Coronavirus cases in India: ದೇಶದಲ್ಲಿ 41,195 ಹೊಸ ಕೊವಿಡ್ ಪ್ರಕರಣ ಪತ್ತೆ, 490 ಮಂದಿ ಸಾವು

Covid 19: ಸಕ್ರಿಯ ಪ್ರಕರಣಗಳ ಸಂಖ್ಯೆ 3,87,987 ಕ್ಕೆ ಇಳಿದಿದೆ ಮತ್ತು ಈಗ ಒಟ್ಟು ಪ್ರಕರಣಗಳ ಶೇಕಡಾ 1.21 ರಷ್ಟಿದೆ. ಗುರುವಾರದ ವೇಳೆಗೆ 31,26,0050 ಜನರು ಚೇತರಿಸಿಕೊಂಡಿದ್ದಾರೆ ಎಂದು ಆರೋಗ್ಯ ಸಚಿವಾಲಯದ ಅಂಕಿಅಂಶಗಳು ತೋರಿಸಿವೆ.

Coronavirus cases in India: ದೇಶದಲ್ಲಿ 41,195 ಹೊಸ ಕೊವಿಡ್ ಪ್ರಕರಣ ಪತ್ತೆ, 490 ಮಂದಿ ಸಾವು
ಪ್ರಾತಿನಿಧಿಕ ಚಿತ್ರ
Follow us
| Updated By: ರಶ್ಮಿ ಕಲ್ಲಕಟ್ಟ

Updated on: Aug 12, 2021 | 10:26 AM

ದೆಹಲಿ: ಕಳೆದ 24 ಗಂಟೆಗಳಲ್ಲಿ 41,195 ಹೊಸ ಕೊವಿಡ್ ಪ್ರಕರಣ ಪತ್ತೆಯಾಗಿದ್ದು ಒಟ್ಟು ಪ್ರಕರಣಗಳ ಸಂಖ್ಯೆ ಗುರುವಾರ 32,07,7706 ಕ್ಕೆ ಏರಿದೆ. ಬುಧವಾರ 38,353 ಪ್ರಕರಣಗಳು ವರದಿ ಆಗಿತ್ತು. 490 ಜನರು ಕೊವಿಡ್ -19 ಗೆ ಬಲಿಯಾದ ಕಾರಣ ದೈನಂದಿನ ಸಾವಿನ ಸಂಖ್ಯೆ 4,29,669ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಹೇಳಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 3,87,987 ಕ್ಕೆ ಇಳಿದಿದೆ ಮತ್ತು ಈಗ ಒಟ್ಟು ಪ್ರಕರಣಗಳ ಶೇಕಡಾ 1.21 ರಷ್ಟಿದೆ. ಗುರುವಾರದ ವೇಳೆಗೆ 31,260,050 ಜನರು ಚೇತರಿಸಿಕೊಂಡಿದ್ದಾರೆ ಎಂದು ಆರೋಗ್ಯ ಸಚಿವಾಲಯದ ಅಂಕಿಅಂಶಗಳು ತೋರಿಸಿವೆ.  ಕೊವಿಡ್ -19 ಲಸಿಕೆ ವ್ಯಾಪ್ತಿಯು 52 ಕೋಟಿ (52,32,53,450) ಮೈಲಿಗಲ್ಲನ್ನು ದಾಟಿದೆ.

ದೇಶದ ಕೆಲವು ರಾಜ್ಯಗಳು ದೈನಂದಿನ ಸರಾಸರಿ ಪ್ರಕರಣಗಳ ಏರಿಕೆಯನ್ನು ವರದಿ ಮಾಡುತ್ತಿರುವುದರಿಂದ ಒಟ್ಟಾರೆಯಾಗಿ ರಾಷ್ಟ್ರವ್ಯಾಪಿ ಸಂಖ್ಯೆ 25,000 ಕ್ಕಿಂತ ಹೆಚ್ಚಿದೆ.

