AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Covid 19: ದೇಶದಲ್ಲಿ ತುಸು ಇಳಿಕೆ ಕಂಡ ಕೊರೊನಾ ಪ್ರಕರಣಗಳು, ಒಮಿಕ್ರಾನ್ ಕೇಸ್​ಗಳಲ್ಲಿ ಏರಿಕೆ; ಪೂರ್ಣ ಮಾಹಿತಿ ಇಲ್ಲಿದೆ

Omicron: ದೇಶದಲ್ಲಿ ಶುಕ್ರವಾರಕ್ಕಿಂತ ತುಸು ಕಡಿಮೆ ಕೊರೊನಾ ಪ್ರಕರಣಗಳು ದಾಖಲಾಗಿವೆ. ಆದರೆ ಒಮಿಕ್ರಾನ್ ಪ್ರಕರಣಗಳಲ್ಲಿ ಏರಿಕೆಯಾಗಿದೆ.

Covid 19: ದೇಶದಲ್ಲಿ ತುಸು ಇಳಿಕೆ ಕಂಡ ಕೊರೊನಾ ಪ್ರಕರಣಗಳು, ಒಮಿಕ್ರಾನ್ ಕೇಸ್​ಗಳಲ್ಲಿ ಏರಿಕೆ; ಪೂರ್ಣ ಮಾಹಿತಿ ಇಲ್ಲಿದೆ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Jan 22, 2022 | 10:09 AM

Share

ಭಾರತದಲ್ಲಿ ಶುಕ್ರವಾರಕ್ಕಿಂತ ಕೊರೊನಾ ಪ್ರಕರಣಗಳಲ್ಲಿ (Corona Cases) ಇಳಿಕೆ ಕಂಡುಬಂದಿದ್ದು, ಇಂದು (ಶನಿವಾರ) 3,37,704 ಪ್ರಕರಣಗಳು ವರದಿಯಾಗಿವೆ. ನಿನ್ನೆಗಿಂತ 9,550 ಕಡಿಮೆ ಪ್ರಕರಣಗಳು ಇಂದು ದಾಖಲಾಗಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ 488 ಜನರು ಕೊವಿಡ್​ನಿಂದ ಮೃತಪಟ್ಟಿದ್ದಾರೆ. ಚೇತರಿಕೆ ಪ್ರಮಾಣ ಉತ್ತಮವಾಗಿದ್ದು, ಒಟ್ಟು 2,42,676 ಜನರು ಸೋಂಕಿನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಪ್ರಸ್ತುತ 21,13,365 ಸಕ್ರಿಯ ಪ್ರಕರಣಗಳಿವೆ. ದೈನಂದಿನ ಪಾಸಿಟಿವಿಟಿ ದರವು (Positivity Rate) ಶೇ.17.22 ಇದೆ. ಒಮಿಕ್ರಾನ್ ಪ್ರಕರಣಗಳಲ್ಲಿ ಏರಿಕೆಯಾಗಿದ್ದು, ದೇಶದಲ್ಲಿ ಇದುವರೆಗೆ ಒಟ್ಟು 10,050 ಪ್ರಕರಣಗಳು ವರದಿಯಾಗಿವೆ. ನಿನ್ನೆಗಿಂತ (ಶುಕ್ರವಾರ) ಇಂದು ಒಮಿಕ್ರಾನ್ (Omicron) ಪ್ರಕರಣಗಳಲ್ಲಿ ಶೇ.3.69 ಏರಿಕೆಯಾಗಿದೆ.

ದೇಶದ ಕೊರೊನಾ ಪ್ರಕರಣಗಳ ಕುರಿತು ಎಎನ್​ಐ ಟ್ವೀಟ್:

ಭಾರತದಲ್ಲಿ ಇದುವರೆಗೆ ಒಟ್ಟು 161.16 ಕೋಟಿ ಡೋಸ್ ವ್ಯಾಕ್ಸಿನ್ ಅನ್ನು ಫಲಾನುಭವಿಗಳಿಗೆ ವಿತರಿಸಲಾಗಿದೆ. ಇದುವರೆಗೆ ಒಟ್ಟು 71.34 ಕೋಟಿ ಸ್ಯಾಂಪಲ್​ಗಳನ್ನು ಟೆಸ್ಟ್ ಮಾಡಲಾಗಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ 19,60,954 ಸ್ಯಾಂಪಲ್ ಪರೀಕ್ಷಿಸಲಾಗಿದೆ. ಭಾರತದಲ್ಲಿ ಪ್ರಸ್ತುತ ವಾರದ ಪಾಸಿಟಿವಿಟಿ ದರ ಶೇ.16.65 ಇದೆ.

ಕೊರೊನಾ ಪಾಸಿಟಿವ್ ಆದರೆ ಬೂಸ್ಟರ್ ಡೋಸ್ 3 ತಿಂಗಳ ನಂತರ ನೀಡಿಕೆ: ಒಂದು ವೇಳೆ ಬೂಸ್ಟರ್​ ಡೋಸ್​ಗೆ ಅರ್ಹರಾಗಿರುವವರಿಗೆ ಕೊರೊನಾ ಪಾಸಿಟಿವ್ ಆಗಿದ್ದರೆ, ಮೂರು ತಿಂಗಳ ನಂತರ ಬೂಸ್ಟರ್ ಡೋಸ್ ಲಸಿಕೆ ನೀಡಬೇಕು ಎಂದು ಎನ್​ಹೆಚ್​​ಎಮ್​ನ ಹೆಚ್ಚುವರಿ ಕಾರ್ಯದರ್ಶಿ ಮತ್ತು ಮಿಷನ್ ಡೈರೆಕ್ಟರ್ ಎಲ್ಲಾ ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಪತ್ರ ಬರೆದಿದ್ದಾರೆ. ಸೋಂಕಿನಿಂದ ಚೇತರಿಸಿಕೊಂಡ ಮೂರು ತಿಂಗಳ ತರುವಾಯು ಬೂಸ್ಟರ್​ ಡೋಸ್​ಅನ್ನು ಅರ್ಹರಿಗೆ ನೀಡಬಹುದು ಎಂದು ಅದರಲ್ಲಿ ವಿವರಿಸಲಾಗಿದೆ.

ಇದನ್ನೂ ಓದಿ:

ಮುಂಬೈ: ಟಾರ್ಡಿಯೋದ 20 ಅಂತಸ್ತಿನ ಕಟ್ಟಡದಲ್ಲಿ ಅಗ್ನಿ ಅವಘಡ

ಅಸ್ತವ್ಯಸ್ತಗೊಂಡ ವಾರ್ಡ್​ರೋಬ್ ಸರಿಪಡಿಸಿ ಕೈತುಂಬಾ ಸಂಪಾದನೆ ಮಾಡುತ್ತಿರುವ 19 ವರ್ಷದ ಯುವತಿ; ತಿಂಗಳಿಗೆ ಗಳಿಸುವ ಹಣವೆಷ್ಟು?

Published On - 9:44 am, Sat, 22 January 22

Follow Us
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!