AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Coronavirus cases in India: 132 ದಿನಗಳ ನಂತರ ದೇಶದಲ್ಲಿ ದೈನಂದಿನ ಕೊವಿಡ್ ಪ್ರಕರಣಗಳ ಸಂಖ್ಯೆ 30,000ಕ್ಕಿಂತ ಕಡಿಮೆ ದಾಖಲು

Covid 19: ಸಕ್ರಿಯ ಪ್ರಕರಣಗಳು ಪ್ರಸ್ತುತ 3,98,100 ರಷ್ಟಿದ್ದು, ಮಾರ್ಚ್ 24 ರ ನಂತರ ಮೊದಲ ಬಾರಿಗೆ 4 ಲಕ್ಷಕ್ಕಿಂತ ಕಡಿಮೆಯಾಗಿದೆ. ಸೋಮವಾರದ ವೇಳೆಗೆ ದೇಶದಲ್ಲಿ 3.98 ಲಕ್ಷ ಸಕ್ರಿಯ ಪ್ರಕರಣಗಳಿವೆ. ಅದರಲ್ಲಿ 1.37 ಲಕ್ಷ ಸೋಂಕು ಕೇರಳದಿಂದ ವರದಿ ಆಗಿದೆ.

Coronavirus cases in India: 132 ದಿನಗಳ ನಂತರ ದೇಶದಲ್ಲಿ ದೈನಂದಿನ ಕೊವಿಡ್ ಪ್ರಕರಣಗಳ ಸಂಖ್ಯೆ 30,000ಕ್ಕಿಂತ ಕಡಿಮೆ ದಾಖಲು
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Jul 27, 2021 | 10:31 AM

Share

ದೆಹಲಿ: ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 29,689 ಹೊಸ ಕೊವಿಡ್ (Covid-19) ಪ್ರಕರಣಗಳು ದಾಖಲಾಗಿದ್ದು 415 ಸಾವುಗಳು ಸಂಭವಿಸಿವೆ. 132 ದಿನಗಳ ನಂತರ ದೈನಂದಿನ ಕೊವಿಡ್ ಪ್ರಕರಣ 30,000 ಕ್ಕಿಂತ ಕಡಿಮೆ ದಾಖಲಾಗಿದೆ. ಕೇರಳ ಮತ್ತು ಮಹಾರಾಷ್ಟ್ರದಲ್ಲಿ ಕ್ರಮವಾಗಿ 11,586 ಮತ್ತು 4,877 ಸೋಂಕುಗಳು ವರದಿಯಾಗಿವೆ. ಸಕ್ರಿಯ ಪ್ರಕರಣಗಳು ಪ್ರಸ್ತುತ 3,98,100 ರಷ್ಟಿದ್ದು, ಮಾರ್ಚ್ 24 ರ ನಂತರ ಮೊದಲ ಬಾರಿಗೆ 4 ಲಕ್ಷಕ್ಕಿಂತ ಕಡಿಮೆಯಾಗಿದೆ. ಸೋಮವಾರದ ವೇಳೆಗೆ ದೇಶದಲ್ಲಿ 3.98 ಲಕ್ಷ ಸಕ್ರಿಯ ಪ್ರಕರಣಗಳಿವೆ. ಅದರಲ್ಲಿ 1.37 ಲಕ್ಷ ಸೋಂಕು ಕೇರಳದಿಂದ ವರದಿ ಆಗಿದೆ.

ಪ್ರಸಕ್ತ ವೇಗದಲ್ಲಿ ಲಸಿಕೆ ನೀಡುವುದನ್ನು ಮುಂದುವರಿಸಿದರೆ ಭಾರತವು ಜುಲೈನಲ್ಲಿ 13.5 ಕೋಟಿ ಡೋಸ್ ವ್ಯಾಕ್ಸಿನೇಷನ್ ಗುರಿಯನ್ನು ಮುಟ್ಟಲು ಸಾಧ್ಯವಿಲ್ಲ. ಭಾನುವಾರದವರೆಗೆ, ಈ ತಿಂಗಳಲ್ಲಿ 9.94 ಕೋಟಿ ಡೋಸ್ ಕೊವಿಡ್ -19 ಲಸಿಕೆಗಳನ್ನು ನೀಡಲಾಗಿದ್ದು, ದಿನಕ್ಕೆ ಸರಾಸರಿ 38.26 ಲಕ್ಷ ಡೋಸ್ ನೀಡಲಾಗಿದೆ. ಪ್ರಸ್ತುತ ವೇಗದಲ್ಲಿ, ಜುಲೈ ಅಂತ್ಯದ ವೇಳೆಗೆ ಭಾರತ ಸುಮಾರು 12.5 ಕೋಟಿ ಡೋಸ್‌ಗಳನ್ನು ನೀಡಲಿದೆ. 13.5 ಕೋಟಿ ಗುರಿಯನ್ನು ಪೂರೈಸಲು, ಸುಮಾರು 60 ಲಕ್ಷ ದೈನಂದಿನ ಲಸಿಕೆ ಡೋಸ್ ನೀಡಬೇಕಾಗಿತ್ತು, ಈ ಸಂಖ್ಯೆಯನ್ನು ಈ ತಿಂಗಳಲ್ಲಿ ಎರಡು ಬಾರಿ ಮಾತ್ರ ಸಾಧಿಸಲಾಗಿದೆ.

