AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Coronavirus cases in India ಭಾರತದಲ್ಲಿ 43,263 ಹೊಸ ಕೊವಿಡ್ ಪ್ರಕರಣ ಪತ್ತೆ, 338 ಮಂದಿ ಸಾವು

Covid 19: 40,000 ಕ್ಕೂ ಹೆಚ್ಚು (40,567) ರೋಗಿಗಳು ಚೇತರಿಸಿಕೊಂಡಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆಯನ್ನು 3.91 ಲಕ್ಷಕ್ಕೆ (3,93,614) ತಲುಪಿದೆ.  ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ ವರದಿಯಾದ ಹೊಸ ಪ್ರಕರಣಗಳು ಮತ್ತು ಸಾವುಗಳಲ್ಲಿ ಕೇರಳವು ನಿನ್ನೆ 30,196 ಪ್ರಕರಣಗಳನ್ನು ಮತ್ತು 181 ಸಾವುಗಳನ್ನು ದಾಖಲಿಸಿದೆ.

Coronavirus cases in India ಭಾರತದಲ್ಲಿ 43,263 ಹೊಸ ಕೊವಿಡ್ ಪ್ರಕರಣ ಪತ್ತೆ, 338 ಮಂದಿ ಸಾವು
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on:Sep 09, 2021 | 10:43 AM

ದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 43,263 ಹೊಸ ಕೊರೊನಾವೈರಸ್ ಪ್ರಕರಣಗಳು ಮತ್ತು 338 ಸಾವುಗಳು ವರದಿಯಾಗಿವೆ. ಇದರೊಂದಿಗೆ, ದೇಶದ ಪ್ರಕರಣಗಳ ಸಂಖ್ಯೆ 3.31 ಕೋಟಿಗೆ (3,31,39,981) ಏರಿಕೆಯಾಗಿದ್ದು, ಸಾವಿನ ಸಂಖ್ಯೆ 4.41 ಲಕ್ಷಕ್ಕೆ (4,41,749) ತಲುಪಿದೆ. 40,000 ಕ್ಕೂ ಹೆಚ್ಚು (40,567) ರೋಗಿಗಳು ಚೇತರಿಸಿಕೊಂಡಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆಯನ್ನು 3.91 ಲಕ್ಷಕ್ಕೆ (3,93,614) ತಲುಪಿದೆ.  ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ ವರದಿಯಾದ ಹೊಸ ಪ್ರಕರಣಗಳು ಮತ್ತು ಸಾವುಗಳಲ್ಲಿ ಕೇರಳವು ನಿನ್ನೆ 30,196 ಪ್ರಕರಣಗಳನ್ನು ಮತ್ತು 181 ಸಾವುಗಳನ್ನು ದಾಖಲಿಸಿದೆ. ನಿನ್ನೆ ಭಾರತದ ಕೊವಿಡ್ -19 ಲಸಿಕೆ ವ್ಯಾಪ್ತಿಯು 71-ಕೋಟಿ ಮೈಲಿಗಲ್ಲನ್ನು ದಾಟಿದೆ (71,52,54,153). ಬುಧವಾರದವರೆಗೆ 73 ಲಕ್ಷಕ್ಕೂ ಹೆಚ್ಚು (73,80,510) ಡೋಸ್‌ಗಳನ್ನು ನೀಡಲಾಗಿದೆ. ವಿಶ್ವ ಆರೋಗ್ಯಸಂಸ್ಥೆಯ ಮಹಾನಿರ್ದೇಶಕ ಟೆಡ್ರೊಸ್ ಅಧಾನೊಮ್ ಘೆಬ್ರೆಯೆಸಸ್ ಕೊರೊನಾವೈರಸ್ ಲಸಿಕೆಗಳ ದೊಡ್ಡ ಪೂರೈಕೆಯಿರುವ ಶ್ರೀಮಂತ ರಾಷ್ಟ್ರಗಳನ್ನು ವರ್ಷದ ಅಂತ್ಯದ ವೇಳೆಗೆ ಬೂಸ್ಟರ್ ಶಾಟ್‌ಗಳನ್ನು ನೀಡುವುದನ್ನು ನಿಲ್ಲಿಸಿ ಮತ್ತು ಬಡ ರಾಷ್ಟ್ರಗಳಿಗೆ ಡೋಸ್‌ಗಳನ್ನು ಲಭ್ಯವಾಗುವಂತೆ ಮಾಡಿ ಎಂದು ಒತ್ತಾಯಿಸಿದ್ದಾರೆ.

ದೆಹಲಿ: ಕೊವಿಡ್ ನಿಯಮ ಉಲ್ಲಂಘನೆಗಾಗಿ 4 ತಿಂಗಳಲ್ಲಿ 8 ಲಕ್ಷ ಜನರ ವಿರುದ್ಧ ಕೇಸ್ ದೆಹಲಿಯಲ್ಲಿ ಕಳೆದ ನಾಲ್ಕು ತಿಂಗಳಲ್ಲಿ ಕೊವಿಡ್-ಸೂಕ್ತ ನಡವಳಿಕೆ ನಿಯಮಗಳ ಉಲ್ಲಂಘನೆ ಮಾಡಿದ ಎಂಟು ಲಕ್ಷಕ್ಕೂ ಹೆಚ್ಚು ಮಂದಿ ವಿರುದ್ಧ ಕೇಸು ದಾಖಲಾಗಿದ್ದು 135 ಕೋಟಿ ರೂ.ಗಳಿಗಿಂತ ಹೆಚ್ಚು ದಂಡ ವಸೂಲಿಯಾಗಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ದಂಡವನ್ನು ದೆಹಲಿ ಸರ್ಕಾರದ ತಂಡಗಳು ಮತ್ತು ಪೊಲೀಸ್ ಸಿಬ್ಬಂದಿ ವಿಧಿಸಿದ್ದಾರೆ ಎಂದು ಅವರು ಹೇಳಿದರು.

ಮಾಸ್ಕ್ ಧರಿಸದಿರುವುದು, ಜನಸಂದಣಿ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಉಗುಳುವುದು ಮುಂತಾದ ವಿವಿಧ ಕೋವಿಡ್ ಸಂಬಂಧಿತ ಮಾರ್ಗಸೂಚಿಗಳನ್ನು ಉಲ್ಲಂಘಿಸಿದ್ದಕ್ಕಾಗಿ ನಗರ ಸರ್ಕಾರದ ಕಂದಾಯ ಇಲಾಖೆಯ ಜಾರಿ ತಂಡಗಳು ಮತ್ತು ದೆಹಲಿ ಪೊಲೀಸರು ಕ್ರಮವಾಗಿ ಆರು ಲಕ್ಷ ಮತ್ತು ಎರಡು ಲಕ್ಷ ಜನರ ವಿರುದ್ಧ ಕೇಸು ದಾಖಲಿಸಿದ್ದಾರೆ ಎಂದು ಅಧಿಕೃತ ಅಂಕಿಅಂಶಗಳು ತೋರಿಸಿವೆ.

ಸರ್ಕಾರಿ ತಂಡಗಳು ರೂ .103 ಕೋಟಿಗಿಂತ ಹೆಚ್ಚಿನ ದಂಡವನ್ನು ವಿಧಿಸಿದರೆ, ದೆಹಲಿ ಪೊಲೀಸರು ರೂ 32 ಕೋಟಿಗೂ ಅಧಿಕ ದಂಡವನ್ನು ವಿಧಿಸಿದರು. ಕಳೆದ ನಾಲ್ಕು ತಿಂಗಳಲ್ಲಿ ಮಾರ್ಗಸೂಚಿಗಳನ್ನು ಉಲ್ಲಂಘಿಸಿದ್ದಕ್ಕಾಗಿ 15,600 ಜನರನ್ನು ಪೊಲೀಸರು ಬಂಧಿಸಿದ್ದಾರೆ.

ಕಂದಾಯ ಇಲಾಖೆ ಮತ್ತು ದೆಹಲಿ ಪೊಲೀಸರು ಆಗಸ್ಟ್‌ನಲ್ಲಿ ಸುಮಾರು 1.8 ಲಕ್ಷ ಜನರ ವಿರುದ್ಧ ಪ್ರಕರಣ ದಾಖಲಿಸಿದ್ದು ರೂ. 32.41 ಕೋಟಿ ದಂಡ ವಿಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

536,817,243 ಮಾದರಿಗಳನ್ನು ಪರೀಕ್ಷಿಸಲಾಗಿದೆ: ಐಸಿಎಂಆರ್

206 ಸೆಪ್ಟೆಂಬರ್ 2021 ರವರೆಗೆ 536,817,243 ಮಾದರಿಗಳನ್ನು ಕೊವಿಡ್ -19 ಕ್ಕೆ ಪರೀಕ್ಷಿಸಲಾಗಿದೆ. 8 ಸೆಪ್ಟೆಂಬರ್ 2021 ರಂದು 1,817,639 ಮಾದರಿಗಳನ್ನು ಪರೀಕ್ಷಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್)  ಹೇಳಿದೆ.

ಇದನ್ನೂ ಓದಿ: Ganesha Chaturthi 2021: ಹಬ್ಬದ ಸಂಭ್ರಮಕ್ಕೆ ವಿಘ್ನ ತಂದೊಡ್ಡಿದ ಹೂವು, ಹಣ್ಣು ಬೆಲೆ; ಎಲ್ಲವೂ ಬಲು ದುಬಾರಿ

ಇದನ್ನೂ ಓದಿ: ಹೈಕೋರ್ಟ್ ಸುದ್ದಿಗಳು: ಕೊವಿಡ್ ಚಿಕಿತ್ಸೆಗೆ ಶುಲ್ಕ ನಿಗದಿ ಬಗ್ಗೆ ಸೂಕ್ತ ಪ್ರಚಾರ ನೀಡಲು ಸರ್ಕಾರಕ್ಕೆ ಸೂಚನೆ

(India reports 43,263 new coronavirus cases and 338 deaths in the last 24 hours as perhealth ministry data)

