AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಶದಲ್ಲಿಂದು 1,68,063 ಕೊರೊನಾ ಕೇಸ್​ ದಾಖಲು; ಸಕ್ರಿಯ ಪ್ರಕರಣಗಳ ಸಂಖ್ಯೆ 8,21,446ಕ್ಕೆ ಏರಿಕೆ, 277 ಮಂದಿ ಸಾವು

ಕೇವಲ ಕೊವಿಡ್​ 19 ಪ್ರಕರಣಗಳಲ್ಲದೆ, ಒಮಿಕ್ರಾನ್​ ಕೂಡ ಏರಿಕೆಯಾಗುತ್ತಿದೆ. ಭಾರತದಲ್ಲಿ ಕಳೆದ 24ಗಂಟೆಯಲ್ಲಿ 400 ಒಮಿಕ್ರಾನ್​ ಸೋಂಕಿನ ಪ್ರಕರಣಗಳು ದಾಖಲಾಗಿವೆ. ಅಲ್ಲಿಗೆ ದೇಶದಲ್ಲಿ ಒಟ್ಟಾರೆ ಕೊರೊನಾ ಸೋಂಕಿತರ ಸಂಖ್ಯೆ 4,461ಕ್ಕೆ ಏರಿಕೆಯಾಗಿದೆ.

ದೇಶದಲ್ಲಿಂದು 1,68,063 ಕೊರೊನಾ ಕೇಸ್​ ದಾಖಲು; ಸಕ್ರಿಯ ಪ್ರಕರಣಗಳ ಸಂಖ್ಯೆ 8,21,446ಕ್ಕೆ ಏರಿಕೆ, 277 ಮಂದಿ ಸಾವು
ಪ್ರಾತಿನಿಧಿಕ ಚಿತ್ರ
TV9 Web
| Updated By: Lakshmi Hegde|

Updated on:Jan 11, 2022 | 1:42 PM

Share

ಕಳೆದ ಕೆಲವು ದಿನಗಳಿಂದಲೂ ಭಾರತದಲ್ಲಿ ಒಂದೇ ಸಮನೆ ಏರಿಕೆಯಾಗುತ್ತಿದ್ದ ಕೊರೊನಾ ಕೇಸ್​ಗಳಲ್ಲಿ ಇಂದು ಸ್ವಲ್ಪ ಇಳಿಕೆ ಕಂಡುಬಂದಿದೆ. 24 ಗಂಟೆಯಲ್ಲಿ 1,68,063 ಕೊರೊನಾ ಕೇಸ್​ಗಳು ದಾಖಲಾಗಿವೆ. ನಿನ್ನೆ 1,79,723 ಸೋಂಕಿನ ಪ್ರಕರಣಗಳು ದಾಖಲಾಗಿದ್ದವು.  ಹಾಗೇ, 24 ಗಂಟೆಯಲ್ಲಿ 277 ಮಂದಿ ಕೊರೊನಾದಿಂದ ಮೃತಪಟ್ಟಿದ್ದಾರೆ. ಜನವರಿ 10ರಂದು 146 ಮಂದಿ ಸಾವನ್ನಪ್ಪಿದ್ದರು. ಭಾರತದಲ್ಲಿ ಕೊರೊನಾ ಕೇಸ್​ಗಳ ಸಂಖ್ಯೆ 35,875,790ಕ್ಕೆ ತಲುಪಿದ್ದು, ಒಟ್ಟಾರೆ ಸಾವಿನ ಸಂಖ್ಯೆ 484,213 ಎಂದು ಕೇಂದ್ರ ಆರೋಗ್ಯ ಇಲಾಖೆ ತಿಳಿಸಿದೆ.   ದೇಶದಲ್ಲಿ ದೈನಿಕ ಪಾಸಿಟಿವಿಟಿ ದರ ಶೇ.10.64ಕ್ಕೆ ಏರಿಕೆಯಾಗಿದೆ. 24ಗಂಟೆಯಲ್ಲಿ ಸಕ್ರಿಯ ಪ್ರಕರಣಗಳಲ್ಲಿ 97,827 ಹೆಚ್ಚಾಗಿದ್ದು, ದೇಶದಲ್ಲಿ ಒಟ್ಟು ಸಕ್ರಿಯ ಕೇಸ್​ಗಳ ಸಂಖ್ಯೆ 8,21,446.  ಹಾಗೇ, ಕಳೆದ 24ಗಂಟೆಯಲ್ಲಿ 69,959 ಮಂದಿ ಚೇತರಿಸಿಕೊಂಡು ಡಿಸ್​ಚಾರ್ಜ್​ ಆಗಿದ್ದಾರೆ. ಅಲ್ಲಿಗೆ ದೇಶದಲ್ಲಿ ಒಟ್ಟು ಕೊರೊನಾದಿಂದ ಚೇತರಿಕೆ ಕಂಡವರ ಸಂಖ್ಯೆ 34,570,131.

