AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Covid 19: ದೇಶದಲ್ಲಿ ಏರಿಕೆಯಾಗುತ್ತಿದೆ ಕೊರೊನಾ; ಒಂದೇ ದಿನ 2,64,202 ಪ್ರಕರಣ ಪತ್ತೆ, 315 ಮಂದಿ ಸಾವು

ಭಾರತದಲ್ಲಿ ಕೊರೊನಾ ಪ್ರಕರಣಗಳಲ್ಲಿ ತೀವ್ರ ಏರಿಕೆಯಾಗಿದೆ. ದೈನಂದಿನ ಪಾಸಿಟಿವಿಟಿ ದರ 14.78 ಇದ್ದು, ನಿನ್ನೆ ಒಂದೇ ದಿನ 2,64,202 ಪ್ರಕರಣಗಳು ವರದಿಯಾಗಿವೆ.

Covid 19: ದೇಶದಲ್ಲಿ ಏರಿಕೆಯಾಗುತ್ತಿದೆ ಕೊರೊನಾ; ಒಂದೇ ದಿನ 2,64,202 ಪ್ರಕರಣ ಪತ್ತೆ, 315 ಮಂದಿ ಸಾವು
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Jan 14, 2022 | 10:19 AM

Share

ಭಾರತರದಲ್ಲಿ ಕೊವಿಡ್ ಪ್ರಕರಣಗಳು ತೀವ್ರ ಪ್ರಮಾಣದಲ್ಲಿ ಏರಿಕೆಯಾಗುತ್ತಿವೆ. ನಿನ್ನೆಗಿಂತ (ಗುರುವಾರ) ಇಂದು 6.7 ಪ್ರತಿಶತ ಪ್ರಕರಣಗಳು ಏರಿಕೆಯಾಗಿವೆ. ಕಳೆದ 24 ಗಂಟೆಯಲ್ಲಿ ದೇಶದಲ್ಲಿ 2,64,202 ಪ್ರಕರಣಗಳು ದಾಖಲಾಗಿವೆ. 315 ಜನರು ಸಾವನ್ನಪ್ಪಿದ್ದು, ಒಟ್ಟಾರೆ ಸೋಂಕಿನಿಂದ ಸಾವನ್ನಪ್ಪಿದವರ ಸಂಖ್ಯೆ 4,85,350ಕ್ಕೆ ತಲುಪಿದೆ. ದೇಶದಲ್ಲಿ ಪ್ರಸ್ತುತ 12,72,073 ಸಕ್ರಿಯ ಪ್ರಕರಣಗಳಿದ್ದು, ದೈನಂದಿನ ಪಾಸಿಟಿವಿಟಿ ದರ ಶೇ.14.78ಕ್ಕೆ ತಲುಪಿದೆ. ಕಳೆದ 24 ಗಂಟೆಗಳಲ್ಲಿ 1,09,345 ರೋಗಿಗಳು ಸೋಂಕಿನಿಂದ ಚೇತರಿಸಿಕೊಂಡಿದ್ದು, ಒಟ್ಟು ಚೇತರಿಸಿಕೊಂಡವರ ಸಂಖ್ಯೆ 3,48,24,706 ಕ್ಕೆ ತಲುಪಿದೆ.

ಭಾರತದಲ್ಲಿ ಕೊವಿಡ್ ಪ್ರಕರಣಗಳ ಕುರಿತ ಎಎನ್​ಐ ಮಾಹಿತಿ:

ದೇಶದಲ್ಲಿ ಒಟ್ಟು 5,753 ಒಮಿಕ್ರಾನ್ ಪ್ರಕರಣಗಳು ವರದಿಯಾಗಿವೆ. ಲಸಿಕೆ ನೀಡಿಕೆಯನ್ನು ಹೆಚ್ಚಿಸಲಾಗುತ್ತಿದ್ದು, 155.39 ಕೋಟಿ ಡೋಸ್ ಲಸಿಕೆ ನೀಡಲಾಗಿದೆ. 15.17 ಕೋಟಿ ಡೋಸ್ ಲಸಿಕೆ ಸಂಗ್ರಹದಲ್ಲಿದೆ. ಕಳೆದ 24 ಗಂಟೆಯಲ್ಲಿ 17,87,457 ಟೆಸ್ಟ್​ಗಳನ್ನು ನಡೆಸಲಾಗಿದೆ. ಈ ಮೂಲಕ ಇದುವರೆಗೆ ದೇಶದಲ್ಲಿ ಒಟ್ಟಾರೆ 69.90 ಕೋಟಿ ಟೆಸ್ಟ್ ನಡೆಸಲಾಗಿದೆ.

ಭಾರತದಲ್ಲಿ ಕೊವಿಡ್ ಪ್ರಕರಣಗಳು ಹೆಚ್ಚುತ್ತಿರುವ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ ಗುರುವಾರ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಸಭೆ ನಡೆಸಿದ್ದರು. ಭಯಪಡುವ ಅವಶ್ಯಕತೆ ಇಲ್ಲ, ಸೂಕ್ತ ಮುನ್ನೆಚ್ಚರಿಕೆ ತೆಗೆದುಕೊಳ್ಳಿ ಎಂದು ಪ್ರಧಾನಿ ಸೂಚಿಸಿದರು. ಮೂರನೇ ಅಲೆ ಪ್ರಾರಂಭವಾದ ನಂತರ ಪ್ರಧಾನಿ ಮುಖ್ಯಮಂತ್ರಿಗಳೊಂದಿಗೆ ನಡೆಸಿದ ಮೊದಲ ಸಂವಾದ ಇದಾಗಿದೆ.

