AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Coronavirus Cases in India: ನಿನ್ನೆ 91,072 ಕೊರೊನಾ ಪ್ರಕರಣ ಪತ್ತೆ, ಮೊನ್ನೆಗಿಂತ ತುಸು ಕಡಿಮೆ; ಸಾವಿನ ಸಂಖ್ಯೆಯಲ್ಲೂ ಇಳಿಮುಖ

ಮೊನ್ನೆ (ಜೂನ್​ 9) 94,052 ಪ್ರಕರಣಗಳು ಹೊಸದಾಗಿ ದಾಖಲಾಗಿದ್ದು, ಅದಕ್ಕೆ ಹೋಲಿಸಿದರೆ ನಿನ್ನೆ ಸೋಂಕಿತರ ಪ್ರಮಾಣದಲ್ಲಿ ಕೊಂಚ ಇಳಿಕೆ ಕಂಡಿದೆ. ಜತೆಗೆ, ಸಾವಿನ ಪ್ರಮಾಣ ಸುಮಾರು ಅರ್ಧದಷ್ಟು ಕಡಿಮೆಯಾಗಿರುವುದು ವೈದ್ಯಕೀಯ ವಲಯದಲ್ಲಿ ಸಮಾಧಾನ ಮೂಡಿಸಿದೆ.

Coronavirus Cases in India: ನಿನ್ನೆ 91,072 ಕೊರೊನಾ ಪ್ರಕರಣ ಪತ್ತೆ, ಮೊನ್ನೆಗಿಂತ ತುಸು ಕಡಿಮೆ; ಸಾವಿನ ಸಂಖ್ಯೆಯಲ್ಲೂ ಇಳಿಮುಖ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Jun 11, 2021 | 10:08 AM

Share

ದೆಹಲಿ: ಭಾರತದಲ್ಲಿ ಕೊರೊನಾ ಸೋಂಕಿನ ಎರಡನೇ ಅಲೆ ಅಬ್ಬರ ಇಳಿಮುಖವಾಗುತ್ತಿದೆ. ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ, ಸಾವಿನ ಪ್ರಮಾಣ ಕಡಿಮೆಯಾಗುತ್ತಿದ್ದು, ಚೇತರಿಸಿಕೊಳ್ಳುತ್ತಿರುವವರ ಸಂಖ್ಯೆಯೂ ಹೆಚ್ಚುತ್ತಿದೆ. ನಿನ್ನೆ (ಜೂನ್​ 10) ಭಾರತದಲ್ಲಿ 91,072 ಕೊರೊನಾ ಪ್ರಕರಣಗಳು ಹೊಸದಾಗಿ ಪತ್ತೆಯಾಗಿದ್ದು, 3,403 ಸೋಂಕಿತರು ಮೃತಪಟ್ಟಿದ್ದಾರೆ. ಮೊನ್ನೆ (ಜೂನ್​ 9) 94,052 ಪ್ರಕರಣಗಳು ಹೊಸದಾಗಿ ದಾಖಲಾಗಿದ್ದು, ಅದಕ್ಕೆ ಹೋಲಿಸಿದರೆ ನಿನ್ನೆ ಸೋಂಕಿತರ ಪ್ರಮಾಣದಲ್ಲಿ ಕೊಂಚ ಇಳಿಕೆ ಕಂಡಿದೆ. ಜತೆಗೆ, ಸಾವಿನ ಪ್ರಮಾಣ ಸುಮಾರು ಅರ್ಧದಷ್ಟು ಕಡಿಮೆಯಾಗಿರುವುದು ವೈದ್ಯಕೀಯ ವಲಯದಲ್ಲಿ ಸಮಾಧಾನ ಮೂಡಿಸಿದೆ.

ಪ್ರಸ್ತುತ 91,072 ಕೊರೊನಾ ಪ್ರಕರಣಗಳು ಕಂಡುಬರುವ ಮೂಲಕ ಭಾರತದಲ್ಲಿ ಈವರೆಗೆ ದಾಖಲಾದ ಒಟ್ಟು ಕೊರೊನಾ ಪ್ರಕರಣಗಳ ಸಂಖ್ಯೆ 2,92,74,873ಕ್ಕೆ ತಲುಪಿದೆ. ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 2,77,90,073 ಹಾಗೂ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 3,63,079ಕ್ಕೆ ಬಂದು ನಿಂತಿದೆ. ಸದ್ಯ ದೇಶದಲ್ಲಿರುವ ಸಕ್ರಿಯ ಪ್ರಕರಣಗಳ ಸಂಖ್ಯೆ 11,21,671 ಆಗಿದ್ದು, ಸೋಂಕಿನ ಪ್ರಭಾವ ತಗ್ಗಿಸಲು ಲಸಿಕೆ ವಿತರಣೆಗೆ ಹೆಚ್ಚು ಒತ್ತು ನೀಡಲಾಗುತ್ತಿದೆ.

