AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Coronavirus cases in India: ದೇಶದಲ್ಲಿ ಕೊರೊನಾವೈರಸ್ ಪ್ರಕರಣ ಇಳಿಕೆ; ಇಂದು 2.09 ಲಕ್ಷ ಹೊಸ ಕೊವಿಡ್ ಪ್ರಕರಣ ದಾಖಲು

ಆರೋಗ್ಯ ಸಚಿವಾಲಯದ ಪ್ರಕಾರ, ಕಳೆದ 24 ಗಂಟೆಗಳಲ್ಲಿ 2,62,628 ಜನರು ವೈರಲ್ ಕಾಯಿಲೆಯಿಂದ ಚೇತರಿಸಿಕೊಂಡಿದ್ದಾರೆ, ಇದುವರೆಗಿನ ಒಟ್ಟು ಚೇತರಿಕೆಯ ಸಂಖ್ಯೆಯನ್ನು 3,89,76,122 ಆಗಿದ್ದು ಪ್ರಸ್ತುತ ಚೇತರಿಕೆಯ ಪ್ರಮಾಣವು ಶೇ 94.37 ರಷ್ಟಿದೆ.

Coronavirus cases in India: ದೇಶದಲ್ಲಿ ಕೊರೊನಾವೈರಸ್ ಪ್ರಕರಣ ಇಳಿಕೆ; ಇಂದು 2.09 ಲಕ್ಷ ಹೊಸ ಕೊವಿಡ್ ಪ್ರಕರಣ ದಾಖಲು
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Jan 31, 2022 | 10:33 AM

Share

ದೆಹಲಿ: ಭಾರತವು ಕಳೆದ 24 ಗಂಟೆಗಳಲ್ಲಿ 2.09 ಲಕ್ಷ ಹೊಸ ಕೊವಿಡ್ -19  (Covid-19) ಪ್ರಕರಣಗಳನ್ನು ವರದಿ ಮಾಡಿದೆ. ಇದು ಭಾನುವಾರಕ್ಕಿಂತ ಕಡಿಮೆ. ಭಾನುವಾರ ದೇಶದಲ್ಲಿ 2.34 ಲಕ್ಷ ಕೊರೊನಾವೈರಸ್ (Coronavirus) ಸೋಂಕು ಪ್ರಕರಣ ವರದಿ ಆಗಿದೆ.ಅದೇ ವೇಳೆ 959 ಮಂದಿ ಸೋಂಕಿನಿಂದ ಸಾವಿಗೀಡಾಗಿದ್ದು  ಸಾವಿಗೀಡಾದವರ ಸಂಖ್ಯೆ 4,95,050 ಆಗಿದೆ. ಕಳೆದ 24 ಗಂಟೆಗಳಲ್ಲಿ ಹೆಚ್ಚಿನ ಸಂಖ್ಯೆಯ ಸಾವುಗಳು ವರದಿಯಾಗಿದ್ದು, ಸೋಮವಾರದ ಎಣಿಕೆಗೆ ಕೇರಳ 374 ಬ್ಯಾಕ್‌ಲಾಗ್ ಸಾವುಗಳನ್ನು ಸೇರಿಸಲಾಗಿದೆ. ಕಳೆದ ಕೆಲವು ದಿನಗಳಿಂದ ದೇಶಾದ್ಯಂತ ದೈನಂದಿನ ಕೊವಿಡ್ -19 ಪ್ರಕರಣಗಳು ಕಡಿಮೆಯಾಗುತ್ತಿವೆ, ಇದು ಒಮಿಕ್ರಾನ್ (Omicron) ರೂಪಾಂತರದಿಂದುಂಟಾದ ಸಾಂಕ್ರಾಮಿಕದ ಮೂರನೇ ಅಲೆ ಕಡಿಮೆ ಮಾಡುವ ಸಂಕೇತವಾಗಿ ಕಾಣಬಹುದು. ಸೋಮವಾರದ ದೈನಂದಿನ ಕೊವಿಡ್ -19 ಪ್ರಕರಣಗಳಲ್ಲಿ  24,363 ಸೋಂಕುಗಳ ಕುಸಿತವನ್ನು ಕಂಡಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ ಈಗ 18,31,268 ರಷ್ಟಿದೆ. ಆದರೆ ಚೇತರಿಕೆ ದರ 94.37 ಶೇಕಡಾಕ್ಕೆ ಏರಿದೆ. ಸಾಪ್ತಾಹಿಕ ಮತ್ತು ದೈನಂದಿನ ಧನಾತ್ಮಕ ದರಗಳು ಕ್ರಮವಾಗಿ 15.77 ಮತ್ತು 15.75 ಶೇಕಡಾ ಆಗಿದೆ. ದೈನಂದಿನ ಮತ್ತು ಸಾಪ್ತಾಹಿಕ ಧನಾತ್ಮಕ ದರಗಳು ಭಾನುವಾರದಂದು ಕ್ರಮವಾಗಿ 14.5 ಶೇಕಡಾ ಮತ್ತು 16.4 ಶೇಕಡಾ ಆಗಿತ್ತು.

