AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Coronavirus cases in India: ದೇಶದಲ್ಲಿ 36,401 ಹೊಸ ಕೊವಿಡ್ ಪ್ರಕರಣ ಪತ್ತೆ, ಸಕ್ರಿಯ ಪ್ರಕರಣಗಳ ಸಂಖ್ಯೆ ಇಳಿಮುಖ

Covid 19: ಕೇರಳ ಬುಧವಾರ 21,427 ಹೊಸ ಕೊವಿಡ್ -19 ಪ್ರಕರಣಗಳನ್ನು ವರದಿ ಮಾಡಿದೆ.ರಾಜ್ಯ ಸರ್ಕಾರದ ಮಾಹಿತಿಯ ಪ್ರಕಾರ ಒಟ್ಟು ಸೋಂಕಿತರ ಸಂಖ್ಯೆ 7,25,005 ಕ್ಕೆ ತಲುಪಿದೆ. ಅದೇ ಅವಧಿಯಲ್ಲಿ ಇಲ್ಲಿ 179 ಸಾವುಗಳು ವರದಿ ಆಗಿವೆ.

Coronavirus cases in India: ದೇಶದಲ್ಲಿ 36,401 ಹೊಸ ಕೊವಿಡ್ ಪ್ರಕರಣ ಪತ್ತೆ, ಸಕ್ರಿಯ ಪ್ರಕರಣಗಳ ಸಂಖ್ಯೆ ಇಳಿಮುಖ
ಪ್ರಾತಿನಿಧಿಕ ಚಿತ್ರ
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on: Aug 19, 2021 | 10:44 AM

Share

ದೆಹಲಿ: ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 36,401 ಹೊಸ ಕೊರೊನಾವೈರಸ್ ಸೋಂಕು ಪತ್ತೆಯಾಗಿದೆ. ಕೇರಳದಲ್ಲಿ 21,427 ಹೊಸ ಪ್ರಕರಣಗಳು, ಮಹಾರಾಷ್ಟ್ರದಲ್ಲಿ 5,132 ಪ್ರಕರಣಗಳು ವರದಿಯಾಗಿವೆ. ಭಾರತದಲ್ಲಿ ಇದುವರೆಗೆ 50 ಕೋಟಿ ಮಾದರಿಗಳನ್ನು ಪರೀಕ್ಷಿಸಲಾಗಿದೆ. ಇಲ್ಲಿಯವರೆಗೆ 3.23 ಕೋಟಿಗೂ ಹೆಚ್ಚು ಧನಾತ್ಮಕ ಎಂದು ಕಂಡುಬಂದಿದೆ. ಸಕ್ರಿಯ ಪ್ರಕರಣಗಳು 3.64 ಲಕ್ಷಕ್ಕೆ ಇಳಿದಿದೆ. ಬುಧವಾರ 530 ಸಾವುಗಳು ವರದಿಯಾಗಿದ್ದು ಒಟ್ಟು ಸಾವಿನ ಸಂಖ್ಯೆ ಈಗ 4.33 ಲಕ್ಷ ಮೀರಿದೆ. ಕೇರಳ ಬುಧವಾರ 21,427 ಹೊಸ ಕೊವಿಡ್ -19 ಪ್ರಕರಣಗಳನ್ನು ವರದಿ ಮಾಡಿದೆ.ರಾಜ್ಯ ಸರ್ಕಾರದ ಮಾಹಿತಿಯ ಪ್ರಕಾರ ಒಟ್ಟು ಸೋಂಕಿತರ ಸಂಖ್ಯೆ 7,25,005 ಕ್ಕೆ ತಲುಪಿದೆ. ಅದೇ ಅವಧಿಯಲ್ಲಿ ಇಲ್ಲಿ 179 ಸಾವುಗಳು ವರದಿ ಆಗಿವೆ.

48.81 ಲಕ್ಷಕ್ಕೂ ಹೆಚ್ಚು ಲಸಿಕೆ ಡೋಸ್‌ಗಳನ್ನು ಆಗಸ್ಟ್ 18 ರವರೆಗೆ ನೀಡಲಾಗಿದೆ ಕೆಲವು ರಾಜ್ಯಗಳಲ್ಲಿ, ವಿಶೇಷವಾಗಿ ಕೇರಳದಲ್ಲಿ ಪ್ರಕರಣಗಳು ಹೆಚ್ಚುತ್ತಿರುವ ಮಧ್ಯೆ, ಲಸಿಕೆ ಹಾಕುವಿಕೆಯ ವೇಗಕ್ಕೆ ಅಡ್ಡಿಯಾಗಿಲ್ಲ. ಮತ್ತೊಂದೆಡೆ, ಉತ್ತರ ಪ್ರದೇಶ ಸರ್ಕಾರ ಮಂಗಳವಾರ ಆಗಸ್ಟ್ 17 ರವರೆಗೆ ರಾಜ್ಯದಲ್ಲಿ ಆರು ಕೋಟಿಗೂ ಹೆಚ್ಚು ಕೋವಿಡ್ -19 ಲಸಿಕೆ ಡೋಸ್ ನೀಡಲಾಗಿದೆ ಎಂದು ಹೇಳಿದ್ದು, ಇದನ್ನು ಮಾಡಿದ ಏಕೈಕ ರಾಜ್ಯ ಇದು ಎಂದು ಹೇಳಿಕೊಂಡಿದೆ.

