AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Coronavirus cases in India: ದೇಶದಲ್ಲಿ 21,257 ಹೊಸ ಕೊವಿಡ್ ಪ್ರಕರಣ ಪತ್ತೆ, 271 ಮಂದಿ ಸಾವು

Covid-19: ಭಾರತದಲ್ಲಿ ಸಕ್ರಿಯ ಕೊವಿಡ್ -19 ಪ್ರಕರಣಗಳು ಒಟ್ಟು ಸೋಂಕು ಪ್ರಕರಣಗಳ ಶೇಕಡಾ 0.71 ರಷ್ಟಿದೆ, ಮಾರ್ಚ್ 2020 ರ ನಂತರ ಅತಿ ಕಡಿಮೆ-ಪ್ರಸ್ತುತ ಪ್ರಕರಣಗಳ ಸಂಖ್ಯೆ 2,40,221 ಆಗಿದೆ, ಇದು 205 ದಿನಗಳಲ್ಲಿ ಕಡಿಮೆ.

Coronavirus cases in India: ದೇಶದಲ್ಲಿ 21,257 ಹೊಸ ಕೊವಿಡ್ ಪ್ರಕರಣ ಪತ್ತೆ, 271 ಮಂದಿ ಸಾವು
ಪ್ರಾತಿನಿಧಿಕ ಚಿತ್ರ
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on:Oct 08, 2021 | 10:46 AM

Share

ದೆಹಲಿ: ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ  21,257 ಹೊಸ ಕೊವಿಡ್ -19 (Covid 19) ಪ್ರಕರಣಗಳು ಪತ್ತೆಯಾಗಿದ್ದು ಇದು ಗುರುವಾರದ ಅಂಕಿ ಅಂಶಕ್ಕಿಂತ ಕೇವಲ ಶೇ 5 ಕಡಿಮೆ ಆಗಿದೆ. ಅದೇ ಅವಧಿಯಲ್ಲಿ 271 ಸಾವು ವರದಿ ಆಗಿದೆ. ಭಾರತದಲ್ಲಿ ಸಕ್ರಿಯ ಕೊವಿಡ್ -19 ಪ್ರಕರಣಗಳು ಒಟ್ಟು ಸೋಂಕು ಪ್ರಕರಣಗಳ ಶೇಕಡಾ 0.71 ರಷ್ಟಿದೆ, ಮಾರ್ಚ್ 2020 ರ ನಂತರ ಅತಿ ಕಡಿಮೆ-ಪ್ರಸ್ತುತ ಪ್ರಕರಣಗಳ ಸಂಖ್ಯೆ 2,40,221 ಆಗಿದೆ, ಇದು 205 ದಿನಗಳಲ್ಲಿ ಕಡಿಮೆ. ರಾಷ್ಟ್ರೀಯ ಕೊವಿಡ್ -19 ಚೇತರಿಕೆಯ ಪ್ರಮಾಣವು ಶೇಕಡಾ 97.96 ರಷ್ಟಿದೆ, ಇದು ಮಾರ್ಚ್ 2020 ರಿಂದ ಗರಿಷ್ಠವಾಗಿದೆ. ಕಳೆದ 24 ಗಂಟೆಗಳಲ್ಲಿ ಕನಿಷ್ಠ 24,963 ಮಂದಿ ಚೇತರಿಸಿಕೊಂಡಿದ್ದು ಭಾರತದಲ್ಲಿ ಒಟ್ಟು ಚೇತರಿಕೆಯ ಸಂಖ್ಯೆಯನ್ನು 3,32,25,221 ಕ್ಕೆ ತಲುಪಿದೆ.