ಆರೋಗ್ಯ ಸಚಿವಾಲಯದ ಪ್ರಕಾರ, ಕಳೆದ 24 ಗಂಟೆಗಳಲ್ಲಿ 2,62,628 ಜನರು ವೈರಲ್ ಕಾಯಿಲೆಯಿಂದ ಚೇತರಿಸಿಕೊಂಡಿದ್ದಾರೆ, ಇದುವರೆಗಿನ ಒಟ್ಟು ಚೇತರಿಕೆಯ ಸಂಖ್ಯೆಯನ್ನು 3,89,76,122 ಆಗಿದ್ದು ಪ್ರಸ್ತುತ ಚೇತರಿಕೆಯ ಪ್ರಮಾಣವು ಶೇ 94.37 ರಷ್ಟಿದೆ. ಸರ್ಕಾರದ ಅಂಕಿಅಂಶಗಳ ಪ್ರಕಾರ, ದೇಶಾದ್ಯಂತ ನಡೆಯುತ್ತಿರುವ ಕೊರೊನಾವೈರಸ್ ಲಸಿಕೆ ಡ್ರೈವ್ ಅಡಿಯಲ್ಲಿ, ಇದುವರೆಗೆ 166.03 ಕೋಟಿ ಲಸಿಕೆ ಡೋಸ್‌ಗಳನ್ನು ನಿರ್ವಹಿಸಲಾಗಿದೆ.

ಚುನಾವಣೆ ನಡೆಯುವ ಐದು ರಾಜ್ಯಗಳಲ್ಲಿ ಕೊವಿಡ್-19 ಪರಿಸ್ಥಿತಿಯನ್ನು ನಿರ್ಣಯಿಸಲು ಮತ್ತು ಭೌತಿಕ ರ್ಯಾಲಿಗಳ ಮೇಲಿನ ನಿಷೇಧವನ್ನು ಮುಂದುವರಿಸಬೇಕೆೇ ಎಂದು ನಿರ್ಧರಿಸಲು ಚುನಾವಣಾ ಆಯೋಗವು ಸೋಮವಾರ ಸಭೆ ಸೇರಲಿದೆ. ರಾಜಕೀಯ ಪಕ್ಷಗಳು ಮತ್ತು ಅಭ್ಯರ್ಥಿಗಳಿಗೆ ಭೌತಿಕ ಪ್ರಚಾರ ಕಾರ್ಯಕ್ರಮಗಳನ್ನು ನಡೆಸುವಲ್ಲಿ ಹೊಸತಾಗಿ ಸಡಿಲಿಕೆಗಳನ್ನು ವಿಸ್ತರಿಸಬಹುದೇ ಎಂಬುದರ ಕುರಿತು ಆಯೋಗವು ನಿರ್ಧರಿಸಬಹುದು. ಉತ್ತರ ಪ್ರದೇಶ, ಉತ್ತರಾಖಂಡ, ಗೋವಾ, ಪಂಜಾಬ್ ಮತ್ತು ಮಣಿಪುರಕ್ಕೆ ಜನವರಿ 31 ರವರೆಗೆ ಚುನಾವಣಾ ವೇಳಾಪಟ್ಟಿಯನ್ನು ಪ್ರಕಟಿಸಿದಾಗ ಚುನಾವಣಾ ಸಮಿತಿಯು ಭೌತಿಕ ರ್ಯಾಲಿಗಳು ಮತ್ತು ರೋಡ್‌ಶೋಗಳಿಗೆ ನಿಷೇಧ ಹೇರಿತ್ತು.

