AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Coronavirus cases in India: ಕಳೆದ 24 ಗಂಟೆಗಳಲ್ಲಿ 62,224 ಹೊಸ ಕೊವಿಡ್ ಪ್ರಕರಣ, 2542 ಮಂದಿ ಸಾವು

Covid 19: ಚೇತರಿಕೆ ದರ ಶೇ 95.80ಕ್ಕೆ ಏರಿಕೆ ಆಗಿದ್ದು  ಸಾಪ್ತಾಹಿಕ ಸಕಾರಾತ್ಮಕ ದರವು ಶೇ 5ಕ್ಕಿಂತ ಕಡಿಮೆಯಾಗಿದೆ. ಪ್ರಸ್ತುತ ಇದು ಶೇ 4.17ರಷ್ಟಿದೆ. ದೈನಂದಿನ ಸಕಾರಾತ್ಮಕತೆ ದರ 3.22%, ಸತತ 9 ದಿನಗಳವರೆಗೆ 5% ಕ್ಕಿಂತ ಕಡಿಮೆ ಎಂದು  ಆರೋಗ್ಯ ಸಚಿವಾಲಯ ಹೇಳಿದೆ.

Coronavirus cases in India: ಕಳೆದ 24 ಗಂಟೆಗಳಲ್ಲಿ 62,224 ಹೊಸ ಕೊವಿಡ್ ಪ್ರಕರಣ, 2542 ಮಂದಿ ಸಾವು
ಹಿರಿಯ ನಾಗರಿಕರು ಕೊವಿಡ್ ಲಸಿಕೆ ಸ್ವೀಕರಿಸುತ್ತಿರುವುದು
TV9 Web
| Edited By: |

Updated on:Jun 16, 2021 | 10:46 AM

Share

ದೆಹಲಿ: ಭಾರತದಲ್ಲಿ 62,224 ಹೊಸ ಕೊವಿಡ್ ಪ್ರಕರಣಗಳನ್ನು ವರದಿ ಆಗಿದ್ದು ಕಳೆದ 24 ಗಂಟೆಗಳಲ್ಲಿ 2,542 ಸಾವುಗಳು ಸಂಭವಿಸಿವೆ. ಇದರೊಂದಿಗೆ, ದೇಶದ ಒಟ್ಟಾರೆ ಸೋಂಕಿತರ ಸಂಖ್ಯೆ 2.96 ಕೋಟಿಗೆ ಏರಿದರೆ, ಸಾವಿನ ಸಂಖ್ಯೆ 3.62 ಲಕ್ಷಕ್ಕೆ ಏರಿದೆ. ಕೇರಳದಲ್ಲಿ ಅತೀ ಹೆಚ್ಚು ಪ್ರಕರಣ (12,246 ಹೊಸ ಪ್ರಕರಣ) ವರದಿ ಆಗಿದೆ.

ಖಾಸಗಿ ಆಸ್ಪತ್ರೆಗಳಲ್ಲಿ ಕೊವಿಡ್ 19 ಲಸಿಕೆಗಳ ಹೆಚ್ಚಿನ ಬೆಲೆಗಳ ಕುರಿತ ಚರ್ಚೆಯ ಮಧ್ಯೆ, ಲಸಿಕೆ ತಯಾರಕ ಭಾರತ್ ಬಯೋಟೆಕ್ ಅವರು ಕೊವಾಕ್ಸಿನ್ ಅನ್ನು ಸರ್ಕಾರಕ್ಕೆ ಪೂರೈಸುತ್ತಿರುವ ದರವು “ದೀರ್ಘಾವಧಿಯಲ್ಲಿ ಸಮರ್ಥನೀಯವಲ್ಲ” ಮತ್ತು ಖಾಸಗಿ ಮಾರುಕಟ್ಟೆಗಳಲ್ಲಿ ಭೇದಾತ್ಮಕ ಬೆಲೆ ಎಂದು ಹೇಳಿದ್ದಾರೆ.

ಚೇತರಿಕೆ ದರ ಶೇ 95.80ಕ್ಕೆ ಏರಿಕೆ ಆಗಿದ್ದು  ಸಾಪ್ತಾಹಿಕ ಸಕಾರಾತ್ಮಕ ದರವು ಶೇ 5ಕ್ಕಿಂತ ಕಡಿಮೆಯಾಗಿದೆ. ಪ್ರಸ್ತುತ ಇದು ಶೇ 4.17ರಷ್ಟಿದೆ. ದೈನಂದಿನ ಸಕಾರಾತ್ಮಕತೆ ದರ 3.22%, ಸತತ 9 ದಿನಗಳವರೆಗೆ 5% ಕ್ಕಿಂತ ಕಡಿಮೆ ಎಂದು  ಆರೋಗ್ಯ ಸಚಿವಾಲಯ ಹೇಳಿದೆ.