ದೈನಂದಿನ ಧನಾತ್ಮಕ ದರ- 1.53 ಶೇಕಡಾ ಆಗಿದ್ದು ಕಳೆದ 39 ದಿನಗಳಲ್ಲಿ ಶೇಕಡಾ 3 ಕ್ಕಿಂತ ಕಡಿಮೆ. ಸಾಪ್ತಾಹಿಕ ಧನಾತ್ಮಕ ದರವು ಭಾರತದಲ್ಲಿ ಶೇಕಡಾ 1.64 ರಷ್ಟಿದೆ. ಭಾರತದಲ್ಲಿ ಇದುವರೆಗೆ 93.17 ಕೋಟಿಗೂ ಹೆಚ್ಚು ಕೊವಿಡ್ ಲಸಿಕೆ ಪ್ರಮಾಣವನ್ನು ನೀಡಲಾಗಿದೆ. ಭಾರತದ ವಯಸ್ಕ ಜನಸಂಖ್ಯೆಯ 71 ಪ್ರತಿಶತದಷ್ಟು ಜನರು ಕನಿಷ್ಠ ಒಂದು ಡೋಸ್ ಕೊವಿಡ್ -19 ಲಸಿಕೆಯನ್ನು ಪಡೆದಿದ್ದಾರೆ ಎಂದು ಸರ್ಕಾರ ಹೇಳಿದೆ, ಆದರೆ 27 ಪ್ರತಿಶತದಷ್ಟು ಜನರು ಎರಡೂ ಡೋಸ್‌ಗಳನ್ನು ಪಡೆದಿದ್ದಾರೆ. ಕೇರಳದಲ್ಲಿ 12,288 ಹೊಸ ಕೊವಿಡ್ -19 ಸೋಂಕುಗಳು ವರದಿಯಾಗಿದ್ದು, ರಾಜ್ಯದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳು 1,18,744 ಕ್ಕೆ ತಲುಪಿದೆ. ಕಳೆದ ವಾರ ಭಾರತದ ಶೇ 56 ರಷ್ಟು ಕೊವಿಡ್ ಪ್ರಕರಣಗಳು ಕೇರಳದಿಂದ ವರದಿಯಾಗಿವೆ ಎಂದು ಕೇಂದ್ರ ಹೇಳಿದೆ.

ನಾಲ್ಕು ಸದಸ್ಯರ ಕೇಂದ್ರ ತಂಡವು ಮಿಜೋರಾಂನಲ್ಲಿ ಕೊವಿಡ್ -19 ಪರಿಸ್ಥಿತಿ ಪರಿಶೀಲಿಸಲು ಮಧ್ಯೆ ಪ್ರವೇಶಿಸಿದೆ. ಮಿಜೋರಾಂ ಬುಧವಾರ ಒಂದು ಲಕ್ಷ ಕೊವಿಡ್ ಪ್ರಕರಣಗಳನ್ನು ದಾಟಿದೆ. ಐದು ರಾಜ್ಯಗಳಾದ ಮಿಜೋರಾಂ, ಕೇರಳ, ಸಿಕ್ಕಿಂ, ಮಣಿಪುರ ಮತ್ತು ಮೇಘಾಲಯ ವಾರಕ್ಕೆ ಐದು ಶೇಕಡಾಕ್ಕಿಂತ ಹೆಚ್ಚಿನ ಧನಾತ್ಮಕ ದರವನ್ನು ವರದಿ ಮಾಡುತ್ತಿವೆ.

ಪಶ್ಚಿಮ ಬಂಗಾಳದಲ್ಲಿ 13 ಹೊಸ ಕೊವಿಡ್ ಸಾವು ವರದಿ ಆಗಿದ್ದು ಸಾವಿನ ಸಂಖ್ಯೆಯನ್ನು 18,876 ಕ್ಕೆ ಏರಿದೆ.ಇಲ್ಲಿ ಕೊರೊನಾವೈರಸ್ ಪ್ರಕರಣಗಳ ಸಂಖ್ಯೆ 15,74,017ಕ್ಕೆ ತಲುಪಿದೆ. ದೆಹಲಿಯಲ್ಲಿ 44 ಕೊವಿಡ್ -19 ಪ್ರಕರಣಗಳು ಮತ್ತು ರೋಗದಿಂದ ದೈನಂದಿನ ಶೂನ್ಯ ಸಾವುಗಳು ದಾಖಲಾಗಿವೆ, ಆದರೆ ಧನಾತ್ಮಕ ದರವು ಶೇಕಡಾ 0.07 ರಷ್ಟು ದಾಖಲಾಗಿದೆ.

ಇದನ್ನೂ ಓದಿ: Covid Vaccine: ಸದ್ಯದಲ್ಲೇ ಭಾರತದಲ್ಲಿ 100 ಕೋಟಿ ಕೊವಿಡ್ ಲಸಿಕೆ ಗುರಿ ಪೂರ್ತಿಯಾಗಲಿದೆ; ಪ್ರಧಾನಿ ಮೋದಿ ವಿಶ್ವಾಸ

Published On - 10:44 am, Fri, 8 October 21

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