AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Covid 19 Updates: ದೇಶದಲ್ಲಿ ಇಂದು ಮತ್ತೆ 40 ಸಾವಿರ ದಾಟಿದ ಕೊರೊನಾ ಕೇಸ್​​; 640 ಮಂದಿ ಸಾವು

Coronavirus: ದೇಶದಲ್ಲಿ ನಿನ್ನೆ ಕೇವಲ 29,689 ಹೊಸ ಕೊರೊನಾ ಕೇಸ್​ಗಳು ದಾಖಲಾಗಿ, 416 ಮಂದಿ ಮೃತಪಟ್ಟಿದ್ದರು. ಕಳೆದ 132 ದಿನಗಳಲ್ಲಿ ಅಂದರೆ ಸುಮಾರು ನಾಲ್ಕೂವರೆ ತಿಂಗಳಲ್ಲೇ ದಾಖಲಾದ ಅತಿ ಕಡಿಮೆ ಸಂಖ್ಯೆಯಾಗಿದೆ.

Covid 19 Updates: ದೇಶದಲ್ಲಿ ಇಂದು ಮತ್ತೆ 40 ಸಾವಿರ ದಾಟಿದ ಕೊರೊನಾ ಕೇಸ್​​; 640 ಮಂದಿ ಸಾವು
ಕೊವಿಡ್ 19
TV9 Web
| Updated By: Lakshmi Hegde|

Updated on: Jul 28, 2021 | 11:07 AM

Share

ದೆಹಲಿ: ದೇಶದಲ್ಲಿ ಒಂದು ದಿನದಲ್ಲಿ ದಾಖಲಾಗುವ ಕೊರೊನಾ ಕೇಸ್ (Coronavirus)​ಗಳಲ್ಲಿ ಏರಿಳಿತವಾಗುತ್ತಿದೆ. ನಿನ್ನೆ 30 ಸಾವಿರಕ್ಕಿಂತಲೂ ಕಡಿಮೆ ಪ್ರಕರಣಗಳು ಪತ್ತೆಯಾಗಿದ್ದು, ಸ್ವಲ್ಪ ಖುಷಿ ಮೂಡಿಸಿತ್ತು. ಆದರೆ ಇಂದು ಮತ್ತೆ 43,654 ಹೊಸ ಪ್ರಕರಣಗಳು ದಾಖಲಾಗಿದ್ದು, ಮತ್ತೆ ಆತಂಕ ಮೂಡಿಸಿದೆ. ಹಾಗೇ, 24ಗಂಟೆಯಲ್ಲಿ 640 ಮಂದಿ ಮೃತಪಟ್ಟಿದ್ದಾರೆ. ಸದ್ಯ ದೇಶದಲ್ಲಿ ಕೊರೊನಾ ಸಕ್ರಿಯ ಪ್ರಕರಣಗಳು (Corona Active Cases) 3,99,436ಕ್ಕೆ ಏರಿಕೆಯಾಗಿದೆ. ಮೃತಪಟ್ಟವರ ಒಟ್ಟು ಸಂಖ್ಯೆ 4,22,022. ಇನ್ನು ಇದುವರೆಗೆ 44,61,56,659 ಮಂದಿಗೆ ಕೊರೊನಾ ಲಸಿಕೆ (Corona Vaccine) ಹಾಕಲಾಗಿದೆ. ಹಾಗೇ, 24 ಗಂಟೆಯಲ್ಲಿ 41,678 ಮಂದಿ ಕೊರೊನಾದಿಂದ ಚೇತರಿಸಿಕೊಂಡಿದ್ದು, ಒಟ್ಟು ಗುಣಮುಖರಾದವರ ಸಂಖ್ಯೆ 3,06,63,147ಕ್ಕೆ ಏರಿಕೆಯಾಗಿದೆ.

