AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅರುಣಾಚಲ ಪ್ರದೇಶ ಭಾರತದ ಅವಿಭಾಜ್ಯ ಅಂಗವಾಗಿಯೇ ಉಳಿದಿದೆ; ಅಮಿತ್ ಶಾ ಭೇಟಿಗೆ ತಕರಾರು ತೆಗೆದ ಚೀನಾಕ್ಕೆ ಭಾರತ ಖಡಕ್ ಉತ್ತರ

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ 2 ದಿನಗಳ ಅರುಣಾಚಲ ಪ್ರವಾಸಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದ ಚೀನಾಕ್ಕೆ ಭಾರತ ಕಟುವಾಗಿ ತಿರುಗೇಟು ನೀಡಿದೆ.

ಅರುಣಾಚಲ ಪ್ರದೇಶ ಭಾರತದ ಅವಿಭಾಜ್ಯ ಅಂಗವಾಗಿಯೇ ಉಳಿದಿದೆ; ಅಮಿತ್ ಶಾ ಭೇಟಿಗೆ ತಕರಾರು ತೆಗೆದ ಚೀನಾಕ್ಕೆ ಭಾರತ ಖಡಕ್ ಉತ್ತರ
ಅರುಣಾಚಲ ಪ್ರದೇಶದಲ್ಲಿ ಅಮಿತ್ ಶಾImage Credit source: PTI
ಗಣಪತಿ ಶರ್ಮಾ
|

Updated on: Apr 11, 2023 | 8:32 PM

Share

ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಅವರ 2 ದಿನಗಳ ಅರುಣಾಚಲ ಪ್ರವಾಸಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದ ಚೀನಾಕ್ಕೆ ಭಾರತ ಕಟುವಾಗಿ ತಿರುಗೇಟು ನೀಡಿದೆ. ಚೀನಾದ ಹೇಳಿಕೆಯನ್ನು ಸಂಪೂರ್ಣವಾಗಿ ತಿರಸ್ಕರಿಸಿರುವ ವಿದೇಶಾಂಗ ಸಚಿವಾಲಯ, ಅರುಣಾಚಲ ಪ್ರದೇಶ ಭಾರತದ ಅವಿಭಾಜ್ಯ ಅಂಗವಾಗಿಯೇ ಉಳಿದಿದೆ ಎಂದು ಸ್ಪಷ್ಟ ಮಾತುಗಳಲ್ಲಿ ಹೇಳಿದೆ. ಭಾರತೀಯ ನಾಯಕರು ಇತರ ಯಾವುದೇ ರಾಜ್ಯಗಳಿಗೆ ಭೇಟಿ ನೀಡುವ ರೀತಿಯಲ್ಲಿಯೇ ಅರುಣಾಚಲ ಪ್ರದೇಶಕ್ಕೆ ನಿಯಮಿತವಾಗಿ ಭೇಟಿ ನೀಡುತ್ತಾರೆ. ಅರುಣಾಚಲ ಪ್ರದೇಶ ಭಾರತದ ಅವಿಭಾಜ್ಯ ಅಂಗವಾಗಿಯೇ ಇತ್ತು, ಇದೆ ಮತ್ತು ಇರಲಿದೆ. ಚೀನಾದ ಆಕ್ಷೇಪಣೆಗಳನ್ನು ಒಪ್ಪಲಾಗದು ಮತ್ತು ಅದು ವಾಸ್ತವವನ್ನು ಬದಲಾಯಿಸಲಾರದು ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ಹೇಳಿದ್ದಾರೆ.

ಸೋಮವಾರ ಅಮಿತ್ ಶಾ ಅರುಣಾಚಲ ಪ್ರದೇಶಕ್ಕೆ ತೆರಳಿದ್ದರು. ಅದೇ ದಿನ, ಶಾ ಭೇಟಿಯನ್ನು ವಿರೋಧಿಸಿದ್ದ ಚೀನಾ, ಇದು ನಮ್ಮ ಸಾರ್ವಭೌಮತ್ವದ ಉಲ್ಲಂಘನೆ ಎಂದು ಹೇಳಿತ್ತು. ಅರುಣಾಚಲ ಪ್ರದೇಶ ಚೀನಾದ ಭಾಗವೆಂದು ಆ ದೇಶದ ವಿದೇಶಾಂಗ ಇಲಾಖೆ ಪ್ರತಿಪಾದಿಸಿತ್ತು.

ಇದನ್ನೂ ಓದಿ: Amit Shah: ‘ಒಂದು ಇಂಚು ನೆಲವನ್ನೂ ಬಿಟ್ಟುಕೊಡಲ್ಲ’- ಚೀನಾ ಕ್ಯಾತೆ ಮಧ್ಯೆಯೂ ಅರುಣಾಚಲದಲ್ಲಿ ಅಮಿತ್ ಶಾ ಗುಡುಗು

ಅರುಣಾಚಲ ಪ್ರದೇಶಕ್ಕೆ ಭಾರತದ ಸಚಿವರ ಭೇಟಿಯು ಚೀನಾದ ಪ್ರಾದೇಶಿಕ ಸಾರ್ವಭೌಮತ್ವವನ್ನು ಉಲ್ಲಂಘಿಸಿದೆ. ಗಡಿಯಲ್ಲಿ ಶಾಂತಿ ನೆಲೆಸಲು ಇದು ಒಳ್ಳೆಯದಲ್ಲ ಎಂದು ಚೀನಾ ವಿದೇಶಾಂಗ ಇಲಾಖೆ ಹೇಳಿತ್ತು. ಅರುಣಾಚಲ ಪ್ರದೇಶವನ್ನು ತನ್ನದು ಎಂದು ಹೇಳಿಕೊಳ್ಳುವ ಚೀನಾ ಅದನ್ನು ದಕ್ಷಿಣ ಟಿಬೆಟ್ ಎಂದು ಕರೆಯುತ್ತದೆ. ಇತ್ತೀಚೆಗಷ್ಟೇ ಅರುಣಾಚಲ ಪ್ರದೇಶದ ಹಲವು ಸ್ಥಳಗಳ ಹೆಸರನ್ನು ಚೀನಾ ಬದಲಾಯಿಸಿದ್ದು ವಿಶ್ವಮಟ್ಟದಲ್ಲಿ ಚರ್ಚೆಗೆ ಗ್ರಾಸವಾಗಿತ್ತು. ಚೀನಾ ಸರ್ಕಾರವು ಅರುಣಾಚಲ ಪ್ರದೇಶದ ಹೆಸರು ಬದಲಾಯಿಸಿದೆ ಎಂದ ಮಾತ್ರಕ್ಕೆ ವಾಸ್ತವ ಬದಲಾಗದು. ಅರುಣಾಚಲ ಪ್ರದೇಶ ಭಾರತದ ಅವಿಭಾಜ್ಯ ಅಂಗ ಎಂದು ಭಾರತ ಹೇಳಿತ್ತು. ಚೀನಾದ ನಡೆಗೆ ಅಮೆರಿಕವೂ ಆಕ್ಷೇಪ ವ್ಯಕ್ತಪಡಿಸಿತ್ತು.

ಅಮಿತ್ ಶಾ ಕೂಡ ಅರುಣಾಚಲ ಪ್ರದೇಶದಿಂದಲೇ ಚೀನಾಕ್ಕೆ ಸ್ಪಷ್ಟ ಸಂದೇಶ ನೀಡಿದ್ದರು. ಭಾರತದ ನೆಲವನ್ನು ಯಾರು ಬೇಕಾದರೂ ಅತಿಕ್ರಮಿಸುವ ಕಾಲ ಇದಲ್ಲ ಎಂದು ಹೇಳಿದ್ದರು. ದೇಶದ ಒಂದು ಇಂಚು ಭೂಮಿಯನ್ನೂ ಯಾರೂ ಕಬಳಿಸಲು ಸಾಧ್ಯವಿಲ್ಲ. ಚೀನಾ ಇನ್ನು ಮುಂದೆ ಸೂಜಿಯ ತುದಿಯಷ್ಟು ಭೂಮಿಯನ್ನು ಆಕ್ರಮಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಅವರು ಸ್ಪಷ್ಟ ಮಾತುಗಳಲ್ಲಿ ಹೇಳಿದ್ದರು.

ದೇಶದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
Ganapathi Sharma
Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