AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಶದಲ್ಲಿ 24 ಗಂಟೆಯಲ್ಲಿ 60,753 ಹೊಸ ಕೊರೊನಾ ಕೇಸ್​​ಗಳು ದಾಖಲು; ಈ ಐದು ರಾಜ್ಯಗಳದ್ದೇ ಹೆಚ್ಚಿನ ಪಾಲು

ಮತ್ತೊಂದೆಡೆ ಕೊರೊನಾ ಲಸಿಕೆ ಅಭಿಯಾನ ಕೂಡ ಭರದಿಂದ ಸಾಗುತ್ತಿದೆ. ಇದುವರೆಗೆ 27,23,88,783 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಕಳೆದ 74 ದಿನಗಳಲ್ಲಿ ದೇಶದಲ್ಲಿ ಸಕ್ರಿಯ ಪ್ರಕರಣಗಳು ತುಂಬ ಕಡಿಮೆಯಾಗಿದ್ದು ಸಮಾಧಾನಕಾರ ಸಂಗತಿಯಾಗಿದೆ.

ದೇಶದಲ್ಲಿ 24 ಗಂಟೆಯಲ್ಲಿ 60,753 ಹೊಸ ಕೊರೊನಾ ಕೇಸ್​​ಗಳು ದಾಖಲು; ಈ ಐದು ರಾಜ್ಯಗಳದ್ದೇ ಹೆಚ್ಚಿನ ಪಾಲು
ಕೊವಿಡ್ 19
TV9 Web
| Edited By: |

Updated on:Jun 20, 2021 | 8:07 AM

Share

ಕೊವಿಡ್ 2ನೇ ಅಲೆ ಸ್ವಲ್ಪ ಮಟ್ಟಿಗೆ ತಗ್ಗುತ್ತಿದೆ. ಕಳೆದ 24 ಗಂಟೆಯಲ್ಲಿ 60,753 ಹೊಸ ಕೊರೊನಾ ಕೇಸ್​ಗಳು ದಾಖಲಾಗಿವೆ ಹಾಗೂ 1647 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ. ಒಂದೇ ದಿನದಲ್ಲಿ 97,743 ಜನರು ಕೊರೊನಾದಿಂದ ಚೇತರಿಸಿಕೊಂಡು ಆಸ್ಪತ್ರೆಗಳಿಂದ ಡಿಸ್​ಚಾರ್ಜ್​ ಆಗಿದ್ದಾರೆ. ಅಲ್ಲಿಗೆ ಇದುವರೆಗೆ ಗುಣಮುಖರಾದವರ ಸಂಖ್ಯೆ 2,86,78,390ಕ್ಕೆ ಏರಿಕೆಯಾಗಿದೆ. ಸದ್ಯ ದೇಶದಲ್ಲಿ ಕೊರೊನಾ ಚೇತರಿಕೆ ಪ್ರಮಾಣ ಶೇ.96.16ರಷ್ಟಿದೆ.

ದೇಶದಲ್ಲಿ ಕೊರೊನಾ ಸಕ್ರಿಯ ಪ್ರಕರಣಗಳು 7,60,019ರಷ್ಟಿದೆ. ಕಳೆದ 24ಗಂಟೆಯಲ್ಲಿ ದಾಖಲಾದ ಹೊಸ ಕೊರೊನಾ ಪ್ರಕರಣಗಳಲ್ಲಿ ಶೇ.69ರಷ್ಟು ಐದು ರಾಜ್ಯಗಳ ಪಾಲಾಗಿದೆ. ಅದರಲ್ಲೂ ಕೇರಳ ಒಂದೇ ರಾಜ್ಯದ ಪಾಲು ಶೇ.18.7ರಷ್ಟಿದೆ. ಸದ್ಯದ ಮಟ್ಟಿಗೆ ದೇಶದಲ್ಲಿ ಒಂದು ದಿನದಲ್ಲಿ ಹೆಚ್ಚು ಕೊರೊನಾ ಸೋಂಕಿನ ಪ್ರಕರಣಗಳು ದಾಖಲಾಗುತ್ತಿರುವ ರಾಜ್ಯ ಕೇರಳವೇ ಆಗಿದೆ. ಕೇರಳದಲ್ಲಿ ಕಳೆದ 24ಗಂಟೆಯಲ್ಲಿ 11,361, ಮಹಾರಾಷ್ಟ್ರದಲ್ಲಿ 9,798, ತಮಿಳುನಾಡಿನಲ್ಲಿ 8,633, ಆಂಧ್ರಪ್ರದೇಶದಲ್ಲಿ 6341 ಮತ್ತು ಕರ್ನಾಟಕದಲ್ಲಿ 5783 ಹೊಸ ಕೊರೊನಾ ಕೇಸ್​​ಗಳು ದಾಖಲಾಗಿದ್ದು, ಈ ಐದು ರಾಜ್ಯಗಳಲ್ಲೇ ಅತಿ ಹೆಚ್ಚು ಪ್ರಕರಣಗಳು ಪತ್ತೆಯಾಗುತ್ತಿವೆ. ಹಾಗೇ, ಒಂದೇ ದಿನದಲ್ಲಿ 1647 ಮಂದಿ ಸೋಂಕಿನಿಂದ ಮೃತಪಟ್ಟಿದ್ದು, ಅದರಲ್ಲಿ 648 ಸಾವು ಮಹಾರಾಷ್ಟ್ರದಿಂದ ಮತ್ತು 287 ತಮಿಳುನಾಡಿನಿಂದ ವರದಿಯಾಗಿದೆ.

ಮತ್ತೊಂದೆಡೆ ಕೊರೊನಾ ಲಸಿಕೆ ಅಭಿಯಾನ ಕೂಡ ಭರದಿಂದ ಸಾಗುತ್ತಿದೆ. ಇದುವರೆಗೆ 27,23,88,783 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಕಳೆದ 74 ದಿನಗಳಲ್ಲಿ ದೇಶದಲ್ಲಿ ಸಕ್ರಿಯ ಪ್ರಕರಣಗಳು ತುಂಬ ಕಡಿಮೆಯಾಗಿದ್ದು ಸಮಾಧಾನಕಾರ ಸಂಗತಿಯಾಗಿದೆ. ಮೊದಲನೇ ಅಲೆ ಕೊರೊನಾ ಸ್ವಲ್ಪ ಕಡಿಮೆಯಾಗುತ್ತಿದ್ದಂತೆ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ನಿರ್ಲಕ್ಷ್ಯ ಮಾಡಿದ್ದರಿಂದಲೇ ಎರಡನೇ ಅಲೆ ಕೊವಿಡ್​ ತುಂಬ ಬಾಧಿಸಿತು. ಇನ್ನು ಈ ಬಗ್ಗೆ ಎಚ್ಚರಿಕೆಯಿಂದ ಇರಬೇಕು ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್​ ಹೇಳಿದ್ದಾರೆ.

ಇದನ್ನೂ ಓದಿ: ಗೋಲ್ಡ್ ಸ್ಮಗ್ಲಿಂಗ್ ಪ್ರಕರಣ: ಐಜಿಪಿ ರಾಘವೇಂದ್ರ ಸುಹಾಸ್​ಗೆ ಸಿಐಡಿಯಿಂದ ನೋಟಿಸ್ 

Published On - 11:13 am, Sat, 19 June 21

Follow Us
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?