Sign In

By signing in or creating an account, you agree with Associated Broadcasting Company's Terms & Conditions and Privacy Policy.

India Covid 19 Updates: ಭಾರತದಲ್ಲಿ 21,566 ಕೊರೊನಾ ಸೋಂಕಿತರು ಪತ್ತೆ, 45 ಸಾವು

ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 21,566 ಮಂದಿ ಕೊರೊನಾ ಸೋಂಕಿತರು ಪತ್ತೆಯಾಗಿದ್ದು, 45 ಮಂದಿ ಮೃತಪಟ್ಟಿದ್ದಾರೆ. ದಿನದಿಂದ ದಿನಕ್ಕೆ ಕೊರೊನಾ ಸೋಂಕಿತ ಪ್ರಕರಣಗಳು ಹೆಚ್ಚಾಗುತ್ತಿದ್ದು, ಕೊರೊನಾ ನಾಲ್ಕನೇ ಅಲೆಯ ಭೀತಿ ಎದುರಾಗಿದೆ.

India Covid 19 Updates: ಭಾರತದಲ್ಲಿ 21,566 ಕೊರೊನಾ ಸೋಂಕಿತರು ಪತ್ತೆ, 45 ಸಾವು
Coronavirus
Follow us
TV9 Web
| Updated By: ನಯನಾ ರಾಜೀವ್

Updated on: Jul 21, 2022 | 9:49 AM

ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 21,566 ಮಂದಿ ಕೊರೊನಾ ಸೋಂಕಿತರು ಪತ್ತೆಯಾಗಿದ್ದು, 45 ಮಂದಿ ಮೃತಪಟ್ಟಿದ್ದಾರೆ. ದಿನದಿಂದ ದಿನಕ್ಕೆ ಕೊರೊನಾ ಸೋಂಕಿತ ಪ್ರಕರಣಗಳು ಹೆಚ್ಚಾಗುತ್ತಿದ್ದು, ಕೊರೊನಾ ನಾಲ್ಕನೇ ಅಲೆಯ ಭೀತಿ ಎದುರಾಗಿದೆ. ಇವರಲ್ಲಿ ಬಹುತೇಕರು ಕೊರೊನಾ ಲಸಿಕೆಯ ಎರಡೂ ಡೋಸ್​ಗಳನ್ನು ಪಡೆದಿದ್ದರೆ ಇನ್ನೂ ಕೆಲವರು ಬೂಸ್ಟರ್ ಡೋಸ್​ಗಳನ್ನು ಪಡೆದಿದ್ದಾರೆ.

ಸಕ್ರಿಯ ಪ್ರಕರಣಗಳು 1,48,881 ಇದೆ. ಪಾಸಿಟಿವಿಟಿ ದರ ಶೇ. 4.25ರಷ್ಟಿದೆ. ಕೋವಿಡ್​ನಿಂದ ಸಾವನ್ನಪ್ಪಿರುವವರ ಸಂಖ್ಯೆ 5,25,870ಕ್ಕೆ ಹೆಚ್ಚಳವಾಗಿದೆ. ಕಳೆದ 24 ಗಂಟೆಗಳಲ್ಲಿ 18,294ಮಂದಿ ಗುಣಮುಖರಾಗಿದ್ದಾರೆ.

ದೇಶದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವ್ಯಾಕ್ಸಿನ್ ಹಾಗೂ ಕೋವಿಶೀಲ್ಡ್​ ಕೊರೊನಾ ಲಸಿಕೆಯ ಅಭಿಯಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದಾರೆ.

ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೊನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೊನಾ ವಾರಿಯರ್ಸ್​ಗೆ ಲಸಿಕೆಯನ್ನು ಮೊದಲು ನೀಡಲಾಗಿತ್ತು.

ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ.1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ. ಇದೀಗ ಬೂಸ್ಟರ್​ ಡೋಸ್ ಕೂಡ ನೀಡಲಾಗುತ್ತಿದೆ.

ಕೊರೊನಾ ಸೋಂಕಿನ ವಿರುದ್ಧ ವಿಶ್ವದಲ್ಲೇ ಅತಿದೊಡ್ಡ ಲಸಿಕಾಕರಣವನ್ನು ಪ್ರಾರಂಭಿಸಿದ ಭಾರತವು 18 ತಿಂಗಳಲ್ಲಿ 200 ಕೋಟಿ ಡೋಸ್‌ ಲಸಿಕೆಯನ್ನು ನೀಡುವ ಮೂಲಕ ದಾಖಲೆಯನ್ನು ಸೃಷ್ಟಿಸಿದೆ.

ಭಾರತದಲ್ಲಿ 2021ರ ಜನವರಿ 16ರಂದು ಲಸಿಕೆಯನ್ನು ನೀಡಲು ಪ್ರಾರಂಭಿಸಲಾಯಿತು. ಈವರೆಗೆ ದೇಶದಲ್ಲಿ 200 ಕೋಟಿ ಡೋಸ್‌ ಲಸಿಕೆಯನ್ನು ನೀಡುವ ಮೂಲಕ ಮೈಲುಗಲ್ಲನ್ನು ಸಾಧಿಸಿದೆ. ಶನಿವಾರ ರಾತ್ರಿಯವರೆಗೆ ದೇಶಾದ್ಯಂತ 199.97 ಕೋಟಿ ಡೋಸ್‍ ಕೋವಿಡ್ ಲಸಿಕೆಗಳನ್ನು ನೀಡಲಾಗಿದ್ದು, ಇದರಲ್ಲಿ 5.48 ಕೋಟಿ ಬೂಸ್ಟರ್ ಡೋಸ್‍ಗಳು ಸೇರಿವೆ.

ಮೈಸೂರು: ಶತಮಾನದಷ್ಟು ಹಳೆಯದಾದ ಕಟ್ಟಡದ ಮೇಲೆ ವಕ್ಫ್​ ಕಣ್ಣು, ನೋಟೀಸ್
ಮೈಸೂರು: ಶತಮಾನದಷ್ಟು ಹಳೆಯದಾದ ಕಟ್ಟಡದ ಮೇಲೆ ವಕ್ಫ್​ ಕಣ್ಣು, ನೋಟೀಸ್
ನಿಮ್ಮಲ್ಲಿನ ದುಶ್ಚಟಗಳನ್ನು ಇನ್ನೊಬ್ಬರಿಗೆ ಕಲಿಸಿದರೆ ಉಂಟಾಗುವ ಪರಿಣಾಮವೇನು?
ನಿಮ್ಮಲ್ಲಿನ ದುಶ್ಚಟಗಳನ್ನು ಇನ್ನೊಬ್ಬರಿಗೆ ಕಲಿಸಿದರೆ ಉಂಟಾಗುವ ಪರಿಣಾಮವೇನು?
Horoscope: ಶುಕ್ರವಾರ, ಇಂದಿನ ದ್ವಾದಶ ರಾಶಿಗಳ ಫಲಾಫಲ ತಿಳಿಯಿರಿ
Horoscope: ಶುಕ್ರವಾರ, ಇಂದಿನ ದ್ವಾದಶ ರಾಶಿಗಳ ಫಲಾಫಲ ತಿಳಿಯಿರಿ
ತವರಿನಲ್ಲಿ ಗೆದ್ದ ಆರ್​ಸಿಬಿ; ಮುಗಿಲು ಮುಟ್ಟಿದ ಫ್ಯಾನ್ಸ್ ಸಂಭ್ರಮ
ತವರಿನಲ್ಲಿ ಗೆದ್ದ ಆರ್​ಸಿಬಿ; ಮುಗಿಲು ಮುಟ್ಟಿದ ಫ್ಯಾನ್ಸ್ ಸಂಭ್ರಮ
ಒಳ್ಳೆಯ ಸಿನಿಮಾ ಮಾಡಿದ್ರೂ ಜನ ಬರಲ್ಲ ಯಾಕೆ? ಪಾಸಿಟಿವ್ ಉತ್ತರ ನೀಡಿದ ರಾಘಣ್ಣ
ಒಳ್ಳೆಯ ಸಿನಿಮಾ ಮಾಡಿದ್ರೂ ಜನ ಬರಲ್ಲ ಯಾಕೆ? ಪಾಸಿಟಿವ್ ಉತ್ತರ ನೀಡಿದ ರಾಘಣ್ಣ
ನನ್ನ ವಿರುದ್ಧ ವಿನಾಕಾರಣ ದೂರು ಸಲ್ಲಿಸಲಾಗಿದೆ: ರಾಕೇಶ್ ಮಲ್ಲಿ
ನನ್ನ ವಿರುದ್ಧ ವಿನಾಕಾರಣ ದೂರು ಸಲ್ಲಿಸಲಾಗಿದೆ: ರಾಕೇಶ್ ಮಲ್ಲಿ
‘ರಾಜ್​ಕುಮಾರ್ ಎಂಬ ಹೆಸರು ಕನ್ನಡ ಸಿನಿಮಾದ ಅಭಿವೃದ್ಧಿಗೆ ಕಾರಣ’: ಬರಗೂರು
‘ರಾಜ್​ಕುಮಾರ್ ಎಂಬ ಹೆಸರು ಕನ್ನಡ ಸಿನಿಮಾದ ಅಭಿವೃದ್ಧಿಗೆ ಕಾರಣ’: ಬರಗೂರು
ರ‍್ಯಾಂಡಮ್ಮಾಗಿ ಗುಂಡು ಹಾರಿದ ಕಾರಣ ಪ್ರಾಣ ಉಳಿದಿದ್ದೇ ಹೆಚ್ಚು: ದೊಡ್ಡಬಸಯ್ಯ
ರ‍್ಯಾಂಡಮ್ಮಾಗಿ ಗುಂಡು ಹಾರಿದ ಕಾರಣ ಪ್ರಾಣ ಉಳಿದಿದ್ದೇ ಹೆಚ್ಚು: ದೊಡ್ಡಬಸಯ್ಯ
ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಸಿಡಿದ ಒಂದೇ ಗುಂಡು ಕ್ಷಣಾರ್ಧದಲ್ಲಿ ಪತಿಯ ಪ್ರಾಣ ತೆಗೆದುಕೊಂಡಿತು: ಪಲ್ಲವಿ
ಸಿಡಿದ ಒಂದೇ ಗುಂಡು ಕ್ಷಣಾರ್ಧದಲ್ಲಿ ಪತಿಯ ಪ್ರಾಣ ತೆಗೆದುಕೊಂಡಿತು: ಪಲ್ಲವಿ