ಸೋಂಕು ಹರಡುವ ಮೂಲಕ ಮೂರನೇ ಅಲೆಗೆ ಆಹ್ವಾನ ನೀಡಬೇಡಿ: ಉದ್ಧವ್  ಠಾಕ್ರೆ ರಾಜ್ಯದಲ್ಲಿ ಬಿಜೆಪಿ ‘ಜನ್ ಆಶೀರ್ವಾದ್ ಯಾತ್ರೆ’ ಆರಂಭಿಸಿದ ಒಂದು ದಿನದ ನಂತರ, ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಬುಧವಾರ ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ. ಬಿಜೆಪಿ ಎಂದು ಉಲ್ಲೇಖಿಸದೆಯೇ ಕೊವಿಡ್ -19 ರ ಹರಡುವಿಕೆಯ ವಿರುದ್ಧ ಹೋರಾಡಲು ಸಹಾಯ ಮಾಡಲಾಗದವರು ಸಾಂಕ್ರಾಮಿಕ ರೋಗದ ಮೂರನೇ ತರಂಗಕ್ಕೆ ಕಾರಣವಾಗುವ ವೈರಸ್ ಅನ್ನು ಮತ್ತಷ್ಟು ಹರಡಲು ಕೊಡುಗೆ ನೀಡುವುದಿಲ್ಲ ಎಂದು ಖಚಿತಪಡಿಸಿಕೊಳ್ಳಬೇಕು ಎಂದು ಅವರು ಹೇಳಿದರು.

“ಕೆಲವರು ನಿಯಮಗಳನ್ನು ಉಲ್ಲಂಘಿಸಿ ರಾಜಕೀಯ, ಸಾಮಾಜಿಕ, ಧಾರ್ಮಿಕ ಮತ್ತು ಇತರ ಕಾರ್ಯಕ್ರಮಗಳನ್ನು ಆಯೋಜಿಸುತ್ತಿರುವುದು ಮತ್ತು ಸಾಮಾನ್ಯ ಮನುಷ್ಯನ ಆರೋಗ್ಯವನ್ನು ಅಪಾಯಕ್ಕೆ ತಳ್ಳುತ್ತಿರುವುದನ್ನು ನೋಡುವುದು ಕಳವಳಕಾರಿಯಾಗಿದೆ. ಮುಂಬರುವ ಹಬ್ಬಗಳನ್ನು ನೋಡಿದರೆ, ಆರೋಗ್ಯ ನಿಯಮಗಳನ್ನು ಉಲ್ಲಂಘಿಸಬಾರದು ಮತ್ತು ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಬೇಕು. ನೀವು ಕೊವಿಡ್ -19 ಯೋಧರಾಗಲು ಸಾಧ್ಯವಾಗದಿದ್ದರೆ, ಕನಿಷ್ಠ ಮೂರನೇ ತರಂಗವನ್ನು ಆಹ್ವಾನಿಸಲು ಕೊವಿಡ್ -19 ವಾಹಕರಾಗಬೇಡಿ ಎಂದು ಠಾಕ್ರೆ ಹೇಳಿಕೆ ನೀಡಿದ್ದಾರೆ.

ಶಾಲೆಗಳನ್ನು ಮತ್ತೆ ತೆರೆಯುವ ಮುನ್ನ ತಮಿಳುನಾಡು ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ ಸಾರ್ವಜನಿಕ ಆರೋಗ್ಯ ನಿರ್ದೇಶಕರು ಬುಧವಾರ IX, X, XI ಮತ್ತು XII ತರಗತಿಗಳ ವಿದ್ಯಾರ್ಥಿಗಳಿಗೆ ಶಾಲೆಗಳನ್ನು ಮತ್ತೆ ತೆರೆಯಲು ಸ್ಟ್ಯಾಂಡರ್ಡ್ ಆಪರೇಟಿಂಗ್ ಪ್ರೊಸೀಜರ್ (SOP) ಅನ್ನು ಬಿಡುಗಡೆ ಮಾಡಿದರು.ಸೆಪ್ಟೆಂಬರ್ 1 ರಿಂದ ಶಾಲೆಗಳನ್ನು ಮತ್ತೆ ತೆರೆಯುವುದಾಗಿ ತಮಿಳುನಾಡು ಶಾಲಾ ಶಿಕ್ಷಣ ಇಲಾಖೆಯು ತಾತ್ಕಾಲಿಕವಾಗಿ ಘೋಷಿಸಿದ ನಂತರ ಎಸ್‌ಒಪಿಗಳು ಬಂದಿವೆ. ವರದಿಗಳ ಪ್ರಕಾರ, ಸರ್ಕಾರವು ಪುನಃ ತೆರೆಯುವ ದಿನಾಂಕದ ಕುರಿತು ಅಧಿಕೃತ ಪ್ರಕಟಣೆಯನ್ನು ಆಗಸ್ಟ್ 20 ರಂದು ಮಾಡುವ ಸಾಧ್ಯತೆಯಿದೆ.

