AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Coronavirus cases in India: ಸತತ ಎರಡನೇ ದಿನ ಹೊಸ ಕೊವಿಡ್ ಪ್ರಕರಣಗಳ ಸಂಖ್ಯೆ 20,000 ಕ್ಕಿಂತ ಕಡಿಮೆ, 378 ಮಂದಿ ಸಾವು

Covid 19: ಕಳೆದ ಎರಡು ದಿನಗಳಿಂದ ದೇಶವು 20,000 ಕ್ಕಿಂತ ಕಡಿಮೆ ಪ್ರಕರಣಗಳನ್ನು ವರದಿ ಮಾಡುತ್ತಿದೆ. ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 2.82 ಲಕ್ಷಕ್ಕೆ ಇಳಿದಿದೆ. ಅತಿ ಹೆಚ್ಚು ಪ್ರಕರಣಗಳನ್ನು ನೀಡುತ್ತಿರುವ ಕೇರಳದಲ್ಲಿ ಮಂಗಳವಾರ 11,196 ಪ್ರಕರಣಗಳು ಮತ್ತು 149 ಸಾವುಗಳು ವರದಿ ಆಗಿದೆ.

Coronavirus cases in India: ಸತತ ಎರಡನೇ ದಿನ ಹೊಸ ಕೊವಿಡ್ ಪ್ರಕರಣಗಳ ಸಂಖ್ಯೆ 20,000 ಕ್ಕಿಂತ ಕಡಿಮೆ,  378 ಮಂದಿ ಸಾವು
ಪ್ರಾತಿನಿಧಿಕ ಚಿತ್ರ
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on: Sep 29, 2021 | 10:40 AM

Share

ದೆಹಲಿ: ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 18,870 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಮತ್ತು 378 ಸಾವುಗಳು ವರದಿಯಾಗಿವೆ. ಕಳೆದ ಎರಡು ದಿನಗಳಿಂದ ದೇಶವು 20,000 ಕ್ಕಿಂತ ಕಡಿಮೆ ಪ್ರಕರಣಗಳನ್ನು ವರದಿ ಮಾಡುತ್ತಿದೆ. ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 2.82 ಲಕ್ಷಕ್ಕೆ ಇಳಿದಿದೆ. ಅತಿ ಹೆಚ್ಚು ಪ್ರಕರಣಗಳನ್ನು ನೀಡುತ್ತಿರುವ ಕೇರಳದಲ್ಲಿ ಮಂಗಳವಾರ 11,196 ಪ್ರಕರಣಗಳು ಮತ್ತು 149 ಸಾವುಗಳು ವರದಿಯಾಗಿದ್ದರೆ, ಮಹಾರಾಷ್ಟ್ರ ಮತ್ತು ಹರ್ಯಾಣ ತಲಾ 64 ಸಾವು ವರದಿ ಮಾಡಿದೆ. ಕೊವಿಡ್ -19 ವ್ಯಾಕ್ಸಿನೇಷನ್ ಡ್ರೈವ್ ಅನ್ನು ಜಾರಿಗೆ ತಂದ ಎಂಟು ತಿಂಗಳ ನಂತರ, ಭಾರತವು ಮಂಗಳವಾರ ಲಸಿಕೆಯ ಎರಡೂ ಡೋಸ್‌ಗಳನ್ನು ಅಂದಾಜು ವಯಸ್ಕ ಜನಸಂಖ್ಯೆಯ ಸುಮಾರು ಶೇ25 ರಷ್ಟು ಪೂರ್ಣಗೊಳಿಸಿತು.

ತಾತ್ಕಾಲಿಕ ಮಾಹಿತಿಯ ಪ್ರಕಾರ, ಮಂಗಳವಾರ 53 ಲಕ್ಷಕ್ಕೂ ಹೆಚ್ಚು ಲಸಿಕೆ ಡೋಸ್‌ಗಳನ್ನು ನೀಡಲಾಗಿದ್ದು, ಒಟ್ಟು ಸಂಖ್ಯೆಯನ್ನು 87.59 ಕೋಟಿಗೆ ತಲುಪಿದೆ. ಮಂಗಳವಾರದ ಲಸಿಕೆಗಳೊಂದಿಗೆ, ಅಂದಾಜು ವಯಸ್ಕ ಜನಸಂಖ್ಯೆಯ ಶೇ68 ರಷ್ಟು ಜನರು ತಮ್ಮ ಮೊದಲ ಡೋಸ್ ಪಡೆದಿದ್ದಾರೆ ಮತ್ತು ಶೇ 24.61ರಷ್ಟು ಮಂದಿ ಸಂಪೂರ್ಣವಾಗಿ ಲಸಿಕೆಯನ್ನು ಪಡೆದಿದ್ದಾರೆ.

