AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಶದಲ್ಲಿ 24ಗಂಟೆಯಲ್ಲಿ 4100 ಮಂದಿ ಕೊರೊನಾದಿಂದ ಸಾವು; ಮೃತರ ಸಂಖ್ಯೆಯಲ್ಲಿ ಏಕಾಏಕಿ ಏರಿಕೆಯಾಗಲು ಕಾರಣವೇನು?

ಭಾರತದಲ್ಲಿ ಕೊರೊನಾದ ಮೂರನೇ ಅಲೆ ತಗ್ಗಿದೆ. ಇತ್ತೀಚೆಗೆ ಪ್ರತಿದಿನ ದಾಖಲಾಗುವ ಕೊರೊನಾ ಸಂಖ್ಯೆಯಲ್ಲಿ ಇಳಿಮುಖವಾಗುತ್ತಿದೆ. ಚೇತರಿಕೆ ದರ ಶೇ.98.75ರಷ್ಟಿದೆ.

ದೇಶದಲ್ಲಿ 24ಗಂಟೆಯಲ್ಲಿ 4100 ಮಂದಿ ಕೊರೊನಾದಿಂದ ಸಾವು; ಮೃತರ ಸಂಖ್ಯೆಯಲ್ಲಿ ಏಕಾಏಕಿ ಏರಿಕೆಯಾಗಲು ಕಾರಣವೇನು?
ಸಾಂಕೇತಿಕ ಚಿತ್ರ
TV9 Web
| Edited By: |

Updated on:Mar 26, 2022 | 11:43 AM

Share

ಭಾರತದಲ್ಲಿ ಕಳೆದ 24 ಗಂಟೆಯಲ್ಲಿ 1660 ಹೊಸ ಕೊವಿಡ್​ 19 ಕೇಸ್​ಗಳು (Covid 19 Cases) ದಾಖಲಾಗಿದೆ. ಆದರೆ ಬರೋಬ್ಬರಿ 4100 ಮಂದಿ ಕೊರೊನಾದಿಂದ ಮೃತಪಟ್ಟಿದ್ದಾಗಿ ಆರೋಗ್ಯ ಇಲಾಖೆ ಡೇಟಾದಲ್ಲಿ ಉಲ್ಲೇಖವಾಗಿದೆ. ಇಲ್ಲಿ ಗಮನಿಸಬೇಕಾದ ಅಂಶವೆಂದರೆ ಕೊರೊನಾ ಸಾವಿನ ಸಂಖ್ಯೆ ಬರೋಬ್ಬರಿ 4000ಕ್ಕೆ ಏರಿಕೆಯಾಗಿದ್ದು. ಈ ಮೂಲಕ ದೇಶದ ಸಾವಿನ ಸಂಖ್ಯೆ 5,20,855ಕ್ಕೆ ಏರಿಕೆಯಾಗಿದೆ. ಸದ್ಯ ದೇಶದಲ್ಲಿ ಕೊರೊನಾ ಸೋಂಕಿನ ಸಂಖ್ಯೆ ಕಡಿಮೆ ಇದೆ. ಹಾಗೇ ಇತ್ತೀಚೆಗೆ ಪ್ರತಿದಿನ 100ಕ್ಕೂ ಕಡಿಮೆ ಕೊರೊನಾ ಸಾವಿನ ಸಂಖ್ಯೆ ದಾಖಲಾಗುತ್ತಿತ್ತು. ಆದರೆ ಈಗ ಏಕಾಏಕಿ 4100 ದಾಖಲಾಗಲು ಕಾರಣ ಹಳೇ ಕೇಸ್​ಗಳು ಎನ್ನಲಾಗಿದೆ.  ಇದಕ್ಕೆ ಬ್ಯಾಕ್​ಲಾಗ್​ ಕೇಸ್​ಗಳು ಎನ್ನಲಾಗುತ್ತದೆ. ಒಟ್ಟು 4100 ಕೇಸ್​​ಗಳಲ್ಲಿ 4005 ಮಹಾರಾಷ್ಟ್ರದಿಂದ ಮತ್ತು 79 ಕೇರಳದಿಂದ ವರದಿಯಾಗಿದೆ. ಅಂದರೆ ಈ ರಾಜ್ಯಗಳು ಪರಿಷ್ಕೃತ ಕೊವಿಡ್​ 19 ವರದಿ ನೀಡಿದ್ದು, ಅದರಲ್ಲಿ ಹಳೇ ಬಾಕಿ ಇದ್ದ ಪ್ರಕರಣಗಳನ್ನೂ ಸೇರಿಸಿವೆ. 

