AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದಲ್ಲಿ ಇಂದು 2 ಲಕ್ಷದ 60 ಸಾವಿರ ಮಂದಿಗೆ ಸೋಂಕು, 1,495 ಮಂದಿ ಬಲಿ

ಭಾರತದಲ್ಲಿ ಇಂದು ಹೊಸದಾಗಿ 2,60,533 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಸತತ ನಾಲ್ಕನೇ ದಿನವೂ ಎರಡು ಲಕ್ಷಕ್ಕೂ ಅಧಿಕ ಕೊರೊನಾ ಪಾಸಿಟಿವ್ ಕೇಸ್​ಗಳು ಪತ್ತೆಯಾಗುತ್ತಿದ್ದು ಹಳೇ ದಾಖಲೆಗಳನ್ನು ಮುರಿದು ಇಂದೂ ಸಹ ಮತ್ತೊಂದು ಹೊಸ ದಾಖಲೆಯನ್ನು ಬರೆದಿದೆ.

ಭಾರತದಲ್ಲಿ ಇಂದು 2 ಲಕ್ಷದ 60 ಸಾವಿರ ಮಂದಿಗೆ ಸೋಂಕು, 1,495 ಮಂದಿ ಬಲಿ
ಜಲಂದರ್​ನಲ್ಲಿ ಕೊವಿಡ್ ಪರೀಕ್ಷೆ
ಆಯೇಷಾ ಬಾನು
|

Updated on:Apr 18, 2021 | 12:23 PM

Share

ದೆಹಲಿ: ಜನರನ್ನು ಹಿಂಡಿ ಹಿಪ್ಪೆ ಮಾಡುತ್ತಿರುವ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಏರುತ್ತಲೇ ಸಾಗಿದೆ. ಹಳೇ ದಾಖಲೆಗಳನ್ನೆಲ್ಲ ಮುರಿಯುತ್ತ ಓಡುತ್ತಿದೆ. ಭಾರತದಲ್ಲಿ ಇಂದು ಹೊಸದಾಗಿ 2,60,533 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಸತತ ನಾಲ್ಕನೇ ದಿನವೂ ಎರಡು ಲಕ್ಷಕ್ಕೂ ಅಧಿಕ ಕೊರೊನಾ ಪಾಸಿಟಿವ್ ಕೇಸ್​ಗಳು ಪತ್ತೆಯಾಗುತ್ತಿದ್ದು ಹಳೇ ದಾಖಲೆಗಳನ್ನು ಮುರಿದು ಇಂದೂ ಸಹ ಮತ್ತೊಂದು ಹೊಸ ದಾಖಲೆಯನ್ನು ಬರೆದಿದೆ.

ಕಳೆದ 24 ಗಂಟೆಯ ಅವಧಿಯಲ್ಲಿ 2,60,533 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 1,495 ಮಂದಿ ಮೃತಪಟ್ಟಿದ್ದಾರೆ. ಇಲ್ಲಿಯ ವರೆಗೆ ಒಟ್ಟು 1,47,82,461 ಸೋಂಕಿತರು ಪತ್ತೆಯಾಗಿದ್ದಾರೆ. ಹಾಗೂ 1,77,167 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ಸತತ ನಾಲ್ಕನೇ ದಿನವೂ ಎರಡು ಲಕ್ಷಕ್ಕೂ ಅಧಿಕ ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ. ನೆನ್ನೆಗಿಂತ ಇಂದು 26 ಸಾವಿರ ಕೊರೊನಾ ಪಾಸಿಟಿವ್ ಕೇಸ್​ಗಳು ಹೆಚ್ಚಳವಾಗಿವೆ. ಕೇವಲ ಹತ್ತೇ ದಿನದಲ್ಲಿ ಕೊವಿಡ್ ಕೇಸ್​ಗಳು ದುಪ್ಪಟ್ಟು ಆಗುತ್ತಾ ಸಾಗುತ್ತಿದೆ. ಏಪ್ರಿಲ್‌ 4- ಒಂದು ಲಕ್ಷ ಕೊರೊನಾ ಕೇಸ್ ಏಪ್ರಿಲ್ 14- ಎರಡು ಲಕ್ಷ ಕೊರೊನಾ ಕೇಸ್ ಏಪ್ರಿಲ್ 18- ಎರಡು ಲಕ್ಷದ ಅರವತ್ತು‌ ಸಾವಿರ ಕೊರೊನಾ ಪಾಸಿಟಿವ್ ಕೇಸ್​ಗಳು ಪತ್ತೆಯಾಗಿವೆ.

ಇನ್ನು ಉತ್ತರ ಪ್ರದೇಶದಲ್ಲಿ 27,334 ಹೊಸ ಪ್ರಕರಣಗಳು ಪತ್ತೆಯಾಗಿವೆ. ದೆಹಲಿಯಲ್ಲಿ ಹೊಸದಾಗಿ 24,375 ಮಂದಿಗೆ ಕೊರೊನಾ ತಗುಲಿದೆ. ಮಹಾರಾಷ್ರವು ಶನಿವಾರ ಅತಿ ಹೆಚ್ಚು ಸಾವುಗಳನ್ನು ವರದಿ ಮಾಡಿದೆ. ಶನಿವಾರ 419 ಮಂದಿ ಕೊರೊನಾಗೆ ಬಲಿಯಾಗಿದ್ದರು. ದೆಹಲಿಯಲ್ಲಿ ಹೊಸದಾಗಿ ಇಂದು 167 ಮಂದಿ ಮೃತಪಟ್ಟಿದ್ದಾರೆ. ಹಾಗೂ ಛತ್ತಿಸ್​ಘಡದಲ್ಲಿ 138 ಸೋಂಕಿತರು ಮೃತಪಟ್ಟಿದ್ದಾರೆ. ಅಮೆರಿಕಾ ಮತ್ತು ಮೆಕ್ಸಿಕೋಗಳಿಗಿಂತ ಭಾರತ ಎರಡನೇ ಅತಿ ಹೆಚ್ಚಿನ ಸರಾಸರಿ ದೈನಂದಿನ ಸಾವುಗಳನ್ನು ವರದಿ ಮಾಡಿದೆ.

ಕೊರೊನಾ ಸೋಂಕಿನಿಂದ 1,28,09,643 ಜನರು ಗುಣಮುಖರಾಗಿದ್ದಾರೆ. ಸಕ್ರಿಯ ಪ್ರಕರಣಗಳು 18,01,316. ಹಾಗೂ ಭಾರತದಲ್ಲಿ 12,26,22,590 ಜನರಿಗೆ ಕೊವಿಡ್ ಲಸಿಕೆ ನೀಡಲಾಗಿದೆ. ದೇಶದಲ್ಲಿ ನಿನ್ನೆ 15,66,394 ಕೊವಿಡ್ ಸ್ಯಾಂಪಲ್ಸ್ ಟೆಸ್ಟ್ ಮಾಡಲಾಗಿದೆ. ಏ.17ರವರೆಗೆ ಒಟ್ಟು 26,65,38,416 ಸ್ಯಾಂಪಲ್ಸ್ ಟೆಸ್ಟ್ ಆಗಿದೆ ಎಂದು ಕೊವಿಡ್-19 ಟೆಸ್ಟ್ ಬಗ್ಗೆ ಐಸಿಎಂಆರ್‌ನಿಂದ ಮಾಹಿತಿ ಸಿಕ್ಕಿದೆ.

ಇದನ್ನೂ ಓದಿ: ಆಳಂಗಾ ಗ್ರಾಮದ 60 ಜನರಿಗೆ ಕೊರೊನಾ, ಭಾಗವತ ಪುರಾಣ ಓದಲು ಮಹಾರಾಷ್ಟ್ರದಿಂದ ಬಂದವರ ಮೇಲೆ ಶಂಕೆ

Published On - 9:19 am, Sun, 18 April 21

ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