AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದಲ್ಲಿ ಇಂದು ದಾಖಲಾದ ಕೊರೊನಾ ಕೇಸ್​ಗಳ ಸಂಖ್ಯೆ 3 ಲಕ್ಷಕ್ಕೂ ಹೆಚ್ಚು; ಪಾಸಿಟಿವಿಟಿ ರೇಟ್ ಶೇ.​ 16ಕ್ಕೆ ಏರಿಕೆ, ಚೇತರಿಕೆ ಪ್ರಮಾಣದಲ್ಲಿ ಇಳಿಕೆ

ಕೇರಳದಲ್ಲಿ ಕೊರೊನಾ ವಿಪರೀತ ಹೆಚ್ಚಳವಾಗುತ್ತಿದ್ದು, ಅಲ್ಲೀಗ ಪಾಸಿಟಿವಿಟಿ ರೇಟ್​ ಶೇ.37ರಷ್ಟಿದೆ. ಅದರಲ್ಲೂ ಮುಂದಿನ ಮೂರು ವಾರಗಳು ಕೇರಳದ ಪಾಲಿಗೆ ಅತ್ಯಂತ ಕಠಿಣ ಎಂದು ಅಲ್ಲಿನ ಆರೋಗ್ಯ ಸಚಿವೆ ವೀಣಾ ಜಾರ್ಜ್​ ಹೇಳಿದ್ದಾರೆ.

ಭಾರತದಲ್ಲಿ ಇಂದು ದಾಖಲಾದ ಕೊರೊನಾ ಕೇಸ್​ಗಳ ಸಂಖ್ಯೆ 3 ಲಕ್ಷಕ್ಕೂ ಹೆಚ್ಚು; ಪಾಸಿಟಿವಿಟಿ ರೇಟ್ ಶೇ.​ 16ಕ್ಕೆ ಏರಿಕೆ, ಚೇತರಿಕೆ ಪ್ರಮಾಣದಲ್ಲಿ ಇಳಿಕೆ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Jan 20, 2022 | 9:56 AM

Share

ಭಾರತದಲ್ಲಿಂದು ದಾಖಲಾದ ಕೊವಿಡ್ 19 ಸೋಂಕಿತರ (Covid 19 Cases in India) ಸಂಖ್ಯೆ 3 ಲಕ್ಷದ ಗಡಿ ದಾಟಿದೆ. ಇಂದು ಬರೋಬ್ಬರಿ 3,17, 532 ಕೊರೊನಾ ಕೇಸ್​ಗಳು ದಾಖಲಾಗಿವೆ. ನಿನ್ನೆ 2,82, 970 ಪ್ರಕರಣಗಳು ದಾಖಲಾಗಿದ್ದವು. ನಿನ್ನೆಗಿಂತಲೂ ಇಂದು ಬರೋಬ್ಬರಿ 34,562 ಕೇಸ್​ಗಳು ಹೆಚ್ಚಾಗಿವೆ. ಹಾಗೇ, 24 ಗಂಟೆಯಲ್ಲಿ 491 ಮಂದಿ ಕೊರೊನಾದಿಂದ ಮೃತಪಟ್ಟಿವೆ. ದೇಶದಲ್ಲೀಗ ಒಟ್ಟಾರೆ ಕೊರೊನಾ ಸೋಂಕಿತರ ಸಂಖ್ಯೆ  38,218,773ಕ್ಕೆ ತಲುಪಿದೆ. ದಿನದ ಪಾಸಿಟಿವಿಟಿ ರೇಟ್​ 16.41 ಆಗಿದೆ. ನಿನ್ನೆ ಈ ರೇಟ್​ 15.13 ಇತ್ತು. ಕೊರೊನಾ ಸಕ್ರಿಯ ಪ್ರಕರಣಗಳು 19,24,051 ಇವೆ. ಹಾಗೇ, ಚೇತರಿಕೆ ಪ್ರಮಾಣ ಶೇ.93.69ಕ್ಕೆ ಇಳಿಕೆಯಾಗಿದೆ. ಇನ್ನೊಂದೆಡೆ ದೇಶದಲ್ಲಿ ಒಮಿಕ್ರಾನ್ ಸೋಂಕಿತರ ಸಂಕ್ಯೆ  9,287 ಕ್ಕೆ ತಲುಪಿದೆ.

ಕೇರಳದಲ್ಲಿ ಕೊರೊನಾ ವಿಪರೀತ ಹೆಚ್ಚಳವಾಗುತ್ತಿದ್ದು, ಅಲ್ಲೀಗ ಪಾಸಿಟಿವಿಟಿ ರೇಟ್​ ಶೇ.37ರಷ್ಟಿದೆ. ಅದರಲ್ಲೂ ಮುಂದಿನ ಮೂರು ವಾರಗಳು ಕೇರಳದ ಪಾಲಿಗೆ ಅತ್ಯಂತ ಕಠಿಣ ಎಂದು ಅಲ್ಲಿನ ಆರೋಗ್ಯ ಸಚಿವೆ ವೀಣಾ ಜಾರ್ಜ್​ ಹೇಳಿದ್ದಾರೆ. ಮುಂಬೈನಲ್ಲಿ ಇಂದು ಮತ್ತೆ 12 ಪೊಲೀಸರಲ್ಲಿ ಕೊರೊನಾ ದೃಢಪಟ್ಟಿದೆ. ಅಲ್ಲಿಗೆ ಒಟ್ಟು ಕೊರೊನಾ ಸೋಂಕಿತ ಪೊಲೀಸರ ಸಂಖ್ಯೆ 1246ಕ್ಕೆ ಏರಿಕೆಯಾಗಿದೆ. ಇದುವರೆಗೆ ಮುಂಬೈನಲ್ಲಿ ಒಟ್ಟು 127 ಪೊಲೀಸರು ಕೊರೊನಾದಿಂದ ಮೃತಪಟ್ಟಿದ್ದಾರೆ. ದೇಶಾದ್ಯಂತ ಹಲವು ರಾಜ್ಯಗಳು ಕೊರೊನಾ ಮೂರನೇ ಅಲೆಯ ಉತ್ತುಂಗವನ್ನು ನೋಡುತ್ತಿವೆ. ಇದರ ಬೆನ್ನಲ್ಲೇ ಭಾರತದಲ್ಲಿ ಕೊರೊನಾ ಲಸಿಕೆ ನೀಡಿಕೆ ಅಭಿಯಾನವೂ ವೇಗವಾಗಿ ಸಾಗುತ್ತಿದೆ. ಒಟ್ಟಾರೆ ವಯಸ್ಕರಿಗೆ 159 ಕೋಟಿ ಡೋಸ್​ ಕೊರೊನಾ ಲಸಿಕೆ ನೀಡಲಾಗಿದೆ.  15-18 ವಯಸ್ಸಿನವರಿಗೂ ಕೊರೊನಾ ಲಸಿಕೀಕರಣ ನಡೆಯುತ್ತಿದ್ದು, ಆಯ್ದ ವರ್ಗಗಳಿಗೆ ಬೂಸ್ಟರ್ ಡೋಸ್ ಕೂಡ ನೀಡಲಾಗುತ್ತಿದೆ.

ದೇಶದಲ್ಲಿ ಬುಧವಾರದವರೆಗೆ ಒಟ್ಟು 70,93,56,830 ಸ್ಯಾಂಪಲ್​ಗಳನ್ನು ಕೊವಿಡ್​ 19 ತಪಾಸಣೆಗೆ ಒಳಪಡಿಸಲಾಗಿದೆ. ಬುಧವಾರ ಒಂದೇ ದಿನ  19,35,180 ಮಾದರಿಗಳನ್ನು ಟೆಸ್ಟ್​ಗೆ ಒಳಪಡಿಸಲಾಗಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ಭಾರತದಲ್ಲಿ 2020ರ ಆಗಸ್ಟ್​ 7ರಂದು ಕೊವಿಡ್ 19 ಸೋಂಕಿನ ಸಂಖ್ಯೆ 20 ಲಕ್ಷದ ಗಡಿ ದಾಟಿತ್ತು. ಹಾಗೇ, ಆಗಸ್ಟ್ 20ರಂದು 30 ಲಕ್ಷ ಮೀರಿತು. ನೋಡನೋಡುತ್ತಿದ್ದಂತೆ ಭಾರತದಲ್ಲಿ ಕೊವಿಡ್​ 19 ಸೋಂಕಿತರ ಸಂಖ್ಯೆ 2021ರ ಮೇ 4ರಂದು 2 ಕೋಟಿ ದಾಟಿ, ಜೂನ್​ 23ರಂದು ಮೂರು ಕೋಟಿಯನ್ನೂ ದಾಟಿದೆ.

ಇದನ್ನೂ ಓದಿ: ದುನಿಯಾ ವಿಜಯ್​ ಹುಟ್ಟುಹಬ್ಬಕ್ಕೆ ವಿಶೇಷ ರೀತಿಯಲ್ಲಿ ಶುಭ ಕೋರಿದ ಅಭಿಮಾನಿ; ಇಲ್ಲಿವೆ ಫೋಟೋಗಳು​

Published On - 9:50 am, Thu, 20 January 22

Follow Us
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