AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದಲ್ಲಿ ಇಂದು 2 ಲಕ್ಷದ 60 ಸಾವಿರ ಮಂದಿಗೆ ಸೋಂಕು, 1,495 ಮಂದಿ ಬಲಿ

ಭಾರತದಲ್ಲಿ ಇಂದು ಹೊಸದಾಗಿ 2,60,533 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಸತತ ನಾಲ್ಕನೇ ದಿನವೂ ಎರಡು ಲಕ್ಷಕ್ಕೂ ಅಧಿಕ ಕೊರೊನಾ ಪಾಸಿಟಿವ್ ಕೇಸ್​ಗಳು ಪತ್ತೆಯಾಗುತ್ತಿದ್ದು ಹಳೇ ದಾಖಲೆಗಳನ್ನು ಮುರಿದು ಇಂದೂ ಸಹ ಮತ್ತೊಂದು ಹೊಸ ದಾಖಲೆಯನ್ನು ಬರೆದಿದೆ.

ಭಾರತದಲ್ಲಿ ಇಂದು 2 ಲಕ್ಷದ 60 ಸಾವಿರ ಮಂದಿಗೆ ಸೋಂಕು, 1,495 ಮಂದಿ ಬಲಿ
ಜಲಂದರ್​ನಲ್ಲಿ ಕೊವಿಡ್ ಪರೀಕ್ಷೆ
ಆಯೇಷಾ ಬಾನು
|

Updated on:Apr 18, 2021 | 12:23 PM

Share

ದೆಹಲಿ: ಜನರನ್ನು ಹಿಂಡಿ ಹಿಪ್ಪೆ ಮಾಡುತ್ತಿರುವ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಏರುತ್ತಲೇ ಸಾಗಿದೆ. ಹಳೇ ದಾಖಲೆಗಳನ್ನೆಲ್ಲ ಮುರಿಯುತ್ತ ಓಡುತ್ತಿದೆ. ಭಾರತದಲ್ಲಿ ಇಂದು ಹೊಸದಾಗಿ 2,60,533 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಸತತ ನಾಲ್ಕನೇ ದಿನವೂ ಎರಡು ಲಕ್ಷಕ್ಕೂ ಅಧಿಕ ಕೊರೊನಾ ಪಾಸಿಟಿವ್ ಕೇಸ್​ಗಳು ಪತ್ತೆಯಾಗುತ್ತಿದ್ದು ಹಳೇ ದಾಖಲೆಗಳನ್ನು ಮುರಿದು ಇಂದೂ ಸಹ ಮತ್ತೊಂದು ಹೊಸ ದಾಖಲೆಯನ್ನು ಬರೆದಿದೆ.

ಕಳೆದ 24 ಗಂಟೆಯ ಅವಧಿಯಲ್ಲಿ 2,60,533 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 1,495 ಮಂದಿ ಮೃತಪಟ್ಟಿದ್ದಾರೆ. ಇಲ್ಲಿಯ ವರೆಗೆ ಒಟ್ಟು 1,47,82,461 ಸೋಂಕಿತರು ಪತ್ತೆಯಾಗಿದ್ದಾರೆ. ಹಾಗೂ 1,77,167 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ಸತತ ನಾಲ್ಕನೇ ದಿನವೂ ಎರಡು ಲಕ್ಷಕ್ಕೂ ಅಧಿಕ ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ. ನೆನ್ನೆಗಿಂತ ಇಂದು 26 ಸಾವಿರ ಕೊರೊನಾ ಪಾಸಿಟಿವ್ ಕೇಸ್​ಗಳು ಹೆಚ್ಚಳವಾಗಿವೆ. ಕೇವಲ ಹತ್ತೇ ದಿನದಲ್ಲಿ ಕೊವಿಡ್ ಕೇಸ್​ಗಳು ದುಪ್ಪಟ್ಟು ಆಗುತ್ತಾ ಸಾಗುತ್ತಿದೆ. ಏಪ್ರಿಲ್‌ 4- ಒಂದು ಲಕ್ಷ ಕೊರೊನಾ ಕೇಸ್ ಏಪ್ರಿಲ್ 14- ಎರಡು ಲಕ್ಷ ಕೊರೊನಾ ಕೇಸ್ ಏಪ್ರಿಲ್ 18- ಎರಡು ಲಕ್ಷದ ಅರವತ್ತು‌ ಸಾವಿರ ಕೊರೊನಾ ಪಾಸಿಟಿವ್ ಕೇಸ್​ಗಳು ಪತ್ತೆಯಾಗಿವೆ.

