AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

24 ಗಂಟೆಯಲ್ಲಿ 4,092 ಮಂದಿ ಕೊರೊನಾ ಸೋಂಕಿನಿಂದ ಸಾವು; 4 ಲಕ್ಷಕ್ಕೂ ಅಧಿಕ ಹೊಸ ಪ್ರಕರಣಗಳು ದಾಖಲು

India's Covid 19 Updates: ದೇಶದಲ್ಲಿ ಸದ್ಯ ಕೊರೊನಾ ಪ್ರಸರಣದ ಮತ್ತು ಮರಣದ ವೇಗ ಹೆಚ್ಚುತ್ತಿದೆ. ಚೇತರಿಕೆ ಪ್ರಮಾಣ ಕುಸಿತ ಕಂಡಿದೆ. ದೇಶದಲ್ಲಿ ಮೊದಲು ಕೊರೊನಾ ಸೋಂಕಿತರ ಸಂಖ್ಯೆ 20 ಲಕ್ಷ ದಾಟಿದ್ದು 2020ರ ಆಗಸ್ಟ್​ 7ರಂದು ಆಗಿತ್ತು.

24 ಗಂಟೆಯಲ್ಲಿ 4,092 ಮಂದಿ ಕೊರೊನಾ ಸೋಂಕಿನಿಂದ ಸಾವು; 4 ಲಕ್ಷಕ್ಕೂ ಅಧಿಕ ಹೊಸ ಪ್ರಕರಣಗಳು ದಾಖಲು
ಪ್ರಾತಿನಿಧಿಕ ಚಿತ್ರ
Lakshmi Hegde
|

Updated on: May 09, 2021 | 10:41 AM

Share

ದೆಹಲಿ: ದೇಶದಲ್ಲಿ ಕೊವಿಡ್​ 19 ಎರಡನೇ ಅಲೆ ನಿಯಂತ್ರಣಕ್ಕೆ ಸಿಗುತ್ತಿಲ್ಲ. ದಿನೇದಿನೆ ದಾಖಲಾಗುವ ಹೊಸ ಸೋಂಕಿತರ ಸಂಖ್ಯೆ, ಮರಣ ಹೊಂದುತ್ತಿರುವವರ ಸಂಖ್ಯೆ ಹೆಚ್ಚುತ್ತಲೇ ಇದೆ. ಇಂದು ಕೂಡ 4 ಲಕ್ಷಕ್ಕೂ ಅಧಿಕ ಕೊರೊನಾ ಸೋಂಕಿನ ಕೇಸ್​ ದಾಖಲಾಗಿದ್ದಾಗಿ ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ. ಕಳೆದ 24 ಗಂಟೆಯಲ್ಲಿ 4,03,738 ಹೊಸ ಕೊರೊನಾ ಪ್ರಕರಣಗಳು ದಾಖಲಾಗಿದ್ದು, ಬರೋಬ್ಬರಿ 4,092 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ. ಈ ಮೂಲಕ ದೇಶದಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯ 2,22,96,414 ಆಗಿದ್ದು, ಅದರಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 37,36,648ಕ್ಕೆ ಏರಿಕೆಯಾಗಿದೆ. ಹಾಗೇ ಸಾವಿನ ಸಂಖ್ಯೆ 2,42,362ಕ್ಕೆ ತಲುಪಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಇನ್ನು ಕಳೆದ 24 ಗಂಟೆಗಳಲ್ಲಿ 3,86,444 ಮಂದಿ ಸೋಂಕಿನಿಂದ ಚೇತರಿಸಿಕೊಂಡು, ಡಿಸ್​​ಚಾರ್ಜ್ ಆಗಿದ್ದಾರೆ. ಅಲ್ಲಿಗೆ ಡಿಸ್​ಚಾರ್ಜ್​ ಆದವರ ಒಟ್ಟು ಸಂಖ್ಯೆ 1,83,17,404ಕ್ಕೆ ತಲುಪಿದೆ. ಮೇ 8ರವರೆಗೆ ಒಟ್ಟು 30,22,75,471 ಜನರಿಗೆ ಕೊರೊನಾ ತಪಾಸಣೆ ಮಾಡಲಾಗಿದೆ ಎಂದು ಐಸಿಎಂಆರ್​ (ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ) ಮಾಹಿತಿ ನೀಡಿದೆ.

ದೇಶದಲ್ಲಿ ಸದ್ಯ ಕೊರೊನಾ ಪ್ರಸರಣದ ಮತ್ತು ಮರಣದ ವೇಗ ಹೆಚ್ಚುತ್ತಿದೆ. ಚೇತರಿಕೆ ಪ್ರಮಾಣ ಕುಸಿತ ಕಂಡಿದೆ. ದೇಶದಲ್ಲಿ ಮೊದಲು ಕೊರೊನಾ ಸೋಂಕಿತರ ಸಂಖ್ಯೆ 20 ಲಕ್ಷ ದಾಟಿದ್ದು 2020ರ ಆಗಸ್ಟ್​ 7ರಂದು. ಕಳೆದ ಅಲೆಯಲ್ಲಿ ಒಂದು ದಿನದಲ್ಲಿ ಸಾಯುವವರ ಸಂಖ್ಯೆ ಮತ್ತು ಪತ್ತೆಯಾಗುವ ಸೋಂಕಿತರ ಸಂಖ್ಯೆ ತುಂಬ ಕಡಿಮೆ ಇತ್ತು. ಆದರೆ ಈ ಬಾರಿ ಅತ್ಯಂತ ವೇಗವಾಗಿ ಹರಡುತ್ತಿರುವುದು ಆತಂಕ ಮೂಡಿಸಿದೆ.

ಅದರಲ್ಲೂ ಮಹಾರಾಷ್ಟ್ರ, ದೆಹಲಿ, ಕರ್ನಾಟಕ, ಉತ್ತರಪ್ರದೇಶಗಳಲ್ಲಿ ಕೊರೊನಾ ಸೋಂಕಿನ ಪ್ರಮಾಣ ತೀವ್ರವಾಗಿದೆ. ಉಲ್ಬಣ ಆಗುತ್ತಿರುವ ಕೊರೊನಾ ಒಂದೆಡೆ ತಲೆನೋವು ತರುತ್ತಿದ್ದರೆ, ಇನ್ನೊಂದೆಡೆ ದೇಶದ ಅನೇಕ ಕಡೆ ಆಕ್ಸಿಜನ್, ಬೆಡ್​, ವೆಂಟಿಲೇಟರ್​ಗಳ ಅಭಾವ ಕಾಡುತ್ತಿದೆ. ಲಸಿಕೆ ಕೊರತೆಯಿಂದಾಗಿ ಮೇ 1ರಿಂದ ಶುರುವಾಗಬೇಕಿದ್ದ ಮೂರನೇ ಹಂತದ ಲಸಿಕೆ ಅಭಿಯಾನ ಕೂಡ ಎಲ್ಲ ರಾಜ್ಯಗಳಲ್ಲಿ ಪ್ರಾರಂಭವಾಗಿಲ್ಲ. ಇದುವರೆಗೆ ದೇಶಾದ್ಯಂತ 16,94,39,663 ಲಸಿಕೆ ನೀಡಲಾಗಿದೆ.

ಇದನ್ನೂ ಓದಿ: ‘ಕೊರೊನಾ ಲಸಿಕೆಯ 2ಡೋಸ್​ ತೆಗೆದುಕೊಂಡಿದ್ದೇನೆ..ಖಂಡಿತ ಬದುಕುತ್ತೇನೆ..’-ಖ್ಯಾತ ಸರ್ಜನ್ ಆಡಿದ್ದ ಕೊನೇ ಮಾತುಗಳು​​

ಕೊರೊನಾ ಸೋಂಕಿತರಿಗೆ ಧೈರ್ಯ ತುಂಬಿದ ಬೀದರ್​ ಜಿಲ್ಲಾಸ್ಪತ್ರೆಯ ವೈದ್ಯರು

Follow Us
ಯಾವ ರಾಶಿಗೆ ಇಂದು ರಾಯರ ಅನುಗ್ರಹ
ಯಾವ ರಾಶಿಗೆ ಇಂದು ರಾಯರ ಅನುಗ್ರಹ
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