AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Coronavirus Cases in India: ಭಾರತದಲ್ಲಿ 42,766 ಹೊಸ ಕೊವಿಡ್ -19 ಪ್ರಕರಣ ಪತ್ತೆ, 308 ಮಂದಿ ಸಾವು

Covid 19: ಮುಂದಿನ ವಾರ ಪರಿಶೀಲನಾ ಸಭೆಯವರೆಗೆ ಕೇರಳದಲ್ಲಿ ಭಾನುವಾರ ಸಂಪೂರ್ಣ ಲಾಕ್‌ಡೌನ್ ಮತ್ತು ಕೊವಿಡ್ -19 ನಿರ್ಬಂಧಗಳ ಭಾಗವಾಗಿ ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 6 ಗಂಟೆಗೆ ಕರ್ಫ್ಯೂ ಮುಂದುವರಿಯುತ್ತದೆ  ಎಂದು ಕೇರಳದ  ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಶನಿವಾರ ಹೇಳಿದ್ದಾರೆ.

Coronavirus Cases in India: ಭಾರತದಲ್ಲಿ 42,766 ಹೊಸ ಕೊವಿಡ್ -19 ಪ್ರಕರಣ ಪತ್ತೆ, 308 ಮಂದಿ ಸಾವು
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Sep 05, 2021 | 11:49 AM

Share

ದೆಹಲಿ: ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿಯ ಪ್ರಕಾರ ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 42,766 ಹೊಸ ಕೊವಿಡ್ -19 (Covid-19)  ಪ್ರಕರಣಗಳು ಪತ್ತೆಯಾಗಿದ್ದು 308 ಮಂದಿ ಸಾವಿಗೀಡಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ ವರದಿಯಾದ ಹೊಸ ಪ್ರಕರಣಗಳಲ್ಲಿ, ಕೇರಳದಲ್ಲಿ ನಿನ್ನೆ 29,682 ಹೊಸ ಪ್ರಕರಣಗಳು ಮತ್ತು 142 ಸಾವುಗಳನ್ನು ದಾಖಲಿಸಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 4,10,048 ಕ್ಕೆ ಏರಿದೆ, ಅದರಲ್ಲಿ 2.5 ಲಕ್ಷ ಪ್ರಕರಣಗಳು ಕೇರಳದಲ್ಲಿವೆ. ರಾಷ್ಟ್ರೀಯ ಚೇತರಿಕೆಯ ಪ್ರಮಾಣವು ಶೇಕಡಾ 97.42 ರಲ್ಲಿದೆ. ಮಹಾರಾಷ್ಟ್ರ ಕಳೆದ 24 ಗಂಟೆಗಳಲ್ಲಿ 65 ಸಾವುಗಳನ್ನು ವರದಿ ಮಾಡಿದೆ ಎಂದು ಸಚಿವಾಲಯ ತಿಳಿಸಿದೆ. ಮುಂದಿನ ವಾರ ಪರಿಶೀಲನಾ ಸಭೆಯವರೆಗೆ ಕೇರಳದಲ್ಲಿ ಭಾನುವಾರ ಸಂಪೂರ್ಣ ಲಾಕ್‌ಡೌನ್ ಮತ್ತು ಕೊವಿಡ್ -19 ನಿರ್ಬಂಧಗಳ ಭಾಗವಾಗಿ ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 6 ಗಂಟೆಗೆ ಕರ್ಫ್ಯೂ ಮುಂದುವರಿಯುತ್ತದೆ  ಎಂದು ಕೇರಳದ  ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಶನಿವಾರ ಹೇಳಿದ್ದಾರೆ.