ಇನ್ನು ಉತ್ತರ ಪ್ರದೇಶದಲ್ಲಿ 27,334 ಹೊಸ ಪ್ರಕರಣಗಳು ಪತ್ತೆಯಾಗಿವೆ. ದೆಹಲಿಯಲ್ಲಿ ಹೊಸದಾಗಿ 24,375 ಮಂದಿಗೆ ಕೊರೊನಾ ತಗುಲಿದೆ. ಮಹಾರಾಷ್ರವು ಶನಿವಾರ ಅತಿ ಹೆಚ್ಚು ಸಾವುಗಳನ್ನು ವರದಿ ಮಾಡಿದೆ. ಶನಿವಾರ 419 ಮಂದಿ ಕೊರೊನಾಗೆ ಬಲಿಯಾಗಿದ್ದರು. ದೆಹಲಿಯಲ್ಲಿ ಹೊಸದಾಗಿ ಇಂದು 167 ಮಂದಿ ಮೃತಪಟ್ಟಿದ್ದಾರೆ. ಹಾಗೂ ಛತ್ತಿಸ್​ಘಡದಲ್ಲಿ 138 ಸೋಂಕಿತರು ಮೃತಪಟ್ಟಿದ್ದಾರೆ. ಅಮೆರಿಕಾ ಮತ್ತು ಮೆಕ್ಸಿಕೋಗಳಿಗಿಂತ ಭಾರತ ಎರಡನೇ ಅತಿ ಹೆಚ್ಚಿನ ಸರಾಸರಿ ದೈನಂದಿನ ಸಾವುಗಳನ್ನು ವರದಿ ಮಾಡಿದೆ.

ಕೊರೊನಾ ಸೋಂಕಿನಿಂದ 1,28,09,643 ಜನರು ಗುಣಮುಖರಾಗಿದ್ದಾರೆ. ಸಕ್ರಿಯ ಪ್ರಕರಣಗಳು 18,01,316. ಹಾಗೂ ಭಾರತದಲ್ಲಿ 12,26,22,590 ಜನರಿಗೆ ಕೊವಿಡ್ ಲಸಿಕೆ ನೀಡಲಾಗಿದೆ. ದೇಶದಲ್ಲಿ ನಿನ್ನೆ 15,66,394 ಕೊವಿಡ್ ಸ್ಯಾಂಪಲ್ಸ್ ಟೆಸ್ಟ್ ಮಾಡಲಾಗಿದೆ. ಏ.17ರವರೆಗೆ ಒಟ್ಟು 26,65,38,416 ಸ್ಯಾಂಪಲ್ಸ್ ಟೆಸ್ಟ್ ಆಗಿದೆ ಎಂದು ಕೊವಿಡ್-19 ಟೆಸ್ಟ್ ಬಗ್ಗೆ ಐಸಿಎಂಆರ್‌ನಿಂದ ಮಾಹಿತಿ ಸಿಕ್ಕಿದೆ.

ಇದನ್ನೂ ಓದಿ: ಆಳಂಗಾ ಗ್ರಾಮದ 60 ಜನರಿಗೆ ಕೊರೊನಾ, ಭಾಗವತ ಪುರಾಣ ಓದಲು ಮಹಾರಾಷ್ಟ್ರದಿಂದ ಬಂದವರ ಮೇಲೆ ಶಂಕೆ