ಭಾರತದಲ್ಲಿ ಕೊರೊನಾದ ಮೂರನೇ ಅಲೆ ತಗ್ಗಿದೆ. ಇತ್ತೀಚೆಗೆ ಪ್ರತಿದಿನ ದಾಖಲಾಗುವ ಕೊರೊನಾ ಸಂಖ್ಯೆಯಲ್ಲಿ ಇಳಿಮುಖವಾಗುತ್ತಿದೆ. ಚೇತರಿಕೆ ದರ ಶೇ.98.75ರಷ್ಟಿದೆ. ಕಳೆದ 24ಗಂಟೆಯಲ್ಲಿ 2,349 ಕೊರೊನಾದಿಂದ ಚೇತರಿಸಿಕೊಂಡು ಆಸ್ಪತ್ರೆಗಳಿಂದ ಡಿಸ್​ಚಾರ್ಜ್​ ಆಗಿದ್ದು, ಒಟ್ಟೂ ಚೇತರಿಸಿಕೊಂಡವರ ಸಂಖ್ಯೆ 4,24,80,436ಕ್ಕೆ ಏರಿದೆ. ದೇಶದಲ್ಲೀಗ ಕೊರೊನಾ ಸಕ್ರಿಯ ಪ್ರಕರಣಗಳ ಸಂಖ್ಯೆ ಕೇವಲ 16,741 ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ಕೊರೊನಾ ಪ್ರಾರಂಭವಾದಾಗಿನಿಂದ ಇಲ್ಲಿಯವರೆಗೆ ಒಟ್ಟು 4,30,18,032 ಜನರಿಗೆ ಸೋಂಕು ತಗುಲಿತ್ತು. ಇನ್ನೊಂದೆಡೆ ಲಸಿಕೆ ಅಭಿಯಾನವೂ ನಡೆಯುತ್ತಿದ್ದು, ಇಲ್ಲಿಯವರೆಗೆ ಒಟ್ಟಾರೆ 1,82,87,68,476 ಮಂದಿ ಲಸಿಕೆ ಪಡೆದಿದ್ದಾರೆ. ದೈನಂದಿನ ಪಾಸಿಟಿವಿಟಿ ದರ ಕೇವಲ ಶೇ.0.25ರಷ್ಟಿದೆ.

ನಿನ್ನೆ ದಾಖಲಾಗಿದ್ದ ಕೊರೊನಾ ಕೇಸ್​​ಗೆ ಹೋಲಿಸಿದರೆ ಇಂದು ಸ್ವಲ್ಪ ಮಟ್ಟಿಗೆ ಕಡಿಮೆಯಾಗಿತ್ತು. ಅಂದರೆ ನಿನ್ನೆ 1685 ಮಂದಿಯಲ್ಲಿ ಸೋಂಕು ದೃಢಪಟ್ಟಿತ್ತು. ಆದರೆ ಇಂದು 1660 ಪ್ರಕರಣಗಳು ದಾಖಲಾಗಿದ್ದು, ಕೇವಲ 25 ಪ್ರಕರಣಗಳು ಹೆಚ್ಚು. ಹಾಗೇ ನಿನ್ನೆ 83 ಜನ ಕೊರೊನಾದಿಂದ ಮೃತಪಟ್ಟಿದ್ದರು. ದೇಶದಲ್ಲಿ ಸದ್ಯದ ಮಟ್ಟಿಗೆ ಕೊರೊನಾ ಸೋಂಕಿನ ಪ್ರಸರಣ ಮತ್ತು ಸಾವಿನ ಸಂಖ್ಯೆ ಕಡಿಮೆಯಿದೆ. ಕೊರೊನಾದಿಂದ ಉಂಟಾಗುವ ಸಾವಿನ ಪ್ರಮಾಣ ಶೇ.1.20ರಷ್ಟಿದೆ. ದೇಶದಲ್ಲಿ ಮಾರ್ಚ್​ 16ರಿಂದ, 12-14ವಯಸ್ಸಿನವರಿಗೂ ಕೊರೊನಾ ಲಸಿಕೆ ನೀಡಲಾಗುತ್ತಿದ್ದು ಇಲ್ಲಿಯವರೆಗೆ ಸುಮಾರು ಒಂದು ಕೋಟಿ ಮಕ್ಕಳಿಗೆ ಒಂದನೇ ಡೋಸ್ ನೀಡಿಯಾಗಿದೆ ಎಂದು ಆರೋಗ್ಯ ಸಚಿವ ಮನ್​ಸುಖ್ ಮಾಂಡವಿಯಾ ತಿಳಿಸಿದ್ದಾರೆ. ಅಂದಹಾಗೇ ಇವರಿಗೆಲ್ಲ ಕಾರ್ಬೋವ್ಯಾಕ್ಸ್​ ಲಸಿಕೆ ನೀಡಲಾಗುತ್ತಿದ್ದು, 28 ದಿನಗಳ ಬಳಿಕ ಎರಡನೇ ಡೋಸ್ ನೀಡಲಾಗುತ್ತದೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ವರದಕ್ಷಿಣೆ ನೀಡುವಂತೆ ಒತ್ತಾಯಿಸಿ ಪತ್ನಿಯನ್ನೇ ಕೊಂದ ಪತಿ!

Published On - 11:15 am, Sat, 26 March 22

Follow Us
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?