ಸರ್ಕಾರದಿಂದ ಹೊರಡಿಸಲಾದ ಮಾರ್ಗಸೂಚಿಗಳ ಪ್ರಕಾರ, ಒಂದು ಸಮಯದಲ್ಲಿ ಕೇವಲ ಶೇ 50 ವಿದ್ಯಾರ್ಥಿಗಳಿಗೆ ಮಾತ್ರ ಅವಕಾಶವಿದೆ ಎಂದು ಖಚಿತಪಡಿಸಿಕೊಳ್ಳಲು ಶಾಲೆಗಳನ್ನು ಕೇಳಲಾಗಿದೆ. ಶಾಲೆಗಳಲ್ಲಿ ಕೆಲಸ ಮಾಡುವ ಶಿಕ್ಷಕರು ಮತ್ತು ಇತರ ಸಿಬ್ಬಂದಿಗೆ ಶೇಕಡಾ 100 ರಷ್ಟು ಲಸಿಕೆ ಹಾಕುವುದನ್ನು ಮಾರ್ಗಸೂಚಿಗಳು ಕಡ್ಡಾಯಗೊಳಿಸುತ್ತವೆ. ಅರ್ಹ ಗುಂಪಿನಲ್ಲಿರುವ ಎಲ್ಲಾ ವಿದ್ಯಾರ್ಥಿಗಳು, ಶಾಲೆಗಳಿಗೆ ಭೇಟಿ ನೀಡುವವರಿಗೂ ಲಸಿಕೆ ಹಾಕಿಸಬೇಕು.

  ಸುಪ್ರೀಂಕೋರ್ಟ್ ನಲ್ಲಿ  ವರ್ಚುವಲ್ ವಿಚಾರಣೆ ಶೀಘ್ರದಲ್ಲೇ  ಮುಗಿಯಬಹುದು

ಕಳೆದ ವರ್ಷ ಮಾರ್ಚ್‌ನಿಂದ ಕೊವಿಡ್ -19 ಸಾಂಕ್ರಾಮಿಕದ ನಡುವೆ ವರ್ಚುವಲ್ ವಿಚಾರಣೆ ನಡೆಸುತ್ತಿರುವ ಸುಪ್ರೀಂ ಕೋರ್ಟ್‌ನಲ್ಲಿ ಈ ಹಿಂದೆ ನಡೆದಂತೆ ವ್ಯಕ್ತಿಗಳು ಹಾಜರಾಗಿಯೇ ನಡೆಯುವ ವಿಚಾರಣೆಯು ಶೀಘ್ರದಲ್ಲೇ ಪುನರಾರಂಭಗೊಳ್ಳಬಹುದು ಎಂದು ಸುಪ್ರೀಂ ಕೋರ್ಟ್ ಬುಧವಾರ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಎನ್ ವಿ ರಮಣ ನೇತೃತ್ವದ ನ್ಯಾಯಪೀಠವು ಸುಪ್ರೀಂ ಕೋರ್ಟ್‌ನಲ್ಲಿ 10 ದಿನಗಳ ಒಳಗೆ ಈ ರೀತಿ ವಿಚಾರಣೆ ಆರಂಭವಾಗಬಹುದು ಎಂದು ಹೇಳಿದೆ ಎಂದು ಪಿಟಿಐ ವರದಿ ಮಾಡಿದೆ.

ಇದನ್ನೂ ಓದಿ: Covishield: ಎರಡು ಡೋಸ್ ಕೊವಿಡ್ ಲಸಿಕೆ ಪಡೆದರೂ ಮತ್ತೆ ವ್ಯಾಕ್ಸಿನ್ ಬೇಕೆಂದು ಕೋರ್ಟ್ ಮೊರೆ ಹೋದ ಕೇರಳಿಗ!

(India reports 36,401 new coronavirus infections Active cases came down to 3.64 lakh )

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