AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಶದಲ್ಲಿಂದು 1150 ಹೊಸ ಕೊರೊನಾ ಕೇಸ್​ಗಳು ದಾಖಲು; 4 ಮಂದಿ ಸಾವು, 11 ಸಾವಿರಕ್ಕೂ ಹೆಚ್ಚು ಸಕ್ರಿಯ ಪ್ರಕರಣಗಳು

ದೇಶದಲ್ಲಿ ಏಪ್ರಿಲ್​ 1ರಿಂದ ಕೊರೊನಾ ನಿಯಂತ್ರಣ ನಿರ್ಬಂಧಗಳನ್ನೆಲ್ಲ ತೆರವುಗೊಳಿಸಲಾಗಿದೆ. ಅದಾದ ಮೇಲೆ ದೆಹಲಿ, ಮಿಜೋರಾಂ, ತಮಿಳುನಾಡು ಸೇರಿ ಕೆಲವು ರಾಜ್ಯಗಳಲ್ಲಿ ಮತ್ತೆ ನಿಧಾನಕ್ಕೆ ಕೊರೊನಾ ಏರಿಕೆಯಾಗುತ್ತಿದೆ.

ದೇಶದಲ್ಲಿಂದು 1150 ಹೊಸ ಕೊರೊನಾ ಕೇಸ್​ಗಳು ದಾಖಲು; 4 ಮಂದಿ ಸಾವು, 11 ಸಾವಿರಕ್ಕೂ ಹೆಚ್ಚು ಸಕ್ರಿಯ ಪ್ರಕರಣಗಳು
ಸಾಂಕೇತಿಕ ಚಿತ್ರ
TV9 Web
| Edited By: |

Updated on:Apr 17, 2022 | 10:09 AM

Share

ದೇಶದಲ್ಲಿ ಕಳೆದ 24ಗಂಟೆಯಲ್ಲಿ 1,150 ಹೊಸ ಕೊರೊನಾ ಪ್ರಕರಣಗಳು ದಾಖಲಾಗಿದ್ದು, ಒಟ್ಟಾರೆ ಕೊರೊನಾ ಸೋಂಕಿತರ ಸಂಖ್ಯೆ 4,30,42,097ಕ್ಕೆ ಏರಿಕೆಯಾಗಿದೆ. ಸದ್ಯ ಸಕ್ರಿಯ ಪ್ರಕರಣಗಳ ಸಂಖ್ಯೆ 11,558 ಇರುವುದಾಗಿ ಕೇಂದ್ರ ಆರೋಗ್ಯ ಇಲಾಖೆ ತಿಳಿಸಿದೆ. ಹಾಗೇ, 24ಗಂಟೆಯಲ್ಲಿ ನಾಲ್ಕು ಮಂದಿ ಮೃತಪಟ್ಟಿದ್ದು, ಒಟ್ಟಾರೆ ಸಾವಿನ ಸಂಖ್ಯೆ 5,21,751ಕ್ಕೆ ಏರಿಕೆಯಾಗಿದೆ. ದೈನಂದಿನ ಪಾಸಿಟಿವಿಟಿ ಪ್ರಮಾಣದ ಶೇ. 0.31 ಮತ್ತು ವಾರದ ಪಾಸಿಟಿವಿಟಿ ರೇಟ್​ ಶೇ.0.27ರಷ್ಟಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ದೆಹಲಿಯಲ್ಲಿ ಕೊವಿಡ್​ 19 ಸೋಂಕು ಒಂದೇ ಸಮನೆ ಏರಿಕೆಯಾಗುತ್ತಿದೆ. ಅಲ್ಲೀಗ ಪಾಸಿಟಿವಿಟಿ ರೇಟ್​ ಶೇ.5.33ರಷ್ಟಿದೆ. ಇಂದು ಒಂದೇ ದಿನ ಅಲ್ಲಿ 461 ಹೊಸ ಕೇಸ್​​ಗಳು ದಾಖಲಾಗಿವೆ. ನಿನ್ನೆಗೆ ಹೋಲಿಸಿದರೆ ಇಂದು ಶೇ.26ರಷ್ಟು ಹೆಚ್ಚಳವಾಗಿದೆ. ಶಾಲೆಗಳಿಗೆ ಹೋಗುತ್ತಿರುವ ಮಕ್ಕಳಿಗೆ ಕೊರೊನಾ ತಗುಲುತ್ತಿದ್ದು ಆತಂಕಕ್ಕೀಡಾಗಿದೆ. ಸದ್ಯ ಶಾಲೆಗಳನ್ನು ಮುಚ್ಚುವುದು ಬೇಡ, ಪ್ರಕರಣಗಳ ಸಂಖ್ಯೆ ಹೆಚ್ಚಾದರೆ ಬಂದ್ ಮಾಡೋಣ ಎಂದು ದೆಹಲಿ ಉಪಮುಖ್ಯಮಂತ್ರಿ ತಿಳಿಸಿದ್ದಾರೆ.

