Coronavirus cases in India: ದೇಶದಲ್ಲಿ 20,799 ಹೊಸ ಕೊವಿಡ್ ಪ್ರಕರಣ ಪತ್ತೆ, ಚೇತರಿಕೆ ಪ್ರಮಾಣ ಶೇ 97.89

Covid-19: ರಾಷ್ಟ್ರೀಯ ಕೊವಿಡ್ ಚೇತರಿಕೆಯ ಪ್ರಮಾಣವು ಶೇಕಡಾ 97.89 ರಷ್ಟು ದಾಖಲಾಗಿದೆ, ಇದು ಮಾರ್ಚ್ 2020 ರಿಂದ ಗರಿಷ್ಠವಾಗಿದೆ. ಕಳೆದ 24 ಗಂಟೆಗಳಲ್ಲಿ ಕನಿಷ್ಠ 26,718 ಮಂದಿ ಚೇತರಿಸಿಕೊಂಡಿದ್ದು ಒಟ್ಟು ಚೇತರಿಕೆಯ ಸಂಖ್ಯೆ 3,31,21,247 ಆಗಿದೆ.

Coronavirus cases in India: ದೇಶದಲ್ಲಿ 20,799 ಹೊಸ ಕೊವಿಡ್ ಪ್ರಕರಣ ಪತ್ತೆ, ಚೇತರಿಕೆ ಪ್ರಮಾಣ ಶೇ 97.89
ಪ್ರಾತಿನಿಧಿಕ ಚಿತ್ರ
Follow us
| Updated By: ರಶ್ಮಿ ಕಲ್ಲಕಟ್ಟ

Updated on: Oct 04, 2021 | 10:37 AM

ದೆಹಲಿ: ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 20,799 ಹೊಸ ಕೊವಿಡ್ -19 (Covid-19) ಪ್ರಕರಣಗಳನ್ನು ವರದಿ ಆಗಿದೆ. ಇದು ನಿನ್ನೆಯ 22,842 ಪ್ರಕರಣಗಳಿಂದ ಸುಮಾರು ಒಂಬತ್ತು ಪ್ರತಿಶತದಷ್ಟು ಇಳಿಕೆಯಾಗಿದೆ. ಇದೇ ಅವಧಿಯಲ್ಲಿ, ಆರೋಗ್ಯ ಸಚಿವಾಲಯದ ಪ್ರಕಾರ 180 ಸಾವುಗಳು ದಾಖಲಾಗಿವೆ. ಭಾರತದ ಸಕ್ರಿಯ ಪ್ರಕರಣಗಳು ಒಟ್ಟು ಸೋಂಕುಗಳಲ್ಲಿ ಶೇಕಡಾ 1 ಕ್ಕಿಂತ ಕಡಿಮೆ, ಪ್ರಸ್ತುತ 0.78 ಶೇಕಡಾ ಇದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 2,64,458 ಆಗಿದೆ. ರಾಷ್ಟ್ರೀಯ ಕೊವಿಡ್ ಚೇತರಿಕೆಯ ಪ್ರಮಾಣವು ಶೇಕಡಾ 97.89 ರಷ್ಟು ದಾಖಲಾಗಿದೆ, ಇದು ಮಾರ್ಚ್ 2020 ರಿಂದ ಗರಿಷ್ಠವಾಗಿದೆ. ಕಳೆದ 24 ಗಂಟೆಗಳಲ್ಲಿ ಕನಿಷ್ಠ 26,718 ಮಂದಿ ಚೇತರಿಸಿಕೊಂಡಿದ್ದು ಒಟ್ಟು ಚೇತರಿಕೆಯ ಸಂಖ್ಯೆ 3,31,21,247 ಆಗಿದೆ. ದಿನನಿತ್ಯದ ಸಕಾರಾತ್ಮಕತೆ ದರ  ಶೇ 2.10 ಆಗಿದ್ದು ಇದು ಕಳೆದ 35 ದಿನಗಳಲ್ಲಿ ಶೇಕಡಾ 3 ಕ್ಕಿಂತ ಕಡಿಮೆ. ಸಾಪ್ತಾಹಿಕ ಧನಾತ್ಮಕ ದರವು ಶೇ 1.63 ರಷ್ಟಿದೆ.

ಥಾಣೆಯಲ್ಲಿ 81 ಹೊಸ ಕೊವಿಡ್ -19 ಪ್ರಕರಣಗಳು, 4 ಸಾವು ಥಾಣೆಯಲ್ಲಿ 281 ಹೊಸ ಕೊರೊನಾವೈರಸ್ ಪ್ರಕರಣಗಳು ವರದಿಯಾಗಿದ್ದು, ಮಹಾರಾಷ್ಟ್ರ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 5,60,175 ಕ್ಕೆ ಏರಿಕೆಯಾಗಿದೆ. ಭಾನುವಾರ ದಾಖಲಾದ ಈ ಹೊಸ ಪ್ರಕರಣಗಳಲ್ಲದೆ, ವೈರಸ್ ಇನ್ನೂ ನಾಲ್ಕು ಜನರ ಜೀವವನ್ನು ಬಲಿ ತೆಗೆದುಕೊಂಡಿದೆ. ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 11,420 ಕ್ಕೆ ತಲುಪಿದೆ.

ಕರ್ನಾಟಕದಲ್ಲಿ 664 ಹೊಸ ಕೊವಿಡ್ -19 ಪ್ರಕರಣ, ಪತ್ತೆ 8 ಸಾವು ಕರ್ನಾಟಕದಲ್ಲಿ ಭಾನುವಾರ ಒಟ್ಟು 664 ಹೊಸ ಕೋವಿಡ್ -19 ಪ್ರಕರಣಗಳು, 711 ಚೇತರಿಕೆ ಮತ್ತು 8 ಸಾವುಗಳು ವರದಿಯಾಗಿವೆ. ರಾಜ್ಯ ಅಧಿಕೃತ ಮಾಹಿತಿಯ ಪ್ರಕಾರ, ರಾಜ್ಯದಲ್ಲಿ ಒಟ್ಟು ಪ್ರಕರಣಗಳು 12,301 ಸಕ್ರಿಯ ಪ್ರಕರಣಗಳು ಸೇರಿದಂತೆ 29,77,889 ಕ್ಕೆ ಏರಿದೆ. ರಾಜ್ಯದಲ್ಲಿ ಇದುವರೆಗೆ ಒಟ್ಟು 37,819 ಜನರು ಕೊರೊನಾವೈರಸ್ ಸೋಂಕಿಗೆ ಬಲಿಯಾಗಿದ್ದಾರೆ, ಒಟ್ಟಾರೆ ಚೇತರಿಕೆ 29,27,740 ಆಗಿದೆ.

ಗರಿಷ್ಠ ಪ್ರಕರಣಗಳನ್ನು ದಾಖಲಿಸಿರುವ ಮೊದಲ ಐದು ರಾಜ್ಯಗಳಲ್ಲಿ ಕೇರಳವು 12,297 ಪ್ರಕರಣಗಳನ್ನು ಹೊಂದಿದೆ. ಮಹಾರಾಷ್ಟ್ರ 2,692 ಪ್ರಕರಣಗಳು, ತಮಿಳುನಾಡು 1,531 ಪ್ರಕರಣಗಳು, ಆಂಧ್ರ ಪ್ರದೇಶ 765 ಪ್ರಕರಣಗಳು ಮತ್ತು ಪಶ್ಚಿಮ ಬಂಗಾಳ 701 ಪ್ರಕರಣಗಳು ಹೊಂದಿವೆ. ಈ ಐದು ರಾಜ್ಯಗಳಿಂದ ಸುಮಾರು ಶೇ 86.47 ಹೊಸ ಪ್ರಕರಣಗಳು ವರದಿಯಾಗಿದ್ದು ಹೊಸ ಪ್ರಕರಣಗಳಲ್ಲಿ ಕೇರಳವು ಶೇ59.12 ಪ್ರಕರಣ ವರದಿ ಮಾಡಿದೆ. ಕೇರಳದಲ್ಲಿ 74 ಹೊಸ ಸಾವು ವರದಿಯಾಗಿದ್ದು, ಮಹಾರಾಷ್ಟ್ರದಲ್ಲಿ 41 ದೈನಂದಿನ ಸಾವುಗಳು ಸಂಭವಿಸಿವೆ.

ಕಳೆದ 24 ಗಂಟೆಗಳಲ್ಲಿ ಭಾರತವು ಒಟ್ಟು 23,46,176 ಡೋಸ್‌ಗಳನ್ನು ನೀಡಿದ್ದು ಒಟ್ಟು ಡೋಸ್‌ಗಳ ಮೊತ್ತವನ್ನು 90,79,32,861 ಕ್ಕೆ ತಲುಪಿದೆ. ಕಳೆದ 24 ಗಂಟೆಗಳಲ್ಲಿ ಒಟ್ಟು 9,91,676 ಮಾದರಿಗಳನ್ನು ಪರೀಕ್ಷಿಸಲಾಗಿದೆ.

ಇದನ್ನೂ ಓದಿ: Priyanka Gandhi: ಉತ್ತರ ಪ್ರದೇಶದ ಹರಗಾಂವ್​ನಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಬಂಧನ

ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು