AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಶದಲ್ಲಿ 24 ಗಂಟೆಯಲ್ಲಿ 60,753 ಹೊಸ ಕೊರೊನಾ ಕೇಸ್​​ಗಳು ದಾಖಲು; ಈ ಐದು ರಾಜ್ಯಗಳದ್ದೇ ಹೆಚ್ಚಿನ ಪಾಲು

ಮತ್ತೊಂದೆಡೆ ಕೊರೊನಾ ಲಸಿಕೆ ಅಭಿಯಾನ ಕೂಡ ಭರದಿಂದ ಸಾಗುತ್ತಿದೆ. ಇದುವರೆಗೆ 27,23,88,783 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಕಳೆದ 74 ದಿನಗಳಲ್ಲಿ ದೇಶದಲ್ಲಿ ಸಕ್ರಿಯ ಪ್ರಕರಣಗಳು ತುಂಬ ಕಡಿಮೆಯಾಗಿದ್ದು ಸಮಾಧಾನಕಾರ ಸಂಗತಿಯಾಗಿದೆ.

ದೇಶದಲ್ಲಿ 24 ಗಂಟೆಯಲ್ಲಿ 60,753 ಹೊಸ ಕೊರೊನಾ ಕೇಸ್​​ಗಳು ದಾಖಲು; ಈ ಐದು ರಾಜ್ಯಗಳದ್ದೇ ಹೆಚ್ಚಿನ ಪಾಲು
ಕೊವಿಡ್ 19
Follow us
TV9 Web
| Updated By: ಆಯೇಷಾ ಬಾನು

Updated on:Jun 20, 2021 | 8:07 AM

ಕೊವಿಡ್ 2ನೇ ಅಲೆ ಸ್ವಲ್ಪ ಮಟ್ಟಿಗೆ ತಗ್ಗುತ್ತಿದೆ. ಕಳೆದ 24 ಗಂಟೆಯಲ್ಲಿ 60,753 ಹೊಸ ಕೊರೊನಾ ಕೇಸ್​ಗಳು ದಾಖಲಾಗಿವೆ ಹಾಗೂ 1647 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ. ಒಂದೇ ದಿನದಲ್ಲಿ 97,743 ಜನರು ಕೊರೊನಾದಿಂದ ಚೇತರಿಸಿಕೊಂಡು ಆಸ್ಪತ್ರೆಗಳಿಂದ ಡಿಸ್​ಚಾರ್ಜ್​ ಆಗಿದ್ದಾರೆ. ಅಲ್ಲಿಗೆ ಇದುವರೆಗೆ ಗುಣಮುಖರಾದವರ ಸಂಖ್ಯೆ 2,86,78,390ಕ್ಕೆ ಏರಿಕೆಯಾಗಿದೆ. ಸದ್ಯ ದೇಶದಲ್ಲಿ ಕೊರೊನಾ ಚೇತರಿಕೆ ಪ್ರಮಾಣ ಶೇ.96.16ರಷ್ಟಿದೆ.

ದೇಶದಲ್ಲಿ ಕೊರೊನಾ ಸಕ್ರಿಯ ಪ್ರಕರಣಗಳು 7,60,019ರಷ್ಟಿದೆ. ಕಳೆದ 24ಗಂಟೆಯಲ್ಲಿ ದಾಖಲಾದ ಹೊಸ ಕೊರೊನಾ ಪ್ರಕರಣಗಳಲ್ಲಿ ಶೇ.69ರಷ್ಟು ಐದು ರಾಜ್ಯಗಳ ಪಾಲಾಗಿದೆ. ಅದರಲ್ಲೂ ಕೇರಳ ಒಂದೇ ರಾಜ್ಯದ ಪಾಲು ಶೇ.18.7ರಷ್ಟಿದೆ. ಸದ್ಯದ ಮಟ್ಟಿಗೆ ದೇಶದಲ್ಲಿ ಒಂದು ದಿನದಲ್ಲಿ ಹೆಚ್ಚು ಕೊರೊನಾ ಸೋಂಕಿನ ಪ್ರಕರಣಗಳು ದಾಖಲಾಗುತ್ತಿರುವ ರಾಜ್ಯ ಕೇರಳವೇ ಆಗಿದೆ. ಕೇರಳದಲ್ಲಿ ಕಳೆದ 24ಗಂಟೆಯಲ್ಲಿ 11,361, ಮಹಾರಾಷ್ಟ್ರದಲ್ಲಿ 9,798, ತಮಿಳುನಾಡಿನಲ್ಲಿ 8,633, ಆಂಧ್ರಪ್ರದೇಶದಲ್ಲಿ 6341 ಮತ್ತು ಕರ್ನಾಟಕದಲ್ಲಿ 5783 ಹೊಸ ಕೊರೊನಾ ಕೇಸ್​​ಗಳು ದಾಖಲಾಗಿದ್ದು, ಈ ಐದು ರಾಜ್ಯಗಳಲ್ಲೇ ಅತಿ ಹೆಚ್ಚು ಪ್ರಕರಣಗಳು ಪತ್ತೆಯಾಗುತ್ತಿವೆ. ಹಾಗೇ, ಒಂದೇ ದಿನದಲ್ಲಿ 1647 ಮಂದಿ ಸೋಂಕಿನಿಂದ ಮೃತಪಟ್ಟಿದ್ದು, ಅದರಲ್ಲಿ 648 ಸಾವು ಮಹಾರಾಷ್ಟ್ರದಿಂದ ಮತ್ತು 287 ತಮಿಳುನಾಡಿನಿಂದ ವರದಿಯಾಗಿದೆ.

ಮತ್ತೊಂದೆಡೆ ಕೊರೊನಾ ಲಸಿಕೆ ಅಭಿಯಾನ ಕೂಡ ಭರದಿಂದ ಸಾಗುತ್ತಿದೆ. ಇದುವರೆಗೆ 27,23,88,783 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಕಳೆದ 74 ದಿನಗಳಲ್ಲಿ ದೇಶದಲ್ಲಿ ಸಕ್ರಿಯ ಪ್ರಕರಣಗಳು ತುಂಬ ಕಡಿಮೆಯಾಗಿದ್ದು ಸಮಾಧಾನಕಾರ ಸಂಗತಿಯಾಗಿದೆ. ಮೊದಲನೇ ಅಲೆ ಕೊರೊನಾ ಸ್ವಲ್ಪ ಕಡಿಮೆಯಾಗುತ್ತಿದ್ದಂತೆ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ನಿರ್ಲಕ್ಷ್ಯ ಮಾಡಿದ್ದರಿಂದಲೇ ಎರಡನೇ ಅಲೆ ಕೊವಿಡ್​ ತುಂಬ ಬಾಧಿಸಿತು. ಇನ್ನು ಈ ಬಗ್ಗೆ ಎಚ್ಚರಿಕೆಯಿಂದ ಇರಬೇಕು ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್​ ಹೇಳಿದ್ದಾರೆ.