ಕಳೆದ 24ತಾಸಿನಲ್ಲಿ ದೇಶದದಲ್ಲಿ 32,74,672 ಡೋಸ್ ಕೊರೊನಾ ಲಸಿಕೆ ವಿತರಣೆಯಾಗಿದ್ದು, ಇಲ್ಲಿಯ ತನಕ ಒಟ್ಟು 24,60,85,649 ಡೋಸ್​ ಲಸಿಕೆಯನ್ನು ಹಂಚಲಾಗಿದೆ. ಎಲ್ಲಾ ರಾಜ್ಯಗಳಿಗೆ ಹೋಲಿಸಿದರೆ ಲಸಿಕೆ ವಿತರಣೆ ವಿಚಾರದಲ್ಲಿ ತಮಿಳುನಾಡು ತೀರಾ ಹಿಂದೆ ಬಿದ್ದಿದ್ದು ಇಲ್ಲಿಯ ತನಕ ರಾಜ್ಯದ 7ಕೋಟಿ ಜನರ ಪೈಕಿ ಕೇವಲ ಶೇ.9ರಷ್ಟು ಮಂದಿಗೆ ಮಾತ್ರ ಲಸಿಕೆ ನೀಡುವಲ್ಲಿ ಸಫಲವಾಗಿದೆ. ಇದರೊಂದಿಗೆ ಉತ್ತರಪ್ರದೇಶ, ಅಸ್ಸಾಂ, ಬಿಹಾರ್ ಹಾಗೂ ಜಾರ್ಖಂಡ್ ರಾಜ್ಯಗಳೂ ಲಸಿಕೆ ವಿತರಿಸುವಲ್ಲಿ ಹಿಂದುಳಿದಿವೆ ಎಂದು ಅಂಕಿ ಅಂಶಗಳು ತಿಳಿಸಿವೆ.

ಏತನ್ಮಧ್ಯೆ ತಮಿಳುನಾಡಿನಲ್ಲಿ 16,183, ಕೇರಳದಲ್ಲಿ 14,424, ಮಹಾರಾಷ್ಟ್ರದಲ್ಲಿ 12,207 ಹಾಗೂ ಕರ್ನಾಟಕದಲ್ಲಿ 11,402 ಕೊರೊನಾ ಪ್ರಕರಣಗಳು ಹೊಸದಾಗಿ ಪತ್ತೆಯಾಗಿವೆ. ಕರ್ನಾಟಕದ 11 ಜಿಲ್ಲೆಗಳಲ್ಲಿ ಜೂನ್​ 14ರ ನಂತರ ಮತ್ತೆ ಲಾಕ್​ಡೌನ್​ ವಿಸ್ತರಿಸುತ್ತಿರುವುದಾಗಿ ನಿನ್ನೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಘೋಷಣೆ ಮಾಡಿದ್ದು, ಉಳಿದ ಜಿಲ್ಲೆಗಳಲ್ಲಿ ನಿಧಾನವಾಗಿ ನಿಯಮ ಸಡಿಲಿಸಲಾಗುವುದು ಎಂದು ತಿಳಿಸಿದ್ದಾರೆ.

(India records 91072 new cases on June 9th slightly fewer than day before death rate also decreased)

ಇದನ್ನೂ ಓದಿ: ಕೊರೊನಾ ಚಿಕಿತ್ಸೆಗೆ ಲಕ್ಷಗಟ್ಟಲೆ ಹಣ ಪಡೆದ ಖಾಸಗಿ ಆಸ್ಪತ್ರೆಗಳಿಗೆ ಆರೋಗ್ಯ ಇಲಾಖೆ ನೋಟಿಸ್​; ದಾಖಲೆ ಸಿಕ್ಕರೆ ಕ್ರಮ ಕೈಗೊಳ್ಳುವ ಎಚ್ಚರಿಕೆ 

ಕೊರೊನಾ ಲಸಿಕೆ ಬೌದ್ಧಿಕ ಆಸ್ತಿ ಹಕ್ಕು ವಿನಾಯಿತಿ ಬಗ್ಗೆ ಮಾತುಕತೆಗೆ ಸಮ್ಮತಿಸಿದ ವಿಶ್ವ ವ್ಯಾಪಾರ ಸಂಘಟನೆ

Published On - 10:07 am, Fri, 11 June 21

Follow Us
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?