AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Coronavirus cases in India: ದೇಶದಲ್ಲಿ 10,929 ಹೊಸ ಕೊವಿಡ್ ಪ್ರಕರಣ, 392 ಮಂದಿ ಸಾವು

Coronavirus: ಕಳೆದ 132 ದಿನಗಳಿಂದ ಕೊವಿಡ್ ಸೋಂಕಿತರ ಸಂಖ್ಯೆ ಭಾರತದಲ್ಲಿ 50 ಸಾವಿರವನ್ನು ದಾಟಿಲ್ಲ. ದೇಶದ ಪಾಸಿಟಿವಿಟಿ ದರ ಶೇಕಡಾ 1.35 ಆಗಿದೆ. ಕಳೆದ 33 ದಿನಗಳಿಂದ ಕೊರೊನಾ ಪಾಸಿಟಿವಿಟಿ ದರ ಶೇಕಡಾ 2 ಕ್ಕಿಂತ ಕಡಿಮೆ ಇದೆ.

Coronavirus cases in India: ದೇಶದಲ್ಲಿ 10,929 ಹೊಸ ಕೊವಿಡ್ ಪ್ರಕರಣ, 392 ಮಂದಿ ಸಾವು
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Nov 06, 2021 | 12:15 PM

Share

ದೆಹಲಿ: ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ ಹೊಸದಾಗಿ 10, 929 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ. ಆ ಮೂಲಕ ದೇಶದಲ್ಲಿ ಒಟ್ಟು ಕೊವಿಡ್ 19 ಸೋಂಕಿತರ ಸಂಖ್ಯೆ 3,43,44,683 ಕ್ಕೆ ಏರಿಕೆಯಾಗಿದೆ. ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 392 ಮಂದಿ ಕೊರೊನಾದಿಂದ ಮರಣವನ್ನಪ್ಪಿದ್ದಾರೆ. ಅದರಂತೆ ಭಾರತದಲ್ಲಿ ಒಟ್ಟು 4,60,265 ಮಂದಿ ಸಾವನ್ನಪ್ಪಿದ್ದಾರೆ.

ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಕಳೆದ 29 ದಿನಗಳಿಂದ 20,000 ಕ್ಕಿಂತ ಕಡಿಮೆ ದಾಖಲಾಗುತ್ತಿದೆ. ಕಳೆದ 132 ದಿನಗಳಿಂದ ಕೊವಿಡ್ ಸೋಂಕಿತರ ಸಂಖ್ಯೆ ಭಾರತದಲ್ಲಿ 50 ಸಾವಿರವನ್ನು ದಾಟಿಲ್ಲ. ದೇಶದ ಪಾಸಿಟಿವಿಟಿ ದರ ಶೇಕಡಾ 1.35 ಆಗಿದೆ. ಕಳೆದ 33 ದಿನಗಳಿಂದ ಕೊರೊನಾ ಪಾಸಿಟಿವಿಟಿ ದರ ಶೇಕಡಾ 2 ಕ್ಕಿಂತ ಕಡಿಮೆ ಇದೆ.

ದೇಶದಲ್ಲಿ ಶೇಕಡಾ 78.4 ರಷ್ಟು ಜನರಿಗೆ ಸಿಂಗಲ್ ಡೋಸ್ ಲಸಿಕೆ ನೀಡಲಾಗಿದೆ. ಶೇಕಡಾ 35.9 ರಷ್ಟು ಜನರಿಗೆ 2 ಡೋಸ್ ಲಸಿಕೆ ನೀಡಲಾಗಿದೆ. ವಯಸ್ಕರಲ್ಲಿ ಶೇಕಡಾ 35.9 ರಷ್ಟು ಜನರಿಗೆ 2ನೇ ಡೋಸ್ ಲಸಿಕೆ ನೀಡಲಾಗಿದೆ. ಕರ್ನಾಟಕದಲ್ಲಿ ಶೇಕಡಾ 90 ರಷ್ಟು ವಯಸ್ಕರಿಗೆ ಸಿಂಗಲ್ ಡೋಸ್ ಲಸಿಕೆ ನೀಡಲಾಗಿದೆ. ಶೇಕಡಾ 49.2 ರಷ್ಟು ಜನರಿಗೆ 2 ಡೋಸ್ ಲಸಿಕೆ ನೀಡಲಾಗಿದೆ.

ವಾಯುಮಾಲಿನ್ಯದಿಂದ ಕೊರೊನಾ ಹೆಚ್ಚಾಗಬಹುದು: ಡಾ.ರಣದೀಪ್ ಗುಲೇರಿಯಾ ಹೇಳಿಕೆ ದೆಹಲಿಯಲ್ಲಿ ವಾಯುಮಾಲಿನ್ಯ ಹೆಚ್ಚಳವಾದ ಹಿನ್ನೆಲೆ, ವಾಯುಮಾಲಿನ್ಯದಿಂದ ಕೊರೊನಾ ಹೆಚ್ಚಾಗಬಹುದು ಎಂದು ದೆಹಲಿ ಏಮ್ಸ್ ಆಸ್ಪತ್ರೆಯ ನಿರ್ದೇಶಕ ಡಾ. ರಣದೀಪ್ ಗುಲೇರಿಯಾ ಹೇಳಿಕೆ ನೀಡಿದ್ದಾರೆ. ಮಾಲಿನ್ಯದ ಗಾಳಿಯಲ್ಲಿ ಹೆಚ್ಚು ಸಮಯ ವೈರಸ್ ಇರುತ್ತೆ. ಇಂತಹ ಗಾಳಿ ಸೇವನೆಯಿಂದ ಜನರು ಸೋಂಕಿಗೆ ತುತ್ತಾಗುತ್ತಾರೆ. ಹೃದಯ, ಕಿಡ್ನಿ ಸಮಸ್ಯೆ ಇರುವವರಿಗೆ ತೊಂದರೆ ಹೆಚ್ಚಾಗಲಿದೆ. ಹೈಪರ್ ಟೆನ್ಷನ್ ಇದ್ರೆ ಹೈರಿಸ್ಕ್ ಹೃದಯದ ಸಮಸ್ಯೆ ಸಾಧ್ಯತೆ ಇದೆ. ವಾಯುಮಾಲಿನ್ಯದಿಂದ ಕೊರೊನಾ ಸಾವು ಹೆಚ್ಚಾಗಬಹುದು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: AQI: ದೆಹಲಿಯಲ್ಲಿ 5 ವರ್ಷದಲ್ಲೇ ಅತಿಹೆಚ್ಚು ವಾಯುಮಾಲಿನ್ಯ; ಬೆಂಗಳೂರಿನ ವಾಯುಗುಣಮಟ್ಟ ಹೇಗಿದೆ? ಇಲ್ಲಿದೆ ವಿವರ

ಇದನ್ನೂ ಓದಿ: ಯುಎಸ್​ನಲ್ಲಿ 2-18 ವರ್ಷದವರಿಗೆ ಕೊವ್ಯಾಕ್ಸಿನ್​ ಲಸಿಕೆ ತುರ್ತು ಬಳಕೆಗೆ ಅನುಮತಿ ಕೋರಿದ ಒಕುಜೆನ್​ ಕಂಪನಿ

Published On - 12:14 pm, Sat, 6 November 21

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್