AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

COVID-19: ದೇಶದಲ್ಲಿ 24 ಗಂಟೆಯಲ್ಲಿ 42,766 ಕೊರೊನಾ ಕೇಸ್​ಗಳು ಪತ್ತೆ; ಪಾಸಿಟಿವಿಟಿ ದರ ಶೇ.3ಕ್ಕಿಂತಲೂ ಕಡಿಮೆ

ಭಾರತದಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 3,07,95,716ಕ್ಕೆ ಏರಿಕೆಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 4,55,033ಕ್ಕೆ ಇಳಿದಿದೆ. ಇನ್ನು 24ಗಂಟೆಯಲ್ಲಿ 45,254 ಕೊರೊನಾ ರೋಗಿಗಳು ಗುಣಮುಖರಾಗಿ ಡಿಸ್​ಚಾರ್ಜ್​ ಆಗಿದ್ದಾರೆ.

COVID-19: ದೇಶದಲ್ಲಿ 24 ಗಂಟೆಯಲ್ಲಿ 42,766 ಕೊರೊನಾ ಕೇಸ್​ಗಳು ಪತ್ತೆ; ಪಾಸಿಟಿವಿಟಿ ದರ ಶೇ.3ಕ್ಕಿಂತಲೂ ಕಡಿಮೆ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Jul 10, 2021 | 11:52 AM

Share

ದೇಶದಲ್ಲಿ ಕೊರೊನಾ ಎರಡನೇ ಅಲೆ ತುಸು ತಗ್ಗಿದ್ದರೂ, ನಿರ್ಲಕ್ಷ್ಯ ಮಾಡುವಂತಿಲ್ಲ ಎಂದು ಆರೋಗ್ಯ ಕ್ಷೇತ್ರದ ತಜ್ಞರು ಎಚ್ಚರಿಕೆ ಕೊಟ್ಟಿದ್ದಾರೆ. ಈ ಮಧ್ಯೆ ಒಂದು ದಿನದಲ್ಲಿ ಪತ್ತೆಯಾಗುವ ಹೊಸ ಕೊರೊನಾ ಸೋಂಕಿನ ಪ್ರಕರಣದಲ್ಲಿ ಗಣನೀಯವಾಗಿ ಕಡಿಮೆಯಾಗುತ್ತಿದೆ. ಕಳೆದ 24ಗಂಟೆಯಲ್ಲಿ 42,766 ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, 1,206 ಮಂದಿ ಮೃತಪಟ್ಟಿದ್ದಾರೆ ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಭಾರತದಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 3,07,95,716ಕ್ಕೆ ಏರಿಕೆಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 4,55,033ಕ್ಕೆ ಇಳಿದಿದೆ. ಇನ್ನು 24ಗಂಟೆಯಲ್ಲಿ 45,254 ಕೊರೊನಾ ರೋಗಿಗಳು ಗುಣಮುಖರಾಗಿ ಡಿಸ್​ಚಾರ್ಜ್​ ಆಗಿದ್ದಾರೆ. ದೇಶದಲ್ಲಿ ಕೊರೊನಾ ಚೇತರಿಕೆ ಪ್ರಮಾಣ ಶೇ.97.2ರಷ್ಟಿದ್ದು, ಇದುವರೆಗೆ ಕೊರೊನಾ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ ಮೂರು ಕೋಟಿ ಸನಿಹಕ್ಕೆ ತಲುಪಿದೆ. ಅಂದರೆ ಇಲ್ಲಿಯವರೆಗೆ ಕೊರೊನಾದಿಂದ ಚೇತರಿಸಿಕೊಂಡು ಡಿಸ್​ಚಾರ್ಜ್ ಆದವರ ಸಂಖ್ಯೆ 2,99,33,538ಕ್ಕೆ ತಲುಪಿದೆ.

5ರಾಜ್ಯಗಳಲ್ಲಿ ಹೆಚ್ಚಿನ ಕೇಸ್​ಗಳು ಶನಿವಾರ ಒಟ್ಟು ಐದು ರಾಜ್ಯಗಳಲ್ಲಿ ಕೊರೊನಾ ಸೋಂಕಿನ ಪ್ರಮಾಣ ಹೆಚ್ಚಿಗೆ ಕಾಣಿಸಿದೆ. ಕೇರಳದಲ್ಲಿ 13, 563, ಮಹಾರಾಷ್ಟ್ರದಲ್ಲಿ 8,992, ಆಂಧ್ರಪ್ರದೇಶ 3,040 ಮತ್ತು ತಮಿಳುನಾಡಿನಲ್ಲಿ 3039, ಒಡಿಶಾದಲ್ಲಿ 2,806 ಕೊರೊನಾ ಕೇಸ್​ಗಳು ದಾಖಲಾಗಿವೆ. ಇಂದು ದಾಖಲಾದ ಒಟ್ಟು ಕೊರೊನಾ ಸೋಂಕಿನ ಪ್ರಕರಣದಲ್ಲಿ ಶೇ.73.52ರಷ್ಟು ಪಾಲು ಈ ಐದು ರಾಜ್ಯಗಳದ್ದೇ ಆಗಿದೆ. ಅದರಲ್ಲಿ ಕೇರಳದ ಪಾಲೇ ಶೇ.30ರಷ್ಟಿದೆ.

ಶೇ.3ಕ್ಕಿಂತಲೂ ಕಡಿಮೆ ಇದೆ ಪಾಸಿಟಿವಿಟಿ ರೇಟ್​ ಇನ್ನು ದೇಶದಲ್ಲಿ ಕೊರೊನಾ ಪಾಸಿಟಿವಿಟಿ ದರ ಶೇ.3ಕ್ಕಿಂತಲೂ ಕಡಿಮೆ ಇದೆ. ಕಳೆದ 19 ದಿನಗಳಿಂದಲೂ ಪಾಸಿಟಿವಿಟಿ ದರ ಶೇ.2.19ರಷ್ಟೇ ಇರುವುದು ಸಮಾಧಾನಕರ ಸಂಗತಿಯಾಗಿದೆ. ದೇಶದಲ್ಲಿ ಈಗಾಗಲೇ 37.21 ಕೋಟಿ ಡೋಸ್​ ಲಸಿಕೆ ನೀಡಲಾಗಿದೆ. ಹಾಗೇ ಕಳೆದ 24ಗಂಟೆಯಲ್ಲಿ 30,55,802 ಡೋಸ್​ ಲಸಿಕೆ ನೀಡಿದ್ದಾಗಿ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಇದನ್ನೂ ಓದಿ: ಯೋಧನ ಹೆಸರಿನಲ್ಲಿ ವಂಚನೆ; ಬೆಳಗಾವಿ ಶಾಲಾ ಆಡಳಿತ ಮಂಡಳಿಯ ಬ್ಯಾಂಕ್​ ಖಾತೆಯಿಂದ 90 ಸಾವಿರ ರೂಪಾಯಿ ಹಣ ಲೂಟಿ

India records 42 766 new Corona Virus Cases in 24 hours

Follow Us
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