ತಿರುವನಂತಪುರಂನಲ್ಲಿ ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿದ ವಿಜಯನ್, ಸೆಪ್ಟೆಂಬರ್ 7 ರಂದು ವಿಸ್ತೃತ ಪರಿಶೀಲನಾ ಸಭೆ ನಡೆಸಲಾಗುವುದು, ಅಲ್ಲಿ ನಿರ್ಬಂಧಗಳನ್ನು ವಿಸ್ತರಿಸುವ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು. 7 ಕ್ಕಿಂತ ಹೆಚ್ಚಿನ ಸಾಪ್ತಾಹಿಕ ಸೋಂಕು ಧನಾತ್ಮಕ ದರ (ಡಬ್ಲ್ಯುಐಪಿಆರ್) ಹೊಂದಿರುವ ಪುರಸಭೆಯ ವಾರ್ಡ್‌ಗಳಲ್ಲಿ ಮೈಕ್ರೋ ಲಾಕ್‌ಡೌನ್‌ಗಳು ಮುಂದಿನ ವಾರದವರೆಗೂ ಮುಂದುವರಿಯುತ್ತದೆ ಎಂದು ಹೇಳಿದರು.

1 ಕೋಟಿ ಲಸಿಕೆಗಳ ಮೈಲಿಗಲ್ಲು ದಾಟಿದ ದೆಹಲಿ

ದೆಹಲಿಯಲ್ಲಿ ಶನಿವಾರ 1.68 ಲಕ್ಷ ಲಸಿಕೆ ಪ್ರಮಾಣವನ್ನು ನೀಡಲಾಗಿದ್ದು, ರಾಜಧಾನಿಯು 1 ಕೋಟಿ ಜನರಿಗೆ ಕನಿಷ್ಠ ಒಂದು ಡೋಸ್ ಲಸಿಕೆ ನೀಡುತ್ತಿರುವ ಮೈಲಿಗಲ್ಲನ್ನು ದಾಟಿದೆ.

ಸರ್ಕಾರದ ಅಂದಾಜಿನ ಪ್ರಕಾರ ದೆಹಲಿಯು ಸರಿಸುಮಾರು 2 ಕೋಟಿ ಜನಸಂಖ್ಯೆಯನ್ನು ಹೊಂದಿದೆ, ಅದರಲ್ಲಿ 1.5 ಕೋಟಿ ಜನರು 18 ವರ್ಷಕ್ಕಿಂತ ಮೇಲ್ಪಟ್ಟವರು ಮತ್ತು ಕೊವಿಡ್ ಲಸಿಕೆ ಪಡೆಯಲು ಅರ್ಹರು. ಈ ವಾರ ಅತಿಹೆಚ್ಚು ಲಸಿಕೆ ಡೋಸ್‌ಗಳನ್ನು ಶನಿವಾರ ನೀಡಲಾಗಿದ್ದು, ದೆಹಲಿಯಲ್ಲಿ 1,40,95,736 ಡೋಸ್‌ಗಳನ್ನು ನೀಡಲಾಗಿದೆ. ನಗರದ ಲಸಿಕಾ ಅಭಿಯಾನ ಆರಂಭವಾದಾಗಿನಿಂದ 1,00,40,983 ಮೊದಲ ಡೋಸ್‌ಗಳು ಅಂದರೆ 1 ಕ್ಕಿಂತ ಹೆಚ್ಚು ಕೋಟಿ, ಅಥವಾ ಮೂರನೇ ಎರಡರಷ್ಟು ಕನಿಷ್ಠ ಒಂದು ಡೋಸ್ ಪಡೆದಿದ್ದಾರೆ. ಇದು ರಾಷ್ಟ್ರೀಯ ಲಸಿಕೆ ವ್ಯಾಪ್ತಿಗಿಂತ ದೆಹಲಿಯನ್ನು ಬಹಳ ಮುಂದಿದೆ. ಇದು ಪ್ರಸ್ತುತ ಭಾರತದ ಅರ್ಹ ಜನಸಂಖ್ಯೆಯ ಶೇಕಡಾ 55 ಕ್ಕಿಂತ ಸ್ವಲ್ಪ ಹೆಚ್ಚು ಕನಿಷ್ಠ ಒಂದು ಡೋಸ್ ಪಡೆದಿದೆ

ಇದನ್ನೂ ಓದಿ:  Nipah virus ಕೇರಳದ ಕೋಯಿಕ್ಕೋಡ್ ಜಿಲ್ಲೆಯಲ್ಲಿ ನಿಫಾ ವೈರಸ್​​ನಿಂದ ಬಾಲಕ ಸಾವು

Published On - 11:31 am, Sun, 5 September 21

‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು