್ರೇನ್ ಮೇಲಿನ ದಾಳಿಗಾಗಿ ಮಾಸ್ಕೊ ಮೇಲೆ ಅಮೆರಿಕದ ನಿರ್ಬಂಧಗಳ ಹೊರತಾಗಿಯೂ ಭಾರತ ರಷ್ಯಾದಿಂದ ಕಚ್ಚಾ ತೈಲವನ್ನು ಆಮದು ಮಾಡಿಕೊಂಡಿದೆ ಎಂದು ಹೇಳುವ ಮೂಲಕ ಸ್ವತಂತ್ರ ವಿದೇಶಾಂಗ ನೀತಿಯನ್ನು ಅನುಸರಿಸುತ್ತಿರುವ ಭಾರತವನ್ನು ಇಮ್ರಾನ್ ಖಾನ್ ಶ್ಲಾಘಿಸಿದ್ದಾರೆ.

ಮಲಕಂಡ್‌ನಲ್ಲಿ ಭಾನುವಾರ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಖಾನ್, “ಮೇ ಆಜ್ ಹಿಂದೂಸ್ತಾನ್ ಕೋ ದಾದ್ ದೇತಾ ಹೂಂ (ನಾನು ಇಂದು ಭಾರತಕ್ಕೆ ಸಲ್ಯೂಟ್ ಮಾಡುತ್ತೇನೆ). ಅದು ಯಾವಾಗಲೂ ಸ್ವತಂತ್ರ ವಿದೇಶಾಂಗ ನೀತಿಯನ್ನು ಉಳಿಸಿಕೊಂಡಿದೆ” ಎಂದು ಹೇಳಿದರು. “ಭಾರತವು ಅಮೆರಿಕದೊಂದಿಗೆ ಕ್ವಾಡ್ ಮೈತ್ರಿಕೂಟದ ಸದಸ್ಯ ರಾಷ್ಟ್ರವಾಗಿದೆ. ಆದರೆ ಇನ್ನೂ ಅದು ತನ್ನನ್ನು ತಟಸ್ಥ ಎಂದು ಕರೆಯುತ್ತದೆ. ನಿರ್ಬಂಧಗಳನ್ನು ಎದುರಿಸುತ್ತಿರುವ ರಷ್ಯಾದಿಂದ ಭಾರತ ತೈಲವನ್ನು ಆಮದು ಮಾಡಿಕೊಳ್ಳುತ್ತಿದೆ. ಏಕೆಂದರೆ ಭಾರತದ ವಿದೇಶಾಂಗ ನೀತಿ ತನ್ನ ಜನರಿಗಾಗಿದೆ” ಎಂದು ಪಾಕಿಸ್ತಾನದ ವೆಬ್‌ಸೈಟ್ ಎಕ್ಸ್‌ಪ್ರೆಸ್ ಟ್ರಿಬ್ಯೂನ್ ಖಾನ್ ಹೇಳಿಕೆಯನ್ನು ಉಲ್ಲೇಖಿಸಿದೆ. ಜನವರಿಯಲ್ಲಿ ಇಮ್ರಾನ್ ಖಾನ್ ಮಾಹಿತಿ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿನ ಉತ್ಕರ್ಷಕ್ಕಾಗಿ ಭಾರತವನ್ನು ಹೊಗಳಿದ್ದರು ಮತ್ತು ಹೂಡಿಕೆಗಳನ್ನು ಆಕರ್ಷಿಸುವ ನೀತಿಗಳನ್ನು ಶ್ಲಾಘಿಸಿದರು. ಮಾರ್ಚ್ 25 ರಂದು ಪಾಕಿಸ್ತಾನದ ರಾಷ್ಟ್ರೀಯ ಅಸೆಂಬ್ಲಿಯಲ್ಲಿ ನಡೆಯಲಿರುವ ಜಂಟಿ ವಿರೋಧ ಪಕ್ಷದ ಅವಿಶ್ವಾಸ ನಿರ್ಣಯದ ನಡುವೆ ಇಮ್ರಾನ್ ಖಾನ್ ಅವರ ಹೇಳಿಕೆ ಬಂದಿದೆ. ಅವರ ಪಕ್ಷ ಪಿಟಿಐನ ಗಣನೀಯ ಸಂಖ್ಯೆಯ ಶಾಸಕರು ಸರ್ಕಾರದ ವಿರುದ್ಧ ಮತ ಚಲಾಯಿಸುತ್ತಾರೆ ಎಂದು ನಂಬಲಾಗಿದೆ.

ಇದನ್ನೂ ಓದಿ: ಭಾರತದ ವಿದೇಶಾಂಗ ನೀತಿ ಉತ್ತಮವಾಗಿದೆ ಎಂದು ಹೊಗಳಿದ ಪಾಕ್ ಪ್ರಧಾನಿ ಇಮ್ರಾನ್ ಖಾನ್

Published On - 8:03 pm, Mon, 21 March 22

ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್