ಆಗಸ್ಟ್ ಅಂತ್ಯದ ವೇಳೆಗೆ ಮೂರನೇ ಅಲೆ ದೇಶವನ್ನು ಅಪ್ಪಳಿಸಬಹುದು ಎಂದು ತಜ್ಞರು ಭವಿಷ್ಯ ನುಡಿದಿದ್ದಾರೆ. ಇತ್ತೀಚಿನ ಪ್ರಕರಣಗಳ ಏರಿಕೆಯು ಹೆಚ್ಚಾಗಿ ಕೊವಿಡ್ -19, ಡೆಲ್ಟಾ ರೂಪಾಂತರದ ಮ್ಯುಟೇಶನ್‌ನಿಂದಾಗಿದೆ. ಬುಧವಾರ ಬ್ರಿಟನ್ ನ ಆಕ್ಸ್‌ಫರ್ಡ್ ಲಸಿಕೆ ಗುಂಪಿನ ಮುಖ್ಯಸ್ಥರು ಕೋವಿಡ್ -19 ರ ಅತ್ಯಂತ ಹರಡುವ ಡೆಲ್ಟಾ ರೂಪಾಂತರವು ಹರ್ಡ್ ಇಮ್ಯುನಿಟಿಯ ನಿರೀಕ್ಷೆಯನ್ನು ನೀಡಿದೆ.

ಆಕ್ಸ್‌ಫರ್ಡ್ ವಿಶ್ವವಿದ್ಯಾಲಯದ ಕೊವಿಡ್ -19 ಲಸಿಕೆಯ ಹಿಂದೆ ತಂಡವನ್ನು ಮುನ್ನಡೆಸಿದ ಪ್ರೊಫೆಸರ್ ಆಂಡ್ರ್ಯೂ ಪೊಲಾರ್ಡ್, ಇನ್ನೂ ಹೆಚ್ಚು ಹರಡುವ ರೂಪಾಂತರದ ಭಯವು ಒಂದು ಸಾಧ್ಯತೆಯಾಗಿ ಉಳಿದಿದೆ ಮತ್ತು ಆದ್ದರಿಂದ ಮಾರಕ ವೈರಸ್ ಹರಡುವುದನ್ನು ಸಂಪೂರ್ಣವಾಗಿ ತಡೆಯಲು ಏನೂ ಇಲ್ಲ ಎಂದು ಹೇಳಿದರು.

ಕೇರಳದಲ್ಲಿ 23,500 ಪ್ರಕರಣಗಳು ದಾಖಲಾಗಿದ್ದು  ಮಹಾರಾಷ್ಟ್ರದಲ್ಲಿ 5,560  ಪ್ರಕರಣ ಪತ್ತೆಯಾಗಿದೆ.

ಇದನ್ನೂ ಓದಿ:  ಭಾರತದ ಹೊರಗೆ ಕೊವಿಡ್ ಲಸಿಕೆ ಪಡೆದವರಿಗೆ ಶೀಘ್ರದಲ್ಲೇ ಪ್ರಮಾಣಪತ್ರ ನೀಡಲಿದೆ ಕೇಂದ್ರ ಸರ್ಕಾರ

(India reports 41,195 new covid cases 490 deaths in last 24 hours as per health ministry data)