ದೇಶದಲ್ಲಿ ಏಪ್ರಿಲ್​ 1ರಿಂದ ಕೊರೊನಾ ನಿಯಂತ್ರಣ ನಿರ್ಬಂಧಗಳನ್ನೆಲ್ಲ ತೆರವುಗೊಳಿಸಲಾಗಿದೆ. ಅದಾದ ಮೇಲೆ ದೆಹಲಿ, ಮಿಜೋರಾಂ, ತಮಿಳುನಾಡು ಸೇರಿ ಕೆಲವು ರಾಜ್ಯಗಳಲ್ಲಿ ಮತ್ತೆ ನಿಧಾನಕ್ಕೆ ಕೊರೊನಾ ಏರಿಕೆಯಾಗುತ್ತಿದೆ. ಈ ಮಧ್ಯೆ ಕೊರೊನಾ ಲಸಿಕೆ ಮುನ್ನೆಚ್ಚರಿಕಾ ಡೋಸ್​​ ಕೂಡ ನೀಡಲಾಗುತ್ತಿದೆ. ಕೊರೊನಾ ನಿಯಂತ್ರಣ ನಿರ್ಬಂಧಗಳನ್ನು ತೆಗೆದುಹಾಕಲಾಗುತ್ತಿದ್ದಂತೆ ಜನರು ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್​ ಧರಿಸುವುದನ್ನೂ ಬಿಡುತ್ತಿದ್ದಾರೆ. ಹಬ್ಬಗಳು, ಉತ್ಸವ, ಜಾತ್ರೆಗಳಲ್ಲಿ ಭರ್ಜರಿ ಜನ ಸೇರುತ್ತಿದ್ದಾರೆ. ಹೀಗಾಗಿ ಮತ್ತೆ ನಿಧಾನವಾಗಿ ಕೊರೊನಾ ಸೋಂಕಿನ ಪ್ರಮಾಣ ಏರಿಕೆಯಾಗುತ್ತಿದೆ. ಈ ಮಧ್ಯೆ ಇಲ್ಲಿಯವರೆಗೆ 185.51 ಕೋಟಿ ಜನರಿಗೆ ಕೊರೊನಾ ಲಸಿಕೆ ನೀಡಲಾಗಿದೆ ಎಂದೂ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಇದನ್ನೂ ಓದಿ: ಈ ಹಳ್ಳಿಯಲ್ಲಿ ಹನುಮಂತ ದೇವರನ್ನು ಪೂಜಿಸುವುದಿಲ್ಲ, ಮಾರುತಿ ಕಾರನ್ನೂ ಕೊಳ್ಳುವುದಿಲ್ಲ; ರಾಕ್ಷಸನ ಆರಾಧನೆ ಮಾಡಲು ಇದೆ ಒಂದು ಕಾರಣ !

Published On - 10:09 am, Sun, 17 April 22

2026 ಕುಂಭ ರಾಶಿಗೆ ಸಾಡೇಸಾತಿಯ ಅಂತಿಮ ಘಟ್ಟ; ಆರೋಗ್ಯದ ನಿರ್ಲಕ್ಷ್ಯಬೇಡ
2026 ಕುಂಭ ರಾಶಿಗೆ ಸಾಡೇಸಾತಿಯ ಅಂತಿಮ ಘಟ್ಟ; ಆರೋಗ್ಯದ ನಿರ್ಲಕ್ಷ್ಯಬೇಡ
ಭರ್ಜರಿ ಗಳಿಕೆ ಮಧ್ಯೆ ‘ಮಾರ್ಕ್’ ಸುದ್ದಿಗೋಷ್ಠಿ: ಇಲ್ಲಿದೆ ಲೈವ್
ಭರ್ಜರಿ ಗಳಿಕೆ ಮಧ್ಯೆ ‘ಮಾರ್ಕ್’ ಸುದ್ದಿಗೋಷ್ಠಿ: ಇಲ್ಲಿದೆ ಲೈವ್
‘ಗಂಡನ ಪಕ್ಕ ಮಲಗೋದು ಬಿಡಿ, ಹತ್ರ ಕುಳಿತುಕೊಳ್ಳಲೂ ಬಿಡ್ತಿರ್ಲಿಲ್ಲ ಅತ್ತೆ!’
‘ಗಂಡನ ಪಕ್ಕ ಮಲಗೋದು ಬಿಡಿ, ಹತ್ರ ಕುಳಿತುಕೊಳ್ಳಲೂ ಬಿಡ್ತಿರ್ಲಿಲ್ಲ ಅತ್ತೆ!’
14 ವರ್ಷಗಳ ಬಳಿಕ ಟೆಸ್ಟ್ ಪಂದ್ಯ ಗೆದ್ದ ಇಂಗ್ಲೆಂಡ್..!
14 ವರ್ಷಗಳ ಬಳಿಕ ಟೆಸ್ಟ್ ಪಂದ್ಯ ಗೆದ್ದ ಇಂಗ್ಲೆಂಡ್..!
ತಡರಾತ್ರಿ ಯುವತಿಯನ್ನು ಹಿಂಬಾಲಿಸಿಕೊಂಡು ಬಂದು ಪುಂಡರು
ತಡರಾತ್ರಿ ಯುವತಿಯನ್ನು ಹಿಂಬಾಲಿಸಿಕೊಂಡು ಬಂದು ಪುಂಡರು
ಮಕ್ಕಳ‌ ಕಳ್ಳಿಯರು ಎಂದು 7 ಮಹಿಳೆಯರಿಗೆ ಹಿಗ್ಗಾಮುಗ್ಗಾ ಥಳಿಸಿದ ಸಾರ್ವಜನಿಕರು
ಮಕ್ಕಳ‌ ಕಳ್ಳಿಯರು ಎಂದು 7 ಮಹಿಳೆಯರಿಗೆ ಹಿಗ್ಗಾಮುಗ್ಗಾ ಥಳಿಸಿದ ಸಾರ್ವಜನಿಕರು
ಅರಮನೆ ಬಳಿ ಭಾರಿ ಭದ್ರತಾ ಲೋಪ? ಸಿಸಿಟಿವಿ ಕ್ಯಾಮರಾದಲ್ಲಿಲ್ಲ ಸ್ಫೋಟದ ದೃಶ್ಯ!
ಅರಮನೆ ಬಳಿ ಭಾರಿ ಭದ್ರತಾ ಲೋಪ? ಸಿಸಿಟಿವಿ ಕ್ಯಾಮರಾದಲ್ಲಿಲ್ಲ ಸ್ಫೋಟದ ದೃಶ್ಯ!
60 ದಿನಗಳ ಬಳಿಕ ಬ್ಯಾಟ್ ಬೀಸಿದ ಶ್ರೇಯಸ್ ಅಯ್ಯರ್
60 ದಿನಗಳ ಬಳಿಕ ಬ್ಯಾಟ್ ಬೀಸಿದ ಶ್ರೇಯಸ್ ಅಯ್ಯರ್
ಟಾಸ್ಕ್ ಆಡಿಯೇ ಕ್ಯಾಪ್ಟನ್ ಆದ ಗಿಲ್ಲಿ; ನಿಯಮ ಮುರಿದಿದ್ದಕ್ಕೆ ಎಚ್ಚರಿಕೆ
ಟಾಸ್ಕ್ ಆಡಿಯೇ ಕ್ಯಾಪ್ಟನ್ ಆದ ಗಿಲ್ಲಿ; ನಿಯಮ ಮುರಿದಿದ್ದಕ್ಕೆ ಎಚ್ಚರಿಕೆ
ಸರಣಿ ಮನೆಕಳ್ಳತನ, ಪೊಲೀಸರು ಸ್ಪಂದಿಸದೇ ಇದ್ದಾಗ ಜನ ಮಾಡಿದ್ದೇನು ನೋಡಿ!
ಸರಣಿ ಮನೆಕಳ್ಳತನ, ಪೊಲೀಸರು ಸ್ಪಂದಿಸದೇ ಇದ್ದಾಗ ಜನ ಮಾಡಿದ್ದೇನು ನೋಡಿ!