ಇದನ್ನೂ ಓದಿ:

ದೆಹಲಿಯಲ್ಲಿ ಜ.9-12ರವರೆಗೆ ಕೊವಿಡ್​ನಿಂದ ಮೃತಪಟ್ಟ 92 ರೋಗಿಗಳಲ್ಲಿ ಕೇವಲ 8 ಜನ ಸಂಪೂರ್ಣ ಲಸಿಕೆ ಪಡೆದವರು: ವರದಿ

Tax Refund: ಏಪ್ರಿಲ್​ನಿಂದ ಜನವರಿ 10ರ ತನಕ 1.59 ಕೋಟಿಗೂ ಹೆಚ್ಚು ತೆರಿಗೆದಾರರಿಗೆ 1.54 ಲಕ್ಷ ಕೋಟಿ ರೀಫಂಡ್

Published On - 9:49 am, Fri, 14 January 22

ನ್ಯೂಇಯರ್ ಸೆಲೆಬ್ರೇಷನ್​​​ ಮುನ್ನ ಮಳೆ ಎಂಟ್ರಿ: ಪಾರ್ಟಿ ಪ್ರಿಯರಿಗೆ ಶಾಕ್!​
ನ್ಯೂಇಯರ್ ಸೆಲೆಬ್ರೇಷನ್​​​ ಮುನ್ನ ಮಳೆ ಎಂಟ್ರಿ: ಪಾರ್ಟಿ ಪ್ರಿಯರಿಗೆ ಶಾಕ್!​
ಅಭಿಮಾನಿಗಳ ಜೊತೆ ಸಿನಿಮಾ ನೋಡುತ್ತಿರುವ ಉದ್ದೇಶ ಏನು? ಸುದೀಪ್ ಉತ್ತರ
ಅಭಿಮಾನಿಗಳ ಜೊತೆ ಸಿನಿಮಾ ನೋಡುತ್ತಿರುವ ಉದ್ದೇಶ ಏನು? ಸುದೀಪ್ ಉತ್ತರ
ಕಳೆದು ಹೋಗಿದ್ದ ಬಾಲಕಿಯನ್ನು ಮರಳಿ ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು
ಕಳೆದು ಹೋಗಿದ್ದ ಬಾಲಕಿಯನ್ನು ಮರಳಿ ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು
ನನ್ನ ಮಗಳು ಸರಿಯಾಗಿಯೇ ಹೇಳಿದ್ದಾಳೆ: ಸುದೀಪ್
ನನ್ನ ಮಗಳು ಸರಿಯಾಗಿಯೇ ಹೇಳಿದ್ದಾಳೆ: ಸುದೀಪ್
ಸ್ಟ್ರೋಕ್ ಗೆ ಒಳಗಾದವರನ್ನು ಎಷ್ಟು ಸಮಯದೊಳಗೆ ಆಸ್ಪತ್ರೆಗೆ ದಾಖಲಿಸಬೇಕು?
ಸ್ಟ್ರೋಕ್ ಗೆ ಒಳಗಾದವರನ್ನು ಎಷ್ಟು ಸಮಯದೊಳಗೆ ಆಸ್ಪತ್ರೆಗೆ ದಾಖಲಿಸಬೇಕು?
ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಯುವತಿಯ ಎದೆ ಮೇಲೆ ಕೈ ಇಟ್ಟ ಯುವಕ
ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಯುವತಿಯ ಎದೆ ಮೇಲೆ ಕೈ ಇಟ್ಟ ಯುವಕ
ಬೆಂಗಳೂರಲ್ಲಿ ಪಬ್​​ಗಳತ್ತ ಮುಖ ಮಾಡಿದ ಜನ: ಸಿಲಿಕಾನ್​​ ಸಿಟಿ ಫುಲ್​​ ಝಗಮಗ
ಬೆಂಗಳೂರಲ್ಲಿ ಪಬ್​​ಗಳತ್ತ ಮುಖ ಮಾಡಿದ ಜನ: ಸಿಲಿಕಾನ್​​ ಸಿಟಿ ಫುಲ್​​ ಝಗಮಗ
ವರ್ಷದ ಕೊನೆಯ ಸೂರ್ಯಾಸ್ತ: ನಯನ ಮನೋಹರ ದೃಶ್ಯ ಸೆರೆ
ವರ್ಷದ ಕೊನೆಯ ಸೂರ್ಯಾಸ್ತ: ನಯನ ಮನೋಹರ ದೃಶ್ಯ ಸೆರೆ
ಒಡಿಶಾದಲ್ಲಿ 2 ಪ್ರಲೇ ಕ್ಷಿಪಣಿಗಳ ಯಶಸ್ವಿ ಉಡಾವಣೆ; ವಿಡಿಯೋ ಇಲ್ಲಿದೆ
ಒಡಿಶಾದಲ್ಲಿ 2 ಪ್ರಲೇ ಕ್ಷಿಪಣಿಗಳ ಯಶಸ್ವಿ ಉಡಾವಣೆ; ವಿಡಿಯೋ ಇಲ್ಲಿದೆ
ಗ್ರಾಹಕರಿಗೆ ಶಾಕ್​​ ಕೊಟ್ಟ ಡೆಲವರಿ ಬಾಯ್ಸ್​​​
ಗ್ರಾಹಕರಿಗೆ ಶಾಕ್​​ ಕೊಟ್ಟ ಡೆಲವರಿ ಬಾಯ್ಸ್​​​