AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Coronavirus cases in India: ದೇಶದಲ್ಲಿ 30,570 ಹೊಸ ಕೊವಿಡ್ ಪ್ರಕರಣ ಪತ್ತೆ, ಸಕ್ರಿಯ ಪ್ರಕರಣಗಳ ಸಂಖ್ಯೆ ಇಳಿಮುಖ

Covid-19: ಸಕ್ರಿಯ ಪ್ರಕರಣಗಳ ಸಂಖ್ಯೆ 3,42,923 ಕ್ಕೆ ಇಳಿದಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಗುರುವಾರ ತಿಳಿಸಿದೆ. ಸಚಿವಾಲಯವು ನವೀಕರಿಸಿದ ಮಾಹಿತಿಯ ಪ್ರಕಾರ ಇದೇ ಅವಧಿಯಲ್ಲಿ 431 ಮಂದಿ ಸಾವಿಗೀಡಾಗಿದ್ದು ಸಾವಿನ ಸಂಖ್ಯೆ 4,43,928 ಕ್ಕೆ ಏರಿದೆ.

Coronavirus cases in India: ದೇಶದಲ್ಲಿ 30,570 ಹೊಸ ಕೊವಿಡ್ ಪ್ರಕರಣ ಪತ್ತೆ, ಸಕ್ರಿಯ ಪ್ರಕರಣಗಳ ಸಂಖ್ಯೆ ಇಳಿಮುಖ
ಪ್ರಾತಿನಿಧಿಕ ಚಿತ್ರ
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on: Sep 17, 2021 | 10:41 AM

Share

ದೆಹಲಿ: ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 30,570 ಹೊಸ ಕೊವಿಡ್ (Covid 19) ಪ್ರಕರಣಗಳು ದಾಖಲಾಗಿದ್ದು ಭಾರತದ ಒಟ್ಟಾರೆ ಸೋಂಕಿತರ ಸಂಖ್ಯೆ 3,33,47,325 ಕ್ಕೆ ಏರಿಕೆಯಾಗಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 3,42,923 ಕ್ಕೆ ಇಳಿದಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಗುರುವಾರ ತಿಳಿಸಿದೆ. ಸಚಿವಾಲಯವು ನವೀಕರಿಸಿದ ಮಾಹಿತಿಯ ಪ್ರಕಾರ ಇದೇ ಅವಧಿಯಲ್ಲಿ 431 ಮಂದಿ ಸಾವಿಗೀಡಾಗಿದ್ದು ಸಾವಿನ ಸಂಖ್ಯೆ 4,43,928 ಕ್ಕೆ ಏರಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 3,42,923 ಕ್ಕೆ ಇಳಿದಿದೆ, ಇದು ಒಟ್ಟು ಸೋಂಕುಗಳ ಶೇಕಡಾ 1.03 ರಷ್ಟಿದೆ, ರಾಷ್ಟ್ರೀಯ ಕೊವಿಡ್ -19 ಚೇತರಿಕೆಯ ಪ್ರಮಾಣವು ಶೇಕಡಾ 97.64 ರಷ್ಟು ದಾಖಲಾಗಿದೆ ಎಂದು ಸಚಿವಾಲಯ ತಿಳಿಸಿದೆ.

ವಿಶ್ವ ಆರೋಗ್ಯಸಂಸ್ಥೆ ಅನುದಾನಿತ ಆಗ್ನೇಯ ಏಷ್ಯಾದ ದೇಶಗಳಲ್ಲಿ 1 ಶತಕೋಟಿ ಕೊವಿಡ್ ಲಸಿಕೆ ಪ್ರಮಾಣವನ್ನು ನೀಡಲಾಗಿದೆ. ನಿನ್ನೆಯವರೆಗೆ ಭಾರತವು ಒಟ್ಟು 76,57,17,137 ಡೋಸ್‌ಗಳನ್ನು (ಮೊದಲ ಮತ್ತು ಎರಡನೆಯ ಡೋಸ್) ವಿತರಣೆ ಮಾಡಿದೆ ಎಂದು ವಿಶ್ವ ಆರೋಗ್ಯಸಂಸ್ಥೆ ಹೇಳಿದೆ.

ಜಾರ್ಖಂಡ್​ನಲ್ಲಿ 6 ರಿಂದ 8 ನೇ ತರಗತಿವರೆಗೆ ಶಾಲೆ ಶುರು ಜಾರ್ಖಂಡ್‌ನಲ್ಲಿ ಕೊವಿಡ್ -19 ಪ್ರಕರಣಗಳ ನಿರಂತರ ಇಳಿಕೆಯೊಂದಿಗೆ, ರಾಜ್ಯ ಸರ್ಕಾರವು ಗುರುವಾರ ಸೆಪ್ಟೆಂಬರ್ 20 ರಿಂದ 6-8ನೇ ತರಗತಿಯವರೆಗೆ ಆಫ್‌ಲೈನ್ ತರಗತಿಗಳನ್ನು ನಡೆಸಲು ಶಾಲೆಗಳಿಗೆ ಅನುಮತಿ ನೀಡಿದೆ.  ಎಲ್ಲಾ ಕೊವಿಡ್ -19 ಪ್ರೋಟೋಕಾಲ್‌ಗಳನ್ನು ಗಮನದಲ್ಲಿಟ್ಟುಕೊಂಡು, ರಾಜ್ಯ ಸರ್ಕಾರವು ಶಾಲೆಗಳಿಗೆ ಪ್ರಮಾಣಿತ ಕಾರ್ಯಾಚರಣಾ ಪ್ರಕ್ರಿಯೆಗಳನ್ನು (ಎಸ್‌ಒಪಿ) ನೀಡಿದೆ.

ಜಾರ್ಖಂಡ್ ವಿಪತ್ತು ನಿರ್ವಹಣಾ ವಿಭಾಗವು ನೀಡಿರುವ ಸೂಚನೆಯ ಪ್ರಕಾರ, ಶಾಲೆಗಳು ಈಗ ರಾಜ್ಯದಲ್ಲಿ ಮಿಶ್ರಿತ ಶಿಕ್ಷಣ ಕ್ರಮವನ್ನು( ಅಂದರೆ ಆನ್‌ಲೈನ್ ಹಾಗೂ ಆಫ್‌ಲೈನ್ ತರಗತಿಗಳು) ನಿರ್ವಹಿಸುತ್ತವೆ.

ಇದನ್ನೂ ಓದಿ: ಅಕ್ಟೋಬರ್-ನವೆಂಬರ್‌ ಅತ್ಯಂತ ನಿರ್ಣಾಯಕ, ಕೊವಿಡ್ ಉಲ್ಬಣಕ್ಕೆ ಅವಕಾಶ ನೀಡಬಾರದು : ಕೇಂದ್ರ ಸರ್ಕಾರ

(India Records 30,570 COVID-19 Cases in last 24 hours count of active cases has dipped)

ಲಾರ್ಡ್ಸ್‌ ಮೈದಾನದಲ್ಲಿ ಆಶಯ ವ್ಯಕ್ತಪಡಿಸಿದ ರಹಾನೆ
ಲಾರ್ಡ್ಸ್‌ ಮೈದಾನದಲ್ಲಿ ಆಶಯ ವ್ಯಕ್ತಪಡಿಸಿದ ರಹಾನೆ
ಗ್ಯಾರಂಟಿ ಯೋಜನೆಗಳಿಂದ ಯಾರೂ ಸೋಂಬೇರಿಗಳಾಗಿಲ್ಲ: ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆಗಳಿಂದ ಯಾರೂ ಸೋಂಬೇರಿಗಳಾಗಿಲ್ಲ: ಸಿದ್ದರಾಮಯ್ಯ
ನಗರಪಾಲಿಕೆ ನೌಕರರ ಸಮಸ್ಯೆಗಳ ಕಡೆ ಸಿಎಂ ಕೂಡಲೇ ಗಮನಹರಿಸಬೇಕು: ವಿಜಯೇಂದ್ರ
ನಗರಪಾಲಿಕೆ ನೌಕರರ ಸಮಸ್ಯೆಗಳ ಕಡೆ ಸಿಎಂ ಕೂಡಲೇ ಗಮನಹರಿಸಬೇಕು: ವಿಜಯೇಂದ್ರ
ಜುಲೈ 14 ರಂದು ಸೇತುವೆಯನ್ನು ಉದ್ಘಾಟಿಸಲಿರುವ ಕೇಂದ್ರ ಸಚಿವ ಗಡ್ಕರಿ
ಜುಲೈ 14 ರಂದು ಸೇತುವೆಯನ್ನು ಉದ್ಘಾಟಿಸಲಿರುವ ಕೇಂದ್ರ ಸಚಿವ ಗಡ್ಕರಿ
ಹರಿಪ್ರಸಾದ್​ರ ಪಕ್ಷಕ್ಕೆ ಮಹಿಳಾ ಸಿಎಂ ಮಾಡುವ ಯೋಗ್ಯತೆ ಇಲ್ಲ: ಅಧ್ಯಕ್ಷೆ
ಹರಿಪ್ರಸಾದ್​ರ ಪಕ್ಷಕ್ಕೆ ಮಹಿಳಾ ಸಿಎಂ ಮಾಡುವ ಯೋಗ್ಯತೆ ಇಲ್ಲ: ಅಧ್ಯಕ್ಷೆ
ಕಾಂಗ್ರೆಸ್ ಪಕ್ಷ ಸೇರುವ ಬಗ್ಗೆ ಮಾಧುಸ್ವಾಮಿಯಿಂದ ಗೊಂದಲಮಯ ಹೇಳಿಕೆ
ಕಾಂಗ್ರೆಸ್ ಪಕ್ಷ ಸೇರುವ ಬಗ್ಗೆ ಮಾಧುಸ್ವಾಮಿಯಿಂದ ಗೊಂದಲಮಯ ಹೇಳಿಕೆ
ಅಮೆರಿಕದಲ್ಲಿ ತಮಗೆ ಚಿಕಿತ್ಸೆ ನೀಡಿದ ವೈದ್ಯರಿಗೆ ಸನ್ಮಾನ ಮಾಡಿದ ಶಿವಣ್ಣ
ಅಮೆರಿಕದಲ್ಲಿ ತಮಗೆ ಚಿಕಿತ್ಸೆ ನೀಡಿದ ವೈದ್ಯರಿಗೆ ಸನ್ಮಾನ ಮಾಡಿದ ಶಿವಣ್ಣ
VIDEO: ಮಿಂಚಿನ ದಾಳಿ ಸಂಘಟಿಸಿದ ಬುಮ್ರಾಗೆ ಸಿಕ್ಕ ಸ್ವಾಗತ ಹೇಗಿತ್ತು ನೋಡಿ
VIDEO: ಮಿಂಚಿನ ದಾಳಿ ಸಂಘಟಿಸಿದ ಬುಮ್ರಾಗೆ ಸಿಕ್ಕ ಸ್ವಾಗತ ಹೇಗಿತ್ತು ನೋಡಿ
ಅಧಿಕಾರ ಯಾವತ್ತಿಗೂ ಶಾಶ್ವತವಲ್ಲ, ನಿರೀಕ್ಷಿಸಿದ್ದೆಲ್ಲ ನಡೆಯಲ್ಲ: ತನ್ವೀರ್
ಅಧಿಕಾರ ಯಾವತ್ತಿಗೂ ಶಾಶ್ವತವಲ್ಲ, ನಿರೀಕ್ಷಿಸಿದ್ದೆಲ್ಲ ನಡೆಯಲ್ಲ: ತನ್ವೀರ್
ಬಲಾಬಲ ಪ್ರದರ್ಶಿಸುವ ಅವಶ್ಯಕತೆ ಡಿಕೆ ಶಿವಕುಮಾರ್ ಅವರಿಗಿಲ್ಲ: ಡಿಕೆ ಸುರೇಶ್
ಬಲಾಬಲ ಪ್ರದರ್ಶಿಸುವ ಅವಶ್ಯಕತೆ ಡಿಕೆ ಶಿವಕುಮಾರ್ ಅವರಿಗಿಲ್ಲ: ಡಿಕೆ ಸುರೇಶ್