ದೇಶದಲ್ಲಿ ನಿನ್ನೆ ಕೇವಲ 29,689 ಹೊಸ ಕೊರೊನಾ ಕೇಸ್​ಗಳು ದಾಖಲಾಗಿ, 416 ಮಂದಿ ಮೃತಪಟ್ಟಿದ್ದರು. ಕಳೆದ 132 ದಿನಗಳಲ್ಲಿ ಅಂದರೆ ಸುಮಾರು ನಾಲ್ಕೂವರೆ ತಿಂಗಳಲ್ಲೇ ದಾಖಲಾದ ಅತಿ ಕಡಿಮೆ ಸಂಖ್ಯೆಯಾಗಿದೆ. ಹಾಗೇ ಎರಡನೇ ಅಲೆಯ ಅತಿಭೀಕರ ಉತ್ತುಂಗವನ್ನು ನೋಡಿದ ದೇಶಕ್ಕೆ ಒಂದು ಸಣ್ಣ ಭರವಸೆಯನ್ನು ಮೂಡಿಸುವ ಅಂಕಿಸಂಖ್ಯೆಯಾಗಿತ್ತು. ಆದರೆ ಇಂದು ಮತ್ತೆ 40 ಸಾವಿರಕ್ಕೂ ಹೆಚ್ಚಿನ ಕೊರೊನಾ ಕೇಸ್​ಗಳು ದಾಖಲಾಗಿದ್ದು, ಮತ್ತೆ ಆತಂಕ ಮೂಡಿಸಿದೆ. ಅದರಲ್ಲೂ ಏಳು ರಾಜ್ಯಗಳಿಂದ ಒಟ್ಟು 22 ಜಿಲ್ಲೆಗಳಲ್ಲಿಯೇ ಕೊರೊನಾ ಪ್ರಮಾಣ ಹೆಚ್ಚಾಗಿದೆ. ದೇಶದಲ್ಲಿ ಸದ್ಯ 62 ಜಿಲ್ಲೆಗಳಲ್ಲಿ ಪ್ರತಿದಿನ 100ಕ್ಕೂ ಹೆಚ್ಚು ಕೊರೊನಾ ಪ್ರಕರಣಗಳು ಪತ್ತೆಯಾಗುತ್ತಿವೆ ಎಂದು ಕೇಂದ್ರ ಆರೊಗ್ಯ ಇಲಾಖೆ ಆತಂಕ ವ್ಯಕ್ತಪಡಿಸಿದೆ.

ಇದನ್ನೂ ಓದಿ: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ರಾಜಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಬಸವರಾಜ ಬೊಮ್ಮಾಯಿ

ಪ್ರವಾಹಕ್ಕೆ ಹೆದರಿ ಒದ್ದಾಡುತ್ತಿದ್ದ ಶ್ವಾನವನ್ನು ರಕ್ಷಿಸಿದ ರಕ್ಷಣಾ ಸಿಬ್ಬಂದಿ; ನೆಟ್ಟಿಗರಿಂದ ಶ್ಲಾಘನೆ

India reports 43,654 fresh COVID 19 cases in 24 hours

ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ಅಂತಿಮ ಪರೀಕ್ಷೆ ವೇಳೆ ಬ್ರೌನ್ ವಿವಿಯಲ್ಲಿ ಗುಂಡಿನ ದಾಳಿ, ಇಬ್ಬರು ಸಾವು
ಅಂತಿಮ ಪರೀಕ್ಷೆ ವೇಳೆ ಬ್ರೌನ್ ವಿವಿಯಲ್ಲಿ ಗುಂಡಿನ ದಾಳಿ, ಇಬ್ಬರು ಸಾವು
2026ಕ್ಕೆ ಈ ರಾಶಿಗಳಿಗೆ ಅದೃಷ್ಟವೋ ಅದೃಷ್ಟ!
2026ಕ್ಕೆ ಈ ರಾಶಿಗಳಿಗೆ ಅದೃಷ್ಟವೋ ಅದೃಷ್ಟ!