AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Coronavirus cases in India: ದೇಶದಲ್ಲಿ ಕೊವಿಡ್ ಪ್ರಕರಣಗಳ ಸಂಖ್ಯೆ ಇಳಿಮುಖ, 37000 ಹೊಸ ಪ್ರಕರಣ ಪತ್ತೆ

Covid 19: ಸಕ್ರಿಯ ಪ್ರಕರಣಗಳು 5.52 ಲಕ್ಷಕ್ಕೆ ಇಳಿದಿದ್ದರೆ, 2.93 ಕೋಟಿಗೂ ಹೆಚ್ಚು ಜನರು ಚೇತರಿಸಿಕೊಂಡಿದ್ದಾರೆ. 907 ಹೊಸ ಸಾವುಗಳೊಂದಿಗೆ ಸಾವಿನಸಂಖ್ಯೆ 3.97 ಲಕ್ಷ ಸಂಖ್ಯೆಯಲ್ಲಿವೆ. ಒಂದೇ ಒಂದು ರಾಜ್ಯ ಕೂಡಾ 10,000 ಕ್ಕೂ ಹೆಚ್ಚು ಪ್ರಕರಣಗಳನ್ನು ವರದಿ ಮಾಡಿಲ್ಲ.

Coronavirus cases in India: ದೇಶದಲ್ಲಿ ಕೊವಿಡ್ ಪ್ರಕರಣಗಳ ಸಂಖ್ಯೆ ಇಳಿಮುಖ, 37000 ಹೊಸ ಪ್ರಕರಣ ಪತ್ತೆ
ಕೊವಿಡ್ ಲಸಿಕೆ ಪಡೆಯುತ್ತಿರುವ ಮಹಿಳೆ
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on:Jun 29, 2021 | 10:33 AM

Share

ದೆಹಲಿ: ಕಳೆದ 24 ಗಂಟೆಗಳಲ್ಲಿ ಭಾರತವು 37,566 ಹೊಸ ಕೊವಿಡ್ -19 ಪ್ರಕರಣಗಳನ್ನು ದಾಖಲಿಸಿದ್ದು, ದೇಶದ ಒಟ್ಟು ಮೊತ್ತ 3.03 ಕೋಟಿಗೆ ತಲುಪಿದೆ. ಇದು ಮಾರ್ಚ್ 17 ರ ನಂತರದ ಅತಿ ಕಡಿಮೆ ಏಕದಿನ ಏರಿಕೆ ಮತ್ತು 102 ದಿನಗಳ ನಂತರ 40,000ಕ್ಕಿಂತ ಕಡಿಮೆ ದೈನಂದಿನ ಪ್ರಕರಣಗಳು ವರದಿಯಾದ ದಿನವಾಗಿದೆ. ಈ ಪೈಕಿ ಸಕ್ರಿಯ ಪ್ರಕರಣಗಳು 5.52 ಲಕ್ಷಕ್ಕೆ ಇಳಿದಿದ್ದರೆ, 2.93 ಕೋಟಿಗೂ ಹೆಚ್ಚು ಜನರು ಚೇತರಿಸಿಕೊಂಡಿದ್ದಾರೆ. 907 ಹೊಸ ಸಾವುಗಳೊಂದಿಗೆ ಸಾವಿನಸಂಖ್ಯೆ 3.97 ಲಕ್ಷ ಸಂಖ್ಯೆಯಲ್ಲಿವೆ. ಒಂದೇ ಒಂದು ರಾಜ್ಯ ಕೂಡಾ 10,000 ಕ್ಕೂ ಹೆಚ್ಚು ಪ್ರಕರಣಗಳನ್ನು ವರದಿ ಮಾಡಿಲ್ಲ. ಕೇರಳದಲ್ಲಿ 8,063 ಪ್ರಕರಣಗಳು, ಮಹಾರಾಷ್ಟ್ರದಲ್ಲಿ 6,727 ಪ್ರಕರಣಗಳು ದಾಖಲಾಗಿವೆ.

ವಿಜ್ಞಾನಿಗಳು ಡೆಲ್ಟಾ ಪ್ಲಸ್ ರೂಪಾಂತರವನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ – ಡೆಲ್ಟಾ ರೂಪಾಂತರದ ರೂಪಾಂತರಿತ ಆವೃತ್ತಿ. ಅದರ ಹರಡುವಿಕೆ ಮತ್ತು ಲಸಿಕೆ ಪರಿಣಾಮಕಾರಿತ್ವವನ್ನು ಪರೀಕ್ಷಿಸಲು ಲ್ಯಾಬ್ ಪರೀಕ್ಷಾ ಫಲಿತಾಂಶಗಳು ನಡೆಯುತ್ತಿವೆ.

ಜೂನ್ 28 ರವರೆಗೆ ಒಟ್ಟು 40,81,39,287 ಮಾದರಿಗಳನ್ನು ಪರೀಕ್ಷಿಸಲಾಗಿದೆ. ಅದರಲ್ಲಿ 17,68,008 ಮಾದರಿಗಳನ್ನು ನಿನ್ನೆ ಪರೀಕ್ಷಿಸಲಾಯಿತು ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಟ್ವೀಟ್ ಮಾಡಿದೆ.

