ದೇಶದಲ್ಲಿ ಇಂದು 2,82,970 ಕೊರೊನಾ ಕೇಸ್​ಗಳು ದಾಖಲು; ಅತಿ ಹೆಚ್ಚು ಜನ ಮೃತಪಟ್ಟಿದ್ದು ಯಾವ ರಾಜ್ಯದಲ್ಲಿ? ಚೇತರಿಕೆ ರೇಟ್​ ಎಷ್ಟು? ಇಲ್ಲಿದೆ ಮಾಹಿತಿ

Covid 19 Cases In India: ಕೊವಿಡ್​ 19 ಸೋಂಕಿನಿಂದ ಸಾಯುತ್ತಿರುವವರ ಪ್ರಮಾಣ 1.29ರಷ್ಟಿದ್ದು, ರೋಗದಿಂದ ಚೇತರಿಸಿಕೊಂಡವರ ಸಂಖ್ಯೆ 3,55,83,039 ಕ್ಕೆ ಏರಿದೆ. ಇದುವರೆಗೆ ದೇಶದಲ್ಲಿ158.88 ಡೋಸ್​ ಲಸಿಕೆ ನೀಡಲಾಗಿದೆ.

ದೇಶದಲ್ಲಿ ಇಂದು 2,82,970 ಕೊರೊನಾ ಕೇಸ್​ಗಳು ದಾಖಲು; ಅತಿ ಹೆಚ್ಚು ಜನ ಮೃತಪಟ್ಟಿದ್ದು ಯಾವ ರಾಜ್ಯದಲ್ಲಿ? ಚೇತರಿಕೆ ರೇಟ್​ ಎಷ್ಟು? ಇಲ್ಲಿದೆ ಮಾಹಿತಿ
ಪ್ರಾತಿನಿಧಿಕ ಚಿತ್ರ
Follow us
| Updated By: Lakshmi Hegde

Updated on: Jan 19, 2022 | 11:48 AM

ದೆಹಲಿ: ದೇಶದಲ್ಲಿ ಇಂದು 2,82,970 ಕೊರೊನಾ ವೈರಸ್ (Corona virus)​ ಸೋಂಕಿನ ಪ್ರಕರಣಗಳು ದಾಖಲಾಗಿವೆ. ಈ ಮೂಲಕ ದೇಶದಲ್ಲಿ ಒಟ್ಟಾರೆ ಕೊರೊನಾ ಸೋಂಕಿತರ ಸಂಖ್ಯೆ 3,79,01,241ಕ್ಕೆ ಏರಿಕೆಯಾಗಿದೆ. ಹಾಗೇ, ಭಾರತದಲ್ಲಿ ಒಟ್ಟು ಒಮಿಕ್ರಾನ್ ಸೋಂಕಿತರ ಸಂಖ್ಯೆ 8,961 ತಲುಪಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ಸದ್ಯ ದೇಶದಲ್ಲಿ 18,31,000 ಕೊವಿಡ್​ 19 ಸಕ್ರಿಯ ಪ್ರಕರಣಗಳು ಇದ್ದು, ಕಳೆದ 232 ದಿನಗಳಲ್ಲಿಯೇ ಇದು ಅತ್ಯಂತ ಹೆಚ್ಚಿನ ಸಂಖ್ಯೆಯ ಸಕ್ರಿಯ ಪ್ರಕರಣ ಎನ್ನಲಾಗಿದೆ. ಕಳೆದ ಮೇ 31ರಂದು ಕೊರೊನಾ ಸಕ್ರಿಯ ಪ್ರಕರಣಗಳ ಸಂಖ್ಯೆ 18,95,520 ಇತ್ತು. ಅದಾದ ಬಳಿಕ ಇಳಿಮುಖವಾಗಿತ್ತು. ಹಾಗೇ, 24 ಗಂಟೆಯಲ್ಲಿ 441 ಮಂದಿ ಮೃತಪಟ್ಟಿದ್ದು, ಒಟ್ಟು ಸಾವಿನ ಸಂಖ್ಯೆ 4,87,202ಕ್ಕೆ ತಲುಪಿದೆ. ಈ 441 ಜನರಲ್ಲಿ ಕೇರಳದ 122 ಮಂದಿ, ಮಹಾರಾಷ್ಟ್ರದಲ್ಲಿ 53 ಸೋಂಕಿತರು ಮತ್ತು ಪಶ್ಚಿಮ ಬಂಗಾಳದಲ್ಲಿ 34 ಮಂದಿ ಕೊರೊನಾದಿಂದ ಮೃತಪಟ್ಟಿದ್ದಾರೆ.

