AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದಲ್ಲಿ ಇಂದು ದಾಖಲಾದ ಕೊರೊನಾ ಕೇಸ್​ಗಳ ಸಂಖ್ಯೆ 3 ಲಕ್ಷಕ್ಕೂ ಹೆಚ್ಚು; ಪಾಸಿಟಿವಿಟಿ ರೇಟ್ ಶೇ.​ 16ಕ್ಕೆ ಏರಿಕೆ, ಚೇತರಿಕೆ ಪ್ರಮಾಣದಲ್ಲಿ ಇಳಿಕೆ

ಕೇರಳದಲ್ಲಿ ಕೊರೊನಾ ವಿಪರೀತ ಹೆಚ್ಚಳವಾಗುತ್ತಿದ್ದು, ಅಲ್ಲೀಗ ಪಾಸಿಟಿವಿಟಿ ರೇಟ್​ ಶೇ.37ರಷ್ಟಿದೆ. ಅದರಲ್ಲೂ ಮುಂದಿನ ಮೂರು ವಾರಗಳು ಕೇರಳದ ಪಾಲಿಗೆ ಅತ್ಯಂತ ಕಠಿಣ ಎಂದು ಅಲ್ಲಿನ ಆರೋಗ್ಯ ಸಚಿವೆ ವೀಣಾ ಜಾರ್ಜ್​ ಹೇಳಿದ್ದಾರೆ.

ಭಾರತದಲ್ಲಿ ಇಂದು ದಾಖಲಾದ ಕೊರೊನಾ ಕೇಸ್​ಗಳ ಸಂಖ್ಯೆ 3 ಲಕ್ಷಕ್ಕೂ ಹೆಚ್ಚು; ಪಾಸಿಟಿವಿಟಿ ರೇಟ್ ಶೇ.​ 16ಕ್ಕೆ ಏರಿಕೆ, ಚೇತರಿಕೆ ಪ್ರಮಾಣದಲ್ಲಿ ಇಳಿಕೆ
ಪ್ರಾತಿನಿಧಿಕ ಚಿತ್ರ
TV9 Web
| Updated By: Lakshmi Hegde|

Updated on:Jan 20, 2022 | 9:56 AM

Share

ಭಾರತದಲ್ಲಿಂದು ದಾಖಲಾದ ಕೊವಿಡ್ 19 ಸೋಂಕಿತರ (Covid 19 Cases in India) ಸಂಖ್ಯೆ 3 ಲಕ್ಷದ ಗಡಿ ದಾಟಿದೆ. ಇಂದು ಬರೋಬ್ಬರಿ 3,17, 532 ಕೊರೊನಾ ಕೇಸ್​ಗಳು ದಾಖಲಾಗಿವೆ. ನಿನ್ನೆ 2,82, 970 ಪ್ರಕರಣಗಳು ದಾಖಲಾಗಿದ್ದವು. ನಿನ್ನೆಗಿಂತಲೂ ಇಂದು ಬರೋಬ್ಬರಿ 34,562 ಕೇಸ್​ಗಳು ಹೆಚ್ಚಾಗಿವೆ. ಹಾಗೇ, 24 ಗಂಟೆಯಲ್ಲಿ 491 ಮಂದಿ ಕೊರೊನಾದಿಂದ ಮೃತಪಟ್ಟಿವೆ. ದೇಶದಲ್ಲೀಗ ಒಟ್ಟಾರೆ ಕೊರೊನಾ ಸೋಂಕಿತರ ಸಂಖ್ಯೆ  38,218,773ಕ್ಕೆ ತಲುಪಿದೆ. ದಿನದ ಪಾಸಿಟಿವಿಟಿ ರೇಟ್​ 16.41 ಆಗಿದೆ. ನಿನ್ನೆ ಈ ರೇಟ್​ 15.13 ಇತ್ತು. ಕೊರೊನಾ ಸಕ್ರಿಯ ಪ್ರಕರಣಗಳು 19,24,051 ಇವೆ. ಹಾಗೇ, ಚೇತರಿಕೆ ಪ್ರಮಾಣ ಶೇ.93.69ಕ್ಕೆ ಇಳಿಕೆಯಾಗಿದೆ. ಇನ್ನೊಂದೆಡೆ ದೇಶದಲ್ಲಿ ಒಮಿಕ್ರಾನ್ ಸೋಂಕಿತರ ಸಂಕ್ಯೆ  9,287 ಕ್ಕೆ ತಲುಪಿದೆ.