ಏತನ್ಮಧ್ಯೆ, ಕೊವಿಶೀಲ್ಡ್ ಲಸಿಕೆ ಡೋಸ್ ನಡುವಿನ ಅಂತರವನ್ನು 4-6 ವಾರಗಳಿಂದ 12-16 ವಾರಗಳಿಗೆ ಹೆಚ್ಚಿಸುವ ನಿರ್ಧಾರವು “ಅಡೆನೊವೆಕ್ಟರ್ ಲಸಿಕೆಗಳ ವರ್ತನೆಗೆ ಸಂಬಂಧಿಸಿದ ಮೂಲಭೂತ ವೈಜ್ಞಾನಿಕ ಕಾರಣ” ದಲ್ಲಿದೆ ಎಂದು ರಾಷ್ಟ್ರೀಯ ತಾಂತ್ರಿಕ ಸಲಹಾ ಹೇಳಿದೆ.

ಪಿಐಬಿ ಮಂಗಳವಾರ ಬಿಡುಗಡೆ ಮಾಡಿದ ಫ್ಯಾಕ್ಟ್-ಚೆಕ್ “ಆನ್‌ಲೈನ್ ನೋಂದಣಿ ಮೂಲಕ ವ್ಯಾಕ್ಸಿನೇಷನ್ ಗಾಗಿ ಪೂರ್ವ-ನೋಂದಣಿ ಮತ್ತು ಲಸಿಕೆ ಸೇವೆಗಳನ್ನು ಪಡೆಯಲು ಮೊದಲೇ ಕಾಯ್ದಿರಿಸುವುದು ಕಡ್ಡಾಯವಲ್ಲ” ಎಂದು ಹೇಳಿದೆ.

ಕೊವಿನ್ ಅಪ್ಲಿಕೇಶನ್‌ನಲ್ಲಿ ನೋಂದಾಯಿಸುವುದು “ನೋಂದಣಿಯ ಹಲವು ವಿಧಾನಗಳಲ್ಲಿ ಒಂದಾಗಿದೆ” ಎಂದು ಸ್ಪಷ್ಟಪಡಿಸಿದ ಪಿಐಬಿ ಬ, “18 ವರ್ಷ ಅಥವಾ ಅದಕ್ಕಿಂತ ಹೆಚ್ಚಿನ ವಯಸ್ಸಿನ ಯಾರಾದರೂ ನೇರವಾಗಿ ಹತ್ತಿರದ ವ್ಯಾಕ್ಸಿನೇಷನ್ ಕೇಂದ್ರಕ್ಕೆ ಹೋಗಬಹುದು, ಅಲ್ಲಿ ವ್ಯಾಕ್ಸಿನೇಟರ್ ಆನ್-ಸೈಟ್ ನೋಂದಣಿಯನ್ನು ಮಾಡಿ ಲಸಿಕೆ ಪಡೆಯಬಹುದು ಎಂದು ಹೇಳಿದೆ.

ಒಟ್ಟಾರೆಯಾಗಿ, 26,19,72,014 ಕೊವಿಡ್  ಲಸಿಕೆ ಡೋಸ್  ರಾಷ್ಟ್ರವ್ಯಾಪಿ ವ್ಯಾಕ್ಸಿನೇಷನ್ ಡ್ರೈವ್ ಅಡಿಯಲ್ಲಿ ನೀಡಲಾಗಿದೆ.

ಭಾರತದ ಕೊವಿಡ್ ಪ್ರಕರಣಗಳ ಸಂಖ್ಯೆ ಆಗಸ್ಟ್ 7 ರಂದು 20 ಲಕ್ಷ, ಆಗಸ್ಟ್ 23 ರಂದು 30 ಲಕ್ಷ, ಸೆಪ್ಟೆಂಬರ್ 5 ರಂದು 40 ಲಕ್ಷ ಮತ್ತು ಸೆಪ್ಟೆಂಬರ್ 16 ರಂದು 50 ಲಕ್ಷ ದಾಟಿದೆ. ಇದು ಸೆಪ್ಟೆಂಬರ್ 28 ರಂದು 60 ಲಕ್ಷ ದಾಟಿದೆ, ಅಕ್ಟೋಬರ್ 11 ರಂದು 70 ಲಕ್ಷ ದಾಟಿದೆ. ಅಕ್ಟೋಬರ್ 29 ರಂದು 80 ಲಕ್ಷ, ನವೆಂಬರ್ 20 ರಂದು 90 ಲಕ್ಷ ಮತ್ತು ಡಿಸೆಂಬರ್ 19 ರಂದು ಒಂದು ಕೋಟಿ ಗಡಿ ದಾಟಿದೆ. ಭಾರತವು ಮೇ 4 ರಂದು 2 ಕೋಟಿಯ  ಮೈಲಿಗಲ್ಲು ದಾಟಿದೆ.