ಈಡಿಗೆ ಬೇಕಿರುವ ಕಾಗದಪತ್ರಗಳನ್ನು ಮುಡಾ ಅಧಿಕಾರಿಗಳು ನೀಡುತ್ತಾರೆ: ಸಚಿವ
ಈಡಿಗೆ ಬೇಕಿರುವ ಕಾಗದಪತ್ರಗಳನ್ನು ಮುಡಾ ಅಧಿಕಾರಿಗಳು ನೀಡುತ್ತಾರೆ: ಸಚಿವ
ಲೋಕಾಯುಕ್ತ ಅಧಿಕಾರಿಗಳಿಂದ ನಿಷ್ಪಕ್ಷ ತನಿಖೆ ಸಾಧ್ಯವಿಲ್ಲ: ಕುಮಾರಸ್ವಾಮಿ
ಲೋಕಾಯುಕ್ತ ಅಧಿಕಾರಿಗಳಿಂದ ನಿಷ್ಪಕ್ಷ ತನಿಖೆ ಸಾಧ್ಯವಿಲ್ಲ: ಕುಮಾರಸ್ವಾಮಿ
‘ಬಿಗ್ ಬಾಸ್​ನ ಮಿಸ್ ಮಾಡಿಕೊಳ್ಳುತ್ತೇನೆ’; ಜಗದೀಶ್​ ಮೊದಲ ರಿಯಾಕ್ಷನ್​
‘ಬಿಗ್ ಬಾಸ್​ನ ಮಿಸ್ ಮಾಡಿಕೊಳ್ಳುತ್ತೇನೆ’; ಜಗದೀಶ್​ ಮೊದಲ ರಿಯಾಕ್ಷನ್​
ಇಡಿ ವಿಚಾರಣೆ ಬೆನ್ನಲ್ಲೇ ದೇವರ ಮೊರೆ ಹೋದ ತಮನ್ನಾ
ಇಡಿ ವಿಚಾರಣೆ ಬೆನ್ನಲ್ಲೇ ದೇವರ ಮೊರೆ ಹೋದ ತಮನ್ನಾ
ರೆಡ್ಡಿ ಗೃಹಪ್ರವೇಶ ಕಾರ್ಯಕ್ರಮದಲ್ಲಿ ಸಹೋದರ ಸೋಮಶೇಖರ್ ರೆಡ್ಡಿ ಭಾಗಿ
ರೆಡ್ಡಿ ಗೃಹಪ್ರವೇಶ ಕಾರ್ಯಕ್ರಮದಲ್ಲಿ ಸಹೋದರ ಸೋಮಶೇಖರ್ ರೆಡ್ಡಿ ಭಾಗಿ
ಸರ್ಕಾರ ಅಸ್ಥಿರಗೊಳಿಸಲು ಇಡಿ ಬಳಕೆ: ಕೇಂದ್ರದ ವಿರುದ್ಧ ಡಿಕೆಸು ವಾಗ್ದಾಳಿ
ಸರ್ಕಾರ ಅಸ್ಥಿರಗೊಳಿಸಲು ಇಡಿ ಬಳಕೆ: ಕೇಂದ್ರದ ವಿರುದ್ಧ ಡಿಕೆಸು ವಾಗ್ದಾಳಿ
ಉದ್ಯೋಗ/ಶಿಕ್ಷಣದಲ್ಲಿ ಪಂಚಮಸಾಲಿ ಸಮಾಜಕ್ಕೆ 2 ಮೀಸಲಾತಿ ಬೇಕು: ಶ್ರೀಗಳು
ಉದ್ಯೋಗ/ಶಿಕ್ಷಣದಲ್ಲಿ ಪಂಚಮಸಾಲಿ ಸಮಾಜಕ್ಕೆ 2 ಮೀಸಲಾತಿ ಬೇಕು: ಶ್ರೀಗಳು
ಉಪ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಹೈಕಮಾಂಡ್ ಸುಪರ್ದಿಗೆ ಬಿಟ್ಟಿದ್ದು: ಸಚಿವ
ಉಪ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಹೈಕಮಾಂಡ್ ಸುಪರ್ದಿಗೆ ಬಿಟ್ಟಿದ್ದು: ಸಚಿವ
ವಿರಾಟ್ ಕೊಹ್ಲಿ ಎರಡನೇ ಇನ್ನಿಂಗ್ಸ್​ನಲ್ಲಿ ತಮ್ಮ ಸ್ಪರ್ಶ ಕಂಡುಕೊಳ್ಳುವರೇ?
ವಿರಾಟ್ ಕೊಹ್ಲಿ ಎರಡನೇ ಇನ್ನಿಂಗ್ಸ್​ನಲ್ಲಿ ತಮ್ಮ ಸ್ಪರ್ಶ ಕಂಡುಕೊಳ್ಳುವರೇ?
ಮೆಜೆಸ್ಟಿಕ್​​ನಲ್ಲಿ ರಸ್ತೆ ಗುಂಡಿಗಳ ದರ್ಬಾರ್, ಸ್ವಲ್ಪ ಯಾಮಾರಿದರೆ ಡೇಂಜರ್
ಮೆಜೆಸ್ಟಿಕ್​​ನಲ್ಲಿ ರಸ್ತೆ ಗುಂಡಿಗಳ ದರ್ಬಾರ್, ಸ್ವಲ್ಪ ಯಾಮಾರಿದರೆ ಡೇಂಜರ್