AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Coronavirus Cases in India: ದೇಶದಲ್ಲಿ 46,759 ಹೊಸ ಕೊವಿಡ್ ಪ್ರಕರಣ ಪತ್ತೆ, 509 ಮಂದಿ ಸಾವು

Covid19: ಕಳೆದ 24 ಗಂಟೆಗಳಲ್ಲಿ 32,801 ಹೊಸ ಪ್ರಕರಣಗಳೊಂದಿಗೆ ಕೇರಳವು ಸತತ ಮೂರನೇ ದಿನವಾದ ಶುಕ್ರವಾರ 30,000ಕ್ಕಿಂತ ಹೆಚ್ಚು ದೈನಂದಿನ ಕೊರೊನಾಸೋಂಕುಗಳನ್ನು ದಾಖಲಿಸಿದೆ. 179 ಹೊಸ ಸಾವುಗಳೊಂದಿಗೆ, ರಾಜ್ಯದಲ್ಲಿ ಸಾವಿನ ಸಂಖ್ಯೆ 20,313 ಕ್ಕೆ ಏರಿದೆ. ಪರೀಕ್ಷಾ ಧನಾತ್ಮಕ ದರವು 19.22 ಶೇಕಡಾ ದಾಖಲಾಗಿದೆ.

Coronavirus Cases in India: ದೇಶದಲ್ಲಿ 46,759 ಹೊಸ ಕೊವಿಡ್ ಪ್ರಕರಣ ಪತ್ತೆ, 509 ಮಂದಿ ಸಾವು
ಪ್ರಾತಿನಿಧಿಕ ಚಿತ್ರ
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on: Aug 28, 2021 | 10:42 AM

Share

ದೆಹಲಿ: ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 46,759 ಕೊರೊನಾವೈರಸ್ ಪ್ರಕರಣಗಳು ಮತ್ತು 509 ಸಾವುಗಳನ್ನು ವರದಿ ಆಗಿದೆ. ಇದರೊಂದಿಗೆ ದೇಶದ ಒಟ್ಟು ಕೊವಿಡ್ ಪ್ರಕರಣಗಳ ಸಂಖ್ಯೆ 3.26 ಕೋಟಿಗೆ (3,26,49,947) ಏರಿಕೆಯಾಗಿದ್ದು, ಸಾವಿನ ಸಂಖ್ಯೆ 4.37 ಲಕ್ಷಕ್ಕೆ (4,37,370) ತಲುಪಿದೆ. ಸಾಂಕ್ರಾಮಿಕ ರೋಗ ಇನ್ನೂ ಮುಗಿದಿಲ್ಲ ಎಂದು ಎಚ್ಚರಿಸಿರುವ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಜಾಗರೂಕರಾಗಿರಲು ಶುಕ್ರವಾರ ಮನವಿ ಮಾಡಿದ್ದಾರೆ. ಸಂಜಯ್ ಗಾಂಧಿ ಸ್ನಾತಕೋತ್ತರ ವೈದ್ಯಕೀಯ ವಿಜ್ಞಾನ ಸಂಸ್ಥೆಯ (ಎಸ್‌ಜಿಪಿಜಿಐ) 26 ನೇ ಘಟಿಕೋತ್ಸವದಲ್ಲಿ ಮಾತನಾಡಿದ ಅವರು ಈ ಸಾಂಕ್ರಾಮಿಕ ರೋಗದಿಂದ ಜಗತ್ತು ತತ್ತರಿಸಿದೆ. ಕೊವಿಡ್ ಸೋಂಕಿನ ವಿರುದ್ಧದ ನಮ್ಮ ಹೋರಾಟದಲ್ಲಿ ಎಸ್‌ಜಿಪಿಜಿಐ ನಂತಹ ವೈದ್ಯಕೀಯ ಸಂಸ್ಥೆಗಳು ಪಟ್ಟುಬಿಡದೆ ಕೆಲಸ ಮಾಡಿವೆ ಎಂದಿದ್ದಾರೆ.

ನಿನ್ನೆ ಭಾರತವು ತನ್ನ ರಾಷ್ಟ್ರವ್ಯಾಪಿ ವ್ಯಾಕ್ಸಿನೇಷನ್ ಅಭಿಯಾನದ ಅಡಿಯಲ್ಲಿ 1,00,64,032 ಲಸಿಕೆ ಡೋಸ್ ನೀಡಿದೆ. ವ್ಯಾಕ್ಸಿನೇಷನ್ ಡ್ರೈವ್ ಆರಂಭವಾದ ನಂತರ ಒಂದೇ ದಿನದಲ್ಲಿ ಸಾಧಿಸಿದ ಗರಿಷ್ಠ ವ್ಯಾಕ್ಸಿನೇಷನ್ ಇದಾಗಿದೆ.

ಇನ್ನೊಂದು ಮಹತ್ವದ ಸಾಧನೆಯಲ್ಲಿ ಭಾರತದ ಕೊವಿಡ್ -19 ಲಸಿಕೆ ವ್ಯಾಪ್ತಿಯು ಇಂದು ಸಂಜೆ 7 ರ ತಾತ್ಕಾಲಿಕ ವರದಿಯ ಪ್ರಕಾರ 62 ಕೋಟಿ (62,09,43,580) ಮೈಲಿಗಲ್ಲನ್ನು ದಾಟಿದೆ.

ಏತನ್ಮಧ್ಯೆ ಕಳೆದ 24 ಗಂಟೆಗಳಲ್ಲಿ 32,801 ಹೊಸ ಪ್ರಕರಣಗಳೊಂದಿಗೆ ಕೇರಳವು ಸತತ ಮೂರನೇ ದಿನವಾದ ಶುಕ್ರವಾರ 30,000ಕ್ಕಿಂತ ಹೆಚ್ಚು ದೈನಂದಿನ ಕೊರೊನಾಸೋಂಕುಗಳನ್ನು ದಾಖಲಿಸಿದೆ. 179 ಹೊಸ ಸಾವುಗಳೊಂದಿಗೆ, ರಾಜ್ಯದಲ್ಲಿ ಸಾವಿನ ಸಂಖ್ಯೆ 20,313 ಕ್ಕೆ ಏರಿದೆ. ಪರೀಕ್ಷಾ ಧನಾತ್ಮಕ ದರವು 19.22 ಶೇಕಡಾ ದಾಖಲಾಗಿದೆ.

ಇನ್ನೊಂದು ಬೆಳವಣಿಗೆಯಲ್ಲಿ ದೆಹಲಿ ಸರ್ಕಾರವು ಸೆಪ್ಟೆಂಬರ್ 1 ರಿಂದ ಹಂತ ಹಂತವಾಗಿ ಶಾಲೆಗಳನ್ನು ಮತ್ತೆ ತೆರೆಯಲು ನಿರ್ಧರಿಸಿದೆ. 9 ರಿಂದ 12 ನೇ ತರಗತಿಯ ತರಗತಿಗಳು ಸೆಪ್ಟೆಂಬರ್ 1 ರಿಂದ ಆರಂಭವಾಗಲಿದ್ದು, 6 ರಿಂದ 8 ನೇ ತರಗತಿಗಳು ಸೆಪ್ಟೆಂಬರ್ 8 ರಿಂದ ಆರಂಭವಾಗಲಿವೆ.

Follow Us
Web contact
Web contact

TV9 Kannada

Read More
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