ಏತನ್ಮಧ್ಯೆ, ಕೇಂದ್ರವು ಅಂತಾರಾಷ್ಟ್ರೀಯ ವಿಮಾನಗಳ ಮೇಲಿನ ನಿಷೇಧವನ್ನು ಅಕ್ಟೋಬರ್ 31 ರವರೆಗೆ ವಿಸ್ತರಿಸಿದೆ. ಆದಾಗ್ಯೂ, ಕೇಂದ್ರವು “ಅಂತರರಾಷ್ಟ್ರೀಯ ನಿಗದಿತ ವಿಮಾನಗಳನ್ನು ಆಯ್ದ ಮಾರ್ಗಗಳಲ್ಲಿ  ಪ್ರಾಧಿಕಾರವು ಕೇಸ್ ಟು ಕೇಸ್ ಆಧಾರದ ಮೇಲೆ ಅನುಮತಿಸಬಹುದು” ಎಂದು ಹೇಳಿದೆ. ಕೇಂದ್ರವು ಮಂಗಳವಾರ ರಾಷ್ಟ್ರವ್ಯಾಪಿ ಕೊವಿಡ್ ನಿಯಂತ್ರಣ ಕ್ರಮಗಳನ್ನು ಅಕ್ಟೋಬರ್ 31 ರವರೆಗೆ ವಿಸ್ತರಿಸಿದೆ.

ತಮಿಳುನಾಡಿನಲ್ಲಿ ವಿದ್ಯಾರ್ಥಿಗಳಿಗೆ ನವೆಂಬರ್ 1 ರಿಂದ ಶಾಲೆ ಶುರು ಒಂದೂವರೆ ವರ್ಷದ ನಂತರ 1 ರಿಂದ 8 ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ತರಗತಿಗಳು ನವೆಂಬರ್ 1 ರಿಂದ ಪುನರಾರಂಭಗೊಳ್ಳಲಿವೆ ಎಂದು ತಮಿಳುನಾಡು ಸರ್ಕಾರ ಮಂಗಳವಾರ ಹೇಳಿದೆ. ಕೊವಿಡ್ -19 ಸಾಂಕ್ರಾಮಿಕ ರೋಗವನ್ನು ಎದುರಿಸಲು ನಡೆಯುತ್ತಿರುವ ಕ್ರಮಗಳನ್ನು ಪರಿಶೀಲಿಸಲು ಮುಖ್ಯಮಂತ್ರಿ ಎಂ. ಕೆ.ಸ್ಟಾಲಿನ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯ ನಂತರ, ಸರ್ಕಾರವು ಸಾಮಾಜಿಕ, ರಾಜಕೀಯ, ಸಾಂಸ್ಕೃತಿಕ ಮತ್ತು ಧಾರ್ಮಿಕ ಸಭೆಗಳ ಮೇಲೆ ನಿಷೇಧವನ್ನು ಮುಂದುವರಿಸುವುದಾಗಿ ಹೇಳಿದೆ.

ಶುಕ್ರವಾರ, ಶನಿವಾರ ಮತ್ತು ಭಾನುವಾರದಂದು ಪೂಜಾ ಸ್ಥಳಗಳನ್ನು ಮುಚ್ಚಲಾಗುವುದು ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

ವೈದ್ಯಕೀಯ ತಜ್ಞರು, ಶಿಕ್ಷಣತಜ್ಞರು ಮತ್ತು ಪೋಷಕರ ಪ್ರತಿಕ್ರಿಯೆಯನ್ನು ಪರಿಗಣಿಸಿ, ಎಲ್ಲಾ ಶಾಲೆಗಳಲ್ಲಿನ ಮಕ್ಕಳಿಗೆ ದೈಹಿಕ ತರಗತಿಗಳು (ಸರ್ಕಾರ ನಡೆಸುತ್ತಿರುವ, ರಾಜ್ಯ-ಅನುದಾನಿತ ಮತ್ತು ಇತರ ಮಂಡಳಿಗಳು) ನವೆಂಬರ್ 1 ರಿಂದ ಪುನರಾರಂಭಗೊಳ್ಳಲಿದೆ ಎಂದು ಸರ್ಕಾರ ಹೇಳಿದೆ.