ಇದನ್ನೂ ಓದಿ: ಗೋಲ್ಡ್ ಸ್ಮಗ್ಲಿಂಗ್ ಪ್ರಕರಣ: ಐಜಿಪಿ ರಾಘವೇಂದ್ರ ಸುಹಾಸ್​ಗೆ ಸಿಐಡಿಯಿಂದ ನೋಟಿಸ್ 

Published On - 11:13 am, Sat, 19 June 21

6ಕ್ಕೆ ಆರೂ ವಿಷಯದಲ್ಲಿ ಫೇಲಾದ ಮಗನಿಗೆ ಕೇಕ್‌ ತಿನ್ನಿಸಿ ಧೈರ್ಯ ತುಂಬಿದ ಅಪ್ಪ
6ಕ್ಕೆ ಆರೂ ವಿಷಯದಲ್ಲಿ ಫೇಲಾದ ಮಗನಿಗೆ ಕೇಕ್‌ ತಿನ್ನಿಸಿ ಧೈರ್ಯ ತುಂಬಿದ ಅಪ್ಪ
ತಾಯಿಯ ಜೊತೆಯಲ್ಲೇ ಸನ್ಮಾನ; ಇದು ಚೈತ್ರಾ ಕುಂದಾಪುರ ಪಾಲಿನ ಹೆಮ್ಮೆಯ ಕ್ಷಣ
ತಾಯಿಯ ಜೊತೆಯಲ್ಲೇ ಸನ್ಮಾನ; ಇದು ಚೈತ್ರಾ ಕುಂದಾಪುರ ಪಾಲಿನ ಹೆಮ್ಮೆಯ ಕ್ಷಣ
ಬಿಜೆಪಿಯಿಂದ ಉಚ್ಚಾಟಿತ ಯತ್ನಾಳ್ ತನ್ನ ಅಸ್ತಿತ್ವ ಉಳಿಸಿಕೊಳ್ಳಬೇಕಿದೆ: ಸಚಿವ
ಬಿಜೆಪಿಯಿಂದ ಉಚ್ಚಾಟಿತ ಯತ್ನಾಳ್ ತನ್ನ ಅಸ್ತಿತ್ವ ಉಳಿಸಿಕೊಳ್ಳಬೇಕಿದೆ: ಸಚಿವ
ರಸ್ತೆಯಲ್ಲಿ ನಿಲ್ಲಿಸಿದ್ದ ಸ್ಕೂಟಿಯನ್ನೇ ತಳ್ಳಿಕೊಂಡು ಹೋದ ಗೂಳಿ!
ರಸ್ತೆಯಲ್ಲಿ ನಿಲ್ಲಿಸಿದ್ದ ಸ್ಕೂಟಿಯನ್ನೇ ತಳ್ಳಿಕೊಂಡು ಹೋದ ಗೂಳಿ!
ಕ್ಯಾನ್ಸರ್​ಗೀಡಾಗಿದ್ದ ಚಿರಂತ್ ಬಲಗೈ ಮೂಳೆ ಆಪರೇಷನ್ ಮೂಲಕ ತೆಗೆಯಲಾಗಿದೆ!
ಕ್ಯಾನ್ಸರ್​ಗೀಡಾಗಿದ್ದ ಚಿರಂತ್ ಬಲಗೈ ಮೂಳೆ ಆಪರೇಷನ್ ಮೂಲಕ ತೆಗೆಯಲಾಗಿದೆ!
‘ಕಲಾಮಾಧ್ಯಮ’ ಯಶಸ್ಸು ಕಂಡಿದ್ದು ರಾತ್ರೋರಾತ್ರಿ ಅಲ್ಲ; ಪರಮ್ ಕಷ್ಟದ ಹಾದಿ
‘ಕಲಾಮಾಧ್ಯಮ’ ಯಶಸ್ಸು ಕಂಡಿದ್ದು ರಾತ್ರೋರಾತ್ರಿ ಅಲ್ಲ; ಪರಮ್ ಕಷ್ಟದ ಹಾದಿ
ಗಂಗಾ ಎಕ್ಸ್‌ಪ್ರೆಸ್‌ವೇಯಲ್ಲಿ ವಾಯುಪಡೆಯಿಂದ ಯುದ್ಧವಿಮಾನಗಳ ತಾಲೀಮು
ಗಂಗಾ ಎಕ್ಸ್‌ಪ್ರೆಸ್‌ವೇಯಲ್ಲಿ ವಾಯುಪಡೆಯಿಂದ ಯುದ್ಧವಿಮಾನಗಳ ತಾಲೀಮು
ಶಿವಾನಂದ ಪಾಟೀಲ್ ರಾಜೀನಾಮೆ ಅಂಗೀಕರಿಸಲು ಬರಲ್ಲ: ಯುಟಿ ಖಾದರ್
ಶಿವಾನಂದ ಪಾಟೀಲ್ ರಾಜೀನಾಮೆ ಅಂಗೀಕರಿಸಲು ಬರಲ್ಲ: ಯುಟಿ ಖಾದರ್
ಪತ್ರದಲ್ಲಿ ಷರತ್ತುಗಳಿರಲ್ಲ, 2 ಸಾಲಿನ ಸಾರಾಂಶ ಮಾತ್ರ ಇರುತ್ತದೆ: ಯತ್ನಾಳ್
ಪತ್ರದಲ್ಲಿ ಷರತ್ತುಗಳಿರಲ್ಲ, 2 ಸಾಲಿನ ಸಾರಾಂಶ ಮಾತ್ರ ಇರುತ್ತದೆ: ಯತ್ನಾಳ್
ತನಿಖೆಯನ್ನು ಎನ್​ಐಎಗೆ ವಹಿಸುವಂತೆ ಅಮಿತ್ ಶಾರನ್ನು ಕೋರಿದ್ದೇನೆ: ಸಚಿವೆ
ತನಿಖೆಯನ್ನು ಎನ್​ಐಎಗೆ ವಹಿಸುವಂತೆ ಅಮಿತ್ ಶಾರನ್ನು ಕೋರಿದ್ದೇನೆ: ಸಚಿವೆ