2,542 ಹೊಸ ಸಾವು ಪ್ರಕರಣಗಳಲ್ಲಿ   ಮಹಾರಾಷ್ಟ್ರದಿಂದ 1,458, ತಮಿಳುನಾಡಿನಿಂದ 267, ಕೇರಳದಿಂದ 166 ಮತ್ತು ಕರ್ನಾಟಕದಿಂದ 115 ಸಾವು ಪ್ರಕರಣಗಳು ಸೇರಿವೆ

ದೇಶದಲ್ಲಿ ಈವರೆಗೆ ಒಟ್ಟು 3,79,573 ಸಾವುಗಳು ಸಂಭವಿಸಿವೆ. ಮಹಾರಾಷ್ಟ್ರದಿಂದ 1,14,154, ಕರ್ನಾಟಕದಿಂದ 33,148, ತಮಿಳುನಾಡಿನಿಂದ 30,068, ದೆಹಲಿಯಿಂದ 24,851, ಉತ್ತರ ಪ್ರದೇಶದಿಂದ 21,914, ಪಶ್ಚಿಮ ಬಂಗಾಳದಿಂದ 17,049, ಪಂಜಾಬ್‌ನಿಂದ 15,650 ಮತ್ತು 13,342 ಪ್ರಕರಣಗಳು ಛತ್ತೀಸಗಡದಿಂದ ವರದಿ ಆಗಿದೆ.

70 ರಷ್ಟು ಸಾವುಗಳು ಕೊಮೊರ್ಬಿಡಿಟಿಗಳಿಂದಾಗಿ ಸಂಭವಿಸಿವೆ ಎಂದು ಆರೋಗ್ಯ ಸಚಿವಾಲಯ ಒತ್ತಿಹೇಳಿತು.

ಕೇರಳದಲ್ಲಿ ಕೊವಿಡ್ ನಿರ್ಬಂಧ ಸಡಿಲಿಕೆ ಕೊವಿಡ್ -19 ಸಾಂಕ್ರಾಮಿಕ ರೋಗದಿಂದಾಗಿ ಹೇರಿದ ಕೆಲವು ನಿರ್ಬಂಧಗಳನ್ನು ಮತ್ತಷ್ಟು ಸಡಿಲಿಸಲು ಕೇರಳ ಸರ್ಕಾರ ಮಂಗಳವಾರ ನಿರ್ಧರಿಸಿದೆ. ವಿವರಗಳು ಇಲ್ಲಿವೆ. ಅಗತ್ಯ ವಸ್ತುಗಳನ್ನು ಮಾರಾಟ ಮಾಡುವ ಅಂಗಡಿಗಳು ಬೆಳಿಗ್ಗೆ 7 ರಿಂದ ಸಂಜೆ 7 ರವರೆಗೆ ಕಾರ್ಯನಿರ್ವಹಿಸಬಹುದು.  ಆ್ಯಪ್ ಮೂಲಕ ಮದ್ಯ ಮಾರಾಟ, ಲಾಟರಿ ಟಿಕೆಟ್ ಮಾರಾಟಕ್ಕೆ ಅವಕಾಶ, ಬ್ಯಾಂಕುಗಳು ವಾರದಲ್ಲಿ 3 ದಿನ ತೆರೆಯಲು, ಸಾರ್ವಜನಿಕ ಸಾರಿಗೆಯನ್ನು ನಿರ್ಬಂಧಿತ ರೀತಿಯಲ್ಲಿ ತೆರೆಯಲು ಅವಕಾಶ. ಪರೀಕ್ಷೆಗಳಿಗೆ ಅನುಮತಿ ನೀಡಲಾಗುವುದಿಲ್ಲ.  ಕೇಂದ್ರ ಮತ್ತು ರಾಜ್ಯ ಸರ್ಕಾರಿ ಸಂಸ್ಥೆಗಳು, ನಿಗಮಗಳು 25% ಸಿಬ್ಬಂದಿಗಳೊಂದಿಗೆ ಕಾರ್ಯನಿರ್ವಹಿಸಬಹುದು.  ಭಾನುವಾರ, ಶನಿವಾರ ರಾಜ್ಯವ್ಯಾಪಿ ಲಾಕ್‌ಡೌನ್.

ಪ್ರವಾಸೋದ್ಯಮ ಚಟುವಟಿಕೆಗಳು ಮತ್ತು ಮಾಲ್‌ಗಳು ಮತ್ತು ಇತರ ಒಳಾಂಗಣ ಸ್ಥಳಗಳನ್ನು ತೆರೆಯಲು ಅನುಮತಿ ಇಲ್ಲ.  ಸಾರ್ವಜನಿಕ ಕೂಟಗಳನ್ನು ನಿಷೇಧಿಸಲಾಗಿದೆ.  ರೆಸ್ಟೋರೆಂಟ್‌ಗಳಲ್ಲಿ ಕುಳಿತು ಊಟದ ಸೇವೆಗಳಿಲ್ಲ. ಟೇಕ್ಅವೇ ಮತ್ತು ಹೋಮ್ ಡೆಲಿವರಿ ಮಾತ್ರ ಅನುಮತಿಸಲಾಗಿದೆ.

Published On - 10:40 am, Wed, 16 June 21

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?