ಒಮಿಕ್ರಾನ್​​ನಲ್ಲಿ ಏರಿಕೆ ಕೇವಲ ಕೊವಿಡ್​ 19 ಪ್ರಕರಣಗಳಲ್ಲದೆ, ಒಮಿಕ್ರಾನ್​ ಕೂಡ ಏರಿಕೆಯಾಗುತ್ತಿದೆ. ಭಾರತದಲ್ಲಿ ಕಳೆದ 24ಗಂಟೆಯಲ್ಲಿ 400 ಒಮಿಕ್ರಾನ್​ ಸೋಂಕಿನ ಪ್ರಕರಣಗಳು ದಾಖಲಾಗಿವೆ. ಅಲ್ಲಿಗೆ ದೇಶದಲ್ಲಿ ಒಟ್ಟಾರೆ ಕೊರೊನಾ ಸೋಂಕಿತರ ಸಂಖ್ಯೆ 4,461ಕ್ಕೆ ಏರಿಕೆಯಾಗಿದೆ. ಸದ್ಯ ದೇಶದ ಒಟ್ಟಾರೆ 28 ಕೇಂದ್ರಾಡಳಿತ ಪ್ರದೇಶಗಳು/ರಾಜ್ಯಗಳಲ್ಲಿ ಈ ಸೋಂಕು ಪತ್ತೆಯಾಗಿದೆ. ಒಟ್ಟಾರೆ ಪ್ರಕರಣಗಳ ಪೈಕಿ 1711 ಮಂದಿ ಚೇತರಿಸಿಕೊಂಡು, ಆಸ್ಪತ್ರೆಗಳಿಂದ ಡಿಸ್​ಚಾರ್ಜ್​ ಆಗಿದ್ದಾರೆ. ಒಮಿಕ್ರಾನ್​ ಅತ್ಯಂತ ಸೌಮ್ಯ ಲಕ್ಷಣಗಳನ್ನು ಹೊಂದಿದ್ದರೂ, ಪ್ರಸ್ತುತ ಇರುವ ಕೊವಿಡ್ 19 ಲಸಿಕೆಗಳು ಈ ಸೋಂಕಿಗೆ ಸಾಕಾಗುವುದಿಲ್ಲ.  ಒಮಿಕ್ರಾನ್​ ಸೋಂಕಿತರು ಶೇ.5-10 ಮಂದಿ ಆಸ್ಪತ್ರೆಗೆ ಸೇರಬೇಕಾಗಿರಬಹುದು. ಹಾಗಾಗಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಕೇಂದ್ರ ಆರೋಗ್ಯ ಇಲಾಖೆ ಕಾರ್ಯದರ್ಶಿ ರಾಜೇಶ್​ ಭೂಷಣ್​ ತಿಳಿಸಿದ್ದಾರೆ.  ಒಮಿಕ್ರಾನ್​ ಸೋಂಕಿನ ಸಕ್ರಿಯ ಪ್ರಕರಣಗಳ ಸಂಖ್ಯೆ, ಆಸ್ಪತ್ರೆಗೆ ದಾಖಲಾಗುವವರು, ಮನೆಯಲ್ಲೇ ಐಸೋಲೇಟ್​ ಆಗುವವರು, ಆಮ್ಲಜನಕ ಸಪೋರ್ಟ್​ನಲ್ಲಿರುವವರು, ಐಸಿಯು, ವೆಂಟಿಲೇಟರ್​​ನಲ್ಲಿ ಚಿಕಿತ್ಸೆ ಪಡೆಯುತ್ತಿರುವವರ ಸಂಖ್ಯೆಯ ಮೇಲೆ ನಿಗಾ ಇಡಿ ಎಂದು ರಾಜೇಶ್​ ಭೂಷಣ್​ ಅವರು ಎಲ್ಲ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಗಳಿಗೆ ಸೂಚನೆ ನೀಡಿದ್ದಾರೆ.

ಈ ಮಧ್ಯೆ ದೇಶದಲ್ಲಿ ಕೊರೊನಾ ಲಸಿಕೆ ಅಭಿಯಾನವರೂ ವೇಗವಾಗಿ ಸಾಗುತ್ತಿದೆ. ಒಟ್ಟಾರೆ 152 ಕೋಟಿ ಡೋಸ್​ ಲಸಿಕೆ ನೀಡಲಾಗಿದೆ. ಅಲ್ಲದೆ ಸೋಮವಾರದಿಂದ ಆರೋಗ್ಯ ಕಾರ್ಯಕರ್ತರು,  ಕೊವಿಡ್​ 19 ವಿರುದ್ಧ ಹೋರಾಟದಲ್ಲಿ ಮುಂಚೂಣಿಯಲ್ಲಿರುವವರು ಮತ್ತು 60 ವರ್ಷ ಮೇಲ್ಪಟ್ಟು ಇತರ ರೋಗಗಳಿಂದ ಬಳಲುತ್ತಿರುವವರಿಗೆ ಮುನ್ನೆಚ್ಚರಿಕಾ ಡೋಸ್​ ನೀಡುವ ಅಭಿಯಾನವೂ ಶುರುವಾಗಿದೆ.

ಇದನ್ನೂ ಓದಿ: ತಬ್ಲಿಘಿಗಳು ಕೊವಿಡ್ ಮೊದಲ ಅಲೆಗೆ ಕಾರಣರಾದರೆ, ಕಾಂಗ್ರೆಸ್‌ 3ನೇ ಅಲೆಗೆ ಕಾರಣವಾಗುತ್ತಿದ್ದಾರೆ: ರಾಜ್ಯ ಬಿಜೆಪಿ ಟ್ವೀಟ್

Published On - 1:41 pm, Tue, 11 January 22

ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