ಕೊವಿಡ್ -19 ವ್ಯಾಕ್ಸಿನೇಷನ್ ವೇಗವು ಜುಲೈನಲ್ಲಿ ಗಣನೀಯವಾಗಿ ನಿಧಾನಗೊಂಡಿದೆ, ಜೂನ್ 21 ರಂದು ಹೊಸ ಹಂತದ ಸಾರ್ವತ್ರಿಕ ವ್ಯಾಕ್ಸಿನೇಷನ್ ಪ್ರಾರಂಭವಾದ ನಂತರ, ದಾಖಲೆಯ 87 ಲಕ್ಷ ಡೋಸ್ ನೀಡಲಾಯಿತು. ಆಗ ಜುಲೈನಲ್ಲಿ 13.5 ಕೋಟಿ ಡೋಸ್‌ಗಳ ಗುರಿಯನ್ನು ಘೋಷಿಸಲಾಯಿತು. ಜೂನ್ 26 ಕ್ಕೆ ಕೊನೆಗೊಳ್ಳುವ ವಾರದಲ್ಲಿ ಸಾಪ್ತಾಹಿಕ ಲಸಿಕೆ ಡೋಸ್ ವಿತರಣೆಯು 4.5 ಕೋಟಿಯಿಂದ ಜುಲೈ 25 ಕ್ಕೆ ಕೊನೆಗೊಂಡ ವಾರದಲ್ಲಿ 2.8 ಕೋಟಿಗೆ ಇಳಿದಿದೆ ಎಂದು ಅಧಿಕೃತ ದತ್ತಾಂಶಗಳು ತೋರಿಸುತ್ತವೆ.

ಭಾರತದ ಕೊವಿಡ್ ಮೊತ್ತವು ಆಗಸ್ಟ್ 7 ರಂದು 20 ಲಕ್ಷ, ಆಗಸ್ಟ್ 23 ರಂದು 30 ಲಕ್ಷ, ಸೆಪ್ಟೆಂಬರ್ 5 ರಂದು 40 ಲಕ್ಷ ಮತ್ತು ಸೆಪ್ಟೆಂಬರ್ 16 ರಂದು 50 ಲಕ್ಷ ದಾಟಿದೆ. ಇದು ಸೆಪ್ಟೆಂಬರ್ 28 ರಂದು 60 ಲಕ್ಷ ದಾಟಿದೆ, ಅಕ್ಟೋಬರ್ 11 ರಂದು 70 ಲಕ್ಷ ದಾಟಿದೆ. ಅಕ್ಟೋಬರ್ 29 ರಂದು 80 ಲಕ್ಷ, ನವೆಂಬರ್ 20 ರಂದು 90 ಲಕ್ಷ ಮತ್ತು ಡಿಸೆಂಬರ್ 19 ರಂದು ಒಂದು ಕೋಟಿ ಗಡಿ ದಾಟಿದೆ. ಭಾರತವು ಮೇ 4 ರಂದು ಎರಡು ಕೋಟಿ ಮತ್ತು ಜೂನ್ 23 ರಂದು ಮೂರು ಕೋಟಿಗಳ ಮೈಲಿಗಲ್ಲು ದಾಟಿದೆ.

ಇದನ್ನೂ ಓದಿ: Next CM of Karnataka 2021: ಸಂತೋಷ್​, ಕಾಗೇರಿ, ಉದಾಸಿ, ನಿರಾಣಿ, ಬೊಮ್ಮಾಯಿ, ಬೆಲ್ಲದ್; ಯಾರಾಗ್ತಾರೆ ಕರ್ನಾಟಕದ ನೂತನ ಮುಖ್ಯಮಂತ್ರಿ?

ಇದನ್ನೂ ಓದಿ:  Vijay Mallya: ವಿಜಯ್ ಮಲ್ಯ ದಿವಾಳಿ ಎಂದ ಬ್ರಿಟನ್ ಕೋರ್ಟ್

(India records 29,689 new cases of coronavirus 415 deaths in the past 24 hours)

ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