Published On - 10:41 am, Thu, 9 September 21

ಚಾಲಕನ ಹುಚ್ಚು ಸಾಹಸ: ಹಳ್ಳದಲ್ಲಿ ಸಿಲುಕಿದ ಜನರಿದ್ದ ಟ್ರ್ಯಾಕ್ಟರ್
ಚಾಲಕನ ಹುಚ್ಚು ಸಾಹಸ: ಹಳ್ಳದಲ್ಲಿ ಸಿಲುಕಿದ ಜನರಿದ್ದ ಟ್ರ್ಯಾಕ್ಟರ್
ಲಂಡನ್​ಗೆ ಹೊರಟಿದ್ದ ವಿಮಾನಕ್ಕೆ ಅದರ ಸಾಮರ್ಥ್ಯದಷ್ಟು ಇಂಧನ ತುಂಬಲಾಗಿತ್ತು
ಲಂಡನ್​ಗೆ ಹೊರಟಿದ್ದ ವಿಮಾನಕ್ಕೆ ಅದರ ಸಾಮರ್ಥ್ಯದಷ್ಟು ಇಂಧನ ತುಂಬಲಾಗಿತ್ತು
ಜಾತಿಗಣತಿ ಸಮೀಕ್ಷೆಗೆ ₹200 ಕೋಟಿ ಖರ್ಚಾಗಿದೆ ಎಂದರೆ ಸಚಿವನಲ್ಲಿ ಉತ್ತರವಿಲ್ಲ
ಜಾತಿಗಣತಿ ಸಮೀಕ್ಷೆಗೆ ₹200 ಕೋಟಿ ಖರ್ಚಾಗಿದೆ ಎಂದರೆ ಸಚಿವನಲ್ಲಿ ಉತ್ತರವಿಲ್ಲ
Ahmedabad Plane Crash: ಅಹಮದಾಬಾದ್​​ನಲ್ಲಿ ಏರ್​ ಇಂಡಿಯಾ ವಿಮಾನ ಪತನ
Ahmedabad Plane Crash: ಅಹಮದಾಬಾದ್​​ನಲ್ಲಿ ಏರ್​ ಇಂಡಿಯಾ ವಿಮಾನ ಪತನ
ಗೃಹ ಸಚಿವ ಕೇವಲ ತಮ್ಮ ಗೃಹಕ್ಕೆ ಮಾತ್ರ ಸಚಿವರು: ಆರ್ ಅಶೋಕ
ಗೃಹ ಸಚಿವ ಕೇವಲ ತಮ್ಮ ಗೃಹಕ್ಕೆ ಮಾತ್ರ ಸಚಿವರು: ಆರ್ ಅಶೋಕ
ವಾಲ್ಮೀಕಿ ನಿಗಮ ಪ್ರಕರಣದಲ್ಲಿ ಸರ್ಕಾರ ಸಮಗ್ರ ತನಿಖೆ ಮಾಡಿಸಿದೆ: ಗೃಹ ಸಚಿವ
ವಾಲ್ಮೀಕಿ ನಿಗಮ ಪ್ರಕರಣದಲ್ಲಿ ಸರ್ಕಾರ ಸಮಗ್ರ ತನಿಖೆ ಮಾಡಿಸಿದೆ: ಗೃಹ ಸಚಿವ
ತುಂಬಿ ಹರಿಯುತ್ತಿರುವ ಗೊನ್ವಾರ ಗ್ರಾಮ ಹೊರವಲಯದಲ್ಲಿರುವ ಹೊಳೆ
ತುಂಬಿ ಹರಿಯುತ್ತಿರುವ ಗೊನ್ವಾರ ಗ್ರಾಮ ಹೊರವಲಯದಲ್ಲಿರುವ ಹೊಳೆ
ಹುಬ್ಬಳ್ಳಿ ಜನರ ಸಮಸ್ಯೆಗಳಿಗೆ ಜನಪ್ರತಿನಿಧಿಗಳಿಂದ ನೀರಸ ಪ್ರತಿಕ್ರಿಯೆ
ಹುಬ್ಬಳ್ಳಿ ಜನರ ಸಮಸ್ಯೆಗಳಿಗೆ ಜನಪ್ರತಿನಿಧಿಗಳಿಂದ ನೀರಸ ಪ್ರತಿಕ್ರಿಯೆ
ಬರ್ತ್​ಡೇ ಪಾರ್ಟಿಯಲ್ಲಿ ಡ್ರಗ್ಸ್, ಗಾಯಕಿ ಮಂಗ್ಲಿ ಸ್ಪಷ್ಟನೆ
ಬರ್ತ್​ಡೇ ಪಾರ್ಟಿಯಲ್ಲಿ ಡ್ರಗ್ಸ್, ಗಾಯಕಿ ಮಂಗ್ಲಿ ಸ್ಪಷ್ಟನೆ
ಮೋದಿ ಸರ್ಕಾರದ ಆಡಳಿತ ವೈಖರಿ, ಜನಾಭಿಪ್ರಾಯ ಸಂಗ್ರಹಕ್ಕೆ ಜನ್ ಮನ್ ಸಮೀಕ್ಷೆ
ಮೋದಿ ಸರ್ಕಾರದ ಆಡಳಿತ ವೈಖರಿ, ಜನಾಭಿಪ್ರಾಯ ಸಂಗ್ರಹಕ್ಕೆ ಜನ್ ಮನ್ ಸಮೀಕ್ಷೆ