AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಶದಲ್ಲಿ ಒಂದೇ ದಿನ 1,220 ಹೊಸ ಕೋವಿಡ್ ಪ್ರಕರಣ ಪತ್ತೆ; ಸಕ್ರಿಯ ಪ್ರಕರಣಗಳ ಸಂಖ್ಯೆ ಇಳಿಮುಖ

Covid cases in India:ದೆಹಲಿ ಮತ್ತು ರಾಜಸ್ಥಾನದಲ್ಲಿ ತಲಾ ಎರಡು ಸಾವುಗಳು ದಾಖಲಾಗಿದ್ದರೆ, ಪಂಜಾಬ್, ಜಮ್ಮು ಮತ್ತು ಕಾಶ್ಮೀರ ಮತ್ತು ಮಿಜೋರಾಂನಲ್ಲಿ ತಲಾ ಒಂದು ಸಾವು ಸಂಭವಿಸಿದೆ. ಸಾವಿನ ಪ್ರಮಾಣವು 1.19 ಪ್ರತಿಶತದಷ್ಟಿದೆ ಎಂದು ಆರೋಗ್ಯ ಸಚಿವಾಲಯ ಹೇಳಿದೆ.

ದೇಶದಲ್ಲಿ ಒಂದೇ ದಿನ 1,220 ಹೊಸ ಕೋವಿಡ್ ಪ್ರಕರಣ ಪತ್ತೆ; ಸಕ್ರಿಯ ಪ್ರಕರಣಗಳ ಸಂಖ್ಯೆ ಇಳಿಮುಖ
ಪ್ರಾತಿನಿಧಿಕ ಚಿತ್ರ
ರಶ್ಮಿ ಕಲ್ಲಕಟ್ಟ
|

Updated on: May 13, 2023 | 10:48 AM

Share

ದೆಹಲಿ: ಭಾರತದಲ್ಲಿ ಶನಿವಾರ (ಮೇ 13) ಕಳೆದ 24 ಗಂಟೆಗಳಲ್ಲಿ 1,220 ಕೋವಿಡ್ -19 (Covid 19) ಪ್ರಕರಣಗಳು ದಾಖಲಾಗಿವೆ. ಅದೇ ವೇಳೆ ಸೋಂಕುಗಳು ಈಗ ವೇಗವಾಗಿ ಕಡಿಮೆಯಾಗುತ್ತಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ(Union Ministry of Health and Family Welfare) ತಿಳಿಸಿದೆ.ಸಕ್ರಿಯ ಪ್ರಕರಣಗಳ ಸಂಖ್ಯೆ 16,498 ಕ್ಕೆ ಗಣನೀಯವಾಗಿ ಕಡಿಮೆಯಾಗಿದೆ. ಅದೇ ವೆಳೆ ಚೇತರಿಕೆ ದರ ಶೇ 98.97 ಆಗಿದೆ ಎಂದು ಸಚಿವಾಲಯದ ಅಂಕಿಅಂಶಗಳು ಹೇಳಿವೆ.

ಮಾಹಿತಿಯ ಪ್ರಕಾರ, ಹರ್ಯಾಣದಲ್ಲಿ ಮೂರು ಸಾವು ಸಂಭವಿಸಿದ್ದು ಒಂದು ದಿನದಲ್ಲಿ 11 ಹೊಸ ಸಾವುಗಳು ದಾಖಲಾಗುವುದರೊಂದಿಗೆ ಸಾವಿನ ಸಂಖ್ಯೆ 5,31,767 ಕ್ಕೆ ತಲುಪಿದೆ.

ದೆಹಲಿ ಮತ್ತು ರಾಜಸ್ಥಾನದಲ್ಲಿ ತಲಾ ಎರಡು ಸಾವುಗಳು ದಾಖಲಾಗಿದ್ದರೆ, ಪಂಜಾಬ್, ಜಮ್ಮು ಮತ್ತು ಕಾಶ್ಮೀರ ಮತ್ತು ಮಿಜೋರಾಂನಲ್ಲಿ ತಲಾ ಒಂದು ಸಾವು ಸಂಭವಿಸಿದೆ. ಸಾವಿನ ಪ್ರಮಾಣವು 1.19 ಪ್ರತಿಶತದಷ್ಟಿದೆ ಎಂದು ಆರೋಗ್ಯ ಸಚಿವಾಲಯ ಹೇಳಿದೆ.

ಸಚಿವಾಲಯದ ಅಂಕಿಅಂಶಗಳ ಪ್ರಕಾರ ದೈನಂದಿನ ಸಕಾರಾತ್ಮಕತೆಯ ದರ ಶೇ 3.52 ಪ್ರತಿಶತ ಮತ್ತು ಸಾಪ್ತಾಹಿಕ ಸಕಾರಾತ್ಮಕತೆಯ ದರ ಶೇಕಡಾ 5.42 ಆಗಿದೆ.ರೋಗದಿಂದ ಚೇತರಿಸಿಕೊಂಡವರ ಒಟ್ಟು ಸಂಖ್ಯೆ 44,431,137 ತಲುಪಿದೆ. ದೇಶದಾದ್ಯಂತ ಲಸಿಕೆ ನೀಡಿಕೆ ಅಭಿಯಾನದಡಿಯಲ್ಲಿಯಲ್ಲಿ ಇದುವರೆಗೆ ಕನಿಷ್ಠ 2,20,66,89,993 ಡೋಸ್ ಕೋವಿಡ್ ಲಸಿಕೆಗಳನ್ನು ನೀಡಲಾಗಿದೆ. ಒಂದೇ ದಿನದಲ್ಲಿ 1,636 ಚುಚ್ಚುಮದ್ದುಗಳನ್ನು ನೀಡಲಾಗಿದೆ ಎಂದು ಸಚಿವಾಲಯದ ಡೇಟಾ ಹೇಳುತ್ತದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!