Published On - 9:19 am, Sun, 18 April 21

ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು
ಬಿಗ್ ಬಾಸ್ ನಾಮಿನೇಷನ್ ಪ್ರಕ್ರಿಯೆ: ಕ್ಯಾಪ್ಟನ್ ಗಿಲ್ಲಿ ನಟ ಯಾರ ಪರ?
ಬಿಗ್ ಬಾಸ್ ನಾಮಿನೇಷನ್ ಪ್ರಕ್ರಿಯೆ: ಕ್ಯಾಪ್ಟನ್ ಗಿಲ್ಲಿ ನಟ ಯಾರ ಪರ?
ಕಾರಿಗೆ ಗುದ್ದಿ ಪಾದಚಾರಿ ಮೇಲೆ ಕ್ಯಾಂಟರ್ ಪಲ್ಟಿ​​: ಎದೆ ಝಲ್ ಎನಿಸೋ ದೃಶ್ಯ!
ಕಾರಿಗೆ ಗುದ್ದಿ ಪಾದಚಾರಿ ಮೇಲೆ ಕ್ಯಾಂಟರ್ ಪಲ್ಟಿ​​: ಎದೆ ಝಲ್ ಎನಿಸೋ ದೃಶ್ಯ!
ಬಾರ್​ಗೆ ನುಗ್ಗಿದ ಕೊಬ್ಬರಿ ಹೋರಿ, ಮದ್ಯಪ್ರಿಯರು ಕಕ್ಕಾಬಿಕ್ಕಿ!
ಬಾರ್​ಗೆ ನುಗ್ಗಿದ ಕೊಬ್ಬರಿ ಹೋರಿ, ಮದ್ಯಪ್ರಿಯರು ಕಕ್ಕಾಬಿಕ್ಕಿ!
ರಾಯಚೂರಲ್ಲೂ ಘರ್ಜಿಸಿದ ಜೆಸಿಬಿಗಳು: 20ಕ್ಕೂ ಅಧಿಕ ಮನೆಗಳ ತೆರವು
ರಾಯಚೂರಲ್ಲೂ ಘರ್ಜಿಸಿದ ಜೆಸಿಬಿಗಳು: 20ಕ್ಕೂ ಅಧಿಕ ಮನೆಗಳ ತೆರವು
ಅಪಾರ್ಟ್ಮೆಂಟ್​​ನಲ್ಲಿ ಸಿಲುಕಿಕೊಂಡ ಬೆಕ್ಕನ್ನು ಕಾಪಾಡಿದ ಅಗ್ನಿಶಾಮಕ ದಳ
ಅಪಾರ್ಟ್ಮೆಂಟ್​​ನಲ್ಲಿ ಸಿಲುಕಿಕೊಂಡ ಬೆಕ್ಕನ್ನು ಕಾಪಾಡಿದ ಅಗ್ನಿಶಾಮಕ ದಳ
ಬಿಗ್ ಬಾಸ್​​ನಿಂದ ಹೊರ ಬರಲು ಅದುವೇ ಕಾರಣವಾಯ್ತು; ಸೂರಜ್ ಬೇಸರ
ಬಿಗ್ ಬಾಸ್​​ನಿಂದ ಹೊರ ಬರಲು ಅದುವೇ ಕಾರಣವಾಯ್ತು; ಸೂರಜ್ ಬೇಸರ
ಹುಟ್ಟೂರಿನಲ್ಲಿ ಮನೆ ದೇವರಿಗೆ ಪೂಜೆ ಸಲ್ಲಿಸಿದ ಹೆಚ್.ಡಿ.ದೇವೇಗೌಡ
ಹುಟ್ಟೂರಿನಲ್ಲಿ ಮನೆ ದೇವರಿಗೆ ಪೂಜೆ ಸಲ್ಲಿಸಿದ ಹೆಚ್.ಡಿ.ದೇವೇಗೌಡ
ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ನಿಲ್ಲದ ಹಿಂಸಾಚಾರ, ಹಿಂದೂಗಳ ಮನೆಗಳಿಗೆ ಬೆಂಕಿ
ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ನಿಲ್ಲದ ಹಿಂಸಾಚಾರ, ಹಿಂದೂಗಳ ಮನೆಗಳಿಗೆ ಬೆಂಕಿ
ಬಾರ್​​​ನಲ್ಲಿ ಸಿಗರೇಟ್ ವಿಚಾರಕ್ಕೆ ಜಗಳ:ಚಾಕು ಇರಿದು ಯುವಕನಿಗೆ ಹಲ್ಲೆ
ಬಾರ್​​​ನಲ್ಲಿ ಸಿಗರೇಟ್ ವಿಚಾರಕ್ಕೆ ಜಗಳ:ಚಾಕು ಇರಿದು ಯುವಕನಿಗೆ ಹಲ್ಲೆ