ದೈನಂದಿನ ಸಕಾರಾತ್ಮಕತೆಯ ಪ್ರಮಾಣವು ಶೇಕಡಾ 2.12 ಕ್ಕೆ ಇಳಿದಿದೆ. ಸತತ 22 ದಿನಗಳಿಂದ ಇದು ಶೇಕಡಾ 5 ಕ್ಕಿಂತ ಕಡಿಮೆಯಾಗಿದೆ ಎಂದು ಸಚಿವಾಲಯ ತಿಳಿಸಿದೆ. ಸಾಪ್ತಾಹಿಕ ಸಕಾರಾತ್ಮಕ ದರವು ಶೇಕಡಾ 2.74 ಕ್ಕೆ ಇಳಿದಿದೆ.

ಚೇತರಿಕೆಗಳು ಸತತ 47 ನೇ ದಿನವೂ ದೈನಂದಿನ ಹೊಸ ಪ್ರಕರಣಗಳನ್ನು ಮೀರಿಸುತ್ತಿವೆ. ರೋಗದಿಂದ ಚೇತರಿಸಿಕೊಂಡವರ ಸಂಖ್ಯೆ 2,93,66,601 ಕ್ಕೆ ಏರಿದರೆ, ಸಾವಿನ ಪ್ರಮಾಣವು ಶೇಕಡಾ 1.31 ರಷ್ಟಿದೆ ಎಂದು ಡೇಟಾ ತಿಳಿಸಿದೆ.

907 ಹೊಸ ಸಾವು ಪ್ರಕರಣಗಳಲ್ಲಿ ಮಹಾರಾಷ್ಟ್ರದಿಂದ 287, ಕೇರಳದಿಂದ 110, ತಮಿಳುನಾಡಿನಿಂದ 98 ಮತ್ತು ಕರ್ನಾಟಕದಿಂದ 93 ಮಂದಿ ಸೇರಿದ್ದಾರೆ.

ದೇಶದಲ್ಲಿ ಈವರೆಗೆ ಒಟ್ಟು 3,97,637 ಸಾವುಗಳು ಸಂಭವಿಸಿವೆ. ಇದರಲ್ಲಿ ಮಹಾರಾಷ್ಟ್ರದಿಂದ 1,21,573, ಕರ್ನಾಟಕದಿಂದ 34,836, ತಮಿಳುನಾಡಿನಿಂದ 32,399, ದೆಹಲಿಯಿಂದ 24,967, ಉತ್ತರಪ್ರದೇಶದಿಂದ 22,559, ಪಶ್ಚಿಮ ಬಂಗಾಳದಿಂದ 17,644, ಪಂಜಾಬ್​​ನಿಂದ 16,011 ಮತ್ತು, ಛತ್ತೀಸ್‌ಗಡದಿಂದ 13,437 ಸಾವು ಪ್ರಕರಣ ಸೇರಿವೆ.

70 ರಷ್ಟು ಸಾವುಗಳು ಕೊಮೊರ್ಬಿಡಿಟಿಗಳಿಂದಾಗಿ ಸಂಭವಿಸಿವೆ ಎಂದು ಆರೋಗ್ಯ ಸಚಿವಾಲಯ ಒತ್ತಿಹೇಳಿತು.

“ನಮ್ಮ ಅಂಕಿಅಂಶಗಳನ್ನು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಯೊಂದಿಗೆ ಹೊಂದಾಣಿಕೆ ಮಾಡಲಾಗುತ್ತಿದೆ” ಎಂದು ಸಚಿವಾಲಯವು ತನ್ನ ವೆಬ್‌ಸೈಟ್‌ನಲ್ಲಿ ತಿಳಿಸಿದೆ, ರಾಜ್ಯವಾರು ಅಂಕಿಅಂಶಗಳ ವಿತರಣೆಯು ಮತ್ತಷ್ಟು ಪರಿಶೀಲನೆಗೆ ಒಳಪಟ್ಟಿರುತ್ತದೆ.

ಏತನ್ಮಧ್ಯೆ, ದೆಹಲಿ ವಿಶ್ವವಿದ್ಯಾಲಯವು ಜುಲೈ ಮೂರನೇ ವಾರದಲ್ಲಿ ಪ್ರವೇಶ ಪರೀಕ್ಷೆ ಆಧಾರಿತ ಮತ್ತು ಸ್ನಾತಕೋತ್ತರ ಕೋರ್ಸ್‌ಗಳಿಗೆ ಪ್ರವೇಶ ಪಡೆಯಲು ನೋಂದಣಿ ಪ್ರಾರಂಭಿಸುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: Karnataka Covid Update: ಕರ್ನಾಟಕದಲ್ಲಿ ಇಂದು 2,576 ಜನರಿಗೆ ಕೊವಿಡ್ ದೃಢ, 93 ಜನರು ನಿಧನ

ಇದನ್ನೂ ಓದಿ: ಕೊವಿಡ್ ಬಾಧಿತ ವಲಯಗಳಿಗೆ 1.1 ಲಕ್ಷ ಕೋಟಿ ಸಾಲ ಖಾತರಿ ಯೋಜನೆ ಘೋಷಿಸಿದ ನಿರ್ಮಲಾ ಸೀತಾರಾಮನ್

(India recorded less then 40,000 daily coronavirus cases after 102 days and 907 deaths in the 24 hour)

Published On - 10:24 am, Tue, 29 June 21

ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