ಇದೀಗ ಕೊರೊನಾ ವೈರಸ್​ ಇಷ್ಟು ಪ್ರಮಾಣದಲ್ಲಿ ಹರಡಲು ಒಮಿಕ್ರಾನ್​ ಸೋಂಕು ಕಾರಣ. ಹಾಗಂತ ಕೊವಿಡ್​ 19 ಪಾಸಿಟಿವ್​ ಬಂದಿರುವವರಿಗೆಲ್ಲ ಜಿನೋಮ್ ಸಿಕ್ವೆನ್ಸ್​ ಟೆಸ್ಟ್ ಮಾಡಲು ಸಾಧ್ಯವಿಲ್ಲ ಎಂದು ಆರೋಗ್ಯ ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಒಟ್ಟಾರೆ ಕೊರೊನಾ ಸೋಂಕಿನ ಕೇಸ್​ಗಳ ಸಂಖ್ಯೆಯ 4.83ರಷ್ಟು ಸಕ್ರಿಯ ಪ್ರಕರಣವಿದೆ. ಸದ್ಯ ದೇಶದಲ್ಲಿ ಕೊವಿಡ್ 19 ಚೇತರಿಕೆ ರೇಟ್​ 93.88ಕ್ಕೆ ಇಳಿದಿರುವುದು ತುಸು ಆತಂಕ ತಂದಿದೆ ಎಂದು ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ. ಅಂದಹಾಗೆ ದೈನಂದಿನ ಪಾಸಿಟಿವಿಟಿ ದರ 15.13ರಷ್ಟಿದ್ದು, ವಾರದ ಪಾಸಿಟಿವಿಟಿ ರೇಟ್​ 15.53ರಷ್ಟಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಕೊವಿಡ್​ 19 ಸೋಂಕಿನಿಂದ ಸಾಯುತ್ತಿರುವವರ ಪ್ರಮಾಣ 1.29ರಷ್ಟಿದ್ದು, ರೋಗದಿಂದ ಚೇತರಿಸಿಕೊಂಡವರ ಸಂಖ್ಯೆ 3,55,83,039 ಕ್ಕೆ ಏರಿದೆ. ಇದುವರೆಗೆ ದೇಶದಲ್ಲಿ158.88 ಡೋಸ್​ ಲಸಿಕೆ ನೀಡಲಾಗಿದೆ. ಭಾರತದಲ್ಲಿ 2020ರ ಆಗಸ್ಟ್​ 7ರಂದು ಕೊವಿಡ್ 19 ಸೋಂಕಿನ ಸಂಖ್ಯೆ 20 ಲಕ್ಷದ ಗಡಿ ದಾಟಿತ್ತು. ಹಾಗೇ, ಆಗಸ್ಟ್ 20ರಂದು 30 ಲಕ್ಷ ಮೀರಿತು. ನೋಡನೋಡುತ್ತಿದ್ದಂತೆ ಭಾರತದಲ್ಲಿ ಕೊವಿಡ್​ 19 ಸೋಂಕಿತರ ಸಂಖ್ಯೆ 2021ರ ಮೇ 4ರಂದು 2 ಕೋಟಿ ದಾಟಿ, ಜೂನ್​ 23ರಂದು ಮೂರು ಕೋಟಿಯನ್ನೂ ದಾಟಿದೆ.

ಇದನ್ನೂ ಓದಿ: ಗೌರವ ಹೆಚ್ಚಿಸಿಕೊಂಡ ಇಳಕಲ್ ಸೀರೆ, ಗುಳೇದಗುಡ್ಡ ಖಣ; ಗಣರಾಜ್ಯೋತ್ಸವ ಸ್ತಬ್ಧಚಿತ್ರಕ್ಕೆ ಆಯ್ಕೆ

ಬಲಗೈಯಲ್ಲಿ 6 ಬೆರಳುಗಳಿದ್ದರೆ ಏನು ಅರ್ಥ? ವಿಡಿಯೋ ನೋಡಿ
ಬಲಗೈಯಲ್ಲಿ 6 ಬೆರಳುಗಳಿದ್ದರೆ ಏನು ಅರ್ಥ? ವಿಡಿಯೋ ನೋಡಿ
Nithya Bhavishya: ಈ ರಾಶಿಯವರಿಂದು ಹಣವನ್ನು ಕೊಟ್ಟು ಕಳೆದುಕೊಳ್ಳುವಿರಿ
Nithya Bhavishya: ಈ ರಾಶಿಯವರಿಂದು ಹಣವನ್ನು ಕೊಟ್ಟು ಕಳೆದುಕೊಳ್ಳುವಿರಿ
Weekly Horoscope: ಸೆಪ್ಟೆಂಬರ್​​ 9 ರಿಂದ 15ರ ವಾರ ಭವಿಷ್ಯ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 9 ರಿಂದ 15ರ ವಾರ ಭವಿಷ್ಯ ತಿಳಿಯಿರಿ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್