AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಶದಲ್ಲಿ ಒಂದೇ ದಿನ 1,220 ಹೊಸ ಕೋವಿಡ್ ಪ್ರಕರಣ ಪತ್ತೆ; ಸಕ್ರಿಯ ಪ್ರಕರಣಗಳ ಸಂಖ್ಯೆ ಇಳಿಮುಖ

Covid cases in India:ದೆಹಲಿ ಮತ್ತು ರಾಜಸ್ಥಾನದಲ್ಲಿ ತಲಾ ಎರಡು ಸಾವುಗಳು ದಾಖಲಾಗಿದ್ದರೆ, ಪಂಜಾಬ್, ಜಮ್ಮು ಮತ್ತು ಕಾಶ್ಮೀರ ಮತ್ತು ಮಿಜೋರಾಂನಲ್ಲಿ ತಲಾ ಒಂದು ಸಾವು ಸಂಭವಿಸಿದೆ. ಸಾವಿನ ಪ್ರಮಾಣವು 1.19 ಪ್ರತಿಶತದಷ್ಟಿದೆ ಎಂದು ಆರೋಗ್ಯ ಸಚಿವಾಲಯ ಹೇಳಿದೆ.

ದೇಶದಲ್ಲಿ ಒಂದೇ ದಿನ 1,220 ಹೊಸ ಕೋವಿಡ್ ಪ್ರಕರಣ ಪತ್ತೆ; ಸಕ್ರಿಯ ಪ್ರಕರಣಗಳ ಸಂಖ್ಯೆ ಇಳಿಮುಖ
ಪ್ರಾತಿನಿಧಿಕ ಚಿತ್ರ
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on: May 13, 2023 | 10:48 AM

Share

ದೆಹಲಿ: ಭಾರತದಲ್ಲಿ ಶನಿವಾರ (ಮೇ 13) ಕಳೆದ 24 ಗಂಟೆಗಳಲ್ಲಿ 1,220 ಕೋವಿಡ್ -19 (Covid 19) ಪ್ರಕರಣಗಳು ದಾಖಲಾಗಿವೆ. ಅದೇ ವೇಳೆ ಸೋಂಕುಗಳು ಈಗ ವೇಗವಾಗಿ ಕಡಿಮೆಯಾಗುತ್ತಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ(Union Ministry of Health and Family Welfare) ತಿಳಿಸಿದೆ.ಸಕ್ರಿಯ ಪ್ರಕರಣಗಳ ಸಂಖ್ಯೆ 16,498 ಕ್ಕೆ ಗಣನೀಯವಾಗಿ ಕಡಿಮೆಯಾಗಿದೆ. ಅದೇ ವೆಳೆ ಚೇತರಿಕೆ ದರ ಶೇ 98.97 ಆಗಿದೆ ಎಂದು ಸಚಿವಾಲಯದ ಅಂಕಿಅಂಶಗಳು ಹೇಳಿವೆ.

ಮಾಹಿತಿಯ ಪ್ರಕಾರ, ಹರ್ಯಾಣದಲ್ಲಿ ಮೂರು ಸಾವು ಸಂಭವಿಸಿದ್ದು ಒಂದು ದಿನದಲ್ಲಿ 11 ಹೊಸ ಸಾವುಗಳು ದಾಖಲಾಗುವುದರೊಂದಿಗೆ ಸಾವಿನ ಸಂಖ್ಯೆ 5,31,767 ಕ್ಕೆ ತಲುಪಿದೆ.

ದೆಹಲಿ ಮತ್ತು ರಾಜಸ್ಥಾನದಲ್ಲಿ ತಲಾ ಎರಡು ಸಾವುಗಳು ದಾಖಲಾಗಿದ್ದರೆ, ಪಂಜಾಬ್, ಜಮ್ಮು ಮತ್ತು ಕಾಶ್ಮೀರ ಮತ್ತು ಮಿಜೋರಾಂನಲ್ಲಿ ತಲಾ ಒಂದು ಸಾವು ಸಂಭವಿಸಿದೆ. ಸಾವಿನ ಪ್ರಮಾಣವು 1.19 ಪ್ರತಿಶತದಷ್ಟಿದೆ ಎಂದು ಆರೋಗ್ಯ ಸಚಿವಾಲಯ ಹೇಳಿದೆ.

ಸಚಿವಾಲಯದ ಅಂಕಿಅಂಶಗಳ ಪ್ರಕಾರ ದೈನಂದಿನ ಸಕಾರಾತ್ಮಕತೆಯ ದರ ಶೇ 3.52 ಪ್ರತಿಶತ ಮತ್ತು ಸಾಪ್ತಾಹಿಕ ಸಕಾರಾತ್ಮಕತೆಯ ದರ ಶೇಕಡಾ 5.42 ಆಗಿದೆ.ರೋಗದಿಂದ ಚೇತರಿಸಿಕೊಂಡವರ ಒಟ್ಟು ಸಂಖ್ಯೆ 44,431,137 ತಲುಪಿದೆ. ದೇಶದಾದ್ಯಂತ ಲಸಿಕೆ ನೀಡಿಕೆ ಅಭಿಯಾನದಡಿಯಲ್ಲಿಯಲ್ಲಿ ಇದುವರೆಗೆ ಕನಿಷ್ಠ 2,20,66,89,993 ಡೋಸ್ ಕೋವಿಡ್ ಲಸಿಕೆಗಳನ್ನು ನೀಡಲಾಗಿದೆ. ಒಂದೇ ದಿನದಲ್ಲಿ 1,636 ಚುಚ್ಚುಮದ್ದುಗಳನ್ನು ನೀಡಲಾಗಿದೆ ಎಂದು ಸಚಿವಾಲಯದ ಡೇಟಾ ಹೇಳುತ್ತದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