ಕೇರಳದಲ್ಲಿ ಕೊರೊನಾ ವಿಪರೀತ ಹೆಚ್ಚಳವಾಗುತ್ತಿದ್ದು, ಅಲ್ಲೀಗ ಪಾಸಿಟಿವಿಟಿ ರೇಟ್​ ಶೇ.37ರಷ್ಟಿದೆ. ಅದರಲ್ಲೂ ಮುಂದಿನ ಮೂರು ವಾರಗಳು ಕೇರಳದ ಪಾಲಿಗೆ ಅತ್ಯಂತ ಕಠಿಣ ಎಂದು ಅಲ್ಲಿನ ಆರೋಗ್ಯ ಸಚಿವೆ ವೀಣಾ ಜಾರ್ಜ್​ ಹೇಳಿದ್ದಾರೆ. ಮುಂಬೈನಲ್ಲಿ ಇಂದು ಮತ್ತೆ 12 ಪೊಲೀಸರಲ್ಲಿ ಕೊರೊನಾ ದೃಢಪಟ್ಟಿದೆ. ಅಲ್ಲಿಗೆ ಒಟ್ಟು ಕೊರೊನಾ ಸೋಂಕಿತ ಪೊಲೀಸರ ಸಂಖ್ಯೆ 1246ಕ್ಕೆ ಏರಿಕೆಯಾಗಿದೆ. ಇದುವರೆಗೆ ಮುಂಬೈನಲ್ಲಿ ಒಟ್ಟು 127 ಪೊಲೀಸರು ಕೊರೊನಾದಿಂದ ಮೃತಪಟ್ಟಿದ್ದಾರೆ. ದೇಶಾದ್ಯಂತ ಹಲವು ರಾಜ್ಯಗಳು ಕೊರೊನಾ ಮೂರನೇ ಅಲೆಯ ಉತ್ತುಂಗವನ್ನು ನೋಡುತ್ತಿವೆ. ಇದರ ಬೆನ್ನಲ್ಲೇ ಭಾರತದಲ್ಲಿ ಕೊರೊನಾ ಲಸಿಕೆ ನೀಡಿಕೆ ಅಭಿಯಾನವೂ ವೇಗವಾಗಿ ಸಾಗುತ್ತಿದೆ. ಒಟ್ಟಾರೆ ವಯಸ್ಕರಿಗೆ 159 ಕೋಟಿ ಡೋಸ್​ ಕೊರೊನಾ ಲಸಿಕೆ ನೀಡಲಾಗಿದೆ.  15-18 ವಯಸ್ಸಿನವರಿಗೂ ಕೊರೊನಾ ಲಸಿಕೀಕರಣ ನಡೆಯುತ್ತಿದ್ದು, ಆಯ್ದ ವರ್ಗಗಳಿಗೆ ಬೂಸ್ಟರ್ ಡೋಸ್ ಕೂಡ ನೀಡಲಾಗುತ್ತಿದೆ.

ದೇಶದಲ್ಲಿ ಬುಧವಾರದವರೆಗೆ ಒಟ್ಟು 70,93,56,830 ಸ್ಯಾಂಪಲ್​ಗಳನ್ನು ಕೊವಿಡ್​ 19 ತಪಾಸಣೆಗೆ ಒಳಪಡಿಸಲಾಗಿದೆ. ಬುಧವಾರ ಒಂದೇ ದಿನ  19,35,180 ಮಾದರಿಗಳನ್ನು ಟೆಸ್ಟ್​ಗೆ ಒಳಪಡಿಸಲಾಗಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ಭಾರತದಲ್ಲಿ 2020ರ ಆಗಸ್ಟ್​ 7ರಂದು ಕೊವಿಡ್ 19 ಸೋಂಕಿನ ಸಂಖ್ಯೆ 20 ಲಕ್ಷದ ಗಡಿ ದಾಟಿತ್ತು. ಹಾಗೇ, ಆಗಸ್ಟ್ 20ರಂದು 30 ಲಕ್ಷ ಮೀರಿತು. ನೋಡನೋಡುತ್ತಿದ್ದಂತೆ ಭಾರತದಲ್ಲಿ ಕೊವಿಡ್​ 19 ಸೋಂಕಿತರ ಸಂಖ್ಯೆ 2021ರ ಮೇ 4ರಂದು 2 ಕೋಟಿ ದಾಟಿ, ಜೂನ್​ 23ರಂದು ಮೂರು ಕೋಟಿಯನ್ನೂ ದಾಟಿದೆ.

ಇದನ್ನೂ ಓದಿ: ದುನಿಯಾ ವಿಜಯ್​ ಹುಟ್ಟುಹಬ್ಬಕ್ಕೆ ವಿಶೇಷ ರೀತಿಯಲ್ಲಿ ಶುಭ ಕೋರಿದ ಅಭಿಮಾನಿ; ಇಲ್ಲಿವೆ ಫೋಟೋಗಳು​

Published On - 9:50 am, Thu, 20 January 22

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!