ವೈರಸ್ ಹರಡುವುದನ್ನು ತಡೆಗಟ್ಟಲು ಸ್ಟ್ಯಾಂಡರ್ಡ್ ಆಪರೇಟಿಂಗ್ ಕಾರ್ಯವಿಧಾನಗಳನ್ನು ಅನುಸರಿಸುವ ಮೂಲಕ ತರಗತಿಗಳನ್ನು ನಡೆಸಲಾಗು%A

Follow Us
ಬೆಂಗಳೂರಲ್ಲಿ ಡಿಸಿಪಿ ಅಕ್ಷಯ್ ಮಚೀಂದ್ರ ನೇತೃತ್ವದಲ್ಲಿ ಮಿಡ್‌ನೈಟ್ ಆಪರೇಷನ್
ಬೆಂಗಳೂರಲ್ಲಿ ಡಿಸಿಪಿ ಅಕ್ಷಯ್ ಮಚೀಂದ್ರ ನೇತೃತ್ವದಲ್ಲಿ ಮಿಡ್‌ನೈಟ್ ಆಪರೇಷನ್
ಬ್ಯಾಡರಹಳ್ಳಿ ಜನರಿಗೆ ಎದುರಾಯ್ತು ಚಿರತೆ ಭಯ!
ಬ್ಯಾಡರಹಳ್ಳಿ ಜನರಿಗೆ ಎದುರಾಯ್ತು ಚಿರತೆ ಭಯ!
1.79 ಕೋಟಿ ಹಣವಿದ್ದ ಎಟಿಎಂ ವಾಹನ ಅಡ್ಡಗಟ್ಟಿ ಕೀ ಎಗರಿಸಿದ ಕಿಡಿಗೇಡಿಗಳು
1.79 ಕೋಟಿ ಹಣವಿದ್ದ ಎಟಿಎಂ ವಾಹನ ಅಡ್ಡಗಟ್ಟಿ ಕೀ ಎಗರಿಸಿದ ಕಿಡಿಗೇಡಿಗಳು
ಹುಂಡಿ ಎಣಿಕೆ ವೇಳೆ 1.98 ಲಕ್ಷ ರೂ. ಜಾಕೆಟ್ ಒಳಗೆ ಇಳಿಸಿ ಎಗರಿಸಿದ ಆಸಾಮಿ!
ಹುಂಡಿ ಎಣಿಕೆ ವೇಳೆ 1.98 ಲಕ್ಷ ರೂ. ಜಾಕೆಟ್ ಒಳಗೆ ಇಳಿಸಿ ಎಗರಿಸಿದ ಆಸಾಮಿ!
ಇಂದು ಯೋಗಿನಿ ಏಕಾದಶಿ, ಬುಧ ಜಯಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಯೋಗಿನಿ ಏಕಾದಶಿ, ಬುಧ ಜಯಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಪ್ರವಾಹದಲ್ಲಿ ಕೊಚ್ಚಿಹೋದ 3,000 ಎಲ್‌ಪಿಜಿ ಸಿಲಿಂಡರ್‌ಗಳು; ವಿಡಿಯೋ ವೈರಲ್!
ಪ್ರವಾಹದಲ್ಲಿ ಕೊಚ್ಚಿಹೋದ 3,000 ಎಲ್‌ಪಿಜಿ ಸಿಲಿಂಡರ್‌ಗಳು; ವಿಡಿಯೋ ವೈರಲ್!
‘ದೇವಿ’ ಸಿನಿಮಾದ ನಟ, ಯುವ ರೈತ ಚೇತನ್​ಗೆ 10 ನಿರ್ದೇಶಕರಿಂದ ಮೋಸ
‘ದೇವಿ’ ಸಿನಿಮಾದ ನಟ, ಯುವ ರೈತ ಚೇತನ್​ಗೆ 10 ನಿರ್ದೇಶಕರಿಂದ ಮೋಸ
ಹವಾಮಾನ ಇಲಾಖೆಯ ಯಾವ ಅಲರ್ಟ್ ಏನನ್ನು ಸೂಚಿಸುತ್ತೆ?
ಹವಾಮಾನ ಇಲಾಖೆಯ ಯಾವ ಅಲರ್ಟ್ ಏನನ್ನು ಸೂಚಿಸುತ್ತೆ?
ಯುವ ರೈತ ಚೇತನ್ ನಟನೆಯ ‘ದೇವಿ’ ಸಿನಿಮಾಗೆ ಸಿಕ್ತು ಹಿರಿಯರ ಆಶೀರ್ವಾದ
ಯುವ ರೈತ ಚೇತನ್ ನಟನೆಯ ‘ದೇವಿ’ ಸಿನಿಮಾಗೆ ಸಿಕ್ತು ಹಿರಿಯರ ಆಶೀರ್ವಾದ
ಗಡಿ ಜಿಲ್ಲೆಗಳ ಎಸ್‌ಪಿಗಳೊಂದಿಗೆ ಭದ್ರತಾ ಪರಿಶೀಲನೆ ನಡೆಸಿದ ಅಮಿತ್ ಶಾ
ಗಡಿ ಜಿಲ್ಲೆಗಳ ಎಸ್‌ಪಿಗಳೊಂದಿಗೆ ಭದ್ರತಾ ಪರಿಶೀಲನೆ ನಡೆಸಿದ ಅಮಿತ್ ಶಾ