AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

India Covid Updates: ಭಾರತದಲ್ಲಿ ಹೊಸದಾಗಿ 10,158 ಮಂದಿಗೆ ಕೊರೊನಾ ಸೋಂಕು, ಪ್ರಕರಣಗಳು ನಿನ್ನೆಗಿಂತ ಶೇ.30ರಷ್ಟು ಹೆಚ್ಚಳ

ಭಾರತದಲ್ಲಿ ಏಪ್ರಿಲ್ 12ಕ್ಕೆ ಹೋಲಿಸಿದರೆ ಒಂದೇ ದಿನದಲ್ಲಿ 3 ಸಾವಿರಕ್ಕಿಂತ ಅಧಿಕ ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. ದೇಶದಲ್ಲಿ 10,150 ಮಂದಿಗೆ ಹೊಸದಾಗಿ ಸೋಂಕು ತಗುಲಿದೆ

India Covid Updates: ಭಾರತದಲ್ಲಿ ಹೊಸದಾಗಿ 10,158 ಮಂದಿಗೆ ಕೊರೊನಾ ಸೋಂಕು, ಪ್ರಕರಣಗಳು ನಿನ್ನೆಗಿಂತ ಶೇ.30ರಷ್ಟು ಹೆಚ್ಚಳ
ಕೊರೊನಾವೈರಸ್
ನಯನಾ ರಾಜೀವ್
|

Updated on: Apr 13, 2023 | 10:15 AM

Share

ಭಾರತದಲ್ಲಿ ಏಪ್ರಿಲ್ 12ಕ್ಕೆ ಹೋಲಿಸಿದರೆ ಒಂದೇ ದಿನದಲ್ಲಿ 3 ಸಾವಿರಕ್ಕಿಂತ ಅಧಿಕ ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. ದೇಶದಲ್ಲಿ 10,150 ಮಂದಿಗೆ ಹೊಸದಾಗಿ ಸೋಂಕು ತಗುಲಿದೆ.ಆರೋಗ್ಯ ಸಚಿವಾಲಯದ ಅಂಕಿ ಅಂಶಗಳ ಪ್ರಕಾರ, ಸಕ್ರಿಯ ಸೋಂಕಿತರ ಸಂಖ್ಯೆ 44,998 ಇದೆ, ಬುಧವಾರ ದೇಶದಲ್ಲಿ 7,830 ಮಂದಿಗೆ ಕೊರೊನಾ ಸೋಂಕು ತಗುಲಿತ್ತು. ಮಂಗಳವಾರ 5,675 ಮಂದಿ ಸೋಂಕಿಗೆ ತುತ್ತಾಗಿದ್ದರು. ಇದೀಗ ಸೋಂಕು ಬಹುಬೇಗ ಎಲ್ಲ ಕಡೆ ಹರಡುತ್ತಿದೆ.

ದೈನಂದಿನ ಧನಾತ್ಮಕತೆಯ ದರ ಶೇ.4.42ರಷ್ಟಿದ್ದರೆ, ವಾರದ ಧನಾತ್ಮಕತೆಯ ದರ ಶೇ. 4.02ರಷ್ಟಿದೆ. ಸಕ್ರಿಯ ಪ್ರಕರಣಗಳು ಈಗ ಒಟ್ಟು ಸೋಂಕುಗಳ ಶೇ.0.10ಯಷ್ಟಿದೆ. ರಾಷ್ಟ್ರವ್ಯಾಪಿ ಕೋವಿಡ್​-19 ಚೇತರಿಕೆ ದರವು ಶೇ.98.71ರಷ್ಟಿದೆ, ಸಾವಿನ ಪ್ರಮಾಣ ಶೇ.1.19ರಷ್ಟಿದೆ. ರೋಗದಿಂದ ಚೇತರಿಸಿಕೊಂಡವರ ಸಂಖ್ಯೆ 4,42,10,127ಕ್ಕೆ ಏರಿಕೆಯಾಗಿದೆ.

ಮತ್ತಷ್ಟು ಓದಿ: India Covid Updates: ಭಾರತದಲ್ಲಿ 223 ದಿನಗಳಲ್ಲೇ ಅಧಿಕ ಕೊರೊನಾ ಪ್ರಕರಣಗಳು ಪತ್ತೆ, 7,830 ಮಂದಿಗೆ ಸೋಂಕು

ದೇಶದಲ್ಲಿ 220.66 ಕೋಟಿ ಕೋವಿಡ್ ಲಸಿಕೆಗಳನ್ನು ನೀಡಲಾಗಿದೆ. ದೆಹಲಿ ಆರೋಗ್ಯ ಇಲಾಖೆ ಹೊರಡಿಸಿದ ದೈನಂದಿನ ಬುಲೆಟಿನ್ ಪ್ರಕಾರ, ರಾಷ್ಟ್ರ ರಾಜಧಾನಿ ಬುಧವಾರ 1,149 ಹೊಸ ಕೊರೊನಾವೈರಸ್ ಪ್ರಕರಣಗಳನ್ನು ವರದಿ ಮಾಡಿದೆ, ಮಂಗಳವಾರದಿಂದ 980 ಪ್ರಕರಣಗಳು ವರದಿಯಾಗಿವೆ. ದೆಹಲಿ ಆರೋಗ್ಯ ಇಲಾಖೆಯ ಪ್ರಕಾರ, ರಾಷ್ಟ್ರ ರಾಜಧಾನಿಯಲ್ಲಿ ಒಂದು ಸಾವು ವರದಿಯಾಗಿದೆ ಆದರೆ ಸಾವಿಗೆ ಪ್ರಾಥಮಿಕ ಕಾರಣ ಕೋವಿಡ್ ಅಲ್ಲ. ಪಾಸಿಟಿವಿಟಿ ದರವು 23.8 ಪ್ರತಿಶತದಷ್ಟಿದೆ.

ಸೋಮವಾರ, ಸಾರ್ವಜನಿಕ ಮತ್ತು ಖಾಸಗಿ ಆರೋಗ್ಯ ಸೌಲಭ್ಯಗಳಲ್ಲಿ ತುರ್ತು ಕೋವಿಡ್ -19 ಪರಿಸ್ಥಿತಿಯ ಸಿದ್ಧತೆಯನ್ನು ಪರಿಶೀಲಿಸಲು ರಾಷ್ಟ್ರವ್ಯಾಪಿ ಅಣಕು ಡ್ರಿಲ್‌ಗಳನ್ನು ನಡೆಸಲಾಯಿತು. ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಅವರು ಕೆಲವು ಆಸ್ಪತ್ರೆಗಳಲ್ಲಿ ಅಣಕು ಡ್ರಿಲ್‌ಗಳನ್ನು ಮೇಲ್ವಿಚಾರಣೆ ನಡೆಸಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