ಚುನಾವಣಾ ಆಯೋಗದ ಸಭೆ ಇಂದು

ಚುನಾವಣೆ ನಡೆಯುವ ಐದು ರಾಜ್ಯಗಳಲ್ಲಿ ಕೊವಿಡ್-19 ಪರಿಸ್ಥಿತಿಯನ್ನು ನಿರ್ಣಯಿಸಲು ಮತ್ತು ಭೌತಿಕ ರ್ಯಾಲಿಗಳ ಮೇಲಿನ ನಿಷೇಧವನ್ನು ಮುಂದುವರಿಸಬೇಕೆ ಎಂದು ನಿರ್ಧರಿಸಲು ಚುನಾವಣಾ ಆಯೋಗವು ಸೋಮವಾರ ಸಭೆ ಸೇರಲಿದೆ. ರಾಜಕೀಯ ಪಕ್ಷಗಳು ಮತ್ತು ಅಭ್ಯರ್ಥಿಗಳಿಗೆ ಭೌತಿಕ ಪ್ರಚಾರ ಕಾರ್ಯಕ್ರಮಗಳನ್ನು ನಡೆಸುವಲ್ಲಿ  ಹೊಸತಾಗಿ ಸಡಿಲಿಕೆಗಳನ್ನು ವಿಸ್ತರಿಸಬಹುದೇ ಎಂಬುದರ ಕುರಿತು ಆಯೋಗವು ನಿರ್ಧರಿಸಬಹುದು. ಉತ್ತರ ಪ್ರದೇಶ, ಉತ್ತರಾಖಂಡ, ಗೋವಾ, ಪಂಜಾಬ್ ಮತ್ತು ಮಣಿಪುರಕ್ಕೆ ಜನವರಿ 31 ರವರೆಗೆ ಚುನಾವಣಾ ವೇಳಾಪಟ್ಟಿಯನ್ನು ಪ್ರಕಟಿಸಿದಾಗ ಚುನಾವಣಾ ಸಮಿತಿಯು ಭೌತಿಕ ರ್ಯಾಲಿಗಳು ಮತ್ತು ರೋಡ್‌ಶೋಗಳಿಗೆ ನಿಷೇಧ ಹೇರಿತ್ತು.

ದೆಹಲಿಯಲ್ಲಿ  ಕೊವಿಡ್ ಪ್ರಕರಣಗಳು ಇಳಿಕೆ

ಸ್ಥಿರವಾದ ಕುಸಿತವನ್ನು ಕಾಯ್ದುಕೊಂಡು, ದೆಹಲಿಯು ಭಾನುವಾರ 3,674 ಕೊವಿಡ್ ಪ್ರಕರಣಗಳನ್ನು ಶೇ 6.37 ನಷ್ಟು ಧನಾತ್ಮಕ ದರದಲ್ಲಿ ವರದಿ ಮಾಡಿದೆ. ತಜ್ಞರ ಪ್ರಕಾರ ಪ್ರಕರಣಗಳಿಗೆ ಹೋಲಿಸಿದರೆ ಸುಮಾರು 2 ವಾರಗಳ ಹಿಂದೆ ಇರುವ ಸಾವಿನ ಸಂಖ್ಯೆ ಇನ್ನೂ 30 ರಷ್ಟಿದೆ. ಪ್ರಕರಣಗಳಲ್ಲಿ ಕುಸಿತ ಕಂಡಿರುವುದರಿಂದ ದೆಹಲಿಯಲ್ಲಿ ಕೆಟ್ಟ ಪರಿಸ್ಥಿತಿ ಮುಗಿದಿದೆ ಎಂದು  ಎಂದು ದೆಹಲಿ ಸರ್ಕಾರಿ ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: ಇಂದು ವಿಶ್ವಾಸದ್ರೋಹದ ದಿನ ಆಚರಿಸುವುದಾಗಿ ರೈತ ಮುಖಂಡ ರಾಕೇಶ್ ಟಿಕಾಯತ್​ ಘೋಷಣೆ; ಕೇಂದ್ರದ ವಿರುದ್ಧ ಮತ್ತೆ ಸಿಡಿಮಿಡಿ

Published On - 10:22 am, Mon, 31 January 22

ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